ಕರೋನಾ: ಅತಿಕೆಟ್ಟ ರಾಷ್ಟ್ರೀಯ ದುರಂತವನ್ನೂ ವ್ಯಕ್ತಿ ಆರಾಧನೆಗಾಗಿ (ದುರ್ಬಳಕೆ) ಬಳಕೆ ?

ಹಿರಿಯ ಲೇಖಕ, ಚಿಂತಕ ರಾಮಚಂದ್ರ ಗುಹಾ ಅವರ ಟ್ವೀಟ್:

ಈಗಾಗಲೇ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯೊಂದು ಅಸ್ತಿತ್ವದಲ್ಲಿರುವಾಗ ಹೊಸ ನಿಧಿಯನ್ನು ಸ್ಥಾಪಿಸುವ ಅಗತ್ಯವಾದರೂ ಏನಿದೆ?

ಅದೂ ಅಲ್ಲದೆ PM-CARES ಎನ್ನುತ್ತ ತನ್ನನ್ನು ತಾನೇ ಉಬ್ಬಿಸಿಕೊಳ್ಳುವಂತೆ ಹೆಸಿರಿಟ್ಟುಕೊಳ್ಳುವುದೇಕೆ? ಒಂದು ಅತಿಕೆಟ್ಟ ರಾಷ್ಟ್ರೀಯ ದುರಂತವನ್ನೂ ವ್ಯಕ್ತಿ ಆರಾಧನೆಗಾಗಿ (ದುರ್ಬಳಕೆ) ಬಳಕೆ ಮಾಡಿಕೊಳ್ಳಬೇಕೇ?

PM-CARES ಒಂದು ಸಾರ್ವಜನಿಕ ದತ್ತಿ ಸಂಸ್ಥೆಯಾಗಿದೆ. ಪ್ರಧಾನ ಮಂತ್ರಿಯು ಅದರ ಅಧ್ಯಕ್ಷರಾಗಿದ್ದು, ದೇಶದ ರಕ್ಷಣಾ ಸಚಿವರು, ಗೃಹ ಸಚಿವರು ಮತ್ತು ಹಣಕಾಸು ಮಂತ್ರಿ ಈ ಸಂಸ್ಥೆಯ ಇತರ ಸದಸ್ಯರಾಗಿರುತ್ತಾರೆ.

ಸಂಸ್ಥೆಯ ಘೋಷಿತ ಧ್ಯೇಯೋದ್ದೇಶ: ಯಾವುದೇ ವಿಧವಾದ ತುರ್ತು ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸುವುದು ಮತ್ತು ಅದರಿಂದ ಬಾಧಿತರಾದವರಿಗೆ ಪರಿಹಾರ ಒದಗಿಸುವುದು.

ಉದಾಹರಣೆಗೆ ಕೋವಿಡ್-19 ಸಾಂಕ್ರಾಮಿಕ ಸೋಂಕಿನಿಂದ ಉಂಟಾಗಿರುವ ತುರ್ತು ಪರಿಸ್ಥಿತಿ.
ಇದರ ಕುರಿತು ಕೆಲವು ಪ್ರಶ್ನೆಗಳು:

1. ಸಾರ್ವಜನಿಕ ದತ್ತಿ ಸಂಸ್ಥೆಯನ್ನು ರಚಿಸಲು ತೀರ್ಮಾನಿಸಿದ್ದು ಯಾವಾಗ?

2. ಹಾಗೆ ಮಾಡಲೇಬೇಕೆಂಬ ಬಲವಾದ ಕಾರಣಗಳೇನು?

3. ಈಗಾಗಲೇ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಅಸ್ತಿತ್ವದಲ್ಲಿದ್ದರೂ ಹೊಸದಾಗಿ ಸಾರ್ವಜನಿಕ ದತ್ತಿ ಸಂಸ್ಥೆಯೊಂದನ್ನು ಸ್ಥಾಪಿಸುವುದರಿಂದ ಉಂಟಾಗುವ ಪ್ರಯೋಜನಗಳೇನು?

4. ಅದರ ನಿಯಮಾವಳಿಗಳನ್ನು (ಬೈ ಲಾ) ನೋಡಲು/ ಓದಲು ನಮಗೆ ಅವು ಎಲ್ಲಿ ಲಭ್ಯವಾಗುತ್ತವೆ?

5. ಯಾವ ಕಾಯಿದೆಯ ಅಡಿಯಲ್ಲಿ ಈ ಸಂಸ್ಥೆಯನ್ನು ನೋಂದಣಿ ಮಾಡಲಾಗಿದೆ?

6. ಎಲ್ಲಿ ಮತ್ತು ಯಾವಾಗ ಈ ನೋಂದಣಿ ಮಾಡಲಾಯಿತು?

7. ಉಪ-ನೋಂದಣಾಧಿಕಾರಿಯವರು ಪ್ರಧಾನ ಮಂತ್ರಿಯವರ ಮನೆಗೆ ಭೇಟಿ ನೀಡಿದರೇ ಅಥವಾ ಪ್ರಧಾನಿಯವರೇ ಉಪ-ನೋಂದಣಾಧಿಕಾರಿಯವರ ಕಛೇರಿಗೆ ಹೋಗಿ ಬಂದರೇ?

8. ಈ ದತ್ತಿ ಸಂಸ್ಥೆಯ ಸೆಟ್ಲರ್ (ಸಂಸ್ಥೆಯನ್ನು ಪ್ರಾರಂಭಿಸುವವ) / ಅಧ್ಯಕ್ಷ ಯಾರು? – ಭಾರತದ ಪ್ರಧಾನ ಮಂತ್ರಿಯವರೇ ಅಥವಾ ನರೇಂದ್ರ ಮೋದಿಯವರೇ?

9. ಇತರ ಸದಸ್ಯರನ್ನು ಅವರವರ ವ್ಯಕ್ತಿಗತ ಹೆಸರುಗಳಿಂದ ನಾಮಕರಣ ಮಾಡಲಾಗಿದೆಯೋ ಅಥವಾ ಅವರ ಅಧಿಕೃತ ಹುದ್ದೆಗಳ ಮೂಲಕವೋ?

10. PM-CARES ಟ್ರಸ್ಟ್ ಕಛೇರಿ ನೋಂದಣಿಯಾಗಿರುವ ಅಧಿಕೃತ ವಿಳಾಸವೇನು?

11. ಹಾಗಾದರೆ ದೀರ್ಘಕಾಲದಿಂದ ಸಾಂಸ್ಥೀಕರಣಗೊಂಡಿರುವ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ದೇಣಿಗೆ ನೀಡುವ ಬದಲಿಗೆ, ಹೊಸದಾಗಿ ಉದ್ಭವವಾಗಿರುವ ಈ ಸಾರ್ವಜನಿಕ ದತ್ತಿ ನಿಧಿಗೆ ದಾನ ಮಾಡಲು ಅಕ್ಷಯ್ ‘ಕೆನಡಾ’ ಕುಮಾರ್ (ಹಿಂದಿ ಸಿನಿಮಾ ನಟ), ವಿಜಯ್ ‘ಪೇ ಟಿಎಂ’ (ಉದ್ಯಮಿ – Paytm ಕಂಪನಿಯ ಸಂಸ್ಥಾಪಕ), ಜೇ ‘ಬಿಸಿಸಿಐ’ ಶಾ (ಅಮಿತ್ ಶಾ ಪುತ್ರ), ಮುಂತಾದವರು ಒಬ್ಬರ ಮೇಲೊಬ್ಬರು ಬೀಳುತ್ತಿರುವುದಕ್ಕೆ ಕಾರಣವೇನು?

#DeMo (ಡೀಮಾನೆಟೈಸೇಶನ್ – ನೋಟ್ ಅಮಾನ್ಯೀಕರಣ) ದ ಮರುದಿನವೇ Paytm ಜಾಹೀರಾತುಗಳಲ್ಲಿ ಮೋದಿ ಕಾಣಿಸಿಕೊಂಡಿದ್ದನ್ನು ಮರೆತಿದ್ದೀರೇನು?

– Translated by Com. Jyothi. A

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *