ಜಿಲ್ಲೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದವರ ಮೇಲೆ ಪ್ರಕರಣ ದಾಖಲು,ಜಮಾತ್ ಸಭೆಯಲ್ಲಿ ಪಾಲ್ಗೊಂಡವರು ಮಾಹಿತಿ ನೀಡಲು ಆದೇಶ

ಕಾರವಾರ, ಏ.02-ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಂಡು ಪೊಲೀಸ್‍ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ತಿಳಿಸಿದರು.

ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಜಿಲ್ಲಾಧಿಕಾರಿಗಳು 144 ಸಿಆರ್‍ಪಿಸಿ ನಿಷೇಧಾಜ್ಞೆ ಆದೇಶವನ್ನು ಜಾರಿಗೊಳಿಸಿದಾನಿಂದ ಪೊಲೀಸ್ ಇಲಾಖೆಯು ಜಿಲ್ಲೆಯಲ್ಲಿ 16 ಚೆಕ್ ಪೋಸ್ಟ್ ಗಳನ್ನು ಮಾಡುವುದರೊಂದಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುತ್ತದೆ. ಕಳೆದ ಒಂದೇ ವಾರದ ಅವಧಿಯಲ್ಲಿ 10 ಪ್ರಕರಣಗಳನ್ನು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಲಾಗಿರುತ್ತದೆ.

ರಾಮನಗರ, ಮಲ್ಲಾಪುರ, ಕದ್ರಾ ದಲ್ಲಿ ತಲಾ 1, ಭಟ್ಕಳ ಶಹರದಲ್ಲಿ 3, ಹಾಗೂ ಹಳಿಯಾಳದಲ್ಲಿ 2 ಪ್ರಕರಣ ದಾಖಲಾದರೆ, ದಾಂಡೇಲಿ ನಗರ ಠಾಣೆಯಲ್ಲಿ 2 ಪ್ರಕರಣ ದಾಖಲಿಸಿದ್ದು, ಒಂದು ಅಬಕಾರಿ ಕಾಯ್ದೆಯಡಿ ಮತ್ತೊಂದು ಐಪಿಸಿ ಹಾಗೂ ವಿಪತ್ತು ನಿರ್ವಾಹಣಾ ಕಾಯ್ದೆಯಡಿ ದಾಖಲಾಗಿರುತ್ತವೆ ಇದಲ್ಲದೇ ಮಾರ್ಚ 24 ಒಂದೇ ದಿನದಲ್ಲಿ ಜಿಲ್ಲೆಯಾದ್ಯಂತ 20 ಜನರ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಅದರಲ್ಲಿ 09 ಜನ ಆರೋಪಿತರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಹಾಗೂ 4 ಬೈಕ್, 1 ಕಾರ್ ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

ದೇಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಜನರನ್ನು ಗುರುತಿಸಿ ಈಗಾಗಲೇ ಹೋಮ್ ಕ್ವಾರಂಟೈನ್ ಗೆ ಸೂಚಿಸಲಾಗಿದೆ. ಜಮಾತ್ ಸಭೆಗೆ ಹೊಗುವುದು ತಪ್ಪಲ್ಲ ಆದರೆ ಕರೋನಾ ವೈರಸ್ ಹರಡುವಿಕೆ ಸಾಧ್ಯತೆ ಇರುವದರಿಂದ ಜಿಲ್ಲೆಯ ಜನರು ಈ ತರಹದ ಸಭೆಗೆ ಹಾಜರಾಗಿದ್ದಲ್ಲಿ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡುವ ಮೂಲಕ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ಒಂದು ವೇಳೆ ಬಚ್ಚಿಟ್ಟಲ್ಲಿ ತಪ್ಪಾಗುತ್ತದೆ. ಜನರು ಭಯ ಪಡಬೇಕಿಲ್ಲ. ತಮ್ಮ ಕುಟುಂಬ ಹಾಗೂ ಸಮಾಜದ ಹಿತರಕ್ಷಣೆಗಾಗಿ ಸರಕಾರದೊಂದಿಗೆ ಸಹಕರಿಸಬೇಕೆಂದು ವಿನಂತಿಸಿದರು.

ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯಿಂದ ನಿಷೇಧಾಜ್ಞೆ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು ನಿಷೇಧಾಜ್ಞೆ ಉಲ್ಲಂಘಿಸುವವರ ಮೇಲೆ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಹೋಗದೆ, ಶಾಂತ ರೀತಿಯಿಂದ ಪೊಲೀಸರೊಂದಿಗೆ ಸಹಕರಿಸುವಂತೆ ಮಾಧ್ಯಮಗಳ ಮೂಲಕ ಪೊಲೀಸ್ ವರಿಷ್ಠಾಧಿಕಾರಿ ಕೋರಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *