ಪ್ರತಿಯೊಬ್ಬ ಭಾರತೀಯ ಸೈನಿಕ:ಪಿಎಂ ನರೇಂದ್ರ ಮೋದಿ

ಇಂದು ನಾವೆಲ್ಲರೂ ಯುದ್ಧ ಸನ್ನಿವೇಶದ ಮಧ್ಯದಲ್ಲಿದ್ದೇವೆ, ಅದು ಕೊರೋನಾ ವೈರಸ್ ವಿರುದ್ಧದ ಯುದ್ಧ.ಈ ಯುದ್ಧದಲ್ಲಿ ಭಾರತದ ಹೋರಾಟವು ಜನರನ್ನು ಪ್ರೇರೇಪಿಸುತ್ತಿದೆ. ಸಾರ್ವಜನಿಕರು, ಜನಸೇವಕರು, ಅಧಿಕಾರಿಗಳು ಎಲ್ಲರೂ ಒಟ್ಟಾಗಿ ನಡೆಸುತ್ತಿರುವ ಹೋರಾಟವಿದು. ಇಲ್ಲಿನ ಪ್ರತಿಯೊಬ್ಬ ಪ್ರಜೆ ಕೊರೋನಾ ಯುದ್ಧವನ್ನು ಸೈನಿಕರಂತೆ ಹೋರಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದ

PM Narendra Modi

Source : PTI

ನವದೆಹಲಿ: ಇಂದು ನಾವೆಲ್ಲರೂ ಯುದ್ಧ ವಾತಾವರಣದ ಮಧ್ಯದಲ್ಲಿದ್ದೇವೆ, ಅದು ಕೊರೋನಾ ವೈರಸ್ ವಿರುದ್ಧದ ಯುದ್ಧ.ಈ ಯುದ್ಧದಲ್ಲಿ ಭಾರತದ ಹೋರಾಟವು ಜನರನ್ನು ಪ್ರೇರೇಪಿಸುತ್ತಿದೆ. ಸಾರ್ವಜನಿಕರು, ಜನಸೇವಕರು, ಅಧಿಕಾರಿಗಳು ಎಲ್ಲರೂ ಒಟ್ಟಾಗಿ ನಡೆಸುತ್ತಿರುವ ಹೋರಾಟವಿದು. ಇಲ್ಲಿನ ಪ್ರತಿಯೊಬ್ಬ ಪ್ರಜೆ ಕೊರೋನಾ ಯುದ್ಧವನ್ನು ಸೈನಿಕರಂತೆ ಹೋರಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಅವರು ಇಂದು ತಮ್ಮ ಆಕಾಶವಾಣಿಯ ತಿಂಗಳ ಕಾರ್ಯಕ್ರಮ ಮನದ ಮಾತಿನಲ್ಲಿ ಮುಖ್ಯವಾಗಿ ಕೊರೋನಾ ವೈರಸ್ ಮತ್ತು ಅದಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರಸ್ತಾಪಿಸಿದರು.

ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ರನ್ನು coronawarriors.gov.in ಪೋರ್ಟಲ್ ಮೂಲಕ ಸಂಪರ್ಕಿಸುವಂತೆ ಒತ್ತಾಯಿಸಿದರು. ಇತ್ತೀಚೆಗೆ ಆರಂಭಗೊಂಡ ಈ ಪೋರ್ಟಲ್ ನಲ್ಲಿ ಈಗಾಗಲೇ 1.25 ಕೋಟಿ ಜನರು ಸಂಪರ್ಕ ಹೊಂದಿದ್ದಾರೆ ಎಂದರು.

ಸಾಮಾಜಿಕ ಸಂಘಟನೆಯ ಕಾರ್ಯಕರ್ತರು, ನಾಗರಿಕ ಸಮಾಜ ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ಇದರ ಮೂಲಕ ಸಂಪರ್ಕಿಸಬಹುದು. ಈ ಮೂಲಕ ನೀವು ಕೊರೋನಾ ವಾರಿಯರ್ಸ್ ಆಗಬಹುದು ಎಂದರು.

ಮೋದಿಯವರ ಮನ್ ಕಿ ಬಾತ್ ನ 64ನೇ ಅವತರಣಿಕೆಯಲ್ಲಿ ಅವರು ಹೇಳಿದ ಮುಖ್ಯಾಂಶಗಳು ಹೀಗಿವೆ:

-ಭಾರತದಲ್ಲಿ ಕೊರೋನಾ ವೈರಸ್ ವಿರುದ್ಧದ ಹೋರಾಟ ಜನಪ್ರೇರಿತವಾದದ್ದು. ಇಡೀ ಜಗತ್ತು ಇಂದು ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವಾಗ ಮುಂದಿನ ದಿನಗಳಲ್ಲಿ ಕೊರೋನಾ ಬಗ್ಗೆ ಪ್ರಸ್ತಾಪಿಸಿದಾಗ ಭಾರತ ದೇಶದ ಜನಪರವಾದ ಅಭಿಯಾನ, ಕೆಲಸಗಳು ಕೇಂದ್ರಬಿಂದುವಾಗುತ್ತದೆ.

-ನಮ್ಮ ಶ್ರಮಜೀವಿ ರೈತರು ಜನರು ಹಸಿವಿನಿಂದ ಬಳಲದಂತೆ ನೋಡಿಕೊಳ್ಳುತ್ತಿದ್ದಾರೆ. ಕೊರೋನಾ ವಿರುದ್ಧ ಪ್ರತಿಯೊಬ್ಬರೂ ತಮ್ಮದೇ ರೀತಿಯಲ್ಲಿ ಹೋರಾಟ ಮಾಡುತ್ತಿದ್ದಾರೆ. ಕೆಲವರು ತಮ್ಮ ಇಡೀ ಪಿಂಚಣಿಯನ್ನು ದಾನ ಮಾಡಿದರೆ, ಕೆಲವರು ಪ್ರಧಾನ ಮಂತ್ರಿ ನಿಧಿಗೆ ನೀಡುತ್ತಿದ್ದಾರೆ. ತರಕಾರಿ ಬೆಳೆಯುವ ರೈತರು ತರಕಾರಿ, ಹಣ್ಣುಗಳನ್ನು ಅಗತ್ಯವಿರುವವರಿಗೆ ನೀಡಿ ಸಹಕರಿಸುತ್ತಿದ್ದಾರೆ. ಕೆಲವರು ಫೇಸ್ ಮಾಸ್ಕ್ ಮಾಡಿ ವಿತರಿಸುತ್ತಿದ್ದಾರೆ. ಕ್ವಾರಂಟೈನ್ ಗೆ ನೀಡಲಾಗಿರುವ ಶಾಲೆ,ಕಾಲೇಜು, ಸರ್ಕಾರಿ ಕಟ್ಟಡಗಳಿಗೆ ಕೆಲವರು ಬಣ್ಣ ಬಳಿದು ಸಿದ್ದಪಡಿಸಿಕೊಡುತ್ತಿದ್ದಾರೆ.

-ನಮ್ಮ ಉದ್ಯಮ, ಕಚೇರಿ ಸಂಸ್ಕೃತಿ, ಶಿಕ್ಷಣ, ವೈದ್ಯಕೀಯ ವಲಯ ಹೀಗೆ ಎಲ್ಲಾ ವಲಯಗಳಲ್ಲಿ ಕೊರೋನಾ ವೈರಸ್ ನಂತರ ಹೊಸ ಬದಲಾವಣೆಯನ್ನು ಎಲ್ಲರೂ ಅಳವಡಿಸಿಕೊಳ್ಳುತ್ತಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಹೊಸತನವನ್ನು ಅನ್ವೇಷಿಸುವ ಆಸೆ ಹುಟ್ಟಿಕೊಂಡಿದೆ.

-ನಿರ್ಗತಿಕರಿಗೆ ಆಹಾರ ನೀಡುವುದರಿಂದ ಹಿಡಿದು, ರೇಷನ್ ವಿತರಿಸುವುದು, ಲಾಕ್ ಡೌನ್ ಸುಗಮವಾಗಿರುವಂತೆ ನೋಡಿಕೊಳ್ಳುವುದು, ಆಸ್ಪತ್ರೆಗಳಲ್ಲಿ ವ್ಯವಸ್ಥೆ, ವೈದ್ಯಕೀಯ ಉಪಕರಣಗಳ ಉತ್ಪಾದನೆ ಇತ್ಯಾದಿಗಳಲ್ಲಿ ಇಡೀ ದೇಶ ಒಂದೇ ದಿಕ್ಕಿನತ್ತ ಸಾಗುತ್ತಿದ್ದು ಅದು ಒಂದು ಸಾಮಾನ್ಯ ಉದ್ದೇಶದಿಂದ, ಅದು ಕೊರೋನಾ ಯುದ್ಧ ಗೆಲ್ಲುವುದು. ಇಲ್ಲಿ ಭಾರತೀಯರೆಲ್ಲರೂ ಸೈನಿಕರು.

-ವಿದೇಶಗಳ ನಾಯಕರು ಥ್ಯಾಂಕ್ಯೂ ಇಂಡಿಯಾ, ಭಾರತದ ಜನರಿಗೆ ಧನ್ಯವಾದಗಳು ಎಂದಾಗ ನನಗೆ ಹೆಮ್ಮೆಯಾಗುತ್ತದೆ. ಭಾರತ ದೇಶ ತನ್ನ ನಾಗರಿಕರ ಕಾಳಜಿ ನೋಡಿಕೊಳ್ಳುವುದು ಮಾತ್ರವಲ್ಲದೆ ಉತ್ತಮ ಆರೋಗ್ಯಕರ ಗ್ರಹವನ್ನು ನಿರ್ಮಾಣ ಮಾಡಲು ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದೆ.

-ನಮ್ಮಲ್ಲಿನ ಶಕ್ತಿ, ಬಲವನ್ನು ವೃದ್ಧಿಸಲು ಪುರಾತನ ಕಾಲದ ಸಾಂಪ್ರದಾಯಿಕ ವ್ಯವಸ್ಥೆಯನ್ನು ಪಾಲಿಸಿ. ಸಂಪ್ರದಾಯ, ಆಚರಣೆಗಳನ್ನು ಇಡೀ ಜಗತ್ತಿಗೆ ಅರ್ಥವಾಗುವ ಭಾಷೆಯಲ್ಲಿ ಪ್ರಚುರಪಡಿಸಿ.

-ಇತ್ತೀಚೆಗೆ ಜನರಲ್ಲಿ ಮಾಸ್ಕ್ ಧರಿಸುವ ಅರಿವು ಮೂಡಿದೆ. ಮಾಸ್ಕ್ ಧರಿಸಿದ ವ್ಯಕ್ತಿಗಳೆಲ್ಲ ಅನಾರೋಗ್ಯರು ಎಂದು ಅರ್ಥವಲ್ಲ. ಅದೊಂದು ಮುನ್ನೆಚ್ಚರಿಕೆಯಷ್ಟೆ.

-ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ತಪ್ಪು ಎಂದು ಹಿಂದಿನಿಂದಲೂ ನಮಗೆ ಗೊತ್ತಿತ್ತು. ಆದರೂ ಕೆಲವು ಕಡೆ ಜನರು ದುರಭ್ಯಾಸವನ್ನು ಮುಂದುವರಿಸುತ್ತಿದ್ದಾರೆ. ಇನ್ನು ಮುಂದಾದರೂ ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಬಿಡೋಣ ಎಂದು ನಿರ್ಧಾರ ಮಾಡುವ ಸಮಯವಿದು. ಇದು ನಮ್ಮಲ್ಲಿ ಅಗತ್ಯ ಶುಚಿತ್ವವನ್ನು ಹೆಚ್ಚಿಸುವುದಲ್ಲದೆ ಕೊರೋನಾ ವಿರುದ್ಧ ಹೋರಾಟಕ್ಕೆ ಬಲ ನೀಡುತ್ತದೆ.

-ಕೋವಿಡ್-19 ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರಗಳ ಪೂರ್ವಭಾವಿ ಪಾತ್ರವನ್ನು ಶ್ಲಾಘಿಸಲೇಬೇಕು.

-ಇಂದು ಅಕ್ಷಯ ತೃತೀಯದ ಸುದಿನ. ಆದರೆ ಈ ವರ್ಷ ಆಚರಿಸಲು ಸಾಧ್ಯವಾಗದಿದ್ದರೂ ನಮಗೆ ವಿಶೇಷ ಮಹತ್ವವನ್ನು ಹೊಂದಿದೆ. ಕೊರೋನಾ ಸೋಂಕಿನ ವರ್ಷ ಎಂದು ಈ ವರ್ಷವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.

-ಈ ವರ್ಷ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ ಸಮಯದಲ್ಲಿ ಇಷ್ಟೊಂದು ಕಷ್ಟಗಳು ಬರಬಹುದು ಎಂದು ಯಾರೂ ಭಾವಿಸಿರಲಿಲ್ಲ. ಈದ್ ಆಚರಣೆ ವೇಳೆಗೆ ನಾವು ಕೊರೋನಾ ಮುಕ್ತರಾಗೋಣ ಎಂದು ಪ್ರಾರ್ಥಿಸಿಕೊಳ್ಳೋಣ.

-ಕೊರೋನಾ ವೈರಸ್ ಸಮಯದಲ್ಲಿ ಶೌಚ ಕಾರ್ಮಿಕರ ಕೆಲಸ ಎಷ್ಟೊಂದು ಮಹತ್ವದ್ದು ಎಂದು ಗೊತ್ತಾಗುತ್ತಿದೆ. ಈ ಹಿಂದೆ ಅವರ ಕೆಲಸ, ಕೊಡುಗೆ ಗಮನಕ್ಕೆ ಬರುತ್ತಿರಲಿಲ್ಲ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *