ಮದ್ಯ ಮಾರಾಟಕ್ಕೆ ಅನುಮತಿ, ಬಿಡಿಎ ನಿವೇಶನಗಳ ಹರಾಜು: ಸಿಎಂ ಯಡಿಯೂರಪ್ಪ

ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಏಪ್ರಿಲ್ 14ರ ಬಳಿಕ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

Yediyurappa

ಬೆಂಗಳೂರು: ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಏಪ್ರಿಲ್ 14ರ ಬಳಿಕ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

ಇಂದು ಸಚಿವ ಸಂಪುಟದ ಸಹದ್ಯೋಗಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ನೀಡಬೇಕಿರುವ ಬಾಕಿ ಹಣ 2834 ಕೋಟಿ ರೂ. ಕೂಡಲೇ ಪಾವತಿಸಲು ಸೂಚಿಸಲಾಗಿದೆ. ಈ ಬಗ್ಗೆ ಗಮನ ಹರಿಸದಿದ್ದರೆ ಸರ್ಕಾರ ಕಠಿಣ ಕ್ರಮ‌ ಕೈಗೊಳ್ಳಲಿದೆ ಎಂದು ಯಡಿಯೂರಪ್ಪ ಎಚ್ಚರಿಸಿದರು.

ಇತ್ತೀಚೆಗೆ ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು‌ ಮಳೆಯಿಂದ ಭತ್ತದ ಬೆಳೆ ನಾಶವಾಗಿದೆ. ಈ ಭಾಗದ ರೈತರಿಗೆ ಪರಿಹಾರ ನೀಡಲು‌ 45 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು. ಕೃಷಿ ಸಚಿವ ಬಿ‌.ಸಿ.ಪಾಟೀಲ್ ಕೊಪ್ಪಳ ರಾಯಚೂರು ಜಿಲ್ಲೆಯಲ್ಲಿ ಮಳೆಯಿಂದ ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿ ಮನವಿ ಮಾಡಿದ್ದರು. ಕೃಷಿ ಸಚಿವರ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಈ ಭಾಗದ ಭತ್ತ ಹಾನಿ ರೈತರಿಗೆ ಸರ್ಕಾರ ಪರಿಹಾರ ಘೋಷಿಸಿದೆ.

ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಲವು ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ.‌ ಸದ್ಯ ರಾಜ್ಯದ ಆರ್ಥಿಕ ಸ್ಥಿತಿ‌ ಸರಿಯಿಲ್ಲ. ಇದನ್ನು ಮತ್ತೆ ಸುಸ್ಥಿತಿಗೆ ತರಲು ‌ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯದಲ್ಲಿ ಲಾಕ್‌ ಡೌನ್ ಸಡಿಲಗೊಳಿಸಬೇಕೆ ಬೇಡವೆ ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಕುರಿತು ಪ್ರಧಾನಿ ಮೋದಿ ಸಲಹೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಯಡಿಯೂರಪ್ಪ ತಿಳಿಸಿದರು.

ಲಾಕ್ ಡೌನ್ ಸಡಿಲಗೊಳಿಸುವ ಸಾಧ್ಯತೆಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಹಲವು ಸಲಹೆಗಳು ಬಂದವು. ಅವುಗಳನ್ನು ನಾವು ಜಾರಿಗೊಳಿಸಲು ತೀರ್ಮಾನಿಸಲಾಯಿತು ಎಂದು ಯಡಿಯೂರಪ್ಪ ತಿಳಿಸಿದರು.

ಉದಾಹರಣೆಗೆ ಅನಧಿಕೃತ ಕಟ್ಟಡಗಳ ಕುರಿತು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರಯತ್ನಿಸುವಂತೆ ಸೂಚಿಸಲಾಯಿತು. ನ್ಯಾಯಾಲಯಗಳಲ್ಲಿ ಪ್ರಕರಣ ಇತ್ಯರ್ಥವಾದರೆ ನಾಗರಿಕರಿಗೂ ಅನುಕೂಲವಾಗಲಿದೆ. ರಾಜ್ಯಕ್ಕೂ ಸಂಪನ್ಮೂಲ ದೊರೆಯಲಿದೆ. ಇದರೊಂದಿಗೆ ಬಿಡಿಎ ವ್ಯಾಪ್ತಿಯಲ್ಲಿರುವ 12 ಸಾವಿರ ಮೂಲೆ ನಿವೇಶನಗಳನ್ನು ಹರಾಜು ಹಾಕಲು ಚಿಂತನೆ ನಡೆಸಲಾಗುತ್ತಿದೆ. ಖಾಸಗಿ ಮತ್ತು ಸಹಕಾರಿ ಸಂಘಗಳ ಬಡಾವಣೆ ನಿರ್ಮಾಣ ಹಾಗೂ ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಅನುಮತಿಗೆ ಕಾಯುತ್ತಿರುವ ನೂರಾರು ವಸತಿ ನಿರ್ಮಾಣ ಸೊಸೈಟಿಗಳಿಗೆ ಅನುಮತಿ ನೀಡಲು ಸಾಧ್ಯವಾಗುವುದು ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

ಕೋವಿಡ್ 19 ರಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತವಾಗಿದೆ. ಇದನ್ನು ಸರಿದೂಗಿಸಲು ಹಲವು ಮಾರ್ಗೋಪಾಯಗಳನ್ನು ಕಂಡು ಹಿಡಿಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ 1000 ಕೋಟಿ ರೂಪಾಯಿಗಳನ್ನು ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯ ಅಭಿವೃದ್ಧಿಗೆ ಬಳಸಲು ತೀರ್ಮಾನಿಸಲಾಯಿತು. ಮುಂದಿನ ಒಂದು ವಾರಕ್ಕೆ ಉಚಿತ ಹಾಲು ವಿತರಣೆ ವಿಸ್ತರಿಸಲಾಗುವುದು. ರಾಜ್ಯದ ಇತರ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ ಮೂಲೆ ನಿವೇಶನಗಳು ಹಾಗೂ ಖಾಲಿ ಇರುವ ನಿವೇಶನಗಳನ್ನು ಹರಾಜು ಹಾಕಲು ಕ್ರಮ ವಹಿಸಲಾಗುವುದು. ಪ್ರಸ್ತುತ ಕೋವಿಡ್ 19ಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಡಿ ಪೋರ್ಟಲ್ ಗಳನ್ನು ನಿರ್ವಹಿಸಲಾಗುತ್ತಿದ್ದು, ಇವುಗಳನ್ನು ಏಕೀಕೃತ ಪೋರ್ಟಲ್ ವ್ಯವಸ್ಥೆಯಡಿ ತರಲು ತೀರ್ಮಾನಿಸಲಾಯಿತು ಎಂದು ಯಡಿಯೂರಪ್ಪ ಹೇಳಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *