ಮದ್ಯಮಾರಾಟದೊಂದಿಗೆ ಎಲ್ಲವೂ ಮುಕ್ತವಾಗಿಲ್ಲ, ಮದ್ಯ,ಪಡಿತರಕ್ಕಾಗಿ ಬಂದು ಹೊಡೆತ ತಿಂದರು!

ರಾಜ್ಯದಾದ್ಯಂತ ಮದ್ಯ ಮಾರಾಟಕ್ಕೆ ಮುಕ್ತ ಅವಕಾಶ ನೀಡಿದ್ದನ್ನೇ ಪರವಾನಗಿ ಎಂದು ಭಾವಿಸಿ ಫಜೀತಿ ಮಾಡಿಕೊಂಡ ವಿದ್ಯಮಾನ ರಾಜ್ಯದ ಕೆಲವೆಡೆ ನಡೆದಿದೆ.
ಮದ್ಯ ಖರೀದಿಗಾಗಿ ಸಾರ್ವಜನಿಕರು ಮುಗಿಬಿದ್ದು ಶಾಂತಿ-ಸುವ್ಯವಸ್ಥೆಗೆ ಅಡ್ಡಿಯಾಗುವಂತಾಗಿದ್ದು ಇಂದಿನ ಮಾದ್ಯಮದ ಪ್ರಮುಖ ಸುದ್ದಿ ಇದರೊಂದಿಗೆ ರೇಷನ್ ಗಾಗಿ ಜನರು ಮುಗಿಬಿದ್ದು ಪೊಲೀಸರಿಗೆ ಫಜೀತಿ ಉಂಟುಮಾಡಿರುವುದೂ ಕೆಲವೆಡೆ ಸುದ್ದಿಯಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಮದ್ಯ ಖರೀದಿಗೆ ಅಂತಹ ನೂಕು ನುಗ್ಗಲು ಉಂಟಾಗದಿದ್ದರೂ ಪಡಿತರ ಖರೀದಿ, ಬ್ಯಾಂಕ್ ಕೆಲಸ, ಇತರ ಅಗತ್ಯಗಳಿಗಾಗಿ ನಗರಕ್ಕೆ ಬರುತ್ತಿರುವ ಸಾರ್ವಜನಿಕರು ಕರೋನಾ ಭಯಮುಕ್ತರಾದಂತೆ ವರ್ತಿಸುತಿದ್ದಾರೆ.

ಶಿರಸಿ-ಸಿದ್ಧಾಪುರಗಳಲ್ಲಿ ಜನ ಒಂದು ತಿಂಗಳ ನಂತರ ನಗರಕ್ಕೆ ಧಾವಿಸಿದ್ದು ವೈಯಕ್ತಿಕ ಅಂತರದಲ್ಲಿ ಖರೀದಿ ಭರಾಟೆ ನಡೆದಿದೆ. ಪಡಿತರ ಪಡೆಯುವ ಸಾರ್ವಜನಿಕರು ಮುಂಜಾನೆಯಿಂದಲೇ ತಮ್ಮ ವಸ್ತುಗಳ ಕ್ಯೂ ಹಿಡಿದಿದ್ದಾರೆ. ಮದ್ಯ ಮಾರಾಟ ಮುಕ್ತ ಮಾಡಿರುವುದರಿಂದ ಜನರು ಷರತ್ತು-ನಿಯಮ ಹಿಂಪಡೆದಿದ್ದಾರೆಂದು ಭಾವಿಸಿ ನಗರಕ್ಕೆ ಬರುತಿದ್ದಾರೆ. ಅನಗತ್ಯ ಓಡಾಟಕ್ಕೆ ಬಂದವರು ಹೊಡೆತ ತಿಂದು ಮರಳುತಿದ್ದಾರೆ ಎಂದು ಸರ್ಕಾರಿ ಮೂಲಗಳೇ ಮಾಹಿತಿ ನೀಡಿವೆ. ಉತ್ತರಕನ್ನಡ ಜಿಲ್ಲೆ ಸೇರಿದಂತೆ ಕೆಲವೆಡೆ ಮಾರ್ಗಸೂಚಿ ಪ್ರಕಟಿಸದೆ ಆಗಿರುವ ಈ ಗೊಂದಲದಿಂದಾಗಿ ಸಾರ್ವಜನಿಕರು, ಅಧಿಕಾರಿ ವರ್ಗಕ್ಕೂ ಕಿರಿಕಿರಿಯಾಗಿದೆ.

ಈ ವಾರ ಉತ್ತರಕನ್ನಡ,

ಹಲಸಿನ ಕಾಯಿ ವಿವಾದ ಕಾಂಗ್ರೆಸ್ ಮುಖಂಡನಿಂದ ಕೊಲೆ ಯತ್ನ, ಯೋಜನಾ ಕಾರ್ಯಕರ್ತರ ಹಕ್ಕುಗಳ ರಕ್ಷಣೆಗೆ ಮೇ ಡೆ ಆಚರಣೆ
ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಭೀತಿ, ಮಂಗನಕಾಯಿಲೆ ಆತಂಕಗಳ ನಡುವೆ ಮೇ ಡೆ ನಡೆದು ಮಳೆಯಿಂದ ಇಳೆ ತಂಪು ಮಾಡಿದೆ.
ಕರೋನಾ ಸಂತೃಸ್ತರಿಗೆ ನೆರವು ನೀಡುವ ವಿಚಾರದಲ್ಲಿ ಪ್ರಮುಖ ಜನಪ್ರತಿನಿಧಿಗಳು,ಹಳೆಯ ರಾಜಕಾರಣಿಗಳು ಸ್ಫಂದಿಸಲಿಲ್ಲ ಎನ್ನುವ ಆರೋಪದ ನಡುವೆ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತಮ್ಮ ಕ್ಷೇತ್ರ ಮುಂಡಗೋಡು, ಯಲ್ಲಾಪುರಗಳಲ್ಲಿ ಫುಡ್‍ಕಿಟ್ ವಿತರಿಸಿದ್ದಾರೆ.
ಮೇ ಡೆ ಆಚರಣೆ-
ಜಿಲ್ಲೆಯ ಅಂಕೋಲಾ, ಸಿದ್ಧಾಪುರ ಸೇರಿದಂತೆ ಕೆಲವೆಡೆ ಮೇ1 ರ ಮೇ ಡೆ ಆಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಅಂಕೋಲಾ ಅಗಸೂರಿನಲ್ಲಿ ಶಾಂತಾರಾಮ ನಾಯಕರ ನೇತೃತ್ವದಲ್ಲಿ ಕೆಲವೇ ಜನರು ಸೇರಿ ಮೇ ಡೆ ಆಚರಣೆ ಮಾಡಿ ತಮ್ಮ ಬೇಡಿಕೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದರು.
ಸಿದ್ಧಾಪುರದಲ್ಲಿ ಯಮುನಾ ಗಾಂವ್ಕರ್ ಮೇ ಡೆ ಆಚರಣೆ ಅಂಗವಾಗಿ ಕಾರ್ಮಿಕರ ಬೇಡಿಕೆಗಳನ್ನು ತಿಳಿಸಿದರು, ಕಾರ್ಮಿಕರಿಗೆ ದಿನದ 12 ತಾಸುಗಳ ಕೆಲಸಗಳೊಂದಿಗೆ ಅನೇಕ ಯೋಜನಾ ಕಾರ್ಯಕರ್ತರು, ಗುತ್ತಿಗೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಮಾನವೀಯವಾಗಿ ವರ್ತಿಸುತ್ತಿರುವ ಬಗ್ಗೆ ದಾಖಲೆ, ಅಂಕಿಸಂಖ್ಯೆಗಳೊಂದಿಗೆ ವಿವರಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *