ನಿಜ ಕಲಾವಿದರ ನೈಜ ಸಮಾಜಮುಖಿ ಕೆಲಸ

ಕೆಲವು ವಿಶೇಶ ಹಿತಾಸಕ್ತರು ಡಾ.ರಾಜ್‍ಕುಮಾರರನ್ನು ಒಪ್ಪಿಕೊಳ್ಳುತ್ತಾರೆ, ಒಪ್ಪಿಕೊಂಡಂತೆ ಮಾತನಾಡುತ್ತಲೇ ನಿಧಾನವಾಗಿ ಡಾ. ರಾಜ್ ರಾಜ್ ಕುಮಾರ ಕುಟುಂಬ ರಾಜ್ಯ ದೇಶಕ್ಕೇನು ಕೊಟ್ಟಿದೆ ಎಂದು ಪ್ರಶ್ನಿಸುತ್ತಾರೆ. ರಾಜ್‍ಕುಮಾರ್ ಕೊಡುಗೆ ಎಲ್ಲರಿಗೂ ತಿಳಿದಿರಬೇಕೆಂದೇನೂ ಇಲ್ಲ ಆದರೆ ಉದ್ದೆಶಪೂರ್ವಕವಾಗಿ ಅವರ ಬಗ್ಗೆ ಉಪಾಯದಿಂದ ತಕರಾರು ಎತ್ತಿ ವಿಮರ್ಶಿಸುವವರು ಅವರ ಕೊಡುಗೆ, ಸಾಧನೆ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನವನ್ನೂ ಮಾಡುವುದಿಲ್ಲ.
ಇಂಥದ್ದೇ ತಕರಾರುಗಳು ಅವರ ಕುಟುಂಬ,ಮಕ್ಕಳ ಮೇಲಿವೆ.

ಈ ರಾಜ್‍ಕುಮಾರ, ಕುವೆಂಪು, ಲಂಕೇಶ್ ರ ಕೊಡುಗೆ, ಸಾಧನೆ, ಸಮಾಜಮುಖೀ ಚಟುವಟಿಕೆಗಳ ಬಗ್ಗೆ ಕೇಳಿ, ವಿಮರ್ಶಿಸುವವರು ಇತ್ತೀಚೆಗೆ ಪ್ರಕಾಶ್ ರೈ ಎಂಬ ಕನ್ನಡಿಗರ ಹೆಮ್ಮೆಯ ವ್ಯಕ್ತಿಯ ಬಗ್ಗೆಯೂ ತಕರಾರೆತ್ತುವುದಿದೆ.
ಇವರ ಸಮಸ್ಯೆ ಅವರ ಸಾಧನೆ, ಪ್ರಸಿದ್ಧಿ, ಕೊಡುಗೆಗಳ ಬಗ್ಗೆ ಅಲ್ಲ ಯಾಕೆಂದರೆ ಇವರ ಬಗ್ಗೆ ತಕರಾರು ಎತ್ತಿ, ವಿಮರ್ಶಿಸುವವರು ಒಂದೋ ಅವರು ಇವರ ಬಗ್ಗೆ ತಿಳಿದುಕೊಂಡು ಕೊಂಕು ನುಡಿಯುವ ನವಭಾರತದ ಮತಾಂಧ ವೈಚಾರಿಕತೆಯವರಿರುತ್ತಾರೆ, ಅಥವಾ ತಮ್ಮ ದೇವರು, ಧರ್ಮ,ನಂಬಿಕೆಗಳ ಸುಲಭ ಜೀವನೋಪಾಯದ ವಂಚಕ ಪರಿವಾರದವರಿರುತ್ತಾರೆ. ಇಂಥವರು ಈಗಿನ ಕರೋನಾ ಸಂಕಷ್ಟ ಕಾಲದಲ್ಲಿ ಯಾರ್ಯಾರು ಏನೇನು ಮಾಡುತಿದ್ದಾರೆ ಎಂದು ಗಮನಿಸಿದರೆ ಅವರ ಲಾಗಾಯ್ತಿನ ವೈರಸ್ ಗೆ ಮದ್ದು ಕಂಡುಕೊಂಡಂತಾಗುತ್ತದೆ.
ಈಗಿರುವ ಮಾಹಿತಿಗಳ ಪ್ರಕಾರ ರಾಜ್ ಪುತ್ರ ಶಿವರಾಜ್ ಕುಮಾರ ಚಿತ್ರರಂಗದ 5000 ಜನ ಸಿನಿ ಕಾರ್ಮಿಕರಿಗೆ ನಿತ್ಯ ಊಟೋಪಚಾರದ ವ್ಯವಸ್ಥೆ ಮಾಡುತಿದ್ದಾರೆ.
ಪುನೀತ್ ರಾಜ್ ಕುಮಾರ್ ಮುಖ್ಯಮಂತ್ರಿ ಕರೋನಾ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿದೇಣಿಗೆ ನೀಡಿದ್ದಾರೆ.

ಪ್ರಕಾಶ್‍ರಾಜ್ 250 ಜನ ದಿನಗೂಲಿ ಕಾರ್ಮಿಕರಿಗೆ ನಿತ್ಯ ಊಟೋಪಚಾರದ ಜವಾಬ್ಧಾರಿ ವಹಿಸಿಕೊಂಡಿದ್ದಾರೆ. ತಮ್ಮ ಮನೆಕೆಲಸದವರಿಗೆ ಎರಡು ತಿಂಗಳ ಮುಂಚಿತ ವೇತನ ನೀಡಿ ರಜೆ ನೀಡಿದ್ದಾರೆ.
ಹೀಗೆ ಸಿನಿಕಲಾವಿದರು, ಸಮಾಜಮುಖಿ ವ್ಯಕ್ತಿಗಳು ಅವರವರ ಸಾಮಥ್ರ್ಯಕ್ಕೆ ತಕ್ಕಂತೆ ಉದಾರವಾಗಿ ನೆರವಾಗುತಿದ್ದಾರೆ.
ಇಂಥ ನೆರವು, ಸಹಾಯ,ನಾಯಕತ್ವ, ಸಮಾಜಸೇವೆ ಮಾಡಿದ ಅನೇಕ ಸೆಲಿಬ್ರಿಟಿಗಳು ನಮ್ಮೆದುರಿಗಿದ್ದಾರೆ. ಆದರೆ ನಂಜುಕಾರುವ ಪರಿವಾರ ಮತ್ತವರ ಬೆಂಬಲಿಗರು ಸದಾ ತಮ್ಮ ಒಳಿತು ನೋಡುತ್ತಾ ಇಂಥ ಕಲಾವಿದರು, ಸಮಾಜಮುಖಿ ವ್ಯಕ್ತಿಗಳ ವಿರುದ್ಧ ಮಾತನಾಡುವ, ಕೆಲಸ ಮಾಡುವ ವಿದ್ಯಮಾನವನ್ನು ನೋಡುತಿದ್ದೇವೆ. ಸರ್ಕಾರದ ಕ್ಷೇತ್ರ ಅಭಿವೃದ್ಧಿ ನಿಧಿಯನ್ನೇ ಕರೋನಾ ಪರಿಹಾರ ನಿಧಿ ಗೆ ನೀಡಿ ಪ್ರಚಾರ ಪಡೆಯುತ್ತಿರುವ ಈಗಿನ ಸರ್ಕಾರದ ಸಂಸದರು, ಶಾಸಕರು, ಸಚಿವ ಕಲಾವಿದರ ನಡುವೆ ಪ್ರಚಾರವಿಲ್ಲದೆ ಕೆಲಸ ಮಾಡುತ್ತಿರುವ ನಿಜಕಲಾವಿದರು ಗ್ರೇಟ್ ಅಲ್ಲವೆ? ಅಷ್ಟಕ್ಕೂ ಈ ಕಲಾವಿದರು ಜನಸಾಮಾನ್ಯರ ಮತ ಪಡೆದು, ಜನಸಾಮಾನ್ಯರ ತೆರಿಗೆಯ ಸರ್ಕಾರದ ಸೌಲತ್ತು, ವೇತನ, ಅವಕಾಶ, ಅನುಕೂಲಗಳನ್ನು ಪಡೆದುಕೊಂಡವರಲ್ಲವಲ್ಲ, ಮತ ಪಡೆದು ಅಧಿಕಾರ ಪಡೆ ದು ಮನೆಯಲ್ಲಿ ಸುಖ, ಶಾಂತಿ ಪಡೆಯುತ್ತಿರುವ ಜನಪ್ರತಿನಿಧಿಗಳ ಎದುರು ಕಲಾವಿದರ ಸಮಾಜಮುಖೀ ವ್ಯಕ್ತಿತ್ವ ಗೌರವಕ್ಕೆ ಅರ್ಹ ಅಲ್ಲವೆ?

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *