ಪೋಲೀಸರಿಗೆ ವಿಮೆ, ತುಟ್ಟಿಭತ್ಯೆ: ಡಿಜಿಪಿ ಪ್ರವೀಣ್ ಸೂದ್ ವಿಮೆ,ಭತ್ಯೆ ಒ.ಕೆ. ಹೋಮ್ ಗಾರ್ಡ್ ಗಳಿಗೆ ವೇತನವೇ ಇಲ್ಲ ಯಾಕೆ?

ಕೊರೋನಾವೈರಸ್ ವಿರುದ್ಧ ಹೋರಾಟದಲ್ಲಿ ತೊಡಗಿರುವ ರಾಜ್ಯದ ಪೋಲೀಸರಿಗೆ ಜೀವವಿಮೆ ಹಾಗೂ ತುಟ್ಟಿಭತ್ಯೆ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.


ಕರೋನಾ ರಗಳೆಯಲ್ಲಿ ಕೆಲವು ಸರ್ಕಾರಿ ನೌಕರರಿಗೆ ಕೆಲಸವೂ ಇಲ್ಲ ವೇತನವೂ ಇಲ್ಲ ಎನ್ನುವಂತಾಗಿದೆ.ಜನಸಾಮಾನ್ಯರು, ಸಣ್ಣ-ಪುಟ್ಟ ಕೆಲಸ, ಉದ್ದಿಮೆಗಳ ಜನರಿಗೆ ಕೆಲಸವೂ ಇಲ್ಲ, ಆದಾಯವೂ ಇಲ್ಲ ಎನ್ನುವಂತಾಗಿದೆ. ಕರೋನಾ ನೆಪದಲ್ಲಿ ಬಹುತೇಕ ಸರ್ಕಾರಿ ನೌಕರರು ರಜೆ, ವಿಶ್ರಾಂತಿ ಪಡೆಯುತ್ತಾ ಪುಕ್ಕಟ್ಟೆ ವೇತನ ಎಣಿಸುತಿದ್ದರೆ, ಹೋಮ್ ಗಾರ್ಡ್ ಸೇವೆಯಲ್ಲಿದ್ದು ಪೊಲೀಸ್ ಕೆಲಸ ಮಾಡುವ ಸಿಬ್ಬಂದಿಗಳಿಗೆ ವಿಪರೀತ ಕೆಲಸ, ವೇತನ ಇಲ್ಲ ಎನ್ನುವ ದುಸ್ಥಿತಿ ಇದೆ.

ರಾಜ್ಯದಲ್ಲಿ ಲಕ್ಷಾಂತರ ಜನರು ಹೋಮ್ ಗಾರ್ಡ್ ಸೆವೆಯಲ್ಲಿದ್ದವರು ಕಳೆದ ಕೆಲವು ವರ್ಷಗಳಿಂದ ಪೊಲೀಸ್ ಕಾರ್ಯ ನಿರ್ವಹಿಸುತಿದ್ದಾರೆ. ಮಾಡುವ ಕೆಲಸ ಒಂದೇ ಆದರೆ ಅನುಕೂಲ ಮಲತಾಯಿ ಧೋರಣೆ ಎನ್ನುವಂತಾಗಿರುವ ಈ ಸೇವಕರಿಗೆ ಕಳೆದ ಕೆಲವು ತಿಂಗಳುಗಳಿಂದ ವೇತನ ನೀಡಿಲ್ಲ.

ವರ್ಷವಿಡೀ ಕೆಲಸಮಾಡಿ ವರ್ಷಕ್ಕೆ ಎರಡ್ಮೂರು ಬಾರಿ ಕನಿಷ್ಟ ವೇತನ ಪಡೆಯುವ ಈ ಹೋಂಗಾರ್ಡ್ ಗಳ ಸ್ಥಿತಿ ಕರೋನಾ ಸಮಯದಲ್ಲಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಸರ್ಕಾರ, ಹಿರಿಯ ಅಧಿಕಾರಿಗಳು ಅನುಕೂಲ,ಸೌಲಭ್ಯ ಪ್ರಕಟಿಸುತಿದ್ದಾರಾದರೂ ಇವು ನಿಗದಿತ ಸಮಯಕ್ಕೆ ದೊರೆಯುತ್ತಿವೆಯಾ ಎನ್ನುವುದು ಯಾರಿಗೂ ಬೇಡದ, ತಿಳಿಯದ ವಿಷಯವಾಗಿದೆ.

ಕರೋನಾ ಸೇವೆಯಲ್ಲಿ ಪೊಲೀಸರಷ್ಟೇ ನಿಷ್ಠೆಯಿಂದ ದುಡಿದ ಹೋಮ್ಗಾರ್ಡ್ ಗಳ ಸ್ಥಿತಿ ಈಗ ಚಿಂತಾಜನಕ ಈ ಬಡಪಾಯಿಗಳನ್ನು ಇಲಾಖೆಯವರೂ ಕೇಳುವುದಿಲ್ಲ, ಕುಟುಂಬಸ್ಥರೂ ನಂಬುವುದಿಲ್ಲ ಎನ್ನುವಂತಾಗಿದ್ದು ಈ ಜನರ ಬವಣೆ ಬಗ್ಗೆ ಕೇಳಿ ಶೀಘ್ರ ಅನುಕೂಲ ಕಲ್ಫಿಸಲು ಅನೇಕ ನಾಗರಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸಮಾಜಮುಖಿಗೆ ಮಾಹಿತಿ ನೀಡಿದ ಜಾ,ದಳದ ಉತ್ತರ ಕನ್ನಡ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್ ಶೇಕ್ ಹಾಳದಕಟ್ಟಾ ‘ ಕತ್ತೆಯಂತೆ ದುಡಿಸಿ, ವೇತನ, ಅನುಕೂಲ ಕಲ್ಪಿಸದ ಸರ್ಕಾರದ ನೀತಿ ಸರಿಯಲ್ಲ, ಅಮಾಯಕ ಸೇವಕರಾದ ಹೋಮ್ ಗಾರ್ಡ್ ಗಳ ವಿಚಾರದಲ್ಲಿ ಅಮಾನವೀಯತೆಯಿಂದ ವರ್ತಿಸುವ ಸರ್ಕಾರ, ಸಮಾಜ ನಾಗರಿಕ ಸಮಾಜವೆನ್ನಲು ನಮಗೇ ನಾಚಿಕೆ’ ಎಂದಿದ್ದಾರೆ. ಕರೋನಾ ಮತ್ತಿತರ ಸಂದರ್ಭಗಳಲ್ಲಿ ನಿರಂತರವಾಗಿ ಸೇವಾಮನೋಭಾವದಿಂದ ದುಡಿಯುವ ಹೋಮ್ ಗಾರ್ಡ್ ಗಳಿಗೆ ನ್ಯಾಯ ಒದಗಿಸಬೇಕೆಂಬುದು ಸಮಾಜಮುಖಿಯ ಆಗ್ರಹ ಕೂಡಾ.

ಕೊರೋನಾ ವಿರುದ್ಧ ಹೋರಾಡುವ ಪೋಲೀಸರಿಗೆ ವಿಮೆ, ತುಟ್ಟಿಭತ್ಯೆ: ಡಿಜಿಪಿ ಪ್ರವೀಣ್ ಸೂದ್

ಬೆಂಗಳೂರು: ಕೊರೋನಾವೈರಸ್ ವಿರುದ್ಧ ಹೋರಾಟದಲ್ಲಿ ತೊಡಗಿರುವ ರಾಜ್ಯದ ಪೋಲೀಸರಿಗೆ ಜೀವವಿಮೆ ಹಾಗೂ ತುಟ್ಟಿಭತ್ಯೆ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.

ಕೋವಿಡ್ ವಿರುದ್ಧ ಹಗಲು ರಾತ್ರಿ ಶ್ರಮಿಸುತ್ತಿರುವ ಪೋಲೀಸರಿಗೆ 30 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದರು.

ಇದೀಗ ಪೊಲೀಸರು, ಹೋಂ ಗಾರ್ಡ್ಸ್, ಅಗ್ನಿಶಾಮಕ ಸಿಬ್ಬಂದಿ, ಸಿವಿಲ್‌ ಡಿಫೆನ್ಸ್‌, ಕಾರಾಗೃಹ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ ಹಾಗೂ ತುಟ್ಟಿಭತ್ಯೆ ಸಿಗ;ಲಿದೆ ಎಂದು ಪ್ರವೀಣ್ ಸೂದ್ ಟ್ವೀಟ್ ಮೂಲಕ ಸಿಹಿ ಸುದ್ದಿ ಕೊಟ್ಟಿದ್ದಾರೆ.

ಉ.ಕ. ಭಟ್ಕಳ ಹೊರತು ಪಡಿಸಿ ನಗರ 7 ರಿಂದ 1 (3) ಗ್ರಾಮೀಣ 7 ರಿಂದ 7 ಅಗತ್ಯ ಸೇವೆ -ಶಿವರಾಮ್ ಹೆಬ್ಬಾರ್ ಪ್ರಕಟಣೆ
ಕರೋನಾ ಹಿನ್ನೆಲೆಯಲ್ಲಿ ಮೇ 17 ರ ವರೆಗೆ ಲಾಕ್‍ಡೌನ್ ವಿಸ್ತರಣೆಯಾಗಿರುವುದರಿಂದ ಅಲ್ಲಿವರೆಗೆ ಅಥವಾ ಮುಂದಿನ ಆದೇಶದ ವರೆಗೆ ಭಟ್ಕಳ ಹೊರತುಪಡಿಸಿ ಜಿಲ್ಲೆಯಾದ್ಯಂತ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಗರದಲ್ಲಿ ಅಗತ್ಯ ಸೇವೆ ಒದಗಿಸಬಹುದು, ಮದ್ಯದಂಗಡಿಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರ ವರೆಗೆ ಹಾಗೂ ಗ್ರಾಮೀಣ ಭಾಗಗಳಲ್ಲಿ ಈ ಸೇವೆಗಳನ್ನು ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಶಿವರಾಮ್ ಹೆಬ್ಬಾರ್ ಪ್ರಕಟಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *