ಸುದ್ದಿಯಾಗದ ಮಹತ್ವದ ಸುದ್ದಿಗಳು!

ಪತ್ರಕರ್ತರಿಗೆ ಕೋವಿಡ್-
ಶನಿವಾರ ದೃಢಪಟ್ಟ ವಾಹಿನಿಯೊಂದರ ಕ್ಯಾಮರಾಮನ್‍ನ ಕರೋನಾ ಸೋಂಕು ಪ್ರಕರಣದ ನಂತರ ಅವರ ಸಂಪರ್ಕಕ್ಕೆ ಬಂದ 40 ಕ್ಕೂ ಹೆಚ್ಚು ಜನರನ್ನು ಬೆಂಗಳೂರಿನಲ್ಲಿ ಕ್ವಾರಂಟೈನ್ ಮಾಡಿರುವ ವಿಚಾರ ಈಗ ಚರ್ಚೆಯ ವಿಷಯವಾಗಿದೆ.

ಒಬ್ಬಕ್ಯಾಮರಾಮನ್ ಜೊತೆಗೆ ಕೆಲವು ಪತ್ರಕರ್ತರು ಸೇರಿ ಸುಮಾರು 40 ಜನರ ಕ್ವಾರಂಟೈನ್ ವಿಚಾರ ಮಾಧ್ಯಮಗಳಲ್ಲೂ ಸುದ್ದಿಯಾಗದಿರುವುದು ಆಶ್ಚರ್ಯವನ್ನುಂಟುಮಾಡಿದೆ. ಟಿ.ಆರ್.ಪಿ., ಹಣ,ಕೀರ್ತಿಗಾಗಿ ಸುದ್ದಿಮಾಡಿ ಗೆದ್ದ ಪತ್ರಕರ್ತರು ಕೋವಿಡ್ ವಿಚಾರದಲ್ಲಿ ಸೋತಂತಾಗಿದೆ.ಈ ವಿಚಾರ ಸುದ್ದಿಮಾಡುವ ವಿಷಯದಲ್ಲಿ ಕೂಡಾ ಸೋತಿರುವ ಪತ್ರಕರ್ತರು ಮಾಧ್ಯಮ ಸಂಹಿತೆ ಉಲ್ಲಂಘಿಸಿದಂತಾಗಿದೆ.


ಶಿರಸಿಯಲ್ಲಿ ಕಾಳಜಿಯಿಂದ ಗಮನ ಸೆಳೆದ ವೈದ್ಯೆ- ಕರೋನಾ ವಿಚಾರದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದವರಲ್ಲಿ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದ್ದಾರೆ. ಅವರಿಗೆ ಸರ್ಕಾರ ಅಗತ್ಯ ವಸ್ತುಗಳನ್ನು ಪೂರೈಸಿಲ್ಲ ಎನ್ನುವ ಆರೋಪದ ನಡುವೆ ಶಿರಸಿಯ ಆಯುಷ್ ವೈದ್ಯೆ ಡಾ.ಪೂರ್ಣಿಮಾ ತಮ್ಮ ಹಣದಲ್ಲಿ ತಾಲೂಕಿನ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಛತ್ರಿ ಮತ್ತು ದಿನಬಳಕೆ ವಸ್ತುಗಳನ್ನು ಕೊಡುವ ಮೂಲಕ ಪ್ರಶಂಸನೀಯ ಕೆಲಸಮಾಡಿದ್ದಾರೆ. ರಜಾ ದಿವಸಗಳಲ್ಲೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ, ಕಾರ್ಯಕರ್ತೆಯರಲ್ಲೂ ಉತ್ಸಾಹ ತುಂಬಿ ಸಾರ್ವಜನಿಕ ಸೇವೆಗೆ ತಮ್ಮ ತನು-ಮನ-ಧನಗಳಿಂದ ಸಮರ್ಪಿಸಿಕೊಂಡಿರುವ ಡಾ.ಪೂರ್ಣಿಮಾ ಬಗ್ಗೆ ಜಿಲ್ಲೆಯಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ.
ಹೊರಗಿನಿಂದ ಬಂದವರಿಗೆ ಕ್ವಾರಂಟೈನ್- ದೇಶ,ರಾಜ್ಯದ ಲಾಕ್ ಡೌನ್, ಉತ್ತರಕನ್ನಡ ಜಿಲ್ಲೆಯ ಬಿಗು ನಿಯಮಗಳ ಮಧ್ಯೆ ಹೊರ ಊರುಗಳಿಂದ

ವೈದ್ಯರ ವಿಶೇಶ ಕಾಳಜಿ- ಹೊರ ಊರುಗಳಿಂದ ಜಿಲ್ಲೆಗೆ ಬರುವವರ ಪ್ರಮಾಣದ ಬಗ್ಗೆ ಸ್ಥಳಿಯರು ಆತಂಕಪಡುವಂತಾಗಿದೆ.ಜಿಲ್ಲೆಯಿಂದ ಅಧೀಕೃತವಾಗಿ ಹೊರ ಊರುಗಳಿಗೆ ಪ್ರಯಾಣ ಬೆಳೆಸಿದ ಕಾರ್ಮಿಕರ ನಡುವೆ ಅನಧೀಕೃತವಾಗಿ ಜಿಲ್ಲೆ ಪ್ರವೇಶಿಸುತ್ತಿರುವವರ ಸಂಖ್ಯೆ ಹೆಚ್ಚಿದ್ದು ಜಿಲ್ಲಾಡಳಿತಕ್ಕೂ ತಲೆನೋವಾಗಿದೆ.

ಸಮಾಜಮುಖಿಗೆ ದೊರೆತ ಖಚಿತ ಮಾಹಿತಿಗಳ ಪ್ರಕಾರ ಕಳೆದ ವಾರದ ಕೊನೆಗೆ ಕರೋನಾ ಪೀಡಿತ ಮುಂಬೈ, ಪೂನಾಗಳಿಂದ ಉತ್ತರಕನ್ನಡ ಜಿಲ್ಲೆಗೆ ನೂರಾರು ಜನರು ಬಂದಿದ್ದು ಅವರಲ್ಲಿ ಬಹುತೇಕರು ಕಾರಂಟೈನ್ ಆಗಿದ್ದಾರೆ.ಇಂಥ ಪೂನಾ ರಿಟರ್ನ್ 40 ಜನರುಸಿದ್ಧಾಪುರದಲ್ಲೇ ಕಾರಂಟೈನ್ ಆಗಿರುವುದು ವಿಶೇಶ. ಈ ರೀತಿ ಹೊರ ಊರುಗಳಿಂದ ಬಂದ ಜನರ ಮಾಹಿತಿಯನ್ನು ಸಂಬಂಧಿಸಿದವರಿಗೆ ತಿಳಿಸಿ ಸಾರ್ವಜನಿಕರ ಹಿತ ಕಾಪಾಡುವಂತೆ ಜಿಲ್ಲಾಡಳಿತ ಕೂಡಾ ಮನವಿ ಮಾಡಿದೆ.

ಆರ್.ಎಸ್.ಎಸ್. ಏನು ಮಾಡುತ್ತಿದೆ?
ಶುಕ್ರವಾರ ನಮ್ಮ ಧ್ವನಿ ಸಂಸ್ಥಾಪಕ, ಪ್ರಗತಿಪರ ಚಿಂತಕ ಮಹೇಂದ್ರಕುಮಾರ್ ನಮ್ಮನ್ನಗಲಿದರು.
ಅವರ ಸಾವಿನ ಸುದ್ದಿ ತಿಳಿದದ್ದೇ ಏನೋ ಕಳವಳ ಶುರುವಾಯಿತು. ಸ್ನೇಹಿತರಾದ ಲೋಹಿತ್, ಮಹೇಶ್ ಸೇರಿದ ಅನೇಕರು ಸಂದೇಶ ಕಳುಹಿಸಿದ್ದರು. ವಾರ್ತೆ ತಿಳಿದ ನನ್ನ ಮನಸ್ಸು ದೇಹ ಕೆಲಕಾಲ ಸ್ತಂಬ್ಧವಾದಂತಾಯಿತು. ಮಹೇಂದ್ರಕುಮಾರ ನಮಗೆ ವಿಚಾರ,ಕೃತಿಗಳಿಂದ ಇಷ್ಟವಾದ ನಾಯಕ. ಹಿಂದೆ ಅವರು ವಾಶಿಷ್ಠ ವಂಶದ ಕೆಲವು ಪರಿವಾರದ ಸಂಘಟನೆಯಲ್ಲಿದ್ದು ಅಲ್ಲಿಯ ಅವತಾರಗಳನ್ನು ನೋಡಿದವರು.

ಉಳ್ಳವರು,ಶೂದ್ರ ವಿರೋಧಿ ಮತಾಂಧರ ಪರ ಧ್ವನಿ ಮಾಡುವ ಇವರ ಜೊತೆಗಿದ್ದ ಕಟೀಲು ಸಂಸದರಾದರು,ಬಿ.ಜೆ.ಪಿ.ರಾಜ್ಯಾಧ್ಯಕ್ಷರಾದರು. ಈ ಮಹೇಂದ್ರರಂತೆಯೇ ಹೃದಯದ ಭಾಷೆಯಲ್ಲಿ ಮಾತನಾಡುವ ಸತ್ಯಜಿತ್ ಸುರತ್ಕಲ್‍ರ ಕೆಲಸದ ಲಾಭ ಪಡೆದು ಶಿರಸಿಯ ಅನಂತಕುಮಾರ ಹೆಗಡೆ ಸಂಸದರಾದರು,ಸಚಿವರಾದರು.

ಆದರೆ ಸುರತ್ಕಲ್,ಮಹೇಂದ್ರಕುಮಾರ್ ಈ ರೀತಿ ಅಧಿಕಾರದ ಏಣಿ ಏರಲಿಲ್ಲ. ಸುರತ್ಕಲ್ ವಿಚಾರವಿರಲಿ, ಮಹೇಂದ್ರಕುಮಾರ್ ವಿಚಾರವಿರಲಿ ಅಥವಾ ಇತರ ವೈದಿಕೇತರ ನಾಯಕರು ಪರಿವಾರದ ಪರಿಚಾರಿಕೆಯಲ್ಲಿ ಕಳೆದುಹೋಗುತ್ತಾರೆ ಅಥವಾ ಹೊರಗೆ ನಾಶವಾಗುತ್ತಾರೆ. ಯಾಕೆ ಹೀಗೆ ಎಂದು ಗೃಹಿಸಿದರೆ.
ಸುರತ್ಕಲ್, ಮಹೇಂದ್ರಕುಮಾರ ತರಹದವರಿಗೆ ಪರಿವಾರದ ಪ್ರಮುಖರ ನೆರವಿರುವುದಿಲ್ಲ. ಯಾಕೆಂದರೆ ಪರಿವಾರ ಹೇಳಿದ್ದನ್ನು ಉಪಾಯದಿಂದಲೋ, ಹುಂಬತನದಿಂದಲೋ ಶಿರಸಾವಹಿಸಿ ಪಾಲಿಸಲು ಹ್ರದಯಭಾಷೆಯ ಮಹೇಂದ್ರಕುಮಾರ ಥರಹದವರಿಗೆ ಸಾಧ್ಯವಾಗುವುದಿಲ್ಲ. ಸುರತ್ಕಲ್, ಮಹೇಂದ್ರ ಥರಹದವರು ಪರಿವಾರದ ಭಾಷೆಯನ್ನು ಹೃದಯದಿಂದ ಪರೀಕ್ಷಿಸುತ್ತಾರೆ. ಆಗ ಅವರಿಗೆ ಅದು ಸರಿ ಕಾಣುವುದಿಲ್ಲ.
ಇಂಥ ಪರಿವಾರದ ತೆಕ್ಕೆಗೆ ಸಿಕ್ಕ ನಂತರ ಅವರಿಂದ ಬಿಡಿಸಿಕೊಂಡ ಅಸಂಖ್ಯ ಜನರು ಈ ರಾಜ್ಯ ಜಿಲ್ಲೆಯಲ್ಲಿದ್ದಾರೆ. ಅವರಲ್ಲಿ ಕೆಲವರು ತಮ್ಮ ಶಕ್ತಿ-ಯುಕ್ತಿಯಿಂದ ಬೆಳೆಯುವುದಿದೆ. ಆದರೆ ಬಹಳಷ್ಟು ಜನ ಆ ಮತಾಂಧತೆಯ ಕುರೂಪಕ್ಕೆ ಬಿದ್ದವರು ಎದ್ದು ಬಂದಿದ್ದೇ ಇಲ್ಲ. ಆಗ ಅವರ ಧ್ವನಿ ಕ್ಷೀಣವಾಗುತ್ತದೆ. ಇಂಥ ಪರಿವಾರದ ಕೂಪದಿಂದ ಹೊರಬಂದು ಸೋಲು-ನೋವು-ಸಾವು ಕಂಡವರು ಅನೇಕ. ಗೆದ್ದವರು, ಗೆಲ್ಲುವ ದಾರಿಯಲ್ಲಿ ಕಳೆದುಹೋದವರು ಕೆಲವರು. ಅಂಥವರಲ್ಲಿ ಕ್ರಮವಾಗಿ ಮಹೇಂದ್ರಕುಮಾರ,ಸೇರಿದ ಅನೇಕರನ್ನು ಹೆಸರಿಸಬಹುದು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *