ಸುಹಾಸ್ ಮಾಳ್ಕೋಡಗೆ ” ಕಲಾಭೂಷಣ” ಪುರಸ್ಕಾರ

ಕಲೆಯಲ್ಲಿ ಪ್ರತಿಭೆ ಇದೆ. ಹಾಗಾಗಿ ಕಲಾಭೂಷಣ. ರಾಜ್ಯ ಮಟ್ಟದ ಮಕ್ಕಳ ಚಿತ್ರ ಕಲಾ ಸ್ಪರ್ಧೆಯಲ್ಲಿ ವಿಜೇತರ ಚಿತ್ರ ಗಳಿಗಿಂತ ವಿಭಿನ್ನತೆಯಿಂದ ಕೂಡಿದ ಚಿತ್ರ ರಚಿಸಿದ ಮಕ್ಕಳನ್ನು “ಕಲಾಭೂಷಣ” ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಸುಮಾರು 1800 ಮಕ್ಕಳಲ್ಲಿ ಒಂದೊಂದು ಅದ್ಭುತ ಪ್ರತಿಭೆಗಳಿದ್ದವು. ಮಕ್ಕಳ ಪ್ರತಿಭೆಗೆ ಒಂದು ವೇದಿಕೆ ಕೊಡೋಣ ಎಂದು ನಮ್ಮ ತಂಡ ಈ ಪುರಸ್ಕಾರವನ್ನು ನೀಡಲು ತಿರ್ಮಾನಿಸಿತು.

:-ನಾಮದೇವ ಕಾಗದಗಾರ, ಸಂಘಟಕರು.

ಸಿದ್ಧಾಪುರ:ತಾಲ್ಲೂಕಿನ ಕೋಲಶಿರ್ಸಿಯ ಕು.ಸುಹಾಸ್ ಎನ್. ನಾಯ್ಕ ಮಾಳ್ಕೋಡ ರಾಜ್ಯ ಮಟ್ಟದ “ಕಲಾಭೂಷಣ” ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾನೆ. ರಾಣಿಬೆನ್ನೂರಿನ ಕಾಗದ ಸಾಂಗತ್ಯ ವೇದಿಕೆ ಆಯೋಜಿಸಿದ್ದ ರಾಜ್ಯ ಮಟ್ಟದ ಮಕ್ಕಳ ಚಿತ್ರ ಕಲಾ ಸ್ಪರ್ಧೆ-2020ರಲ್ಲಿ ವಿಭಿನ್ನತೆಯಿಂದ ಕೂಡಿದ ಚಿತ್ರ ರಚಿಸಿದ 10ವಿದ್ಯಾರ್ಥಿಗಳನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ. ಈತ ಪಟ್ಟಣದ ಸಿದ್ಧಿವಿನಾಯಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ. ಸ್ಪರ್ಧೆಯಲ್ಲಿ ರಾಜ್ಯಾದ್ಯಂತ 1868 ಮಕ್ಕಳು ಚಿತ್ರ ರಚಿಸಿ ಭಾಗವಹಿಸಿದ್ದರು.
ಕೊರೊನಾ ವೈರಸ್ ನ ಭೀತಿಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ ರಾಣಿಬೆನ್ನೂರಿನ ಕಾಗದ ಸಾಂಗತ್ಯ ವೇದಿಕೆ ರಾಜ್ಯ ಮಟ್ಟದ ಮಕ್ಕಳ ಚಿತ್ರ ಕಲಾ ಸ್ಪರ್ಧೆಯನ್ನು ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 1868 ಮಕ್ಕಳು ಮೂರು ವಿಭಾಗಗಳಲ್ಲಿ ‘ಪರಿಸರ ಜಾಗೃತಿ ‘ ಚಿತ್ರ ರಚಿಸಿ ಭಾಗವಹಿಸಿದ್ದರು.

ಮಕ್ಕಳ ಚಿತ್ರವನ್ನು ವಾಟ್ಸಪ್ ಮತ್ತು ಇ-ಮೇಲ್ ಮೂಲಕ ತರಿಸಿಕೊಂಡ ವೇದಿಕೆ ಮಕ್ಕಳಲ್ಲಿಯ ಕ್ರಿಯಾಶೀಲತೆಗೆ ಅನುಗುಣವಾಗಿ ಆಯ್ಕೆಯ ಮಾನದಂಡವನ್ನು ಇಟ್ಟುಕೊಂಡು ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರ ಚಿತ್ರಗಳಿಗಿಂತ ವಿಭಿನ್ನತೆಯಿಂದ ಕೂಡಿದ ಚಿತ್ರ ರಚಿಸಿದ ಮಕ್ಕಳಿಗೆ “ಕಲಾಭೂಷಣ” ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆಯುತ್ತಿರುವ ಕು. ಸುಹಾಸ್ ಈ ಹಿಂದೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ವಿವಿಧ ಚಿತ್ರ ಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ “ಕಲಾಶ್ರೀ” ಸ್ಪರ್ಧೆಗೆ ಆಯ್ಕೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಈತನ ಈ ಸಾಧನೆಗೆ ಪಾಲಕರು ಹಾಗೂ ಶಾಲಾ ಶಿಕ್ಷಕರು ಅಭಿನಂದಿಸಿದ್ದಾರೆ.
ಕಲಾಭೂಷಣ ಪುರಸ್ಕಾರ:

ಸುಹಾಸ್ ನೊಂದಿಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ 8ನೇ ತರಗತಿಯ ರೆಹಾನ್ ಅಹ್ಮದ್, ಶಿವಮೊಗ್ಗದ 10ನೇ ತರಗತಿಯ ಸ್ನೇಹಶ್ರೀ ಎಸ್ ಜಿ., ಧಾರವಾಡದ 8ನೇ ತರಗತಿಯ ಮೋಹಿತ್ ಎಸ್ ಮತ್ತೋಡು, ಉಡುಪಿಯ 9ನೇ ತರಗತಿಯ ಬಿ. ಪಿ. ಪ್ರಾಥನಾ ಹೆಬ್ಬಾರ, 6ನೇ ತರಗತಿಯ ಆಸ್ಮಿ ಪ್ರಭು, ಚಿಕ್ಕಬಳ್ಳಾಪುರದ 9ನೇ ತರಗತಿಯ ಕಾವ್ಯಾಶ್ರೀ ವಿ., ಮಂಡ್ಯದ 7ನೇ ತರಗತಿಯ ಸೌಂದರ್ಯ ಎನ್., ಹೂವಿನಹಡಗಲಿಯ 9ನೇ ತರಗತಿಯ ಮರಿಯಪ್ಪ ಬಾವಿಮನಿ, ಹಾವೇರಿಯ 4ನೇ ತರಗತಿಯ ವಿ. ಆರ್. ಗೌತಮಿ ಇವರುಗಳನ್ನು ಆಯ್ಕೆ ಮಾಡಲಾಗಿದೆ.
———‐————-

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

1 Comment

  1. ಖುಷಿ. ಸುಹಾಸನಿಗೆ ಶುಭಾಶಯಗಳು

Leave a Reply

Your email address will not be published. Required fields are marked *