ಮನುಪುರರ ಕವನ- ಹಂಬಲ


ನಾ ಸುರಿವ ಮಳೆಯಾಗಿದ್ದರೆಮುಗಿಲಿನಿಂದ ಬೀಳುವಾಗಎದೆಯ ತಟ್ಟಿ, ಹೆಮ್ಮೆಯಿಂದಕೂಗಿ ಹೇಳುತಿದ್ದೆ ,ನನಗೆ ಯಾವುದೇ ಜಾತಿ ಇಲ್ಲವೆಂದು !
ನಾ ಹರಿವ ನೀರಾಗಿದ್ದರೆ,ಉಚ್ಚರ ,ಶ್ವಪಚರ ಮೈಯ್ಯಉಜ್ಜಿ ಉಜ್ಜಿ ತೊಳೆದು,ಇಬ್ಬರ ಕೊಳೆಯ ಜಗಕೆ ತೋರಿ ಸಾಬೀತು ಮಾಡುತಿದ್ದೆಶ್ರೇಷ್ಟತೆಯು  ಹಸಿ ಸುಳ್ಳೆಂದು !
ನಾ ಬೀಸುವ ಗಾಳಿಯಾಗಿದ್ದರೆಉಸಿರಾಡುವಾಗಲಾದರುಒಮ್ಮೆ ಬೆದರಿಕೆಯೊಡ್ಡಿ !ಮನದಟ್ಟು ಮಾಡಿಬಿಡುತಿದ್ದೆ.ಮಾನವತೆಗೂ  ಮಿಗಿಲಾದಯಾವುದೆ “ಧರ್ಮ”ವಿಲ್ಲವೆಂದು!
ನಾ ಸುಡುವ ಬೆಂಕಿಯಾಗಿದ್ದರೆಕಲಿಯುಗದ  ಮುಸುಡಿಗೆಕಪ್ಪುಮಸಿಯಂತಂಟಿರುವಲಿಂಗ ಭೇದದ ಮುಸುಕಹಾಗೆ ಕಿತ್ತರವಿಬಿಡುತಿದ್ದೆ ಸುಟ್ಟು ಬೂದಿ ಮಾಡಲೆಂದು 
ನಾ ಉರಿವ ದೀಪವಾಗಿದ್ದರೆಒಮ್ಮೆಯೂ ಆರದೆಎಲ್ಲರ ಎದೆಯೊಳಗೆ ಪ್ರಕಾಶ ಮಾನವಾಗಿಉರಿದುಬಿಡುತಿದ್ದೆಪ್ರೀತಿಯ ಬೆಳಕ ಶಾಶ್ವತವಾಗಿ ಹಂಚಲೆಂದು 
ನಾ ಅಳುವ ಮಗುವಾಗಿದ್ದರೆಬೆಳವಣಿಗೆಯ ದಿಕ್ಕರಿಸಿಜೋರಾಗಿ ಅಳುತ ಖುಷಿಯ ಪಡುತತಾಯ್ಮಡಿಲಲಿ ಬೆಚ್ಚನೆ ಮಲಗಿಬಿಡುತಿದ್ದೆಮಲಿನವಾಗದೆಮಗುವಾಗಿಯೆ ಉಳಿಯಲೆಂದು ಮೊ ದಲು ಮನುಜನಾಗಲೆಂದು

-ಮನುಪುರ

ಜುಗಾರಿಕ್ರಾಸ್ ಮತ್ತು ಕೋರೋನ.

 ಜುಗಾರಿಕ್ರಾಸ್ ……ಮೈಮನಗಳನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟುಕೊಂಡು ತನ್ನನ್ನು ತಾನೇ ಓದಿಸಿಕೊಂಡು ಹೋಗುವಂತ ಕಾದಂಬರಿ .ಅದರಲ್ಲೂ ಮಧ್ಯರಾತ್ರಿಯ ನೀರವತೆಯಲ್ಲಿ ಜುಗಾರಿಕ್ರಾಸ್ನ್ ಕೌತುಕದೊಳಗೆ ನುಸುಳುವುದು ನಿಜಕ್ಕೂ ಮೈ ಜುಮ್ಮೆನ್ನಿಸುವ ಅನುಭವ.ಯಾವುದೇ ಪಾತ್ರವನ್ನು ,ಘಟನೆಯನ್ನು,ಸನ್ನಿವೇಶವನ್ನು,ಅತ್ಯಾಕರ್ಷಕ ವಾಗಿ ರೋಚಕವಾಗಿ ನಮ್ಮ ಮನ ಮುಟ್ಟುವಂತೆ , ನಮ್ಮದೇ ಅನುಭವವೇ ಎನ್ನುವಂತೆ ಕಟ್ಟಿಕೊಡುವುದು  ಬಹುಶಃ ತೇಜಸ್ವಿಯವರಂತ ಮಹಾನ್ ಚೇತನದಿಂದ ಮಾತ್ರ ಸಾಧ್ಯ ಎನಿಸುತ್ತದೆ.
ಫಾರೆಸ್ಟರ್ ನ  ಲಂಚಗುಳಿತನ ಹೂ ಮಾರುವ ಹುಡುಗಿಯ ಸಹಜ ಮುಗ್ಧತೆ , ಸಮಾಜದ ಕ್ರೌರ್ಯ ,ಸುರೇಶ ಮತ್ತು ಗೌರಿಯ ಹುಚ್ಚು ಮನಸ್ಥಿತಿಗಳು ,ಶಾಸ್ತ್ರಿ, ಕುಟ್ಟಿ ,ದೌಲತ್ ರಾಮ್ ನಂತ ಕಳ್ಳರು , ರಾಜಪ್ಪನಂತ ಸ್ನೇಹಿತ , ಕುಂಟರಾಂ ಮತ್ತು  ಶೇಷಪ್ಪ ನಂತ    ಆಪದ್ಬಾಂದವರು, ಕ್ರಾಂತಿಕಾರಿ ಗಂಗೂಲಿ ಇನ್ನಿತರರ ಜೊತೆ ,ಗುರುರಾಜ ಕವಿಯ ದ್ವಿಮುಖ ಸಂದಾನ ಕಾವ್ಯದೊಳಗೆ  ಕಳೆದುಹೋದ ಆ ರತ್ನಮೂಲ ಪದದಂತೆ    ನಾವೂ ಸಹ ಜುಗಾರಿಕ್ರಾಸ್ ನ  ಮಾಯಾಬಜಾರ್ ನಲ್ಲಿ ಕಳೆದು ಹೋಗಿಬಿಡುತ್ತೇವೆ. 
ಗೌರಿ ಮತ್ತು ಸುರೇಶ ಜುಗಾರಿ ಕ್ರಾಸ್ ನ ಕುತೂಹಲಕ್ಕೆ ಸಿಕ್ಕಂತೆ ನಾವು ನೀವುಗಳು ಸಹ ಇಂದು corona ಎಂಬ ಮಹಾಮಾರಿ ಕುತೂಹಲಕ್ಕೆ ಬಲಿಯಾಗುತಿ ದ್ದೇವೆ . ಕುಟ್ಟಿ ದೌಲಟ್ ರಾಮ್ ನಂತೆ ಹೊರದೇಶದಿಂದ ಬಂದವರು ನಮ್ಮನ್ನು ಆ ಸರಪಳಿಯೊಳಗೆ ನಮಗೇ ಅರಿವಿಲ್ಲದಂತೆ ಸಿಲುಕಿಸಿ ಬಿಟ್ಟಿದ್ದಾರೆ. corona ಎಂಬ ಸುಪಾರಿ ಕಿಲ್ಲರ್ ಯಾಮಾರಿಸಿಇಲ್ಲಿ ನಮಗೆ ನೆರವಾಗಲು ಯಾವ ಕುಂಟರಾಮ ಯಾವ ಶೇಷಪ್ಪ ನು ಬರಲಾರ.
ಗೌರಿ ಮತ್ತು ಸುರೇಶ ಚಲಿಸುತ್ತಿರುವ ರೈಲಿನಿಂದ ಸುರಂಗದೊಳಗೆ ನೆಗೆದು ಜೀವ ಉಳಿಸಿ ಕೊಂಡಂತೆ ಇಂದು ನಾವು ಚಲಿಸುತ್ತಿರುವ ಬದುಕಿನಿಂದ ಮನೆಯೊಳಗೆ ನೆಗೆದು ಜೀವ ಉಳಿಸಿ ಕೊಳ್ಳಬೇಕಿದೆ. ಸುರೇಶ ತನ್ನ ಉಳಿವಿಗಾಗಿ ತನ್ನ ಸ್ನೇಹಿತ ರಾಜಪ್ಪನನ್ನು ಅನುಮಾನಿಸುವಂತೆ  ಈ corona ದೆಸೆಯಿಂದ ನಾವಿಂದು ನೆಂಟರನ್ನು ಸ್ನೇಹಿತರನ್ನು ಅನುಮಾನಿಸಿ ದೂರ ಉಳಿಯ ಬೇಕಿದೆ .ಹಣ ಐಶಾರಾಮ್ಯದ ಅಮಲಿಂದೆ   ಓಡುತಿದ್ದ ನಮಗೆ corona ದಂತ ಕಿಲ್ಲರ್ ಗಳು ಬೆನ್ನತ್ತಿ ಅವುಗಳ ಬಗ್ಗೆ ಇದ್ದ ವ್ಯಾಮೋಹವನ್ನು ಒದ್ದೋಡಿಸಿ ಬಿಟ್ಟಿವೆ . ಗೌರಿ ಮತ್ತು ಸುರೇಶನಂತೆ ಈ ಎಲ್ಲಾ ಗೊಂದಲಗಳಿಂದ ಹೊರಬಂದು ಜೀವ ಉಳಿದರೆ ಸಾಕು ಎನ್ನುವಂತಾಗಿದೆ.
ಸುರೇಶ ಮತ್ತು ಗೌರಿ ತಮಗೆ ತಿಳಿಯದೆ ಮಾದಕ ಪದಾರ್ಥ ಸಾಗಿಸಿದಂತೆ ಇಂದು ಎಷ್ಟೋ ಮಂದಿ ತಮಗೆ ಅರಿವಿಲ್ಲದೆ corona ವೈರಸ್ ಸಾಗಿಸುತ್ತಿದ್ದಾರೆ.ತಿಳಿದೋ ತಿಳಿಯದೆಯೋ  ದೇವಮ್ಮ ನ ಗಂಡನಂತೆ , ಕುಂಟಾರಾಮ ನಂತೆ corona ಎಂಬ ಕೆಂಪು ಹರಳ ಮೋಹಕ್ಕೆ ಸಿಲುಕಿ ಕಣ್ಮರೆ ಯಾಗುತಿದ್ದಾರೆ. ಮೇದರಹಳ್ಳಿಯ ಬಿದಿರು ತೆನೆಗಟ್ಟಿ ನಾಶವಾಗಿದ್ದು ಸ್ವಾಭಾವಿಕವಾದರೆ ಇಂದುನಾವು ನಮ್ಮ ಅರಿವು ಗೇಡಿತನದಿಂದ ನಾಶವಾಗುವ ಹಂತ ತಲುಪಿದ್ದೇವೆ .ಬಿದಿರಿನ ಕೆಳಗೆ ಉದುರಿ ಬಿದ್ದಿದ್ದು ರಾಶಿ ರಾಶಿ ತೆನೆಯಷ್ಟೆ ಆದರೆ ಶೇಶಪ್ಪನ ಕನ್ನಡಿಯಲ್ಲೇಕೊ ರಾಶಿ ರಾಶಿ ಹೆಣಗಳು ಕಾಣುತ್ತಿವೆ .ಯಾವುದೋ ವಂಚನೆಯ ವ್ಯೂಹದೊಳಗೆ ಸಿಲುಕಿ ಬಿಟ್ಟಂತೆ ಮನಸು ಕಸಿವಿಸಿ ಗೊಳ್ಳುತ್ತಿದೆ . ನಮ್ಮ ಎಚ್ಚರ ದಲ್ಲಿ ನಾವಿರೋಣ .ಈ ಬದುಕೆಂಬ ಜುಗಾರಿ ಕ್ರಾಸ್ ನಲ್ಲಿ ನಮ್ಮ ಜೀವವೆಂಬ  ಏಲಕ್ಕಿಗು  ಒಳ್ಳೆಯ ಬೆಲೆ ಸಿಗಲಿ ಹಾಗೂ ಯಾವ ಕುತಂತ್ರವೂ ಇರದೆ ನಮ್ಮ ದುಡಿಮೆ ನಮ್ಮ ಕೈ ಸೇರಲಿ …..ಕ್ಯಾಪ್ಟನ್ ಖುದ್ದುಸನ ಘಾಟಿ  ಎಕ್ಸ್ ಪ್ರೆಸ್ ನಮಗಾಗಿ ಕಾದಿರುತ್ತದೆ.
-ಮನು ಪುರ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *