ಕೊರೋನಾ : ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯಸರ್ಕಾರ

ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು,ಕ್ವಾರಂಟೈನ್‌ ಸೇರಿದಂತೆ ಹಲವು  ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಮಾತ್ರ ಬರುವುದಕ್ಕೆ ಅವಕಾಶ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. 

CM_BSY_Meeting_witth_Minister

ಬೆಂಗಳೂರು: ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು,ಕ್ವಾರಂಟೈನ್‌ ಸೇರಿದಂತೆ ಹಲವು  ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಮಾತ್ರ ಬರುವುದಕ್ಕೆ ಅವಕಾಶ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. 

ಇನ್ಮುಂದೆ ಮೃತದೇಹಗಳನ್ನು ರಾಜ್ಯದಲ್ಲಿ ಸಾಗಿಸಲು ಅವಕಾಶ ಇರುವುದಿಲ್ಲ, ಹೊರ ರಾಜ್ಯಗಳಲ್ಲಿ ಮೃತಪಟ್ಟ ವರ ದೇಹಗಳನ್ನೂ ರಾಜ್ಯಕ್ಕೆ ತರುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.ಜೊತೆಗೆ ಬೇರೆ ಬೇರೆ ದೇಶ ಹಾಗೂ ರಾಜ್ಯಗಳಿಂದ ಕನ್ನಡಿಗರು ವಾಪಸ್ ಬರುತ್ತಿದ್ದು ಅವರನ್ನು ಯಾವ ರೀತಿ ಕ್ವಾರಂಟೈನ್ ಮಾಡಬೇಕು ಅನ್ನೋ ಬಗ್ಗೆಯೂ ಸರ್ಕಾರ ಸೂಚಿಸಿದೆ. 

ಕೇಂದ್ರ ಸರ್ಕಾರದ ಒಂದೇ ಮಾತರಂ ಹಾಗೂ ಬೇರೆ ರಾಜ್ಯಗಳಿಂದ ಬರಲು ಮೂರನೇ ಹಂತದ ಲಾಕ್‌ಡೌನ್ ಸಂದರ್ಭದಲ್ಲಿ ಅವಕಾಶ ಕೊಡಲಾಗಿದೆ. ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬರುವವರಿಗೆ,ಅನಿವಾರ್ಯ ಸಂದರ್ಭಗಳಲ್ಲಿ ಮೃತದೇಹಗಳನ್ನು ತರುವವರಿಗೆ ಹಲವು ಷರತ್ತುಗಳನ್ನು ಹಾಕಲಾಗಿದೆ. ಷರತ್ತುಗಳನ್ನು ಪಾಲಿಸಲು ಒಪ್ಪಿಕೊಳ್ಳುವವರಿಗೆ ಮಾತ್ರ ಅನುಮತಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಆನ್‌ಲೈನ್‌ ನೋಂದಣಿ ಖಡ್ಡಾಯ : ಹೊರ ರಾಜ್ಯದಿಂದ ರಾಜ್ಯಕ್ಕೆ ಬರುವ ಕನ್ನಡಿಗರು‌ ನಿರ್ದಿಷ್ಟ ವ್ಯವಸ್ಥೆಯಡಿ ಬರುವಂತೆ ಮಾಡಬೇಕು. ಹೀಗಾಗಿ ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಲೇಬೇಕು. ರಾಜ್ಯಕ್ಕೆ ಬರುವವರು‌ ಕಡ್ಡಾಯವಾಗಿ ರಾಜ್ಯದಿಂದ ಅನಿರ್ವಾಯವಾಗಿ ಹೊರ ಹೋಗಿ ಸಿಕ್ಕಿಹಾಕಿ ಕೊಂಡಿರುವವರಾಗಿರಬೇಕು. ಎಲ್ಲಿಗೆ ಬರುತ್ತೇವೆ ಮತ್ತು ಎಂದು ಬರುತ್ತೇವೆ ಅನ್ನೋದನ್ನ ನೋಂದಣಿಯಲ್ಲಿ ತಿಳಿಸಬೇಕು ಎಂದು ಸೂಚಿಸಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *