ಉ.ಕ. ಮುಕ್ತ,ಮುಕ್ತ,ಮುಕ್ತ!

11 ಜನ ಕೋವಿಡ್ ಸೋಂಕಿತರನ್ನು ಹೊಂದಿದ್ದ ಉತ್ತರಕನ್ನಡ ಜಿಲ್ಲೆಯ ಕೊನೆಯ ಕರೋನಾ ಸೋಂಕಿತ ಇಂದು ಡಿಸ್ಚಾರ್ಜ್ ಆಗುವ ಮೂಲಕ ಉತ್ತರಕನ್ನಡ ಕರೋನಾ ಮುಕ್ತ ಜಿಲ್ಲೆಯಾಗಿದೆ.

ಉತ್ತರಕನ್ನಡದ 12 ತಾಲೂಕುಗಳಲ್ಲಿ ಭಟ್ಕಳ ಹೊರತು ಪಡಿಸಿ ಉಳಿದ 11 ತಾಲೂಕುಗಳಲ್ಲಿ ಒಂದೂ ಕೋವಿಡ್ ಪ್ರಕರಣಗಳಿರಲಿಲ್ಲ.
11 ರಲ್ಲಿ ಹತ್ತು ಜನರು ಕಳೆದ ವಾರದ ಮೊದಲೇ ಗುಣಮುಖರಾಗಿದ್ದರು. ಜಿಲ್ಲೆಯ 11 ಕೋವಿಡ್ ಸೋಕಿತರೂ ಗುಣಮುಖರಾಗುವ ಮೂಲಕ ಇಂದಿನಿಂದ ಉತ್ತರಕನ್ನಡ ಕರೋನಾ ಮುಕ್ತ ಜಿಲ್ಲೆಯಾಗಿದೆ. ಭಟ್ಕಳದ ಕರೋನಾ ಕೇಸುಗಳ ಪರಿಣಾಮ ವಿಶಾಲ ಉತ್ತರಕನ್ನಡಕ್ಕೆ ತಲೆನೋವಾಗಿತ್ತು. ಲಾಕ್‍ಡೌನ್,ನಿಷೇಧಾಜ್ಞೆಗಳಿದ್ದ ಮೌನಕ್ಕೆ ಜಾರಿದ್ದ ಜಿಲ್ಲೆ ಮೇ1 ರ ಕಾರ್ಮಿಕ ದಿನಾಚರಣೆಯಂದು ಕೋವಿಡ್ ಸೋಂಕುಮುಕ್ತ ಜಿಲ್ಲೆಯಾಗಿ, ಕೂಲಿ ಕಾರ್ಮಿಕರನ್ನು ಮರಳಿಸಿದ ಜಿಲ್ಲೆಯಾಗಿ ಮುಕ್ತ, ಮುಕ್ತ ಎನ್ನುವಂತಾಗಿದೆ.

ಮೇ 1 ರ ಕಾರ್ಮಿಕ ದಿನಾಚರಣೆ ಮೊದಲು ಉತ್ತರಕನ್ನಡದಿಂದ ಉತ್ತರಕರ್ನಾಟಕಕ್ಕೆ ಕಾರ್ಮಿಕರು ಮರಳಿದ್ದಾರೆ. ಕರಾವಳಿಯ ಕೇರಳದಿಂದ ಗೋವಾವರೆಗೆ ಕರಾವಳಿ ಮತ್ತು ಉತ್ತರಕನ್ನಡ ಜಿಲ್ಲೆಯಾದ್ಯಂತ ಉತ್ತರಕರ್ನಾಟಕದ ಕಾರ್ಮಿಕರೇ ಕೆಲಸಗಾರರು. ಕಲ್ಲು-ಮಣ್ಣು, ಸಿಮೆಂಟ್ ಗಳ ಕಠಿಣ ದೈಹಿಕ ಶ್ರಮದ ಕೆಲಸಗಳಿಗೆ ಉತ್ತರಕರ್ನಾಟಕದ ಜನರಿಲ್ಲದೆ ಇಲ್ಲಿಯ ನಿರ್ಮಾಣ ಕಾಮಗಾರಿಗಳು ನಡೆಯುವುದು ಕಷ್ಟ. ಇಂಥ ಕಾರ್ಮಿಕರಾಗಿ ಕರಾವಳಿ-ಮಲೆನಾಡು ಭಾಗದಲ್ಲಿ ದುಡಿಯುವ ಉತ್ತರಕರ್ನಾಟಕದ ಜನರಲ್ಲಿ ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಂದ ಹುಟ್ಟೂರಿಗೆ ಹೋಗುವ ತವರಿನ ಭಾಗ್ಯ ಲಭಿಸಿದೆ. ಕರೋನಾ ಲಾಕ್ ಔಟ್ ಹಿನ್ನೆಲೆಯಲ್ಲಿ ಉತ್ತರಕನ್ನಡ ಉಡುಪಿ, ದಕ್ಷಿಣ ಕನ್ನಡಗಳಿಂದ ಸಾವಿರಾರು ಕಾರ್ಮಿಕರು ಮರಳಿದ್ದಾರೆ. ಅಲ್ಲಿಗೆ ಉ.ಕ. ಕಾರ್ಮಿಕರ ಕರೋನಾ ದಿಗ್ಬಂಧನ ಮುಗಿದಂತಾಗಿದೆ.

(ಸಿದ್ದಾಪುರ,ಮೇ01)
ಕರೊನಾ ಲಾಕ್ ಡೌನ್‍ನಿಂದ ಸಂಕಷ್ಟದಲ್ಲಿರುವ ಕುಟುಂಬದವರಿಗೆ ತಾಲೂಕು ಗ್ರಾಮ ಒಕ್ಕಲಿಗ ಯುವ ಬಳಗದವರಿಂದ ದಿನಸಿ ಸಾಮಗ್ರಿಗಳ ಕಿಟ್ಟ್ ವಿತರಣೆ ಹಾಗೂ ಕರೊನಾ ವೈರಸ್ ಜಾಗೃತಿ ಕುರಿತು ಮಾಹಿತಿ ನೀಡಲಾಯಿತು.
ತಾಲೂಕಿನ ಪದ್ಮನಗದ್ದೆ, ಹರಗಿ,ಕಿಲವಳ್ಳಿ, ಬೇಣದಗುಡ್ಡೆ,ಓಣಿತೋಟ, ಹೇರೂರು ಕಂಚಿಮನೆ ಹಾಗೂ ಬಳೂರಿನ ಬಡ ಕುಟುಂಬದವರಿಗೆ ದಿನಸಿ ಸಾಮಗ್ರಿಗಳ ಕಿಟ್‍ನ್ನು ಶನಿವಾರ ಹಾಗೂ ಭಾನುವಾರ ತಾಲೂಕು ಗ್ರಾಮ ಒಕ್ಕಲಿಗ ಯುವ ಬಳಗದ ಅಧ್ಯಕ್ಷ ವಿ.ಆರ್.ಗೌಡ ಹರಗಿ,ಬಿದ್ರಕಾನ ಗ್ರಾಪಂ ಕಾರ್ಯದರ್ಶಿ ಆರ್.ಬಿ.ಗೌಡ ಹೊಸ್ಕೊಪ್ಪ, ಎಂ.ಟಿ.ಗೌಡ ಕಿಲವಳ್ಳಿ, ಶ್ರೀಕಾಂತ ಗೌಡ ಹರಗಿ, ಜಗನ್ನಾಥ ಗೌಡ ಕಾನಗದ್ದೆ, ದಿನೇಶ ಟಿ ಗೌಡ ಕಿಲವಳ್ಳಿ, ಹೇಮಂತ ಗೌಡ ಗೊಂಟನಾಳ, ಮಹೇಶ ಗೌಡ ಕಾನಗದ್ದೆ ಇತರರ ಉಪಸ್ಥಿತಿಯಲ್ಲಿ ನೀಡಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *