ನಿಜ ಕಲಾವಿದರ ನೈಜ ಸಮಾಜಮುಖಿ ಕೆಲಸ

ಕೆಲವು ವಿಶೇಶ ಹಿತಾಸಕ್ತರು ಡಾ.ರಾಜ್‍ಕುಮಾರರನ್ನು ಒಪ್ಪಿಕೊಳ್ಳುತ್ತಾರೆ, ಒಪ್ಪಿಕೊಂಡಂತೆ ಮಾತನಾಡುತ್ತಲೇ ನಿಧಾನವಾಗಿ ಡಾ. ರಾಜ್ ರಾಜ್ ಕುಮಾರ ಕುಟುಂಬ ರಾಜ್ಯ ದೇಶಕ್ಕೇನು ಕೊಟ್ಟಿದೆ ಎಂದು ಪ್ರಶ್ನಿಸುತ್ತಾರೆ. ರಾಜ್‍ಕುಮಾರ್ ಕೊಡುಗೆ ಎಲ್ಲರಿಗೂ ತಿಳಿದಿರಬೇಕೆಂದೇನೂ ಇಲ್ಲ ಆದರೆ ಉದ್ದೆಶಪೂರ್ವಕವಾಗಿ ಅವರ ಬಗ್ಗೆ ಉಪಾಯದಿಂದ ತಕರಾರು ಎತ್ತಿ ವಿಮರ್ಶಿಸುವವರು ಅವರ ಕೊಡುಗೆ, ಸಾಧನೆ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನವನ್ನೂ ಮಾಡುವುದಿಲ್ಲ.
ಇಂಥದ್ದೇ ತಕರಾರುಗಳು ಅವರ ಕುಟುಂಬ,ಮಕ್ಕಳ ಮೇಲಿವೆ.

ಈ ರಾಜ್‍ಕುಮಾರ, ಕುವೆಂಪು, ಲಂಕೇಶ್ ರ ಕೊಡುಗೆ, ಸಾಧನೆ, ಸಮಾಜಮುಖೀ ಚಟುವಟಿಕೆಗಳ ಬಗ್ಗೆ ಕೇಳಿ, ವಿಮರ್ಶಿಸುವವರು ಇತ್ತೀಚೆಗೆ ಪ್ರಕಾಶ್ ರೈ ಎಂಬ ಕನ್ನಡಿಗರ ಹೆಮ್ಮೆಯ ವ್ಯಕ್ತಿಯ ಬಗ್ಗೆಯೂ ತಕರಾರೆತ್ತುವುದಿದೆ.
ಇವರ ಸಮಸ್ಯೆ ಅವರ ಸಾಧನೆ, ಪ್ರಸಿದ್ಧಿ, ಕೊಡುಗೆಗಳ ಬಗ್ಗೆ ಅಲ್ಲ ಯಾಕೆಂದರೆ ಇವರ ಬಗ್ಗೆ ತಕರಾರು ಎತ್ತಿ, ವಿಮರ್ಶಿಸುವವರು ಒಂದೋ ಅವರು ಇವರ ಬಗ್ಗೆ ತಿಳಿದುಕೊಂಡು ಕೊಂಕು ನುಡಿಯುವ ನವಭಾರತದ ಮತಾಂಧ ವೈಚಾರಿಕತೆಯವರಿರುತ್ತಾರೆ, ಅಥವಾ ತಮ್ಮ ದೇವರು, ಧರ್ಮ,ನಂಬಿಕೆಗಳ ಸುಲಭ ಜೀವನೋಪಾಯದ ವಂಚಕ ಪರಿವಾರದವರಿರುತ್ತಾರೆ. ಇಂಥವರು ಈಗಿನ ಕರೋನಾ ಸಂಕಷ್ಟ ಕಾಲದಲ್ಲಿ ಯಾರ್ಯಾರು ಏನೇನು ಮಾಡುತಿದ್ದಾರೆ ಎಂದು ಗಮನಿಸಿದರೆ ಅವರ ಲಾಗಾಯ್ತಿನ ವೈರಸ್ ಗೆ ಮದ್ದು ಕಂಡುಕೊಂಡಂತಾಗುತ್ತದೆ.
ಈಗಿರುವ ಮಾಹಿತಿಗಳ ಪ್ರಕಾರ ರಾಜ್ ಪುತ್ರ ಶಿವರಾಜ್ ಕುಮಾರ ಚಿತ್ರರಂಗದ 5000 ಜನ ಸಿನಿ ಕಾರ್ಮಿಕರಿಗೆ ನಿತ್ಯ ಊಟೋಪಚಾರದ ವ್ಯವಸ್ಥೆ ಮಾಡುತಿದ್ದಾರೆ.
ಪುನೀತ್ ರಾಜ್ ಕುಮಾರ್ ಮುಖ್ಯಮಂತ್ರಿ ಕರೋನಾ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿದೇಣಿಗೆ ನೀಡಿದ್ದಾರೆ.

ಪ್ರಕಾಶ್‍ರಾಜ್ 250 ಜನ ದಿನಗೂಲಿ ಕಾರ್ಮಿಕರಿಗೆ ನಿತ್ಯ ಊಟೋಪಚಾರದ ಜವಾಬ್ಧಾರಿ ವಹಿಸಿಕೊಂಡಿದ್ದಾರೆ. ತಮ್ಮ ಮನೆಕೆಲಸದವರಿಗೆ ಎರಡು ತಿಂಗಳ ಮುಂಚಿತ ವೇತನ ನೀಡಿ ರಜೆ ನೀಡಿದ್ದಾರೆ.
ಹೀಗೆ ಸಿನಿಕಲಾವಿದರು, ಸಮಾಜಮುಖಿ ವ್ಯಕ್ತಿಗಳು ಅವರವರ ಸಾಮಥ್ರ್ಯಕ್ಕೆ ತಕ್ಕಂತೆ ಉದಾರವಾಗಿ ನೆರವಾಗುತಿದ್ದಾರೆ.
ಇಂಥ ನೆರವು, ಸಹಾಯ,ನಾಯಕತ್ವ, ಸಮಾಜಸೇವೆ ಮಾಡಿದ ಅನೇಕ ಸೆಲಿಬ್ರಿಟಿಗಳು ನಮ್ಮೆದುರಿಗಿದ್ದಾರೆ. ಆದರೆ ನಂಜುಕಾರುವ ಪರಿವಾರ ಮತ್ತವರ ಬೆಂಬಲಿಗರು ಸದಾ ತಮ್ಮ ಒಳಿತು ನೋಡುತ್ತಾ ಇಂಥ ಕಲಾವಿದರು, ಸಮಾಜಮುಖಿ ವ್ಯಕ್ತಿಗಳ ವಿರುದ್ಧ ಮಾತನಾಡುವ, ಕೆಲಸ ಮಾಡುವ ವಿದ್ಯಮಾನವನ್ನು ನೋಡುತಿದ್ದೇವೆ. ಸರ್ಕಾರದ ಕ್ಷೇತ್ರ ಅಭಿವೃದ್ಧಿ ನಿಧಿಯನ್ನೇ ಕರೋನಾ ಪರಿಹಾರ ನಿಧಿ ಗೆ ನೀಡಿ ಪ್ರಚಾರ ಪಡೆಯುತ್ತಿರುವ ಈಗಿನ ಸರ್ಕಾರದ ಸಂಸದರು, ಶಾಸಕರು, ಸಚಿವ ಕಲಾವಿದರ ನಡುವೆ ಪ್ರಚಾರವಿಲ್ಲದೆ ಕೆಲಸ ಮಾಡುತ್ತಿರುವ ನಿಜಕಲಾವಿದರು ಗ್ರೇಟ್ ಅಲ್ಲವೆ? ಅಷ್ಟಕ್ಕೂ ಈ ಕಲಾವಿದರು ಜನಸಾಮಾನ್ಯರ ಮತ ಪಡೆದು, ಜನಸಾಮಾನ್ಯರ ತೆರಿಗೆಯ ಸರ್ಕಾರದ ಸೌಲತ್ತು, ವೇತನ, ಅವಕಾಶ, ಅನುಕೂಲಗಳನ್ನು ಪಡೆದುಕೊಂಡವರಲ್ಲವಲ್ಲ, ಮತ ಪಡೆದು ಅಧಿಕಾರ ಪಡೆ ದು ಮನೆಯಲ್ಲಿ ಸುಖ, ಶಾಂತಿ ಪಡೆಯುತ್ತಿರುವ ಜನಪ್ರತಿನಿಧಿಗಳ ಎದುರು ಕಲಾವಿದರ ಸಮಾಜಮುಖೀ ವ್ಯಕ್ತಿತ್ವ ಗೌರವಕ್ಕೆ ಅರ್ಹ ಅಲ್ಲವೆ?

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *