ಕೊರೋನಾ ವೈರಸ್ ಹರಡಲು ಮುಸ್ಲಿಮರು ಕಾರಣ ಎಂದು ಇಡೀ ಸಮುದಾಯವನ್ನು ದೂಷಿಸಬೇಡಿ:ಮೋಹನ್ ಭಾಗವತ್

ಕೆಲವರು ಮಾಡಿದ ತಪ್ಪಿಗೆ ಇಡೀ ಮುಸ್ಲಿಂ ಸಮುದಾಯವನ್ನು ದೂಷಿಸುವುದು ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

Mohan Bhagavat(File photo)

Source : Online Desk

ಮುಂಬೈ: ಕೆಲವರು ಮಾಡಿದ ತಪ್ಪಿಗೆ ಇಡೀ ಮುಸ್ಲಿಂ ಸಮುದಾಯವನ್ನು ದೂಷಿಸುವುದು ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಭಾರತದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಮಾರಕ ಕೊರೋನಾ ವೈರಸ್ ಹರಡಲು ದೆಹಲಿಯಲ್ಲಿ ಕಳೆದ ತಿಂಗಳ ಆರಂಭದಲ್ಲಿ ತಬ್ಲಿಘಿ ಜಮಾತ್ ಸಮಾವೇಶ ಆಯೋಜಿಸಿದ್ದೇ ಕಾರಣ. ಇಲ್ಲಿ ಪ್ರಪಂಚದ ಹಲವು ದೇಶಗಳಿಂದ ಬಂದಿದ್ದ ಮುಸಲ್ಮಾನರ ಜೊತೆಗೆ ಭಾಗವಹಿಸಿದ್ದ ನಮ್ಮದೇಶದ ವಿವಿಧ ರಾಜ್ಯಗಳ ಮುಸ್ಲಿಮರ ಮೂಲಕ ಇಡೀ ದೇಶಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಕೊರೋನಾ ಹರಡಿತು ಎಂಬ ಆರೋಪಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ ಅದರ ಬಗ್ಗೆ ಮಾತನಾಡಿದ್ದಾರೆ.

ತಬ್ಲಿಘಿ ಸಮಾವೇಶದಲ್ಲಿ ಪಾಲ್ಗೊಂಡವರಿಂದ ಕೊರೋನಾ ಹರಡಿತು ಎಂದು ಕೆಲವರು ಮಾಡಿದ ತಪ್ಪಿಗೆ ಇಡೀ ಮುಸ್ಲಿಂ ಸಮುದಾಯದವರು ಸರಿಯಿಲ್ಲ ಎಂದು ಹೇಳುವುದು ಸರಿಯಲ್ಲ.  ಈ ಸಂದರ್ಭದಲ್ಲಿ ಜಾತಿ, ಧರ್ಮ,ಬೇಧಭಾವ ತೋರಿಸದೆ ಕೊರೋನಾ ಸೋಂಕಿತರಿಗೆ ಎಲ್ಲರೂ ಸಹಾಯ ಮಾಡುವುದು ಅಗತ್ಯ ಎಂದರು.

ಅಕ್ಷಯ ತೃತೀಯ ಅಂಗವಾಗಿ ಲಾಕ್ ಡೌನ್ ಮಧ್ಯೆ ನಾಗ್ಪುರದಿಂದ ಆನ್ ಲೈನ್ ಮೂಲಕ ಮಾತನಾಡಿದ ಅವರು, ಭಾರತದ ಎಲ್ಲಾ 130 ಕೋಟಿ ಜನರು ನಮ್ಮ ಕುಟುಂಬ. ಭಾರತೀಯರಾದ ನಾವೆಲ್ಲರೂ ಒಂದೇ. ಕೆಲವರು ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನು ಬೈಯುವುದು ಸರಿಯಲ್ಲ. ಎರಡೂ ಸಮುದಾಯಗಳ ಪ್ರಬುದ್ಧ ಜನರು ಮುಂದೆ ಬಂದು ಮಾತುಕತೆ ನಡೆಸಿ ಜನರ ಮನಸ್ಸಿನಲ್ಲಿರುವ ಪೂರ್ವಾಗ್ರಹ ಪೀಡಿತ ಮನೋಭಾವನೆಯನ್ನು ಹೋಗಲಾಡಿಸಬೇಕು ಎಂದರು.

ಮಹಾರಾಷ್ಟ್ರದ ಪಲ್ಗಾರ್ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಬ್ಬರು ಸಾಧುಗಳ ಸಾಮೂಹಿಕ ಹತ್ಯೆಗೆ ಪೊಲೀಸರು ಕಾರಣ ಎಂದು ಪರೋಕ್ಷವಾಗಿ ಆರೋಪಿಸಿದರು. ದಾಳಿಕೋರರ ಮೇಲೆ ಆರೋಪ ಮಾಡಿದ ಅವರು, ಗ್ರಾಮಸ್ಥರು ಕಾನೂನನ್ನು ತಮ್ಮ ಕೈಗೆತ್ತಿಕೊಳ್ಳಬಾರದಿತ್ತು. ಇಬ್ಬರು ಸಾಧುಗಳು ಮುಗ್ಧರಾಗಿದ್ದರು.ಬೇರೆ ಬೇರೆಯವರು ಹೇಳುವ ಮಾತುಗಳನ್ನು ಪಕ್ಕಕ್ಕಿಟ್ಟು ನೋಡಿ, ಮುಗ್ಧ ಜನರನ್ನು ಕೊಲ್ಲುವುದು ಸರಿಯೇ ಎಂದು ಕೇಳಿದರು.

ಈ ಕೊರೋನಾ ಸಂಕಷ್ಟದಲ್ಲಿ ಆರ್ ಎಸ್ಎಸ್ ದೇಶಾದ್ಯಂತ ಸಹಾಯ ಮಾಡುತ್ತಿದ್ದು 3 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ದೇಶದ 55 ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ 33 ಲಕ್ಷ ಕಿಟ್ ಗಳನ್ನು ವಿತರಿಸಿದ್ದು ಏಪ್ರಿಲ್ 24ರವರೆಗೆ 2 ಕೋಟಿ ಆಹಾರ ಪೊಟ್ಟಣಗಳನ್ನು ವಿತರಿಸಿದ್ದೇವೆ. ಇಲ್ಲಿ ಮಾಡಿರುವ ಕೆಲಸದ ಬಗ್ಗೆ ಹೇಳಿಕೊಳ್ಳದೆ ಇನ್ನೊಬ್ಬರಿಗೆ ಸಹಾಯ ಮಾಡುವುದು ಮುಖ್ಯ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *