ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಅಗಲಿಕೆ

ಪ್ರಗತಿಪರ ಚಿಂತಕ, ಹೋರಾಟಗಾರ, ನಮ್ಮ ಧ್ವನಿ ಬಳಗದ ಮುಖ್ಯಸ್ಥರಾದ ಮಹೇಂದ್ರ ಕುಮಾರ್‌ರವರಿಗೆ ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದ್ದು ಕೊನೆಯುಸಿರೆಳೆದಿದ್ದಾರೆ.

ಹಠಾತ್‌ ಹೃದಯಾಘಾತ ಆದ ಕೂಡಲೇ ಅವರನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿನ ಅವರ ಮನೆಯಲ್ಲಿ ಸದ್ಯಕ್ಕೆ ಅವರ ಪಾರ್ಥೀವ ಶರೀರವನ್ನು ಇಡಲಾಗಿದ್ದು, ಇಂದು ಮಧ್ಯಾಹ್ನ ಅವರ ಸ್ವಗ್ರಾಮವಾದ ಕೊಪ್ಪಗೆ ಕೊಂಡೊಯ್ದು ಅಂತ್ಯ ಸಂಸ್ಕಾರ ನೇರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮಹೇಂದ್ರ ಕುಮಾರ್‌ರವರು ದಿಟ್ಟ ಹೋರಾಟಗಾರರಾಗಿದ್ದರು. ಯುವಕರಾಗಿದ್ದಲೇ ಹೋರಾಟದ ಮನೋಭಾವ ಬೆಳೆಸಿಕೊಂಡಿದ್ದ ಅವರು ಭಜರಂಗದಳ ಸಂಘಟನೆ ಸೇರಿದ್ದರಲ್ಲದೇ ಅದರ ರಾಜ್ಯಾಧ್ಯಕ್ಷರು ಸಹ ಆಗಿದ್ದರು. ಆ ನಂತರ ಆ ಸಂಘಟನೆಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಅದರಿಂದ ಹೊರಬಂದು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು.

ಜೀವಪರ ಚಳವಳಿಯೊಂದಿಗೆ ಬೆರೆತುಹೋದ ಅವರು ಈ ಮೊದಲು ಭಜರಂಗದಳ ಸಂಘಟನೆ ಸೇರಿ ಎಂತಹ ತಪ್ಪು ಮಾಡಿದ್ದೆ ಎಂಬುದನ್ನು ಅರಿತು, ಜನರ ಪರ ಕೆಲಸ ಮಾಡಲು ನಿರ್ಧರಿಸಿದ್ದರು.

ತಮ್ಮ ಮೂಲ ಸಂಘಟನೆಯ ಹುಳುಕುಗಳನ್ನು ವಿಮರ್ಶಿಸುತ್ತಲೇ, ಪ್ರಸ್ತುತ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಕುರಿತು, ಸಮಾಜದ ಆಗು ಹೋಗುಗಳಿಗೆ ಬಹಳ ಹತ್ತಿರದಿಂದ ಸ್ಪಂದಿಸುತ್ತಿದ್ದರು. ನಂತರ ನಮ್ಮ ಧ್ವನಿ ಬಳಗ ಎಂಬ ಸಮಾನ ಮನಸ್ಕರ ಸಂಘಟನೆಯೊಂದನ್ನು ಹುಟ್ಟುಹಾಕಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಶೋಷಿತರ ಜಾಗೃತಿಗಾಗಿ ಶ್ರಮಿಸುತ್ತಿದ್ದರು.

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

ಡಿಜಿಟಲ್‌ ಮಾಧ್ಯಮ ವಿಭಾಗದಲ್ಲಿ ಮುಂದಿದ್ದ ಅವರು ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪಿದ್ದರು. ಚಿಂತನಾರ್ಹ, ಸಕಾಲಿಕ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ನಿನ್ನೆಯವರೆಗೂ ಸಹ ಸಕ್ರಿಯರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿದ್ದ ಮಹೇಂದ್ರ ಕುಮಾರ್‌ರವರು ರಾತ್ರಿ ಧೀಡಿರನೆ ಕಾಣಿಸಿಕೊಂಡ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದ್ದು ಅವರ ಅಪಾರ ಅಭಿಮಾನಿಗಳು, ಕುಟುಂಬ ಸದಸ್ಯರ, ಸಹ ಹೋರಾಟಗಾರರನ್ನು ಅಗಲಿದ್ದಾರೆ.

ಮಹೇಂದ್ರ ಕುಮಾರ್‌ರವರ ನಿಧಾನಕ್ಕೆ ರಾಜ್ಯದಾದ್ಯಂತ ಹಲವಾರು ಜನರು ಸಂತಾಪ ಸೂಚಿಸಿದ್ದು, ಧಿಡೀರ್‌ ಆಘಾತಕ್ಕೆ ಕಂಬನಿ ಮಿಡಿದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *