ಕೋವಿಡ್ 19-ಲಾಕ್‍ಡೌನ್ ಹಿನ್ನೆಲೆ, ಬಡವರಿಗೆ ಊಟ, ರೋಗಿಗಳಿಗೆ ಆಸ್ಫತ್ರೆ, ಕಳ್ಳಬಟ್ಟಿಗೆ ಬ್ರೇಕ್


ಸಿದ್ಧಾಪುರ, ಉತ್ತರಕನ್ನಡ ಜಿಲ್ಲೆಯಲ್ಲಿ ಯಾರೊಬ್ಬರೂ ಹಸಿವೆಯಿಂದ ಬಳಲಬಾರದೆಂದು ವ್ಯವಸ್ಥೆಮಾಡಲು ಅಧಿಕಾರಿಗಳಿಗೆ ಆದೇಶಿಸಿದ್ದು ಅಗತ್ಯವಿದ್ದರೆ ಸರ್ಕಾರ,ಖಾಸಗಿ ವ್ಯಕ್ತಿಗಳ ನೆರವಿನಿಂದ ಅವಶ್ಯವಿದ್ದರೆ ಆಹಾರದ ವ್ಯವಸ್ಥೆಮಾಡುತ್ತೇವೆ ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಭರವಸೆ ನೀಡಿದರು.
ಸಿದ್ದಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕರೋನಾ, ಲಾಕ್‍ಡೌನ್ ಹಿನ್ನೆಲೆಯಲ್ಲಿ ಯಾರಿಗೂ ತೊಂದರೆ ಆಗಬಾರದು, ಇದೇ ಸಂದರ್ಭದಲ್ಲಿ ಲಾಕ್‍ಔಟ್, ನಿಷೀಧಾಜ್ಞೆ ಹಿನ್ನೆಲೆಯಲ್ಲಿ ಕಳ್ಳಬಟ್ಟಿ ತಯಾರಿಕೆಯಂಥ ಕಾನೂನು ಬಾಹೀರ ವ್ಯವಹಾರಗಳನ್ನೂ ನಿಯಂತ್ರಿಸಬೇಕು ಎಂದು ಆದೇಶಿಸಿದರು.

        ಧನ್ವಂತರಿ ಆಸ್ಫತ್ರೆ, ವೈದ್ಯರ ನೆರವು

ಸಿದ್ಧಾಪುರದ ಧನ್ವಂತರಿ ಆಯುರ್ವೇದ ಆಸ್ಫತ್ರೆಯ ಸಂಪೂರ್ಣ ಕಟ್ಟಡ, ವಿದ್ಯಾರ್ಥಿ ವೈದ್ಯರು ಕೋವಿಡ್ 19 ಸೇವೆಗೆ ಮೀಸಲಾಗಿದೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರು ಕರೋನಾ ಹಿನ್ನೆಲೆಯಲ್ಲಿ ಅಗತ್ಯಬಿದ್ದರೆ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಅಲ್ಲಿಯ ವಿದ್ಯಾರ್ಥಿ ವೈದ್ಯರನ್ನು ಸಂಪೂರ್ಣ ಸರ್ಕಾರದ ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಲು ಅನುಮತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಇಂದಿನಿಂದಲೇ ಮಾಸ್ಕ್ ಕಡ್ಡಾಯ,ಆರೋಗ್ಯ ಇಲಾಖೆಯ ಪ್ರಕಟಣೆ
ಕರೋನಾ ಭಯ,ಮುನ್ನೆಚ್ಚರಿಕೆಗಳ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಆರೋಗ್ಯ ಇಲಾಖೆ ಇಂದು ಪ್ರಕಟಣೆ ಹೊರಡಿಸಿದೆ. ಈ ಹಿಂದೆ ಮಾಸ್ಕ್ ಕಡ್ಡಾಯವಲ್ಲ ಎಂದು ಸಾರಿದ್ದ ಇಲಾಖೆ ಇಂದು ಹೊಸ ಪ್ರಕಟಣೆಯಲ್ಲಿ ಮಾಸ್ಕ್
ಕಡ್ಡಾಯ ಎಂದು ಸಾರಿದೆ.
ಅಪರಿಚಿತರರು, ಸಾರ್ವಜನಿಕರೊಂದಿಗೆ ವ್ಯವಹರಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು.ಆದರೆ ಮಾಸ್ಕ್ ಹೀಗೇ ಇರಬೇಕೆಂಬ ನಿಬಂಧನೆ ಇಲ್ಲ ಎಂದಿದೆ. ಸುರಕ್ಷತೆ,ಮುನ್ನೆಚ್ಚರಿಕೆ ಹಿನ್ನೆಲೆಗಳಲ್ಲಿ ಅನಿವಾರ್ಯ ಸೇವೆ, ಓಡಾಟದಲ್ಲಿರುವ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ವ್ಯವಹರಿಸುವುದನ್ನು ಕಡ್ಡಾಯ ಮಾಡಿ ಪ್ರಕಟಣೆ ನೀಡಲಾಗಿದೆ.

ಕರೋನಾ ವಿಶೇಶ – ಲಯನ್ಸ್‍ನಿಂದ ಆರೋಗ್ಯ ಕಿಟ್ ವಿತರಣೆ, ನಾಶಿರ್‍ಖಾನ್ ರಿಂದ ಕರೋನಾ ಯೋಧರಿಗೆ ಕೃತಜ್ಞತೆ
ಕರೋನಾ ಹಿನ್ನೆಲೆಯಲ್ಲಿ ಅವಿರತ ಸೇವೆ ನೀಡುತ್ತಿರುವ ವೈದ್ಯರು, ಆರೋಗ್ಯ ಸಿಬ್ಬಂದಿಗಳಿಗೆ ಸಿದ್ಧಾಪುರದ ಲಯನ್ಸ್‍ಕ್ಲಬ್ ನಿಂದ ಆರೋಗ್ಯಕಿಟ್ ವಿತರಿಸಲಾಯಿತು. ಈ ಕಿಟ್ ವಿತರಿಸಿದ ತಹಸಿಲ್ದಾರ ಮಂಜುಳಾ ಭಜಂತ್ರಿ ಕರೋನಾ ಜಾಗತಿಕ ಸಮಸ್ಯೆಯಾಗಿದ್ದು ಮುಂಜಾಗೃತೆ,ಸಾಮಾಜಿಕ ಅಂತರಗಳಿಂದ ಈ ರೋಗದ ವಿರುದ್ಧ ಗೆಲುವು ಸಾಧಿಸಬಹುದು ಎಂದರು.
ನಾಶಿರ್ ಕೃತಜ್ಷತೆ-
ತಾಲೂಕಿನಲ್ಲಿ ಕರೋನಾ ವಿರುದ್ಧದ ಹೋರಾಟದಲ್ಲಿ ನಿರಂತರ ಸೇವೆ ಮಾಡುತ್ತಿರುವ ಕರೋನಾ ಯೋಧರನ್ನು ತಾ.ಪಂ. ಸದಸ್ಯ ನಾಶಿರ್‍ಖಾನ್ ಅಭಿನಂದಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *