ಕರ್ನಾಟಕ ಕೃಷಿ ಉತ್ಫನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮ ತಿದ್ದುಪಡಿ ಸುಗ್ರಿವಾಜ್ಞೆಗೆ ವಿರೋಧ ಮನವಿ ಅರ್ಪಣೆ

ರಾಜ್ಯದ 1966 ರ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮದ ಕಲಂ 8 ಹಾಗೂ ಇತರ ವಿಧಿಗಳ ತಿದ್ದುಪಡಿಯ ವಿಧೇಯಕವನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ತಿದ್ದುಪಡಿಗೆ ರಾಜ್ಯಮಟ್ಟದಿಂದ ತಾಲೂಕಾ ಮಟ್ಟದ ವರೆಗೆ ವಿರೋಧಗಳು ಪ್ರಾರಂಭವಾಗಿವೆ.

ರೈತರ ಹಿತ ನಿರ್ಲಕ್ಷಿಸಿ, ಖಾಸಗಿ ಕಂಪನಿಗಳಿಗೆ ಅನುಕೂಲ ಮಾಡುವ ಈ ತಿದ್ದುಪಡಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದು ಈ ಇದ್ದುಪಡಿ ಅಧಿನಿಯಮದ ಸುಗ್ರಿವಾಜ್ಞೆ
ಜಾರಿಯಾದರೆ ರಾಜ್ಯದಾದ್ಯಂತ ಪ್ರತಿಭಟನೆ ಮಾಡುವದಾಗಿ ಎಚ್ಚರಿಸಿದ್ದಾರೆ.
ಈ ಬಗ್ಗೆ ಎ.ಪಿ.ಎಂ.ಸಿ. ಅಧಿನಿಯಮ 1966 ಕಲಂ ಎಂಟು ಹಾಗೂ ಇತರ ವಿಧಿಗಳ ತಿದ್ದುಪಡಿ ಸುಗ್ರಿವಾಜ್ಞೆ ವಿರೋಧಿಸಿ ಇಂದು ಸಿದ್ಧಾಪುರದಲ್ಲಿ ತಹಸಿಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು. ಕಾರ್ಪೋರೇಟ್ ಕಂಪನಿಗಳಿಗೆ ಪೂರಕ ಮತ್ತು ರೈತರಿಗೆ ಮಾರಕವಾಗುವ ಈ ಸುಗ್ರಿವಾಜ್ಞೆ ಜಾರಿ ಮಾಡಿ ರೈತರಿಗೆ ಅನ್ಯಾಯ ಮಾಡದಂತೆ ಮುಖ್ಯಮಂತ್ರಿಗಳು ಮತ್ತು ಸರ್ಕಾರಕ್ಕೆ ಒತ್ತಾಯ ಮಾಡಲಾಯಿತು. ಈ ಮನವಿ ಅರ್ಪಣೆ ವೇಳೆ ಎ.ಪಿ.ಎಂ.ಸಿ.ಅಧ್ಯಕ್ಷ ಕೇ.ಜಿ.ನಾಗರಾಜ್, ಸದಸ್ಯ ವಾಸುದೇವ ನಾಯ್ಕ, ವಕೀಲ ಆರ್.ಎಂ. ಹೆಗಡೆ, ಅಣ್ಣಪ್ಪ ನಾಯ್ಕ, ಕೆ.ಆರ್. ವಿನಾಯಕ, ಕೆ.ಟಿ. ಹೊನ್ನೆಗುಂಡಿ,ಲೋಕೇಶ್ ನಾಯ್ಕ ಉಪಸ್ಥಿತರಿದ್ದರು.

ಸಿದ್ದಾಪುರ; ದೇಶಾದ್ಯಂತಕೊರೋನಾತನ್ನ ಭೀಕರತೆಯನ್ನು ಸೃಷ್ಟಿಸಿದ್ದು, ದೇಶದ ಲಾಕ್‍ಡೌನ್ ಪ್ರಯುಕ್ತ ಸ್ವಯಂಉದ್ಯೋಗ ನಡೆಸುವವರ ಸ್ಥಿತಿ ಚಿಂತಾಜನಕವಾಗಿದೆ.ಅದರಂತೆತಾಲೂಕಿನಲ್ಲಿ ಹೊಲಿಗೆ ವೃತ್ತಿಯನ್ನು ನಂಬಿರುವ ಟೈಲರಗಳು ಲಾಕ್‍ಡೌನ್ ನಿಂದಾಗಿಜೀವನ ನಡೆಸಲಾಗದಚಿಂತಾಜನಕ ಸ್ಥಿತಿಗೊಳಗಾಗಿದ್ದಾರೆ. ಪಟ್ಟಣದಲ್ಲಿ ಅಂಗಡಿಗಳನ್ನು ಹೊಂದಿರುವ 150ಕ್ಕೂ ಅಧಿಕ ಕುಟುಂಬಗಳುಹೊಲಿಗೆ ವೃತ್ತಿಯನ್ನೇ ನಂಬಿಕೊಂಡಿದ್ದಾರೆ.ತಾಲೂಕಿನಗ್ರಾಮೀಣ ಭಾಗದಲ್ಲಿಯೂ ಸಹ ಅನೇಕ ಕುಟುಂಬಗಳು ಹೊಲಿಗೆ ವೃತ್ತಿಯನ್ನು ಅವಲಂಬಿಸಿವೆ.ಲಾಕ್‍ಡೌನ್ ನಿಂದಉದ್ಯೊಗವಿಲ್ಲದೆಈ ಎಲ್ಲಾ ಕುಟುಂಬಗಳಜೀವನ ನಿರ್ವಹಣೆಕಷ್ಟವಾಗಿದೆ. ಹೀಗಾದರೆ ಹೊಲಿಗೆ ವೃತ್ತಿಯನ್ನು ಅವಲಂಬಿಸಿರುವ ನಾವುಗಳು ಎಲ್ಲಿ ಹೊಗಬೇಕು.ಸರಕಾರ ವಿವಿಧ ವೃತ್ತಿ ನಡೆಸುವವರಿಗೆ ಸಹಾಯಧನ ನೀಡಿದಂತೆ ನಮ್ಮ ವೃತ್ತಿ ಬಾಂಧವರಿಗೂ ಸಹಾಯ ಹಸ್ತ ನೀಡಬೇಕು. ಎನ್ನುವ ಆಗ್ರಹ ಮಾಡಲಾಗಿದೆ. ಬಿಪಿಎಲ್‍ಕಾರ್ಡುಹೊಂದಿದವರಿಗಾದರೂ ಸರ್ಕಾರ ಸಹಾಯ ಹಸ್ತ ನೀಡಬೇಕೆಂದು ಸಿದ್ದಾಪುರ ತಾಲೂಕಾಟೈಲರ್ ಅಸೋಶಿಯನ್‍ಅಧ್ಯಕ್ಷ ಹಾಗೂ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಕ್ಕೆ ಹಾಗೂಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದಾರೆ.

ಇದು ಕಡೇ ಎಚ್ಚರಿಕೆ ಇಲ್ಲವಾದರೆ ಕಠಿಣ ಹೋರಾಟ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *