ಉ.ಕ. ಭಟ್ಕಳ ಹೊರತು ಪಡಿಸಿ ನಗರ 7 ರಿಂದ 1 (3) ಗ್ರಾಮೀಣ 7 ರಿಂದ 7 ಅಗತ್ಯ ಸೇವೆ -ಶಿವರಾಮ್ ಹೆಬ್ಬಾರ್ ಪ್ರಕಟಣೆ

ಕರೋನಾ ಹಿನ್ನೆಲೆಯಲ್ಲಿ ಮೇ 17 ರ ವರೆಗೆ ಲಾಕ್‍ಡೌನ್ ವಿಸ್ತರಣೆಯಾಗಿರುವುದರಿಂದ ಅಲ್ಲಿವರೆಗೆ ಅಥವಾ ಮುಂದಿನ ಆದೇಶದ ವರೆಗೆ ಭಟ್ಕಳ ಹೊರತುಪಡಿಸಿ ಜಿಲ್ಲೆಯಾದ್ಯಂತ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಗರದಲ್ಲಿ ಅಗತ್ಯ ಸೇವೆ ಒದಗಿಸಬಹುದು, ಮದ್ಯದಂಗಡಿಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರ ವರೆಗೆ ಹಾಗೂ ಗ್ರಾಮೀಣ ಭಾಗಗಳಲ್ಲಿ ಈ ಸೇವೆಗಳನ್ನು ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಪ್ರಕಟಿಸಿದರು.
ಕಾರವಾರದಲ್ಲಿ ಮಾಧ್ಯಮಪ್ರತಿನಿಧಿಗಳಿಗೆ ಈ ಮಾಹಿತಿ ನೀಡಿದ ಅವರು ಕರೋನಾ ಭಯ, ಲಾಕ್‍ಡೌನ್ ನಿಯಮಗಳಿಂದ ಮುಕ್ತವಾಗುವುದು ಕಷ್ಟ ಪರಿಸ್ಥಿತಿ ಜನರ ಅನುಕೂಲತೆ, ಎಲ್ಲಾ ಅಂಶಗಳನ್ನು ಪರಿಗಣಿಸಿ ಕೆಲವು ರಿಯಾಯತಿ, ವಿನಾಯಿತಿಗಳನ್ನು ನೀಡಿದ್ದೇವೆ ಅವಕ್ಕೂ ನಿಯಮ,ನಿಬಂಧನೆಗಳ ಕಡಿವಾಣ ಇದ್ದೇ ಇದೆ ಎಂದರು. ಅಗತ್ಯ, ಅನಿವಾರ್ಯವಾದವರಿಗೆ ಜಿಲ್ಲಾಡಳಿತ ವಿನಾಯಿತಿ ನೀಡಲಿದೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಸೇರಿದಂತೆ ಅನೇಕ ನಿಯಮ-ನಿಬಂಧನೆಗಳಿಗೊಳಪಟ್ಟು ಅವಕಾಶ, ಅನುಕೂಲಗಳನ್ನು ಪಡೆಯಬೇಕು ಎಂದು ವಿನಂತಿಸಿದರು.

ಮದ್ಯಮಾರಾಟದೊಂದಿಗೆ ಎಲ್ಲವೂ ಮುಕ್ತವಾಗಿಲ್ಲ, ಮದ್ಯ,ಪಡಿತರಕ್ಕಾಗಿ ಬಂದು ಹೊಡೆತ ತಿಂದರು!

ರಾಜ್ಯದಾದ್ಯಂತ ಮದ್ಯ ಮಾರಾಟಕ್ಕೆ ಮುಕ್ತ ಅವಕಾಶ ನೀಡಿದ್ದನ್ನೇ ಪರವಾನಗಿ ಎಂದು ಭಾವಿಸಿ ಫಜೀತಿ ಮಾಡಿಕೊಂಡ ವಿದ್ಯಮಾನ ರಾಜ್ಯದ ಕೆಲವೆಡೆ ನಡೆದಿದೆ.
ಮದ್ಯ ಖರೀದಿಗಾಗಿ ಸಾರ್ವಜನಿಕರು ಮುಗಿಬಿದ್ದು ಶಾಂತಿ-ಸುವ್ಯವಸ್ಥೆಗೆ ಅಡ್ಡಿಯಾಗುವಂತಾಗಿದ್ದು ಇಂದಿನ ಮಾದ್ಯಮದ ಪ್ರಮುಖ ಸುದ್ದಿ ಇದರೊಂದಿಗೆ ರೇಷನ್ ಗಾಗಿ ಜನರು ಮುಗಿಬಿದ್ದು ಪೊಲೀಸರಿಗೆ ಫಜೀತಿ ಉಂಟುಮಾಡಿರುವುದೂ ಕೆಲವೆಡೆ ಸುದ್ದಿಯಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಮದ್ಯ ಖರೀದಿಗೆ ಅಂತಾ ನೂಗುನುಗ್ಗಲು ಉಂಟಾಗದಿದ್ದರೂ ಪಡಿತರ ಖರೀದಿ, ಬ್ಯಾಂಕ್ ಕೆಲಸ, ಇತರ ಅಗತ್ಯಗಳಿಗಾಗಿ ನಗರಕ್ಕೆ ಬರುತ್ತಿರುವ ಸಾರ್ವಜನಿಕರು ಕರೋನಾ ಭಯಮುಕ್ತರಾದಂತೆ ವರ್ತಿಸುತಿದ್ದಾರೆ. ಶಿರಸಿ-ಸಿದ್ಧಾಪುರಗಳಲ್ಲಿ ಜನ ಒಂದು ತಿಂಗಳ ನಂತರ ನಗರಕ್ಕೆ ಧಾವಿಸಿದ್ದು ವೈಯಕ್ತಿಕ ಅಂತರದಲ್ಲಿ ಖರೀದಿ ಭರಾಟೆ ನಡೆದಿದೆ. ಪಡಿತರ ಪಡೆಯುವ ಸಾರ್ವಜನಿಕರು ಮುಂಜಾನೆಯಿಂದಲೇ ತಮ್ಮ ವಸ್ತುಗಳ ಕ್ಯೂ ಹಿಡಿದಿದ್ದಾರೆ. ಮದ್ಯ ಮಾರಾಟ ಮುಕ್ತ ಮಾಡಿರುವುದರಿಂದ ಜನರು ಷರತ್ತು-ನಿಯಮ ಹಿಂಪಡೆದಿದ್ದಾರೆಂದು ಭಾವಿಸಿ ನಗರಕ್ಕೆ ಬರುತಿದ್ದಾರೆ. ಅನಗತ್ಯ ಓಡಾಟಕ್ಕೆ ಬಂದವರು ಹೊಡೆತ ತಿಂದು ಮರಳುತಿದ್ದಾರೆ ಎಂದು ಸರ್ಕಾರಿ ಮೂಲಗಳೇ ಮಾಹಿತಿ ನೀಡಿವೆ. ಉತ್ತರಕನ್ನಡ ಜಿಲ್ಲೆ ಸೇರಿದಂತೆ ಕೆಲವೆಡೆ ಮಾರ್ಗಸೂಚಿ ಪ್ರಕಟಿಸದೆ ಆಗಿರುವ ಈ ಗೊಂದಲದಿಂದಾಗಿ ಸಾರ್ವಜನಿಕರು, ಅಧಿಕಾರಿ ವರ್ಗಕ್ಕೂ ಕಿರಿಕಿರಿಯಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *