ಉಲ್ಟಾಅಂಗಿ ಬಗ್ಗೆ ಸಾಹಿತಿ ಅರುಣಕುಮಾರ ಹಬ್ಬು ಅನಿಸಿಕೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ನನ್ನ ಅಚ್ಚುಮೆಚ್ಚಿನ ಪ್ರದೇಶ. ಮಲೆನಾಡ ಸೊಗಡು, ಎತ್ತರೆತ್ತರ ಮರಗಳು, ಸಂಜೆಯಾದ ಕೂಡಲೇ ರೊಂಯ್ ರೊಂಯ್ ಎಂದು ಒರಲುವ ಮರ ಜಿರಲೆಗಳು, ಬೆಳಿಗಿನ ಮಂಜು ಹನಿಗಳು ಎಲೆಗಳ ಮೇಲೆ ಮುತ್ತಿನಂತೆ ಸೂರ್ಯನ ಬೆಳಕಿಗೆ ಹೊಳೆಯುವುದು, ಪಕ್ಷಿಗಳ ಕಲರವ. ನಿತ್ಯ ಇವೆಲ್ಲವನ್ನು ಅನುಭವಿಸಿ ಅಲ್ಲಿಯೇ ಬಾಲ್ಯ ಕಳೆದ ನನಗೆ ಮಲೆನಾಡೇ ಇಷ್ಟ.

ಮಂಚಿಕೆರೆ ಎಂಬ ಪುಟ್ಟ ಪೇಟೆಯೂ ಅಲ್ಲದ ಹಳ್ಳಿಯೂ ಅಲ್ಲದ ಊರಿನಲ್ಲಿಲ್ಲಿದ್ದ ಸರಕಾರಿ ಶಾಲೆ ಮತ್ತು ರಾಜರಾಜೇಶ್ವರಿ ಹೈಸ್ಕೂಲಿನಲ್ಲಿ ನನ್ನ ಶಿಕ್ಷಣ. ಅವೆಲ್ಲ ರೋಮಾಂಚಕ ಅನುಭವ. ಅಂಥ ತಾಲೂಕಿನ ಬೀಗಾರ ಗ್ರಾಮದ ತಮ್ಮಣ್ಣ ಅವರು ಒಬ್ಬ ಶಿಕ್ಷಕ ಮತ್ತು ಸಾಹಿತಿ. ಅವರ ಪರಿಚಯ ಆದದ್ದು ಫೇಸ್ಬುಕ್ನಲ್ಲಿ. ಅವರ ಬರೆಹಗಳಿಗೆ ನಾನು ಆಗಾಗ ಪ್ರತಿಕ್ರಿಯಿಸುತ್ತಿದ್ದು ಆತ್ಮೀಯತೆ ತಾನೇತಾನಾಗಿ ಬೆಳೆಯಿತು. ಅವರು ಶಾಲಾ ಶಿಕ್ಷಕರಾಗಿದ್ದರಿಂದ ಮಕ್ಕಳ ನಾಡಿ ಅವರಿಗೆ ಕರಗತ. ಹಾಗೆ ಬರೆಯುವ ಹವ್ಯಾಸವೂ ಅವರನ್ನು ಸಾಹಿತ್ಯ ಕ್ಷೇತ್ರಕ್ಕೆ.ಎಳೆದು ತಂದಿದೆ. ಅಂತೆಯೇ ಮಕ್ಕಳ ಬಾಲ್ಯದ ಎಲ್ಲ ಚಟುವಟಿಕೆಗಳು, ತುಂಟಾಟಗಳು, ಕುತೂಹಲಗಳು, ಹವ್ಯಾಸಗಳು ಅವರಿಗೆ ಕರತಲಾಮಲಕ.
ಈ ಹಿನ್ನೆಲೆಯಲ್ಲಿ ಅವರು ಮಕ್ಕಳಿಗಾಗೇ ಮೀಸಲಾದ ಉಲ್ಟಾ ಅಂಗಿ ಕಥಾ ಸಂಕನಲನವೊಂದನ್ನು ಹೊರತಂದಿದ್ದಾರೆ. ಅದನ್ನು ಓದುವ ಅವಕಾಶವನ್ನೂ ನನಗೆ ನೀಡಿದ್ದಾರೆ. ಈ ಉಲ್ಟಾ ಅಂಗಿಯ ಮರ್ಮ ಓದುತ್ತ ಹೋದಂತೆ ನನ್ನೆದುರು ತೆರೆದುಕೊಳ್ಳುತ್ತ ಹೋದಂತೆ ನನ್ನ ಬಾಲ್ಯವೇ ಮತ್ತೆ ಮರಳಿ ಬಂದಷ್ಟು ಸಾರ್ಥಕ ಮನೋಭಾವ ಉಂಟಾಯಿತು.
ಈ ಸಂಕಲನದಲ್ಲಿ ಒಟ್ಟು 15 ಕಥೆಗಳಿವೆ. ಎಲ್ಲವೂ ಒಂದಕ್ಕಿಂತ ಒಂದು ಹೆಚ್ಚು. ಶಾಲೆಗೆ ಬಾರದ ಸುಬ್ಬು, ಹುಟ್ಟು ಹಬ್ಬಕ್ಕೆ ಚಾಕಲೇಟ್ ಹಂಚಲು ಪರದಾಡಿ ಸುಳ್ಳು ಹೇಳಿದ ಸೌಮ್ಯ, ಮರಹತ್ತಿ ಪಾರಿವಾಳವನ್ನು ಪಾರು ಮಾಡುವಾಗ ಅಂಗಿ ಹೊಲಸಾದರೂ ಉಲ್ಟಾ ಹಾಕಿದ್ದ ಅಂಗಿಯನ್ನು ಸೀದಾ ಮಾಡಿ ಗೆದ್ದ ಎಂಕಣ್ಣ,, ಗಣಪತಿ ಮುಳುಗಿಸುವ ಕುರಿತು ಸಾನ್ವಿಗೆ ಅರಿವು ಮೂಡಿಸುವ ರವಿ, ಎರಡು ತುಂಡಾದ ಎಲೆಗಳನ್ನು ಕೂಡಿಸುವಂತೆ ತಂದೆ ತಾಯಿಯನ್ನು ಒಂದು ಮಾಡುವ ಅಜ್ಜಿ . . . ಹೀಗೆ ಎಲ್ಲರೂ ಆಪ್ತವಾಗುತ್ತ ಸಾಗುತ್ತಾರೆ.
ಎಲ್ಲ ಮಕ್ಕಳಿಗೂ ತಿಳಿಯುವಂತೆ ಸರಳ ಭಾಷಾ ಪ್ರಯೋಗ, ಆದರೂ ಸುಂದರ ನಿರೂಪಣೆಯಿಂದ ಮಕ್ಕಳ ಅಷ್ಟೇ ಏಕೆ ನನ್ನಂಥ ಹಿರಿಯನ ಮನಸ್ಸೂ ಸೆರೆ ಹಿಡಿಯುತ್ತದೆ. ಸ್ನಾತಕೋತ್ತರ ಪದವೀಧರರಾಗಿರುವ ತಮ್ಮಣ್ಣ ಬೀಗಾರ ಈ ಕಥಾ ಸಂಕಲನದ ಮೂಲಕ ಎಲ್ಲ ಓದುಗರು ಮತ್ತು ಮಕ್ಕಳ ಮನ ಗೆದ್ದಿದ್ದಾರೆ. ನಾನು ಈ ಕಥೆಗಳನ್ನು ನನ್ನ ಪುಟ್ಟ ಮೊಮ್ಮಕ್ಕಳಿಗೂ ಓದಿ ತೋರಿಸಿದೆ. ಒಟ್ಟಾರೆ ಇದು ಮಕ್ಕಳ ಕಥಾ ಸಾಹಿತ್ಯದಲ್ಲಿ ಒಂದು ಉತ್ತಮ ಪ್ರಯೋಗ. ಇಂಥ ಮೌಲ್ವಿಕ ಸೃಷ್ಟಿ ನಿಮ್ಮಿಂದ ಇನ್ನಷ್ಟು ಬರಲಿ ತಮ್ಮಣ್ಣ.

ಅನುಗಾರ ಬೆನಕ,
ಸವಿಜೇನಿನ ಜನಕ
ತಾಲೂಕಿನ ಬೆಳ್ಳುಮನೆಯ ಬೆನಕ ಬಿಳಗಿ ಜೇನುಸಾಕಾಣಿಕೆ ಮತ್ತು ತರಬೇತಿ ಕೇಂದ್ರದ ತಾತ್ಕಾಲಿಕ ಉದ್ಯೋಗಿ.
ಈ ಡಿ. ದರ್ಜೆಯ ಅನುಗಾರ
ಅಲ್ಲಿ ಕೆಲಸ ಮಾಡಿಕೊಂಡು ಇಲಾಖೆಯ ಜವಾಬ್ಧಾರಿ ನಿರ್ವಹಿಸುತ್ತಾ ಕಾಲ ಕಳೆದಿದ್ದರೆ ಬೆನಕ ನಿವೃತ್ತಿಯ ನಂತರವೂ ಸುದ್ದಿಯಾಗದೆ ಕಳೆದು ಹೋಗುತಿದ್ದ ಯಾಕೆಂದರೆ….. ಈತ ಅಲ್ಲಿಯ ಹಂಗಾಮಿ ನೌಕರ.
ಆದರೆ ಇದರಾಚೆ ತನ್ನ ಆಸಕ್ತಿ,ಸಾಧನೆಯಿಂದ
ಈತ ಅನುಗಾರ ಬೆನಕ ಸವಿಜೇನಿನ ಜನಕ ಎನ್ನುವ ಶೀರ್ಷಿಕೆಗೆ ಮಹತ್ವ ತಂದಿದ್ದಾನೆ. …..

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *