dinesh amminmattu writes- ಶವಸಂಸ್ಕಾರಕ್ಕೂ ದೊಣ್ಣೆನಾಯಕರ ಅಪ್ಪಣೆಯೆ?

ಬುದ್ದಿವಂತರ ಜಿಲ್ಲೆ’ ಎಂಬ ‘ಒಟ್ಟೆ’ ಕಿರೀಟ ಇಟ್ಟುಕೊಂಡಿರುವ ಜಿಲ್ಲೆಯ ಸುರತ್ಕಲ್ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ಕೊರೊನಾ ವೈರಸ್ ಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರವನ್ನು ತಮ್ಮ ಕ್ಷೇತ್ರದಲ್ಲಿ‌ ನಡೆಸಲು ಅವಕಾಶ ಕೊಡದೆ ಓಡಿಸಿದ್ದಾರೆ. ತನ್ನ ಒಪ್ಪಿಗೆ ಇಲ್ಲದೆ ನನ್ನ ಕ್ಷೇತ್ರದಲ್ಲಿ ಅಂತ್ಯ ಸಂಸ್ಕಾರ ನಡೆಸಬಾರದೆಂದು ಫರ್ಮಾನು ಹೊರಡಿಸಿದ್ದಾರಂತೆ.ಈಗ ಮೊದಲನೆಯ ಪ್ರಶ್ನೆ: ಈ ರೀತಿ ಮೃತ ವ್ಯಕ್ತಿಗಳ ಅಂತ್ಯ ಸಂಸ್ಕಾರವನ್ನು ತಡೆಯುವ ಅಧಿಕಾರ ಶಾಸಕರಿಗಿದೆಯೇ? ಇಲ್ಲ ಎಂದಾದರೆ ಅವರ ವಿರುದ್ಧ ಕ್ರಮಕೈಗೊಳ್ಳದೆ ಜಿಲ್ಲಾಢಳಿತ ಮಂಡಿ ಊರಿದ್ದು ಯಾಕೆ?”

ಪಾದರಾಯನಪುರದಲ್ಲಿ ತಪಾಸಣೆ ನಡೆಸಲು ರಾತ್ರಿ ಹೋಗುವುದು ಬೇಡ, ಹಗಲಿಗೆ ಬನ್ನಿ, ನಾನೂ ಜೊತೆಯಲ್ಲಿ ಬರುತ್ತೇನೆ” ಎಂಬ ಜಮೀರ್ ಹೇಳಿದರೆ ‘ ಆ ಕ್ಷೇತ್ರವೇನು ಜಮೀರ್ ಅವರ ಸ್ವಂತ ಆಸ್ತಿಯೇ? ಅವರನ್ನು ಯಾಕ್ರಿ‌ ಕೇಳಬೇಕು ಎಂದು ಮುಖ್ಯಮಂತ್ರಿಯವರೂ ಸೇರಿದಂತೆ ಅಬ್ಬರಿಸಿದ್ದ ಬಿಜೆಪಿ ನಾಯಕರು, ಅವರನ್ನೇ ಬಂಧಿಸಿ ಎಂದು ಒತ್ತಾಯಿಸಿದವರು, ಶಾಸಕ ಭರತ್ ಶೆಟ್ಟಿ ಯವರ ಬೆದರಿಕೆಗೆ ಏನನ್ನುತ್ತಾರೆ?ಇದು ಕಾನೂನಿನ ಪ್ರಶ್ನೆ,ಇನ್ನೊಂದು ಮಾನವೀಯತೆಯ ಪ್ರಶ್ನೆ:ಪಾದರಾಯನಪುರದಲ್ಲಿ ಮೃತ ಮಹಿಳೆಯ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದ ಜಮೀರ್ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಸಚಿವರು ಒತ್ತಾಯಿಸಿದ್ದರು.ಇದಕ್ಕೆ ಪ್ರತಿಕ್ರಿಯಿಸಿದ್ದ ಶಾಸಕ ಜಮೀರ್ ಅವರು ಮೃತ ಮಹಿಳೆ ಆಸ್ಪತ್ರೆಯಲ್ಲಿದ್ದಾಗ ಹೋಗಿ ಚಿಕಿತ್ಸೆಯ ವೆಚ್ಚ ಭರಿಸಲು ನೆರವಾಗಿದ್ದು ಮಾತ್ರವಲ್ಲ, ಅವರ ಸಂಬಂಧಿಕರು ಅಲ್ಲಿರದಿದ್ದ ಕಾರಣ ಅವರೇ ಖುದ್ದಾಗಿ ನಿಂತು ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದ್ದರು.

“ಇದು ತಪ್ಪೆಂದು ಯಾರಾದರೂ ಹೇಳಲಿ, ನಾನು ಮಾತ್ರ ನನ್ನ ಕ್ಷೇತ್ರದಲ್ಲಿ ಮಾತ್ರವಲ್ಲ ನನ್ನ ವಿರುದ್ಧ ಆರೋಪಿಸುವವರ ಕ್ಷೇತ್ರದಲ್ಲಿ ಯಾರಾದರೂ ಸತ್ತು ಅಂತ್ಯ ಸಂಸ್ಕಾರಕ್ಕೆ ಗತಿ ಇಲ್ಲ ಎಂದಾದರೆ ಅಲ್ಲಿಯೂ ಹೋಗಿ ಆ ಕೆಲಸ ಮಾಡುತ್ತೇನೆ. ಯಾವ ರೋಗವಾದರೂ ಬರಲಿ, ನನ್ನ ಜೀವ ನನಗೆ ಮುಖ್ಯ ಅಲ್ಲ, ಮಾನವೀಯತೆ ಮುಖ್ಯ ” ಎಂದು ಹೇಳಿದ್ದರು.

ಒಬ್ಬ ಶಾಸಕರು ವೈದ್ಯಕೀಯ ಪದವಿ ಹೊಂದಿ ಆ ವೃತ್ತಿಯಲ್ಲಿದ್ದು ಕೊರೊನಾ ಸೋಂಕಿತರ ಮೃತದೇಹದಿಂದ ರೋಗ ಹರಡುವುದಿಲ್ಲ ಎಂದು ಗೊತ್ತಿದ್ದೂ ಅಂತ್ಯ ಸಂಸ್ಕಾರಕ್ಕೆ ಸ್ಥಳ ನೀಡದೆ‌ ಓಡಿಸಿದವರು.ಇನ್ನೊಬ್ಬ ಶಾಸಕರು ಯಾವ ಎಂಬಿಬಿಎಸ್, ಮಣ್ಣಂಗಟ್ಟಿ ಯಾವುದನ್ನೂ ಓದದೆ ಇರುವ, ಆದರೆ ಯಾರೂ ಗತಿ ಇಲ್ಲದೆ ಇದ್ದಾಗ ಅಂತಹವರ ಅಂತ್ಯ ಸಂಸ್ಕಾರ ಮಾಡುವುದು ನನ್ನ ಧರ್ಮ, ಅದರಿಂದ ಯಾವ ರೋಗವೂ ಬರಲಿ, ನಾನು ಹೆದರಲಾರೆ ಎಂದು ಹೇಳುವವರು.ಒಬ್ಬ ಶಾಸಕರು ‘ಹಿಂದೂಗಳು ನಾವೆಲ್ಲ ಒಂದು’ ಎಂಬ ಘೋಷಣೆಯ ಬಲದಿಂದಲೇ ಚುನಾವಣೆಯಲ್ಲಿ ಗೆದ್ದವರು.‌ಆದರೆ ಮೃತ ಹಿಂದು ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡದೆ ಆ‌ ಮೃತ ದೇಹವನ್ನು ಅನಾಥ ಮಾಡಿದವರು.

ಇನ್ನೊಬ್ಬ ಶಾಸಕರು, ತನ್ನ ಧರ್ಮದ ಮಹಿಳೆ ಮೃತಪಟ್ಟಾಗ ರೋಗ-ಸೋಂಕಿಗೆ ಅಂಜದೆ ಮೃತದೇಹಕ್ಕೆ ಹೆಗಲು ಕೊಟ್ಟವರು ಮಾತ್ರವಲ್ಲ, ಕೊರೊನಾ ಸೋಂಕಿನಿಂದ ಯಾವ ಧರ್ಮದವರು ಸತ್ತರೂ ಗತಿ ಇಲ್ಲದೆ ಇದ್ದರೆ ನಾನೇ ಹೋಗಿ ಅಂತ್ಯ ಸಂಸ್ಕಾರ ಮಾಡುತ್ತೇನೆ ಎಂದು ಹೇಳುವವರು. ಇವರಲ್ಲಿ ಯಾರು ಒಳ್ಳೆಯ ಶಾಸಕ ಎಂದು ಹೇಳುವುದು ಬೇಡ,ಪಕ್ಷ, ಸಿದ್ಧಾಂತ, ಜಾತಿ,ಧರ್ಮ ಎಲ್ಲವನ್ನೂ ಪಕ್ಕಕ್ಕಿಟ್ಟು ಹೇಳಿ ” ಇವರಿಬ್ಬರಲ್ಲಿ‌ ಯಾರು ಒಳ್ಳೆಯ ಮನುಷ್ಯರು?”

ಅಂದ ಹಾಗೆ ಹಿಂದುಗಳ ರಕ್ಷಣೆಯ ಗುತ್ತಿಗೆ ಪಡೆದಿರುವ ಕಲ್ಲಡ್ಕದ ಭಟ್ಟರು, ಹಿಂದುಗಳ‌ ಹತ್ಯೆ ಮಾಡಿದವರ ಬಂಧಿಸದಿದ್ದರೆ ಜಿಲ್ಲೆಗೆ ಬೆಂಕಿ ಹಚ್ಚುತ್ತೇನೆ ಎಂದು ಬೊಬ್ಬಿರಿದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೊದಲಾದ ಹಿಂದು ಧರ್ಮ ರಕ್ಷಕರೇನಾದರೂ ಮೃತ ಹಿಂದು ಮಹಿಳೆಗೆ ಆಗಿರುವ ಅನ್ಯಾಯದ ಬಗ್ಗೆ ಬಾಯಿ ಬಿಟ್ಟಿದ್ದಾರಾ?ಪಾದರಾಯನಪುರದ ಗಲಾಟೆಗೆ ಸ್ಥಳೀಯ ಶಾಸಕ‌ಜಮೀರ್ ಅವರೇ ಕಾರಣ ಎಂದು ವಿಚಾರಣೆ ಇಲ್ಲದೆ ತೀರ್ಪು ನೀಡಿ ಅವರನ್ನು ಬಂಧಿಸುವಂತೆ ಎರಡು ದಿನಗಳ ಕಾಲ ಆರ್ಭಟಿಸಿದ್ದ ಕನ್ನಡ ನ್ಯೂಸ್ ಚಾನೆಲ್‌ಗಳು ಈ‌ ಪ್ರಶ್ನೆಗಳನ್ನು ಮುಂದಿಟ್ಟು ಒಂದರ್ಧ ಗಂಟೆಯ ಕಾರ್ಯಕ್ರಮ ಯಾಕೆ ಮಾಡಬಾರದು? ಬೇಕಿದ್ದರೆ ನಾನೇ ಸ್ಕ್ರಿಪ್ಟ್ ಬರೆದುಕೊಡ್ತೇನೆ.

-ದಿನೇಶ್ ಅಮ್ಮಿನಮಟ್ಟು

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *