“ಕುಹೂ ಕುಹೂ”

(ಮಕ್ಕಳಿಗಾಗಿ ಕವಿತಾ ವಾಚನ)

ಈ ಕೊರೋನ ಲಾಕ್ ಡೌನ್ ಸಮಯದಲ್ಲಿ ಸಮಯ ಕಳೆಯುವುದೇ ಮಕ್ಕಳಾದಿಯಾಗಿ ಎಲ್ಲರಿಗೂ ಒಂದು ದೊಡ್ಡ ಸವಾಲಾಗಿದೆ. ಶಾಲೆಗೆ ರಜೆ ಸಿಕ್ಕರೆ ಸಾಕು, ಕುಣಿಯುತ್ತಿದ್ದ ಮಕ್ಕಳು ಈಗ ಶಾಲೆ ಯಾವಾಗ ಶುರುವಾಗುತ್ತದೆ ಎನ್ನುವ ಕಾತುರದಲ್ಲಿವೆ.

'Kids now spend 30 minutes more everyday on digital screens'

ಧಾರವಾಡ: ಈ ಕೊರೋನ ಲಾಕ್ ಡೌನ್ ಸಮಯದಲ್ಲಿ ಸಮಯ ಕಳೆಯುವುದೇ ಮಕ್ಕಳಾದಿಯಾಗಿ ಎಲ್ಲರಿಗೂ ಒಂದು ದೊಡ್ಡ ಸವಾಲಾಗಿದೆ. ಶಾಲೆಗೆ ರಜೆ ಸಿಕ್ಕರೆ ಸಾಕು, ಕುಣಿಯುತ್ತಿದ್ದ ಮಕ್ಕಳು ಈಗ ಶಾಲೆ ಯಾವಾಗ ಶುರುವಾಗುತ್ತದೆ ಎನ್ನುವ ಕಾತುರದಲ್ಲಿವೆ. ಇಂಥ ಸಮಯದಲ್ಲಿ ನಮ್ಮ ಕವಿಗಳು ತಾವಿರುವ ಸ್ಥಳದಿಂದಲೇ ತಮ್ಮ ರಚನೆಯ ಮಕ್ಕಳ ಕವಿತೆಗಳನ್ನು ವಾಚನ ಮಾಡಿ ಮಕ್ಕಳ ಮನ ರಂಜಿಸಲು ನೋಡಿದ್ದಾರೆ.

ನವೋದಯ, ನಂತರದ ನಮ್ಮ ಶಿಕ್ಷಕ ಸಮುದಾಯದ ಹಂಬಲದಲ್ಲಿ ಹರಿಯುತ್ತ ಬಂದಿರುವ ಮಕ್ಕಳ ಕಾವ್ಯ ಹೊಸಗಾಲದಲ್ಲಿ ಸಾಕಷ್ಟು ಹೊಸ ತುಡಿತಗಳಿಂದ,  ವಿಭಿನ್ನ ದೃಷ್ಟಿಕೋನದ ಹಿನ್ನೆಲೆಯಲ್ಲಿ,  ವಿರಳವಾಗಿಯಾದರೂ ಮೂಡಿಬರುತ್ತಲೇ
ಇದೆ. ಅದರ ಒಂದು ಝಲಕು ಕಾಣಿಸುವ ಬಯಕೆಯ ಫಲವೇ ಈ “ಕೂಹೂ ಕೂಹೂ”.

ಇಳಿ ವಯಸ್ಸಿನಲ್ಲಿಯೂ  ಉತ್ಸಾಹದಿಂದ ತಮ್ಮ ರಚನೆಯ  ಮಕ್ಕಳ ಕವನ ವಾಚನದ ಮೂಲಕ “ಕುಹೂ ಕುಹೂ” ವೀಡಿಯೊ ಸಂಪಾದನೆಯನ್ನು ನಾಡೋಜ ಡಾ.ಚೆನ್ನವೀರ ಕಣವಿ ಅವರು ತಮ್ಮ  ಮನೆ ಚೆಂಬೆಳೆಕಿನಲ್ಲಿ ಬಿಡುಗಡೆಗೊಳಿಸಿದರು.
ನಾಡಿನ ವಿವಿಧ ಭಾಗಗಳಿಂದ ಸುಮಾರು ಇಪ್ಪತ್ತೊಂದು ಕವಿಗಳು ಭಾಗಿಯಾಗಿದ್ದು, ಇದರ ಸಂಪಾದನೆಯನ್ನು ಬಾಗಲಕೋಟೆಯ ಬಸವೇಶ್ವರ ಎಂಜಿನೀಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಮತ್ತು ಮಕ್ಕಳ ಕವಿ ರಾಜಶೇಖರ ಕುಕ್ಕುಂದಾ ಅವರು
ಮಾಡಿದ್ದಾರೆ.

ಭಾಗಿಯಾದ ಕವಿಗಳು:
ಎಚ್.ಎಸ್.ವೆಂಕಟೇಶಮೂರ್ತಿ,ಬೆಂಗಳೂರು
ಎನ್. ಶ್ರೀನಿವಾಸ ಉಡುಪ, ಬೆಂಗಳೂರು
ಕೆ.ವಿ.ತಿರುಮಲೇಶ್, ಹೈದ್ರಾಬಾದ್
ಎನ್.ಆರ್.ನಾಯಕ, ಹೊನ್ನಾವರ
ಚಿಂತಾಮಣಿ ಕೊಡ್ಲೆಕೆರೆ, ಬೆಂಗಳೂರು
ಟಿ.ಎಸ್.ನಾಗರಾಜ ಶೆಟ್ಟಿ, ತಿಪಟೂರು
ಎಚ್.ಡುಂಡಿರಾಜ್, ಬೆಂಗಳೂರು
ಆನಂದ ಪಾಟೀಲ, ಧಾರವಾಡ
ರಾಜಶೇಖರ ಕುಕ್ಕುಂದಾ, ಬಾಗಲಕೋಟೆ
ಕೃಷ್ಣಮೂರ್ತಿ ಬಿಳಿಗೆರೆ, ತಿಪಟೂರು
ರಾಧೇಶ ತೋಳ್ಪಾಡಿ ಎಸ್., ಬಂಟ್ವಾಳ
ತಮ್ಮಣ್ಣ ಬೀಗಾರ, ಸಿದ್ದಾಪುರ
ಭಾಗೀರಥಿ ಹೆಗಡೆ, ಶಿರಸಿ
ನಾಗರಾಜ ವಸ್ತಾರೆ, ಬೆಂಗಳೂರು
ಚಂದ್ರಗೌಡ ಕುಲಕರ್ಣಿ, ತಾಳೀಕೋಟೆ
ವಿಜಯಶ್ರೀ ಹಾಲಾಡಿ, ಮೂಡಬಿದ್ರೆ
ವಿನಾಯಕ ರಾ. ಕಮತದ, ಗದಗ
ಛಾಯಾ ಭಗವತಿ, ಬೆಂಗಳೂರು
ಹುಣಸೂರು ಮಾದುಪ್ರಸಾದ್, ಮೈಸೂರು
ಸುರೇಶ ಕಂಬಳಿ, ಕೊಪ್ಪಳ
ಲಲಿತಾ ಕೆ. ಹೊಸಪ್ಯಾಟಿ, ಹುನಗುಂದ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *