ವೈದ್ಯೋನಾರಾಯಣಹರಿ ಎಂದು ಕೈಮುಗಿದ ಸಚಿವ ಹೆಬ್ಬಾರ್!

ಜಗತ್ತು ಕರೋನಾ ಸಂಕಷ್ಟದಲ್ಲಿರುವ ಸಮಯದಲ್ಲಿ ಖಾಸಗಿ ವೈದ್ಯರು ತಮ್ಮ ಆಸ್ಫತ್ರೆ, ಕ್ಲಿನಿಕ್ ಗಳ ಬಾಗಿಲುಮುಚ್ಚಿರುವುದು ವೃತ್ತಿ ಧರ್ಮವಲ್ಲ ಎಂದು ಹೇಳಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉತ್ತರಕನ್ನಡದಲ್ಲಿ ಕರೋನಾ ಸಮಯದಲ್ಲಿ ಬಾಗಿಲು ಹಾಕಿರುವ ಖಾಸಗಿ ಆಸ್ಫತ್ರೆಗಳ ಬಾಗಿಲು ತೆರೆದು ಸಹಕರಿಸಲು ಕೈಮುಗಿದು ವಿನಂತಿಸಿದರು.
ಸಿದ್ದಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಬ್ಬಾರ್ ಆಸ್ಫತ್ರೆ,ವೈದ್ಯರು, ಆರೋಗ್ಯ ವ್ಯವಸ್ಥೆಗಾಗಿ ಸರ್ಕಾರ ಉದಾರವಾಗಿ ನೆರವು ನೀಡಲಿದೆ. ಆದರೆ ಉತ್ತರಕನ್ನಡ ಜಿಲ್ಲೆ ಸೇರಿ ಕೆಲವೆಡೆ ಖಾಸಗಿ ಆಸ್ಫತ್ರೆಗಳು ಬಾಗಿಲು ಮುಚ್ಚಿವೆ. ಜನರ ಮನೆವೈದ್ಯರಾದ ಇವರೆಲ್ಲಾ ಬಾಗಿಲು ಮುಚ್ಚಿ ತಮ್ಮ ರೋಗಿಗಳು,ಆಪ್ತರಿಗೆ ಅನ್ಯಾಯಮಾಡಿದಂತಾಗುವುದಿಲ್ಲವೆ? ಎಂದು ಪ್ರಶ್ನಿಸಿದ ಸಚಿವರು ‘ದಯಮಾಡಿ ವೈದ್ಯರು ತಮ್ಮ ವೃತ್ತಿಧರ್ಮ ಪಾಲಿಸಬೇಕು. ಸಚಿವನಾಗಿ ನಾನು ಜನರ ಪರವಾಗಿ ಅವರಿಗೆ ಕೈ ಮುಗಿದು ವಿನಂತಿಸುತ್ತೇನೆ. ವೈದ್ಯರು ಕೆಲಸಮಾಡಿ,ಆಸ್ಫತ್ರೆಗಳನ್ನು ತೆರೆದಿಡಿ,ನಮ್ಮ ನೆರವು ಬೇಕಾದರೆ ಕೇಳಿ, ಆದರೆ ಈ ಸಂಕಷ್ಟದ ಸಮಯದಲ್ಲಿ ಆಸ್ಫತ್ರೆ ಬಾಗಿಲುಮುಚ್ಚಿ ಜನರಿಗೆ ಅನ್ಯಾಯ ಮಾಡಬೇಡಿ ಎಂದು ವಿನಂತಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

1 Comment

  1. ನಿಜ ಒಳ್ಳೆಯ ಸಂದೇಶ ಸಾರಿದ್ದಾರೆ ಮಾನ್ಯ ಉಸ್ತುವಾರಿ ಸಚಿವರಿಗೆ ಧನ್ಯವಾದಗಳು🙏

Leave a Reply

Your email address will not be published. Required fields are marked *