ಮದ್ಯಮಾರಾಟದೊಂದಿಗೆ ಎಲ್ಲವೂ ಮುಕ್ತವಾಗಿಲ್ಲ, ಮದ್ಯ,ಪಡಿತರಕ್ಕಾಗಿ ಬಂದು ಹೊಡೆತ ತಿಂದರು!

ರಾಜ್ಯದಾದ್ಯಂತ ಮದ್ಯ ಮಾರಾಟಕ್ಕೆ ಮುಕ್ತ ಅವಕಾಶ ನೀಡಿದ್ದನ್ನೇ ಪರವಾನಗಿ ಎಂದು ಭಾವಿಸಿ ಫಜೀತಿ ಮಾಡಿಕೊಂಡ ವಿದ್ಯಮಾನ ರಾಜ್ಯದ ಕೆಲವೆಡೆ ನಡೆದಿದೆ.
ಮದ್ಯ ಖರೀದಿಗಾಗಿ ಸಾರ್ವಜನಿಕರು ಮುಗಿಬಿದ್ದು ಶಾಂತಿ-ಸುವ್ಯವಸ್ಥೆಗೆ ಅಡ್ಡಿಯಾಗುವಂತಾಗಿದ್ದು ಇಂದಿನ ಮಾದ್ಯಮದ ಪ್ರಮುಖ ಸುದ್ದಿ ಇದರೊಂದಿಗೆ ರೇಷನ್ ಗಾಗಿ ಜನರು ಮುಗಿಬಿದ್ದು ಪೊಲೀಸರಿಗೆ ಫಜೀತಿ ಉಂಟುಮಾಡಿರುವುದೂ ಕೆಲವೆಡೆ ಸುದ್ದಿಯಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಮದ್ಯ ಖರೀದಿಗೆ ಅಂತಹ ನೂಕು ನುಗ್ಗಲು ಉಂಟಾಗದಿದ್ದರೂ ಪಡಿತರ ಖರೀದಿ, ಬ್ಯಾಂಕ್ ಕೆಲಸ, ಇತರ ಅಗತ್ಯಗಳಿಗಾಗಿ ನಗರಕ್ಕೆ ಬರುತ್ತಿರುವ ಸಾರ್ವಜನಿಕರು ಕರೋನಾ ಭಯಮುಕ್ತರಾದಂತೆ ವರ್ತಿಸುತಿದ್ದಾರೆ.

ಶಿರಸಿ-ಸಿದ್ಧಾಪುರಗಳಲ್ಲಿ ಜನ ಒಂದು ತಿಂಗಳ ನಂತರ ನಗರಕ್ಕೆ ಧಾವಿಸಿದ್ದು ವೈಯಕ್ತಿಕ ಅಂತರದಲ್ಲಿ ಖರೀದಿ ಭರಾಟೆ ನಡೆದಿದೆ. ಪಡಿತರ ಪಡೆಯುವ ಸಾರ್ವಜನಿಕರು ಮುಂಜಾನೆಯಿಂದಲೇ ತಮ್ಮ ವಸ್ತುಗಳ ಕ್ಯೂ ಹಿಡಿದಿದ್ದಾರೆ. ಮದ್ಯ ಮಾರಾಟ ಮುಕ್ತ ಮಾಡಿರುವುದರಿಂದ ಜನರು ಷರತ್ತು-ನಿಯಮ ಹಿಂಪಡೆದಿದ್ದಾರೆಂದು ಭಾವಿಸಿ ನಗರಕ್ಕೆ ಬರುತಿದ್ದಾರೆ. ಅನಗತ್ಯ ಓಡಾಟಕ್ಕೆ ಬಂದವರು ಹೊಡೆತ ತಿಂದು ಮರಳುತಿದ್ದಾರೆ ಎಂದು ಸರ್ಕಾರಿ ಮೂಲಗಳೇ ಮಾಹಿತಿ ನೀಡಿವೆ. ಉತ್ತರಕನ್ನಡ ಜಿಲ್ಲೆ ಸೇರಿದಂತೆ ಕೆಲವೆಡೆ ಮಾರ್ಗಸೂಚಿ ಪ್ರಕಟಿಸದೆ ಆಗಿರುವ ಈ ಗೊಂದಲದಿಂದಾಗಿ ಸಾರ್ವಜನಿಕರು, ಅಧಿಕಾರಿ ವರ್ಗಕ್ಕೂ ಕಿರಿಕಿರಿಯಾಗಿದೆ.

ಈ ವಾರ ಉತ್ತರಕನ್ನಡ,

ಹಲಸಿನ ಕಾಯಿ ವಿವಾದ ಕಾಂಗ್ರೆಸ್ ಮುಖಂಡನಿಂದ ಕೊಲೆ ಯತ್ನ, ಯೋಜನಾ ಕಾರ್ಯಕರ್ತರ ಹಕ್ಕುಗಳ ರಕ್ಷಣೆಗೆ ಮೇ ಡೆ ಆಚರಣೆ
ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಭೀತಿ, ಮಂಗನಕಾಯಿಲೆ ಆತಂಕಗಳ ನಡುವೆ ಮೇ ಡೆ ನಡೆದು ಮಳೆಯಿಂದ ಇಳೆ ತಂಪು ಮಾಡಿದೆ.
ಕರೋನಾ ಸಂತೃಸ್ತರಿಗೆ ನೆರವು ನೀಡುವ ವಿಚಾರದಲ್ಲಿ ಪ್ರಮುಖ ಜನಪ್ರತಿನಿಧಿಗಳು,ಹಳೆಯ ರಾಜಕಾರಣಿಗಳು ಸ್ಫಂದಿಸಲಿಲ್ಲ ಎನ್ನುವ ಆರೋಪದ ನಡುವೆ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತಮ್ಮ ಕ್ಷೇತ್ರ ಮುಂಡಗೋಡು, ಯಲ್ಲಾಪುರಗಳಲ್ಲಿ ಫುಡ್‍ಕಿಟ್ ವಿತರಿಸಿದ್ದಾರೆ.
ಮೇ ಡೆ ಆಚರಣೆ-
ಜಿಲ್ಲೆಯ ಅಂಕೋಲಾ, ಸಿದ್ಧಾಪುರ ಸೇರಿದಂತೆ ಕೆಲವೆಡೆ ಮೇ1 ರ ಮೇ ಡೆ ಆಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಅಂಕೋಲಾ ಅಗಸೂರಿನಲ್ಲಿ ಶಾಂತಾರಾಮ ನಾಯಕರ ನೇತೃತ್ವದಲ್ಲಿ ಕೆಲವೇ ಜನರು ಸೇರಿ ಮೇ ಡೆ ಆಚರಣೆ ಮಾಡಿ ತಮ್ಮ ಬೇಡಿಕೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದರು.
ಸಿದ್ಧಾಪುರದಲ್ಲಿ ಯಮುನಾ ಗಾಂವ್ಕರ್ ಮೇ ಡೆ ಆಚರಣೆ ಅಂಗವಾಗಿ ಕಾರ್ಮಿಕರ ಬೇಡಿಕೆಗಳನ್ನು ತಿಳಿಸಿದರು, ಕಾರ್ಮಿಕರಿಗೆ ದಿನದ 12 ತಾಸುಗಳ ಕೆಲಸಗಳೊಂದಿಗೆ ಅನೇಕ ಯೋಜನಾ ಕಾರ್ಯಕರ್ತರು, ಗುತ್ತಿಗೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಮಾನವೀಯವಾಗಿ ವರ್ತಿಸುತ್ತಿರುವ ಬಗ್ಗೆ ದಾಖಲೆ, ಅಂಕಿಸಂಖ್ಯೆಗಳೊಂದಿಗೆ ವಿವರಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *