ಕರೋನಾ ಸಿನೇಮಾ- ಭಯವೆಂಬ ಮಾರಿಯ ಮುಷ್ಟಿಯಲ್ಲಿ ಇನ್ನೊಂದು ಥ್ರಿಲ್ಲರ್‌ “ಕಂಟೇಜಿಯನ್’

ನಾಳೆ ಆಕ್ಸ್‌ಫರ್ಡ್‌ನಲ್ಲಿ ಕೊರೊನಾ ವಿರುದ್ಧ (ವಿಶ್ವದ) ಮೊದಲ ವ್ಯಾಕ್ಸೀನ್ ಪ್ರಯೋಗ ಆರಂಭವಾಗಲಿದೆ. ಹತ್ತಿಪ್ಪತ್ತು ತಿಂಗಳ ಬದಲು ಕೇವಲ ಮೂರು ತಿಂಗಳಲ್ಲೇ ಸೃಷ್ಟಿಯಾದ ಈ ಲಸಿಕೆ ‘ಯಶಸ್ವಿ’ ಎಂಬುದು ಸಾಬೀತಾದರೆ ಇಷ್ಟೊಂದು ಜನರಿಗೆ ಅದನ್ನು ಹೇಗೆ ವಿತರಿಸುತ್ತಾರೆ? ಆಗ ಎಂತೆಂಥ ತರಲೆ ಡ್ರಾಮಾಗಳು ನಡೆಯಬಹುದು? 2011ರಲ್ಲಿ ತಯಾರಾದ ‘ಕಂಟೇಜಿಯನ್’ (ಸಾಂಕ್ರಾಮಿಕ) ಹೆಸರಿನ ಹಾಲಿವುಡ್ ಸಿನೆಮಾದ ಕಥೆಯೂ ಕೊರೊನಾ ಮಾದರಿಯಲ್ಲೇ ಸಾಗುತ್ತದೆ.

ಭಯದ ಮುಷ್ಟಿಗೆ ಸಿಕ್ಕ ಜನ ನಾಳೆ ಏನೇನು ಮಾಡಬಹುದು ಎಂಬುದರ ಮುನ್ನೋಟವೂ ಇದರಲ್ಲಿದೆ. ಕಥಾ ಸಾರಾಂಶ ಹೀಗಿದೆ: ಚೀನಾದ ಮಳೆಕಾಡಿನಲ್ಲಿ ತಂತಾನೆ ಬೆಳೆದಿದ್ದ ಕಾಡುಬಾಳೆಯ ಮರವನ್ನು ಬುಲ್ಡೋಝರ್ ಬಂದು ನೆಲಸಮ ಮಾಡುತ್ತದೆ. ಅದರಲ್ಲಿ ಅವಿತಿದ್ದ ಬಾವಲಿಯೊಂದು ತನ್ನ ಬಾಯಲ್ಲಿದ್ದ ಬಾಳೆಹಣ್ಣಿನ ತುಣುಕಿನ ಸಮೇತ ಹಾರಿ ಹೋಗುತ್ತದೆ. ಹೋಗಿ ಅದು ಕಾಡಂಚಿನಲ್ಲಿದ್ದ ಹಂದಿಸಾಕಣೆ ಕೇಂದ್ರದ ಸೂರಿಗೆ ಜೋತುಬೀಳುತ್ತದೆ. ಅದರ ಬಾಯಿಯಿಂದ ಕೆಳಕ್ಕೆ ಬಿದ್ದ ಬಾಳೆಹಣ್ಣನ್ನು ಹಂದಿಯೊಂದು ತಿನ್ನುತ್ತದೆ.ಬಾವಲಿಯಲ್ಲಿದ್ದ ವೈರಸ್ ಈಗ ಹಂದಿಯ ದೇಹಕ್ಕೆ ಬರುತ್ತದೆ. ಜ್ವರಪೀಡಿತ ಹಂದಿಯ ಮಾಂಸ ಹಾಂಗ್‌ಕಾಂಗ್‌ನ ಒಂದು ಹೊಟೆಲ್ಲಿನ ಅಡುಗೆ ಮನೆಗೆ ಬರುತ್ತದೆ. ಅಲ್ಲಿನ ಊಟವನ್ನು ಮೆಚ್ಚಿದ ಅಮೆರಿಕದ ಅತಿಥಿ ಬೆಥ್‌ ಎಂಬಾತ ಅಡುಗೆಹುಡುಗಿಗೆ ಶೇಕ್ ಹ್ಯಾಂಡ್ ಮಾಡಿದಾಗ ವೈರಸ್ ಅವನಿಗೂ ತಗಲುತ್ತದೆ. ಸ್ವದೇಶಕ್ಕೆ ಹಿಂದಿರುಗಿದ ಬೆಥ್ ತನ್ನ ಮಾಜಿ ಪತ್ನಿಯೊಂದಿಗೆ ಸರಸವಾಡುತ್ತಾನೆ. ಮರುದಿನ ಅವಳು ಮೈನಡುಕ ಹತ್ತಿ, ಮೂರ್ಛೆ ಬಿದ್ದು ಸಾಯುತ್ತಾಳೆ. ಅವಳ ಮಗನೂ ಸಾಯುತ್ತಾನೆ. ತನಿಖೆಗೆ ಬಂದ ವೈದ್ಯ ಸಂಶೋಧಕಿಯೂ ಸಾಯುತ್ತಾಳೆ.ವೈರಸ್‌ ಅನೇಕ ನಗರಗಳಿಗೆ ವಿಸ್ತರಿಸುತ್ತ ವೈರಲ್‌ ಆಗುತ್ತದೆ. ಲಾಕ್‌ಡೌನ್‌, ಕ್ವಾರಂಟೈನ್‌, ಲೂಟಿ, ದೊಂಬಿ ಎಲ್ಲ ಶುರುವಾಗುತ್ತದೆ.

ವಿಜ್ಞಾನಿಗಳು ವೈರಸ್ಸಿನ ಸ್ವರೂಪವನ್ನು ಅರ್ಥಮಾಡಿಕೊಳ್ಳಲು ತಿಣುಕುತ್ತಿದ್ದಾಗ, ಪ್ರಭಾವೀ ಗಣ್ಯನೊಬ್ಬ “ಇದು ಚೀನೀಯರ ಜೀವಾಣು ಅಸ್ತ್ರವೇ ಹೌದು“ ಎಂದು ಟಿವಿಯಲ್ಲಿ ವಾದಿಸುತ್ತಾನೆ. ತಾನೂ ಕಾಯಿಲೆ ಬಿದ್ದಿದ್ದೆನೆಂದೂ ಹೋಮಿಯೋಪಥಿ ಔಷಧವೊಂದರಿಂದ ಚೇತರಿಸಿಕೊಂಡೆನೆಂದೂ ಟಿವಿ ಚಾನೆಲ್‌ಗಳಲ್ಲಿ ಪ್ರಸಿದ್ಧಿ ಪಡೆಯುತ್ತಾನೆ. ಆ ಬೋಗಸ್‌ ಔಷಧ ಪಡೆಯಲು ಎಲ್ಲೆಡೆ ಪೈಪೋಟಿ ನಡೆಯುತ್ತದೆ. ಅತ್ತ ಅಟ್ಲಾಂಟಾದ ರೋಗಪತ್ತೆ ಕೇಂದ್ರದ ವಿಜ್ಞಾನಿಯೊಬ್ಬಳು ಅಹೋರಾತ್ರಿ ಶ್ರಮಿಸಿ ಲಸಿಕೆ (ವ್ಯಾಕ್ಸಿನ್) ತಯಾರಿಸುತ್ತಾಳೆ. ಅದನ್ನು ಸಾರ್ವಜನಿಕರ ಮೇಲೆ ಪ್ರಯೋಗಿಸಿ ಪರೀಕ್ಷಿಸಲು ಹೋದರೆ ತುಂಬಾ ಸಮಯ ಬೇಕಾಗುತ್ತದೆಂದು ತನ್ನ ಮೇಲೆಯೇ ಪ್ರಯೋಗಿಸಿ, ನಂತರ ತಾನೇ ವೈರಸ್ಸನ್ನು ಅಂಟಿಸಿಕೊಳ್ಳುತ್ತಾಳೆ. ಅವಳಿಗೆ ರೋಗ ತಗಲುವುದಿಲ್ಲ. ಲಸಿಕೆ ಯಶಸ್ವಿ ಎಂದು ಗೊತ್ತಾದಾಗ ಅದನ್ನು ಪಡೆಯಲು ಪ್ರಭಾವಿಗಳ ನೂಕುನುಗ್ಗಲು ನಡೆಯುತ್ತದೆ. ನಂತರ ಲಾಟರಿ ಮೂಲಕ (ಅವರವರ ಜನ್ಮದಿನಾಂಕದ ಪ್ರಕಾರ) ಲಸಿಕೆ ವಿತರಣೆ ಆರಂಭವಾಗುತ್ತದೆ. ಅಷ್ಟರಲ್ಲೇ ಅಮೆರಿಕದಲ್ಲಿ 25ಲಕ್ಷ ಜನ ಹಾಗೂ ಇತರ ದೇಶಗಳಲ್ಲಿ 26 ಲಕ್ಷ ಜನ ಸತ್ತಿರುತ್ತಾರೆ.ರೋಗದ ಮೂಲ ಯಾವುದೆಂದು ಶೋಧಿಸಲು ಚೀನಾಕ್ಕೆ ಹೋದ ವಿಜ್ಞಾನಿ ಲಿಯೊನಾರಾಳನ್ನು ಸ್ಥಳೀಯರು ಹಿಡಿದು ಅಡಗಿಸುತ್ತಾರೆ. ತಮಗೂ ವ್ಯಾಕ್ಸಿನ್‌ ಕೊಟ್ಟರೆ ಮಾತ್ರ ಅವಳನ್ನು ಬಿಡುಗಡೆ ಮಾಡುವುದಾಗಿ ಹೇಳುತ್ತಾರೆ.

ವಿಸ್ವಾಸಂ ಅಧಿಕಾರಿಗಳು ವ್ಯಾಕ್ಸಿನ್ ತಂದು ವಿತರಣೆ ಆರಂಭಿಸಿದ ಮೇಲೆ ಅವಳ ಬಿಡುಗಡೆಯಾಗುತ್ತದೆ. ಆದರೆ ಅಲ್ಲಿ ವಿತರಿಸಿದ್ದು ವ್ಯಾಕ್ಸಿನ್‌ ಅಲ್ಲ, ಸುಳ್ಳೌಷಧ ಎಂದು ಗೊತ್ತಾಗಿ ಲಿಯೊನಾರಾ ಹೇಗಾದರೂ ಅಲ್ಲಿನ ಮುಗ್ಧರನ್ನು ಬಚಾವು ಮಾಡಲೆಂದು…ಹೋರಾಡುವಲ್ಲಿ ಕಥೆ ಕ್ಲೈಮ್ಯಾಕ್ಸಿಗೆ ಬರುತ್ತದೆ.

[ಇದು ವೈಜ್ಞಾನಿಕವಾಗಿಯೂ ಸರ್ವಸಂಪನ್ನ ಚಿತ್ರವೆಂದು ತಜ್ಞರಿಂದ ಪ್ರಶಂಸೆ ಪಡೆದ ಚಿತ್ರ. ಈಗಿನ ಕೊರೊನಾ ಮಾರಿಯಿಂದಾಗಿ ಈ ಹಳೇ ಸಿನೆಮಾಕ್ಕೆ ಈಗ ಭಾರಿ ಡಿಮಾಂಡ್ ಬಂದಿದೆ. ಸತತ ಎರಡು ವಾರಗಳಿಂದ ಅದು ಅತಿ ಹೆಚ್ಚು ಡೌನ್ಲೋಡ್ ಮಾಡಿಸಿಕೊಂಡ ಸಿನೆಮಾ ಎಂಬ ಖ್ಯಾತಿಯನ್ನು ಪಡೆದಿದೆ].

by- ನಾಗೇಶ್ ಹೆಗಡೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *