ಈ ವಾರ ಉತ್ತರಕನ್ನಡ- ಹಲಸಿನ ಕಾಯಿ ವಿವಾದ ಕಾಂಗ್ರೆಸ್ ಮುಖಂಡನಿಂದ ಕೊಲೆ ಯತ್ನ, ಯೋಜನಾ ಕಾರ್ಯಕರ್ತರ ಹಕ್ಕುಗಳ ರಕ್ಷಣೆಗೆ ಮೇ ಡೆ ಆಚರಣೆ


ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಭೀತಿ, ಮಂಗನಕಾಯಿಲೆ ಆತಂಕಗಳ ನಡುವೆ ಮೇ ಡೆ ನಡೆದು ಮಳೆಯಿಂದ ಇಳೆ ತಂಪು ಮಾಡಿದೆ.
ಕರೋನಾ ಸಂತೃಸ್ತರಿಗೆ ನೆರವು ನೀಡುವ ವಿಚಾರದಲ್ಲಿ ಪ್ರಮುಖ ಜನಪ್ರತಿನಿಧಿಗಳು,ಹಳೆಯ ರಾಜಕಾರಣಿಗಳು ಸ್ಫಂದಿಸಲಿಲ್ಲ ಎನ್ನುವ ಆರೋಪದ ನಡುವೆ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತಮ್ಮ ಕ್ಷೇತ್ರ ಮುಂಡಗೋಡು, ಯಲ್ಲಾಪುರಗಳಲ್ಲಿ ಫುಡ್‍ಕಿಟ್ ವಿತರಿಸಿದ್ದಾರೆ.
ಮೇ ಡೆ ಆಚರಣೆ-
ಜಿಲ್ಲೆಯ ಅಂಕೋಲಾ, ಸಿದ್ಧಾಪುರ ಸೇರಿದಂತೆ ಕೆಲವೆಡೆ ಮೇ1 ರ ಮೇ ಡೆ ಆಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಅಂಕೋಲಾ ಅಗಸೂರಿನಲ್ಲಿ ಶಾಂತಾರಾಮ ನಾಯಕರ ನೇತೃತ್ವದಲ್ಲಿ ಕೆಲವೇ ಜನರು ಸೇರಿ ಮೇ ಡೆ ಆಚರಣೆ ಮಾಡಿ ತಮ್ಮ ಬೇಡಿಕೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದರು.
ಸಿದ್ಧಾಪುರದಲ್ಲಿ ಯಮುನಾ ಗಾಂವ್ಕರ್ ಮೇ ಡೆ ಆಚರಣೆ ಅಂಗವಾಗಿ ಕಾರ್ಮಿಕರ ಬೇಡಿಕೆಗಳನ್ನು ತಿಳಿಸಿದರು, ಕಾರ್ಮಿಕರಿಗೆ ದಿನದ 12 ತಾಸುಗಳ ಕೆಲಸಗಳೊಂದಿಗೆ ಅನೇಕ ಯೋಜನಾ ಕಾರ್ಯಕರ್ತರು, ಗುತ್ತಿಗೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಮಾನವೀಯವಾಗಿ ವರ್ತಿಸುತ್ತಿರುವ ಬಗ್ಗೆ ದಾಖಲೆ, ಅಂಕಿಸಂಖ್ಯೆಗಳೊಂದಿಗೆ ವಿವರಿಸಿದರು.
ಲಾಕ್ ಔಟ್,ನಿಶೇಧಾಜ್ಞೆ ಹಿನ್ನೆಲೆಗಳಲ್ಲಿ ಎಲ್ಲಾ ಕಾರ್ಮಿಕರಿಗೆ ತಮ್ಮ ಮನೆಯಲ್ಲೇ ಕುಳಿತು ಮೇ ಡೆ ಆಚರಣೆ ಮಾಡಿಸಿದ ಕಾರ್ಮಿಕ ಮುಖಂಡರ ಸಾಮಾಜಿಕ ಜಾಲತಾಣದ ಲೈವ್ ಪರಿಣಾಮಕಾರಿಯಾಗಿ ಮೂಡಿಬಂತು.

ಸಿದ್ಧಾಪುರದಲ್ಲಿ ಕ್ಷೇತ್ರದ ಮಳೆಗಾಲದ ಮುಂಜಾಗೃತೆ, ಕುಡಿಯುವ ನೀರಿನ ಬವಣೆ ಹಾಗೂ ಕರೋನಾ ಮತ್ತು ಮಂಗನಕಾಯಿಲೆಗಳ ಕುರಿತ ಅಧಿಕಾರಿಗಳ ಸಭೆ ನಡೆಸಿದ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಗತ್ಯ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಲು ಆದೇಶಿಸಿದರು.
ಕೊಲೆ ಯತ್ನ-
ಕಾಂಗ್ರೆಸ್ ಮುಖಂಡ ಅಂಕೋಲಾ ಅಡ್ಲೂರಿನ ಗೋಪಾಲಕೃಷ್ಣ ನಾಯಕ ತನ್ನ ಕೆಲಸಗಾರರೊಂದಿಗೆ ಸ್ಥಳಿಯ ವ್ಯಕ್ತಿಯೊಬ್ಬರ ಮೇಲೆ ಗುಂಡಿನದಾಳಿಗೆ ಯತ್ನಿಸಿದ್ದು ಅವರೊಂದಿಗೆ ಒಟ್ಟೂ ನಾಲ್ಕು ಜನರ ಮೇಲೆ ಕೊಲೆಯತ್ನದ ಪ್ರಕರಣ ದಾಖಲಾಗಿದೆ. ಹಲಸಿನ ಹಣ್ಣು ಕಿತ್ತ ಕಾರಣಕ್ಕೆ ಉಂಟಾದ ವಿವಾದ ಕೊಲೆಯತ್ನದಲ್ಲಿ ಪರ್ಯಾವಸಾನವಾಗಿದ್ದು ಪ್ರಮುಖ 2 ಜನ ಆರೋಪಿಗಳು ಪರಾರಿಯಾಗಿದ್ದರೆ ಇನ್ನಿಬ್ಬರು ಪೊಲೀಸರಿಗೆ ಸೆರೆ ಸಿಕ್ಕಿದ್ದಾರೆ. ಗೋಪಾಲಕೃಷ್ಣ ನಾಯಕ ಸ್ಥಳಿಯರೊಬ್ಬರಿಗೆ ರಿವಾಲ್ವರ್ ನಿಂದ ಹೊಡೆದು ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಆರೋಪ ಮಾಡಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *