ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು…

ಸೋನಿಯಾ ಎಂಬ ಸ್ತ್ರೀ ಕಾರಂಜಿ
“ಘಜ್ನಿ ಮಹಮದ್, ತೈಮೂರ್‍ನ ಅನುಯಾಯಿಗಳು ಗಾಂಧೀಜಿಯನ್ನು ಕೊಂದದ್ದು, ಈ ನಾಡಿನ ಮುಸ್ಲಿಂ ಜನಾಂಗದ ದೇವಸ್ಥಾನವನ್ನು ಒಡೆದು ಬೀಳಿಸಿದ್ದು, ಮುಂಬೈನಂಥ ನಗರದಲ್ಲಿ ಅಮಾಯಕ ಅಲ್ಪಸಂಖ್ಯಾತರನ್ನು ಸುತ್ತುವರಿದು ಹಿಂಸಿಸಿ, ಅಂಗಡಿಗಳನ್ನು ಲೂಟಿ ಮಾಡಿದ್ದು ಇವತ್ತು ಐತಿಹಾಸಿಕ ದಾಖಲೆಯಾಗಿದೆ; ಗಲ್ಲಿಗೇರಬೇಕಾದ, ಜೈಲಲ್ಲಿ ಕೊಳೆಯುತ್ತಿರಬೇಕಾದ ಇಂಥವರು ಇವತ್ತು ಈ ರಾಷ್ಟ್ರದ ಆಡಳಿತ ಸೂತ್ರಗಳನ್ನು ಹಿಡಿದುಕೊಳ್ಳುವ ಮಾತಾಡುತ್ತಿರುವುದು ಭಾರತ ತಲುಪಿರುವ ಕರುಣಾಜನಕ ಸ್ಥಿತಿಯನ್ನು ತೋರುತ್ತದೆ. ಕೇಡಿಗಳನ್ನು ಹಿಡಿದು ಶಿಕ್ಷಿಸುವ ಬದಲು ಅವರು ದಿಗ್ವಿಜಯ ಸಾಧಿಸಿದಂತೆ ಆರತಿ ಬೆಳಗುತ್ತಿರುವುದು ವಿಚಿತ್ರವಾಗಿದೆ. ಯಾರೂ ಯಾವ ದೇಶವನ್ನು ನೋಡಕೂಡದು, ಕೋಶವನ್ನು ಓದಕೂಡದು, ಮೌಢ್ಯದಿಂದ ಹೊರಬರಕೂಡದು ಎಂದು ಇವತ್ತಿಗೂ ಹೇಳುತ್ತಿರುವ ಈ ಸಮಾಜದ್ರೋಹಿ, ಜೀವದ್ರೋಹಿಗಳು ಸಾವಿರಾರು ವರ್ಷಗಳಿಂದ ಈ ದೇಶವನ್ನು ಜಾತಿಪದ್ಧತಿಯಲ್ಲಿ ಹೂತುಹಾಕಿದ್ದು ಕಣ್ಣಿದ್ದು ನೋಡಬಲ್ಲವರಿಗೆ ಗೊತ್ತಿದೆ. ಇಂಥ ವಂಚಕರು ಸೋನಿಯಾ ತರಹದ ಮಹಿಳೆಯನ್ನು ವಿದೇಶದವಳೆಂದು ಹೀಯಾಳಿಸುವುದು ಇವರ ಪರಂಪರೆಗೆ ತಕ್ಕಂತಿದೆ.”
“ಈ ದೇಶದಲ್ಲಿಯೇ ಇದ್ದು ಇಲ್ಲಿಯ ಜನಸಮುದಾಯದ ದುರಂತ, ಸೋಲು, ಸಾವು ಎಲ್ಲವನ್ನೂ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡ, ಇಲ್ಲಿಯ ಜನರ ಅಸಹಾಯಕ ಸ್ಥಿತಿಯನ್ನೇ ತಮ್ಮ ಏಳ್ಗೆಗೆ ಉಪಯೋಗಿಸಿಕೊಂಡ ಪೂರ್ಣಯ್ಯಗಳೆಂಬ ದುಷ್ಟರು ನಿಜವಾಗಿಯೂ ಪರದೇಶಿಗಳು; ಇಲ್ಲಿಯ ಒಬ್ಬ ವಿಮಾನ ಚಾಲಕನನ್ನು ವರಿಸಿ ಆತನನ್ನು ರಾಜಕೀಯದಿಂದ ಹೊರಗಿಡಲು ಯತ್ನಿಸಿ ವಿಫಲವಾಗಿ ಸಾವು, ನೋವು, ದುಃಖದಲ್ಲಿ ಬೆಂದು ಹೋಗಿ ಇವತ್ತು ಗಾಂಧೀಜಿಯ ಮಾನವೀಯತೆಯನ್ನು ಸಾರ್ವಜನಿಕ ಜೀವನಕ್ಕೆ ತರಲು ಯತ್ನಿಸುತ್ತಿರುವ ಸೋನಿಯಾ ಈ ನಾಡಿನ ಸೊಸೆ, ಇಲ್ಲಿಯ ಹೆಮ್ಮೆಯ ಹೆಣ್ಣುಮಗಳು. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಈ ಸೋನಿಯಾ ಅತ್ತೆ ಇಂದಿರಾಗಿಂತ, ಪತಿ ರಾಜೀವ್‍ಗಿಂತ ಜಾಣೆ; ಅವರಿಬ್ಬರೂ ಕೆಟ್ಟದಾಗಿ ಅರಚಬಹುದಾಗಿದ್ದ ಸಂದರ್ಭದಲ್ಲಿ ಪಶ್ಚಿಮದ ಖಚಿತತೆ, ಕುಶಲತೆ, ತೀವ್ರತೆ ತೋರುತ್ತಿರುವ ಸೋನಿಯಾ ನಿಜವಾದ ನಾಯಕಿಯಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. ಈಕೆ ಕೇವಲ ಹತ್ತು ದಿನದಲ್ಲಿ ಭಾರತದ ರಾಜಕೀಯಕ್ಕೆ ಮಿಂಚಿನ ಸಂಚಾರ ಮೂಡಿಸಿರುವುದು ಬಿಜೆಪಿಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದೆ.”
ಫೆಬ್ರವರಿ 11, 1998

ಪರಕೀಯ ವಾಜಪೇಯಿ ನಮ್ಮ ಹೆಣ್ಣುಮಗಳು ಸೋನಿಯಾ

“ಮಾಸ್ತಿಯವರು ತುಂಬ ಸುಶಿಕ್ಷಿತರಾಗಿದ್ದರು. ಆದರೆ ಅವರಿಗೆ ಭಾರತೀಯ ಸಮಾಜದಲ್ಲಿರುವ ಅನ್ಯಾಯಗಳು, ಶೋಷಣೆ, ಜಾತಿಪದ್ಧತಿ, ಪ್ರಚ್ಛನ್ನ ದಬ್ಬಾಳಿಕೆ- ಯಾವುದೂ ಕಾಣಿಸುತ್ತಿರಲಿಲ್ಲ. ಹಾಗೆಯೇ ಬ್ರಾಹ್ಮಣೇತರರ ಮೌಢ್ಯದ ಸೂಕ್ಷ್ಮಗಳು, ಅಪಾಯಗಳೂ ತಿಳಿಯುತ್ತಿರಲಿಲ್ಲ. ಅವರ ಪ್ರಕಾರ ವಸ್ತುನಿಷ್ಠೆ ಯಾವುದೆಂದರೆ, ಈಗಿರುವ ವ್ಯವಸ್ಥೆಯನ್ನು ಕಿಂಚಿತ್ತೂ ಕೆಡದಂತೆ ಕಾಪಾಡಿಕೊಂಡು ಬರುವುದು. ಮಾಸ್ತಿಯವರ ವಸ್ತುನಿಷ್ಠೆಯ ಸಿದ್ಧಾಂತವನ್ನು ಒಪ್ಪಿಕೊಂಡರೆ ಮಾತ್ರ ಅವರು ಭಗವದ್ಗೀತೆಗೆ ನೀಡುವ ಅರ್ಥವನ್ನು ಒಪ್ಪಬಹುದು. ಅವರ ಪ್ರಕಾರ ಧರ್ಮ, ಸ್ವಧರ್ಮ, ಆತ್ಮ, ಪರಮಾತ್ಮ ಮುಂತಾದವೆಲ್ಲ ಎಂದೂ ಬದಲಾಗದ ವಸ್ತುಗಳು; ಧರ್ಮ ಜಾತಿಯಾಗಿಯೂ ವರ್ಗವಾಗಿಯೂ ಧರ್ಮವಾಗಿಯೂ ಬರುತ್ತದೆ. ಹಾಗಾಗಿಯೇ ಇಲ್ಲಿ ಕಂದಾಚಾರಿಯೊಬ್ಬನನ್ನು ಧರ್ಮವಂತ ಎಂದು ಕರೆಯುವುದು ಸುಲಭವಾಗುತ್ತದೆ.

ಹಾಗೆಯೇ ಸೋನಿಯಾ ಇಟಾಲಿಯನ್ ಹೆಣ್ಣುಮಗಳು ಎಂಬ ಕಾರಣಕ್ಕೆ ನಮ್ಮ ಧರ್ಮಕ್ಕೆ ಸೇರಿದವಳಲ್ಲ, ನಮ್ಮ ಜೀವನಕ್ರಮದಿಂದ ಬಂದವಳಲ್ಲ ಎಂದು ವಾದಿಸುವುದು ಸುಲಭವಾಗುತ್ತದೆ. ಇದು ಶೋಷಕರ ಮಾರ್ಗ, ಸುಳ್ಳರ ದಾರಿ. ಯಾರೂ ಸಮುದ್ರವನ್ನು ದಾಟಿ ಹೊರದೇಶಗಳಿಗೆ ಹೋಗದಿದ್ದರೆ, ಯಾರೂ ಹೊರದೇಶದಿಂದ ಇಲ್ಲಿಗೆ ಬರದಿದ್ದರೆ ಇಲ್ಲಿ ತಾಳೆಗರಿಯ ಮೂಲಕ ವಂಚಿಸುತ್ತಾ ಹೋಗಬಹುದು. ಈ ಪರಕೀಯ ಎಂಬ ಮಾತನ್ನೇ ತೆಗೆದುಕೋ. ನನ್ನ ಪ್ರಕಾರ ಇಲ್ಲಿಯ ಪ್ರಕೃತಿ, ಜನ, ಸಂಪತ್ತು, ಆತ್ಮಗೌರವ ಇವೆಲ್ಲವುಗಳ ಬಗ್ಗೆ ಯಾವುದೇ ಪ್ರೀತಿ, ಗೌರವ ಇಲ್ಲದವನು ಪರಕೀಯ. ಇಂಥ ಪರಕೀಯತೆಗೆ ಉದಾಹರಣೆಯಾಗಿ ನಾನು ದಿವಾನ್ ಪೂರ್ಣಯ್ಯನವರ ಬಗ್ಗೆ ಹೇಳುತ್ತಿರುತ್ತೇನೆ. ಮೈಸೂರು ರಾಜ್ಯದ ಸೋಲು, ಟಿಪ್ಪುವಿನ ಸಾವು, ಇಂಗ್ಲಿಷರ ದಬ್ಬಾಳಿಕೆ ಎಲ್ಲವೂ ಈ ದೇಶದ ಚೈತನ್ಯವನ್ನು ಮುರಿಯುತ್ತಿದ್ದಾಗ ಪೂರ್ಣಯ್ಯನವರು ದಿವಾನ ಸ್ಥಾನದಲ್ಲಿ ನೆಮ್ಮದಿಯಾಗಿದ್ದರು; ಆದರೆ ಫ್ರೆಂಚರ ದೂಬಾಯಿ ಪಾದ್ರಿ ಸಾವಿರಾರು ಜನರಿಗೆ ನೆರವಾದ; ಸಿಡುಬು ಬಂದಾಗ ಲಸಿಕೆ ಹಾಕಿಸಿ ಜೀವ ಉಳಿಸಿದ. ಇಲ್ಲಿಯ ಅನಕ್ಷರತೆ, ಅಸಹಾಯಕತೆಯನ್ನು ತಮ್ಮ ವೈಭವಕ್ಕಾಗಿ ಬಳಸಿಕೊಂಡ ಪೂರ್ಣಯ್ಯ ಈ ದೇಶದವರು, ಇಲ್ಲಿಯ ಜನರನ್ನು ಪ್ರೀತಿಸಿ ಪೊರೆದ ದೂಬಾಯಿ ಪಾದ್ರಿ ಪರಕೀಯ ಎಂದು ನಾನು ನಂಬುವುದಿಲ್ಲ. ಆದ್ದರಿಂದಲೇ ನನ್ನ ದೃಷ್ಟಿಯಲ್ಲಿ ಪೂರ್ಣಯ್ಯ ಪರಕೀಯ, ವಿಶ್ವೇಶ್ವರಯ್ಯ ಸ್ವಕೀಯ, ಅನ್ಯಜಾತಿಯ ದೇವಾಲಯ ಬೀಳಿಸುವ ಅಡ್ವಾಣಿ, ವಾಜಪೇಯಿಗಳು ಪರಕೀಯ, ಸೋನಿಯಾ ಈ ದೇಶದ ಹೆಣ್ಣುಮಗಳು. ನಮ್ಮ ಜನಕ್ಕೆ ಎಲ್ಲ ದೇಶಗಳಿಂದ, ಎಲ್ಲ ಬಗೆಯ ಜನರಿಂದ ಆರ್ಥಿಕ ನೆರವು, ಬೆಚ್ಚನೆಯ ಪ್ರೀತಿ, ವೈಜ್ಞಾನಿಕ ದೃಷ್ಟಿ, ಆಧುನಿಕ ಧೋರಣೆ ಬೇಕಾಗಿದೆ.”
ಮಾರ್ಚ್ 4, 1998 (ಆಧಾರ-ನಾಗೌ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *