ದುರ್ಬಲ ನಾಯಕತ್ವದ ಅವಿವೇಕ ಪ್ರತಿಬಿಂಬ

ಕರೋನಾ ಭಯದಿಂದ ಜನ ಮನೆ ಸೇರಿದರು, ಮುಖ್ಯಸ್ಥ ಜಾಗಟೆ ಹೊಡೆಯಲು ಅವರನ್ನು ರಸ್ತೆಗೆ ಕರೆದ.
ಜನ ಭಯ, ಆತಂಕ, ಹಸಿವೆ, ರಗಳೆಗಳಿಂದ ಮನೆಯಲ್ಲಿ ನೋಯುತಿದ್ದಾರೆ ಮುಖ್ಯಸ್ಥ ಲೈಟ್‍ಬಂದ್ ಮಾಡಿ ಅಂಧಕಾರ ತೊಲಗಿಸಿ ಎಂದ.
ಇಂಥ ವರ್ತನೆ, ನಡವಳಿಕೆ, ನಾಟಕ ಸಹಜಮನುಷ್ಯರನ್ನು ಕೆರಳಿಸದೆ ಇರಲಾರದು.
ದೇಶದ ಅನುಕೂಲ, ಸಂಪತ್ತು, ಜನರ ತೆರಿಗೆ ಹಣದಲ್ಲಿ ಕಲಿತು, ಬೆಳೆದು ವಿದೇಶಕ್ಕೆ ಹಾರಿದವರು ಕರೋನಾಕ್ಕೆ ಹೆದರಿ ಸ್ವದೇಶಕ್ಕೆ ಮರಳತೊಡಗಿದರು ಆ ಸಮಯದಲ್ಲಿ ಮಧ್ಯಪ್ರದೇಶದ ಶಾಸಕರ ಖರೀದಿಯಲ್ಲಿ ತೊಡಗಿದ್ದ ಸಂಬಂಧಿಸಿದ ವ್ಯಕ್ತಿಗಳು ಸ್ವಾರ್ಥ, ಲಾಭಕ್ಕಾಗಿ ವಿಮಾನಗಳನ್ನು ನಿಲ್ಲಿಸದೆ ಕರೋನಾ ಪಸರಿಸಲು ಕಾರಣರಾದರು.
ಸಕಾಲದಲ್ಲಿ ಎಚ್ಚರಿಸದ ಆಡಳಿತಗಾರರ ನಿರ್ಲಕ್ಷದಿಂದಾಗಿ ಜನ ಮಂದಿರ, ಮಸೀದಿ, ಚರ್ಚ್,ಗುರುದ್ವಾರ ಎಲ್ಲೆಡೆ ಸೇರಿದರು. ಸಮಾವೇಶಗಳು ನಡೆದವು. ಈ ಬಗ್ಗೆ ವಿರೋಧಪಕ್ಷದ ಪ್ರಮುಖರು ಎಚ್ಚರಿಸಿದ್ದಾಗ್ಯೂ ಆಡಳಿತಗಾರರಿಗೆ ಶಾಸಕರ ಖರೀದಿ ತಮ್ಮ ಸ್ವಾರ್ಥ ರಾಜಕಾರಣ ಮುಖ್ಯವಾಯಿತು.

ಈಗ ಮತ್ತದೇ ಲಾಗಾಯ್ತಿನ ಸೋಗಿನಿಂದ ಜನರನ್ನು ಮರಳುಮಾಡಬಹುದೆಂದು ಬಲವಾಗಿ ನಂಬಿರುವ ನಾಯಕತ್ವ ಅಗತ್ಯ ಕೆಲಸ, ಜವಾಬ್ಧಾರಿ ನಿರ್ವಹಿಸದೆ ಲೋಪ ಎಸಗುತ್ತಾ ದೇಶದ ಜನರನ್ನು ಕೋಡಂಗಿಗಳನ್ನಾಗಿಸುತಿದ್ದಾರೆ. ಈ ಪ್ರತಿಕ್ರೀಯೆಗಳು ಇಂದು ಪ್ರಧಾನಿ ಮೋದಿಯವರ ಭಾಷಣಕ್ಕೆ ಪ್ರತಿಕ್ರೀಯೆಯಾಗಿ ಸಾಮಾಜಿ ಜಾಲತಾಣದಲ್ಲಿ ಹರಿದಾಡುತ್ತಿವೆ. ಕರೋನಾ ನಿರ್ವಹಣೆ ರೀತಿಗೆ ಕೂಡಾ ಜನರು ಇಂಥದ್ದೇ ಪ್ರತಿಕ್ರೀಯೆ ನೀಡುತ್ತಿರುವುದು ವ್ಯಾಪಕವಾಗಿದೆ. ಒಟ್ಟಾರೆ ರಸ್ತೆ, ಆಣೆಕಟ್ಟುಗಳು, ಕೃಷಿಕರ ಹೊಲಗಳೇ ದೇವಾಲಯ ಎಂದು ನಂಬಿ ಪ್ರಗತಿಯೆಡೆಗೆ ಹೆಜ್ಜೆ ಇಟ್ಟಿದ್ದ ಭಾರತಕ್ಕೆ ಈ ಕಿಂದರಜೋಗಿ ವ್ಯಕ್ತಿತ್ವದ ಜೋಕರ್ ನಾಯಕತ್ವ ಈ ಕಾಲದ ಹೊರೆ ಎಂದೇ ಭಾವಿಸಬೇಕಾಗಿದೆ.
ಹೊಂದಾಣಿಕೆ ಇಲ್ಲದ ರಾಜ್ಯದ ಆಡಳಿತ-
ಕರೋನಾ ವಿಚಾರವಾಗಿ ಜವಾಬ್ಧಾರಿಯಿಂದ ವರ್ತಿಸದ ರಾಜ್ಯದ ಆರೋಗ್ಯ ಸಚಿವರ ಕರೋನಾ ನಿರ್ವಹಣೆ, ಪ್ರಚಾರದ ಹೊಣೆಯನ್ನು ವೈದ್ಯಕೀಯ ಶಿಕ್ಷಣ ಸಚಿವರಿಗೆ ನೀಡಿದ್ದು ಎಲ್ಲರಿಗೂ ತಿಳಿದಿರುವ ಬಹಿರಂಗ ಗುಟ್ಟು. ರಾಜ್ಯದ ಉಪಮುಖ್ಯಮಂತ್ರಿ ಅಶ್ವಥ್ಥ ನಾರಾಯಣ ರಾಜ್ಯದ ಪೊಲೀಸ್ ಮುಖ್ಯಸ್ಥರು ಲಂಚ ಪಡೆದು ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಿದರು ಎಂದು ಬಹಿರಂಗವಾಗಿ ಆರೋಪಿಸಿದರು.

ಇದರ ನಡುವೆ ಆಡಳಿತಕ್ಕೂ, ಮುಖ್ಯಮಂತ್ರಿಗಳು, ಕೆಲವು ಜಿಲ್ಲಾಧಿಕಾರಿಗಳಿಗೆ ಉಂಟಾದ ಸಮನ್ವಯದ ಕೊರತೆಯಿಂದ ಏನೆಲ್ಲಾ ತೊಂದರೆ, ತಲ್ಲಣಗಳಾದವು. ಇದರ ಮುಂದುವರಿದ ಭಾಗವಾಗಿ ಆಡಳಿತ ಪಕ್ಷ ತಮ್ಮದೇ ಸರ್ಕಾರವಿದ್ದರೂ ಪ್ರತ್ಯೇಕವಾಗಿ ಕರೋನಾ ನಿರ್ವಹಣೆ,ಪರಿಹಾರ ಕಾರ್ಯ ಮಾಡಬೇಕೆಂದು ಮುಖ್ಯಮಂತ್ರಿಗಳ ಪುತ್ರ ವಿಜಯೇಂದ್ರ ಆದೇಶ ಮಾಡಿದ್ದಾರೆ. ಇವೆಲ್ಲಾ ತುಘಲಕ್ ಆಡಳಿತ ನೆನಪಿಸುತ್ತದೆ ಎಂದರೆ ಪರಿವಾರ ರುದ್ರನರ್ತನಕ್ಕಿಳಿಯುತ್ತದೆ. ಇವೆಲ್ಲಾ ದುರ್ಬಲ ನಾಯಕತ್ವದ ಅವಿವೇಕದ ಪ್ರತಿಬಿಂಬ ಎನಿಸುತ್ತಿಲ್ಲವೆ?

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *