ಲಾಕ್‍ಔಟ್ ತೊಂದರೆಗೆ ಸ್ಥಳಿಯಾಡಳಿತದ ಸಹಕಾರ, ಹಾಲಿಗೆ ಹಾಂ, ಮಾಂಸಕ್ಕೆ ನೊ!

ಮುಂಜಾಗೃತೆಯಿಲ್ಲದೆ ವಿದೇಶಿಯರು, ವಿದೇಶದಲ್ಲಿದ್ದ ಸ್ವದೇಶಿಯರನ್ನು ಒಳಗೆ ಬಿಟ್ಟುಕೊಂಡ ಕೇಂದ್ರಸರ್ಕಾರ ದಿಢೀರ್ ಲಾಕ್‍ಔಟ್ ಘೋಶಿಸಿ ದೇಶವನ್ನೇ ಗೊಂದಕ್ಕೀಡುಮಾಡಿದೆ. ಈ ಸಮಯದಲ್ಲಿ ಗ್ರಾಮ, ವಾರ್ಡ್, ಎಲ್ಲೆಡೆ ದಿನಸಿ, ತರಕಾರಿ ಪೂರೈಸುವ ಮೂಲಕ ಸ್ಥಳಿಯಾಡಳಿತ ಜನರ ತೊಂದರೆಗೆ ಸ್ಫಂಧಿಸಿದೆ.

ಈ ಪರಿಹಾರ ಕ್ರಮಗಳ ನಡುವೆ ಬಹುತೇಕ ಕಡೆ ದಿನಬಳಕೆಯ ಮೊಟ್ಟೆ, ಮಾಂಸ, ಮೀನಿಗಾಗಿ ಹಾಹಾಕಾರವೆದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸೇರಿದಂತೆ ಕೆಲವೆಡೆ ಮೀನು-ಮಾಂಸಗಳಿಗೆ ತೊಂದರೆಯಾಗುತ್ತಿಲ್ಲ ಎನ್ನುವ ವರದಿಗಳನ್ನು ಹೊರತು ಪಡಿಸಿದರೆ ಬಹುತೇಕ ಕಡೆ ಮಾಂಸಾಹಾರಿಗಳು, ಮದ್ಯಪ್ರೀಯರಿಗೆ ಅನಿವಾರ್ಯ ಸನ್ಯಾಸದ ಅನುಭವವಾಗುತ್ತಿದೆ. ಈ ಪರಿಸ್ಥಿತಿಯ ಲಾಭ ವೆಂದರೆ ನಾಟಿ ಅಥವಾ ಹಳ್ಳಿಕೋಳಿಗಳಿಗೆ ಬೇಡಿಕೆ ಹೆಚ್ಚಿದೆ. ನಾಟಿಕೋಳಿ ಸಾಕುವವರಿಗೆ ಈ ಶತಮಾನದಲ್ಲಿ ಮೊದಲ ಬಾರಿಗೆ ಮಹತ್ವ, ಪ್ರಾಮುಖ್ಯತೆ ಬಂದಿದ್ದು ನಾಟಿಕೋಳಿ ಸಾಕಾಣಿಕೆದಾರರು ಕಳೆದ ತಿಂಗಳ ದರದ ಮೂರುಪಟ್ಟು ಬೆಲೆಗೆ ಕೋಳಿಗಳನ್ನು ಮಾರಾಟ ಮಾಡುತಿದ್ದಾರೆ.

ಸಿದ್ಧಾಪುರದಲ್ಲಿ ಮೀನು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚಿಸಿರುವ ಸ್ಥಳಿಯ ಆಡಳಿತ ಮಾಂಸಾಹಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ. ಈ ಬಗ್ಗೆ ಸಮಾಜಮುಖಿಗೆ ಪ್ರತಿಕ್ರೀಯಿಸಿದ ತಹಸಿಲ್ದಾರ ಮಂಜುಳಾ ಭಜಂತ್ರಿ ಜಿಲ್ಲಾಡಳಿತವನ್ನು ಕೇಳಿ ಈ ಬೇಡಿಕೆಗೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಕೆಲವು ಮೀನು, ಮಾಂಸದ ವ್ಯಾಪಾರಿಗಳು ಸಾಗಾಟದ ತೊಂದರೆಯಿಂದ ಮೀನು-ಮಾಂಸ ತರುವುದೇ ಕಷ್ಟವಾಗಿದೆ ಎಂದಿದ್ದಾರೆ ಎಂದರು.

ಸಿದ್ಧಾಪುರ ಸೇರಿದಂತೆ ರಾಜ್ಯ ದೇಶದಲ್ಲಿ ಮಾಂಸಾಹಾರಿಗಳ ಸಂಖ್ಯೆ ಪ್ರತಿಶತ 75 ಆದರೆ ಅಲ್ಫಸಂಖ್ಯೆಯ ಸಸ್ಯಾಹಾರಿಗಳಿಗೆ ಅಗತ್ಯಗಳನ್ನು ಪೂರೈಸುತ್ತಿರುವ ದೇಶದ ಆಡಳಿತ ಯಂತ್ರ ಆಹಾರ, ಆಚಾರ, ವಿಚಾರ ಸೇರಿದಂತೆ ಎಲ್ಲದರಲ್ಲೂ ಬಹುಸಂಖ್ಯಾತ 70% ಜನರಿಗೆ ವಿರುದ್ಧವಾಗಿ ವರ್ತಿಸುತ್ತಿರುವುದು ಈ ಶತಮಾನದ ಅವ್ಯವಸ್ಥೆ, ವೈದಿಕ ವೈಭೋಗಕ್ಕೆ ಸಾಕ್ಷಿ ಎನ್ನುವಂತಿದೆ.

(ಸಿದ್ದಾಪುರ,ಏ,06)
ಎಲ್ಲೆಲ್ಲಿ ಹಾಲಿನಿಂದ ಬಡಕೂಲಿ ಕಾರ್ಮಿಕರು ವಂಚಿತರಾಗಿದ್ದಾರೊ ಅವರನ್ನು ಗುರುತಿಸಿ ಕೆಎಂಎಫ್ ಹಾಲನ್ನು ಉಚಿತವಾಗಿ ವಿತರಿಸುತ್ತಿದ್ದು ಸಿದ್ದಾಪುರದಲ್ಲಿ ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ ಬೇಡ್ಕಣಿ ಪಟ್ಟಣದ ಬಡಕೂಲಿಕಕಾರ್ಮಿಕರ ಕುಟುಂಬಕ್ಕೆ ಭಾನುವಾರ ಹಾಲು ವಿತರಿಸಿದರು.
ತಹಸೀಲ್ದಾರ ಮಂಜುಳಾ ಎಸ್.ಭಜಂತ್ರಿ, ಪಪಂ ಮುಖ್ಯಾಧಿಕಾರಿ ಕುಮಾರ ನಾಯ್ಕ, ಧಾರವಾಡ ಹಾಲು ಒಕ್ಕೂಟದ ಸಿದ್ದಾಪುರ ಮಾರ್ಗದ ವಿಸ್ತರಣಾಧಿಕಾರಿ ಪ್ರಕಾಶ ಇದ್ದರು.

ಪ್ರಭುತ್ವ, ಜನಪ್ರತಿನಿಧಿಗಳ ಕಪಟನಾಟಕ, ರೈತರಿಗೆ ಸಂಕಷ್ಟ
ಕರೋನಾ ಲಾಕ್‍ಔಟ್ ನಿಂದ ಮಲೆನಾಡಿನ ರೈತರು ಹಾನಿ ಅನುಭವಿಸುವಂತಾಗಿದ್ದು,ಅವರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾರದೆ ತೊಂದರೆಗೆ ಒಳಗಾಗಿದ್ದಾರೆ. ಕರಾವಳಿ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದ ರೈತರು ತೊಂದರೆಗೆ ಒಳಗಾಗಿದ್ದಾರೆ. ಬನವಾಸಿ, ಸಾಗರ, ಸೊರಬ ಪ್ರದೇಶಗಳಲ್ಲಿ ಅನಾನಸ್, ಪಪ್ಪಾಯಿ ಬೆಳೆ ಹಣ್ಣಾಗಿ ಹಾಳಾಗುತ್ತಿದೆ. ಸಿದ್ದಾಪುರ ಮತ್ತು ಗೋಕರ್ಣ ಭಾಗಗಳಲ್ಲಿ ತರಕಾರಿ ಬೆಳೆದ ರೈತರು ಹಾನಿಯಿಂದ ಕಂಗಾಲಾಗುವಂತಾಗಿದೆ. cont..reading visit-samajamukhi.net

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *