ತೈವಾನ್ ದೇಶದ ಕೊರೊನಾ ಚಮತ್ಕಾರ!

ಚೀನಾದ ಪಕ್ಕದಲ್ಲೇ ಇರುವ ಪುಟ್ಟ ದ್ವೀಪದೇಶ ತೈವಾನ್. ಕೊರೊನಾ ದಾಳಿಯಿಂದ ತತ್ತರಿಸಿ ಹೋಗಬೇಕಿತ್ತು. ಏಕೆಂದರೆ ಸುಮಾರು ಹದಿಮೂರು ಲಕ್ಷ ಮಂದಿ ತೈವಾನೀಯರು ಚೀನಾದೊಂದಿಗೆ ನಿತ್ಯ ಸಂಪರ್ಕ ಇಟ್ಟುಕೊಂಡಿದ್ದಾರೆ. ದಿನವೂ ವುಹಾನ್ ಜೊತೆ ನೇರ ವಿಮಾನಗಳ ಸಂಚಾರವಿದೆ. (2019ರಲ್ಲಿ 27 ಲಕ್ಷ ಜನರು ಚೀನಾಕ್ಕೆ ಹೋಗಿ ಬಂದಿದ್ದಾರೆ.) ಆದರೆ ಅಚ್ಚರಿ ನೋಡಿ: ಅಲ್ಲಿ ಕೇವಲ 395 ಜನರಲ್ಲಿ ರೋಗಲಕ್ಷಣ ಕಂಡಿದೆ. 155 ಜನರು ಗುಣಮುಖರಾಗಿದ್ದಾರೆ. 6 ಜನ ಮಾತ್ರ ಸಾವಪ್ಪಿದ್ದಾರೆ. ಹಾಗೆಂದು ಅಲ್ಲಿನ ಪ್ರಜೆಗಳ ಮೇಲೆ ತುರ್ತುಸ್ಥಿತಿಯನ್ನು ಹೇರಿಲ್ಲ. ಯಾವ ಊರನ್ನೂ ಲಾಕ್‌ಡೌನ್ ಮಾಡಲಿಲ್ಲ. ಮನೆಮನೆಗೆ ಹೊಕ್ಕು ಟೆಸ್ಟಿಂಗ್ ಮಾಡಿಲ್ಲ. ಪೊಲೀಸರ ದಬ್ಬಾಳಿಕೆ ಇಲ್ಲ (ಅಲ್ಲಿ ಮಿಲಿಟರಿ ಆಡಳಿತವಿಲ್ಲ, ಪ್ರಜಾಪ್ರಭುತ್ವ ಇದೆ). ವಲಸೆ ಹೊರಟವರ ಗೋಳಿನ ಕತೆಗಳಿಲ್ಲ.

ಜಗತ್ತಿನ ಇತರೆಲ್ಲ ದೇಶಗಳಿಗೆ ಮಾದರಿಯಾಗುವಂಥ ಅದೇನು ಮ್ಯಾಜಿಕ್ ಅಲ್ಲಿ ನಡೆದಿದೆ ಗೊತ್ತೆ?

  1. ಕೊರೊನಾದ ಹೊಸ ಅವತಾರ ತಲೆ ಎತ್ತಿದೆ ಎಂಬುದು ಗೊತ್ತಾದ ತಕ್ಷಣವೇ ಜನವರಿಯಲ್ಲೇ ತೈವಾನ್ ವಿಶೇಷ ನಿಗಾ ದಳವನ್ನು ಸೃಷ್ಟಿಸಿ, ಬಿಗಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿತು. ಅಲ್ಲಿಂದ ಬರುವ ವಿಮಾನಗಳಲ್ಲಿ ಜ್ವರ ಪೀಡಿತರ ತಪಾಸಣೆಯನ್ನು ಆರಂಭಿಸಿತು. ವಿಮಾನ ನೆಲಕ್ಕಿಳಿಯುವ ಮೊದಲೇ ತಪಾಸಣೆ ನಡೆದಿದ್ದರಿಂದ ಉದ್ದುದ್ದ ಕ್ಯೂ ಇರಲಿಲ್ಲ.
  2. ಫೆಬ್ರುವರಿ 10ರ ವೇಳೆಗೆ ಚೀನಾದಲ್ಲಿ 30 ಸಾವಿರ ಮಂದಿ ಕಾಯಿಲೆ ಬಿದ್ದಾಗ ತೈವಾನ್ನಲ್ಲಿ ಕೇವಲ 16 ರೋಗಿಗಳು ಪತ್ತೆ ಆಗಿದ್ದೇ ತಡ, ಚೀನಾದಿಂದ ಬರುವ ಎಲ್ಲ ಉಡ್ಡಾಣಗಳನ್ನೂ ಸ್ಥಗಿತಗೊಳಿಸಿ, ಹಾಂಗ್‌ಕಾಂಗ್ ಮೂಲಕ ಬರುವವರ ಪರೀಕ್ಷೆಯನ್ನು ವಿಮಾನದಲ್ಲೇ ನಡೆಸತೊಡಗಿತು. ತನ್ನ ದ್ವೀಪದ ಸುತ್ತ ಲಕ್ಷ್ಮಣ ರೇಖೆಯನ್ನು ಎಳೆಯಿತು.
  3. ಮುಖವಾಡಗಳ ರಫ್ತನ್ನು ನಿಲ್ಲಿಸಿತು. ಉತ್ಪಾದನೆಯನ್ನು ಎಂಟು ಪಟ್ಟು ಹೆಚ್ಚಿಸಿತು. ಅವುಗಳ ತಯಾರಿಕೆಯನ್ನು ಮೊದಲು ಕೈದಿಗಳಿಗೆ (ಚಿತ್ರ 3- ಹೊಲಿಗೆ ಕೆಲಸದಲ್ಲಿ ನಿರತರಾದ ಕೈದಿಗಳದ್ದು), ಆನಂತರ ಮಿಲಿಟರಿಗೇ ಒಪ್ಪಿಸಿತು. ಪ್ರತಿಯೊಬ್ಬ ಪ್ರಜೆಗೂ ವಾರಕ್ಕೆ ಮೂರುನಾಲ್ಕು ಮುಖವಾಡಗಳ ವ್ಯವಸ್ಥೆ ಮಾಡಿತು. ಅದು ಎಲ್ಲಿ ಸಿಗುತ್ತದೆ ಎಂಬುದನ್ನು ಅವರವರ ಮೊಬೈಲ್‌ನಲ್ಲೇ ಮಾಹಿತಿ ಸಿಗುವಂತೆ ಮಾಡಿತು.
  4. ಕೊರೊನಾ ಪೀಡಿತರನ್ನು ವೈರಸ್ ಥರಾ ಪರಿಗಣಿಸದೆ ಅವರನ್ನು ಪ್ರಜೆಗಳಂತೇ ನೋಡಿಕೊಂಡಿತು. ಅವರಿಗೆ ಅತ್ಯುತ್ತಮ ಕ್ವಾರಂಟೈನ್ ವ್ಯವಸ್ಥೆಯನ್ನು ಕಲ್ಪಿಸಿತು. ಅವರ ನಿವಾಸಕ್ಕೆ ಅನ್ನಾಹಾರ ಹಾಗೂ ಅಗತ್ಯ ವಸ್ತುಗಳ ಕೊರತೆ ಆಗದಂತೆ ನೋಡಿಕೊಂಡಿತು. ಪುಸ್ತಕಗಳನ್ನೂ ಒದಗಿಸಿತು. ದಿನಭತ್ಯೆಯನ್ನೂ ಘೋಷಿಸಿತು. ಜನರು ತಾವಾಗಿ ಖುಷಿಯಿಂದ ಕ್ವಾರಂಟೈನ್ಗೆ ಒಳಪಡುವಂತೆ ಮನವೊಲಿಸಿತು. ಅವರ ಫೋನ್ನಂಬರನ್ನು ಪಡೆದು ಅದರಲ್ಲಿ ವಿಶೇಷ ಆಪ್ ಹಾಕಿತು. ಮನೆಬಿಟ್ಟು ಆಚೆ ಹೋದರೆ ಅವರ ಬ್ಯಾಂಕ್ ಖಾತೆಯಿಂದ ದೊಡ್ಡ ಮೊತ್ತದ ದಂಡ ವಜಾ ಆಗುತ್ತದೆಂದು ಟಿವಿ ಮೂಲಕ ಪ್ರಚಾರ ಕೊಟ್ಟಿತು. ಕಾಯಿಲೆ ಉಲ್ಪಣಗೊಂಡರೆ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿತು.
  5. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುವದಂತಿಗಳನ್ನು ಪತ್ತೆ ಹಚ್ಚಬಲ್ಲ ವಿಶೇಷ ಅಲ್ಗೊರಿದಮ್ಮನ್ನು ಅದು ಸೃಷ್ಟಿಸಿತು. ಅದು ಚೀನಾದಿಂದ ಬರುವ ಸುಳ್ಳುಸುದ್ದಿಗಳನ್ನು ಫಿಲ್ಟರ್ ಮಾಡತೊಡಗಿತು. ದೇಶದೊಳಕ್ಕೆ ಬರುವ ಎಲ್ಲರ ಡೇಟಾಗಳನ್ನು ವಿಮಾ ಕಂಪನಿಗಳಿಂದ ತರಿಸಿಕೊಂಡು, ಅದನ್ನು ವೀಸಾ ವಿಭಾಗದ ಡೇಟಾ ಜೊತೆ ಜೋಡಿಸಿ, ಜ್ವರಪೀಡಿತರ ಕುರಿತ ಮಾಹಿತಿ ಎಲ್ಲ ಆಸ್ಪತ್ರೆ, ಔಷಧಾಲಯಗಳಿಗೂ ಮುಂಚಿತವಾಗಿಯೇ ಲಭಿಸುವಂತೆ ನೋಡಿಕೊಂಡಿತು.
  • ಇತರ ಕೆಲವು ಮಹತ್ವದ ಮಾಹಿತಿಗಳು: ತೈವಾನ್ ದೇಶದ ಅಧ್ಯಕ್ಷರು ವಿಶ್ವವಿಖ್ಯಾತ ಲಂಡನ್ ಸ್ಕೂಲ್ ಆಫ್ ಇಕಾನಮಿಕ್ಸ್‌ನಲ್ಲಿ ಪಿಎಚ್‌ಡಿ ಮಾಡಿದ ಅರ್ಥತಜ್ಞ. ಉಪಾಧ್ಯಕ್ಷರು ಸ್ವತಃ ಎಪಿಡೀಮಿಯಾಲಜಿ ಡಾಕ್ಟರು- ಅಂದರೆ ಸಾಂಕ್ರಾಮಿಕ ರೋಗತಜ್ಞ. ಅಲ್ಲಿ ಕೊರೊನಾ ಸಂದರ್ಭದ ಅವರ TTT ಘೋಷವಾಕ್ಯ ಏನೆಂದರೆ ಟ್ರಸ್ಟ್, ಟ್ರಾನ್ಸಪರೆನ್ಸಿ ಮತ್ತು ಟೆಕ್ನಾಲಜಿ. ಜನರೊಂದಿಗಿನ ವಿಶ್ವಾಸ, ಪಾರದರ್ಶಕತೆ ಮತ್ತು ತಂತ್ರಜ್ಞಾನ. ಅಲ್ಲಿ ಕೇವಲ 20 ನಿಮಿಷಗಳಲ್ಲಿ ಕೋವಿಡ್ ಟೆಸ್ಟ್ ಫಲಿತಾಂಶ ಬರುವಂಥ ವೈದ್ಯಕೀಯ ವಿಧಾನ ಚಾಲ್ತಿಗೆ ಬಂದಿದೆ (ನಮ್ಮಲ್ಲಿ ಫಲಿತಾಂಶ ಬರಲು 6 ಗಂಟೆಯಿಂದ 24 ಗಂಟೆ ಬೇಕು).

*ತೈವಾನ್ ಜನಸಂಖ್ಯೆ 238 ಲಕ್ಷ ನಿಜ. ಆದರೆ ವುಹಾನ್‌ನಿಂದ ಕೇವಲ 943 ಕಿ.ಮೀ. ದೂರದಲ್ಲಿದೆ. ಅದಕ್ಕೆ ಹೋಲಿಸಿದರೆ ವುಹಾನ್ನಿಂದ 7500 ಕಿ.ಮೀ. ದೂರದ, ಕೇವಲ 192 ಲಕ್ಷ ಜನರಿರುವ ರುಮೇನಿಯಾದಲ್ಲಿ 7700 ರೋಗಿಗಳಿದ್ದು 392 ಮೃತರಾಗಿದ್ದಾರೆ. ಸುಮಾರು ಅಷ್ಟೇ ದೂರದಲ್ಲಿರುವ ಇನ್ನೂ ಕಡಿಮೆ ಜನಸಂಖ್ಯೆಯ ಕತಾರ್ ದೇಶದಲ್ಲಿ 4103 ರೋಗಿಗಳಿದ್ದಾರೆ, 7 ಮಂದಿ ಗತಿಸಿದ್ದಾರೆ. ಸುಮಾರು ಅಷ್ಟೇ ದೂರದಲ್ಲಿರುವ ಬಹ್ರೇನ್ ದೇಶದಲ್ಲೂ 1703 ರೋಗಿಗಳಿದ್ದು 7 ಮಂದಿ ಗತಿಸಿದ್ದಾರೆ. ಕೊನೆಯ ಈ ಎರಡೂ ದೇಶಗಳು ಭಾರೀ ತೈಲಧನಿಕ ಅಷ್ಟೇ ಅಲ್ಲ, ಮುನ್ನೆಚ್ಚರಿಕೆಗೆ ಅವಕ್ಕೆ ಮೂರು ತಿಂಗಳು ಕಾಲಾವಧಿ ಇತ್ತು.

ಕೊನೆಯ ಕುಟುಕು: ವುಹಾನ್ ಮಹಾಮಾರಿಯ ಅಲೆ ದಶದಿಕ್ಕುಗಳಲ್ಲಿ ಹಬ್ಬುತ್ತಿದ್ದಾಗ, ಎಲ್ಲ ಬಿಬಿಸಿ-ಸಿಎನ್ನೆನ್ಗಳಲ್ಲಿ ಅದರದೇ ಪ್ರಮುಖ ಸುದ್ದಿ ಬರುತ್ತಿದ್ದಾಗ ನಮ್ಮ ಮಾಧ್ಯಮಗಳ ಗಮನವೆಲ್ಲ ಕಮಲನಾಥ್ ಸರಕಾರವನ್ನು ಕೆಡವುವ ಕಮಲದ ಸರ್ಕಸ್ ಕಡೆ, ಹಾಗೂ ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಟ್ರಂಪ್ ಮಹಾಶಯನ ಟ್ರಂಪೆಟ್‌ ಕಡೆ ನೆಟ್ಟಿತ್ತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *