ಇಂದಿನ ವಿಶೇಶ- ಲಾಕ್ ಡೌನ್ ನಿರ್ಬಂಧ ಸಡಿಲಿಕೆ, ಪೊಲೀಸ್ ವಾಹನದಲ್ಲಿ ಬಂದ ಆಗಂತುಕರು! ದಾನ-ದೇಣಿಗೆ

ಕರೋನಾ ಲಾಕ್‍ಡೌನ್ ನಿರ್ಬಂಧವನ್ನು ಹಂತಹಂತವಾಗಿ ಕಡಿತಗೊಳಿಸಲಾಗುತ್ತಿದೆ. ಕೇಂದ್ರಸರ್ಕಾರ ಶುಕ್ರವಾರ ಪ್ರಕಟಿಸಿರುವ ವಿನಾಯಿತಿಗಳಲ್ಲಿ ಗ್ರಾಮೀಣ ಭಾರತದ ಕೃಷಿ-ಸಹಕಾರಿ ಉತ್ಫನ್ನ,ಸಂಸ್ಕರಣೆ,ಮಾರಾಟಕ್ಕೆ ಹೆಚ್ಚಿನ ರಿಯಾಯತಿ ಪ್ರಕಟಿಸಿದೆ. ಕಡಿಮೆ ಮಾನವಸಂಪನ್ಮೂಲ ಬಳಸಿ ಈ ವ್ಯವಸ್ಥೆ ನಿರ್ವಹಿಸಲು ಸೂಚಿಸಲಾಗಿದೆ.

ಪೊಲೀಸ್ ವಾಹನದಲ್ಲಿ ಬಂದ ಆಗಂತುಕರು
ಲಾಕ್‍ಡೌನ್ ವೇಳೆ ಹುಬ್ಬಳ್ಳಿಯಲ್ಲಿ ತಂಗಿದ್ದ ಗೋಕರ್ಣಮೂಲದ ಕೆಲವರು ಪೊಲೀಸ್ ಜೀಪ್ ನಲ್ಲಿ ಊರುಸೇರಲು ವಿಫಲಪ್ರಯತ್ನ ಮಾಡಿದ ಘಟನೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದ್ದು, ಹುಬ್ಬಳ್ಳಿಯಿಂದ ಪೊಲೀಸ್ ರಿಗೇ ಚಳ್ಳೆಹಣ್ಣು ತಿನ್ನಿಸಿದ್ದ ಮೂವರು ಈಗ ಗೋಕರ್ಣ ಪೊಲೀಸರ ಅತಿಥಿಯಾಗಿದ್ದಾರೆ. ಗೋಕರ್ಣ ಗ್ರಾ.ಪಂ. ಕರೋನಾ ಟಾಸ್ಕ್ ಫೋರ್ಸ್ ಪ್ರಯತ್ನದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ.
ದಾನ-ದೇಣಿಗೆ-
ಮುಖ್ಯಮಂತ್ರಿ ಕರೋನಾ ಪರಿಹಾರ ನಿಧಿಗೆ ಸಿದ್ಧಾಪುರ ಕೃಷಿ ಉತ್ಫನ್ನ ಮಾರುಕಟ್ಟೆ ಸಮೀತಿಯಿಂದ 15 ಲಕ್ಷ ರೂಪಾಯಿ ದೇಣಿಗೆ ನೀಡಿರುವುದಾಗಿ ಎ.ಪಿ.ಎಂ.ಸಿ. ಅಧ್ಯಕ್ಷ ಕೆ.ಜಿ.ನಾಗರಾಜ್ ಮತ್ತು ಕಾರ್ಯದರ್ಶಿ ಎಂ.ಜಿ.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬಿ.ಜೆ.ಪಿ. ಮಾಜಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ನೇತೃತ್ವದಲ್ಲಿ ಅವರ ಮನೆಯ ಆವರಣದಲ್ಲಿ ಅಬಲರು,ಬಡವರಿಗೆ ದಿನಬಳಕೆ ಸಾಮಗ್ರಿ ವಿತರಿಸಿದರು.

ಸಿದ್ದಾಪುರ ತಾಲೂಕಿನ ಅಡಿಕೆ ವರ್ತಕರ ಸಂಘ ನೀಡಿದ ಒಂದು ಲಕ್ಷ ರೂಪಾಯಿಗಳ ಮೌಲ್ಯದ ದಿನಬಳಕೆ ವಸ್ತುಗಳ ಸಾಮಗ್ರಿಗಳ ಕಿಟ್ ಅನ್ನು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಫಲಾನುಭವಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರ್ಕಾರ ಮತ್ತು ಸಂಘ-ಸಂಸ್ಥೆಗಳು,ದಾನಿಗಳ ನೆರವಿನಿಂದ ಯಾರಿಗೂ ಹಸಿವೆಯಲ್ಲಿರದಂತೆ ವ್ಯವಸ್ಥೆ ಮಾಡುತಿದ್ದೇವೆ ಎಂದರು.

ಜನಸಾಮಾನ್ಯರೊಂದಿಗೆ ಪ್ರಾಂಶುಪಾಲರ ಮೇಲೂ ಕೇಸು ದಾಖಲು!
ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಪ್ರಖರತೆ ಕಡಿಮೆಯಾಗುತ್ತಿರುವಂತೆ ಕರೋನಾ ನಿಯಮ, ನಿಶೇಧಾಜ್ಞೆ ಷರತ್ತುಗಳನ್ನು ಉಲ್ಲಂಘಿಸುವವರ ಪ್ರಮಾಣ ಹೆಚ್ಚುತ್ತಿದೆ. ಸಿದ್ಧಾಪುರದ ಪೊಲೀಸರು ಇಂದು ಒಟ್ಟೂ 4 ಜನರ ಮೇಲೆ ಪ್ರಕರಣ ದಾಖಲಿಸಿದ್ದು 3 ಜನರು ತಮಿಳುನಾಡಿನಿಂದ ಸಿದ್ದಾಪುರಕ್ಕೆ ಬಂದ ತಾಲೂಕಿನ ಶೀಗೇಹಳ್ಳಿಯ ಜನರಾಗಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *