ಕರ್ನಾಟಕ ಕೃಷಿ ಉತ್ಫನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮ ತಿದ್ದುಪಡಿ ಸುಗ್ರಿವಾಜ್ಞೆಗೆ ವಿರೋಧ ಮನವಿ ಅರ್ಪಣೆ

ರಾಜ್ಯದ 1966 ರ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮದ ಕಲಂ 8 ಹಾಗೂ ಇತರ ವಿಧಿಗಳ ತಿದ್ದುಪಡಿಯ ವಿಧೇಯಕವನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ತಿದ್ದುಪಡಿಗೆ ರಾಜ್ಯಮಟ್ಟದಿಂದ ತಾಲೂಕಾ ಮಟ್ಟದ ವರೆಗೆ ವಿರೋಧಗಳು ಪ್ರಾರಂಭವಾಗಿವೆ.

ರೈತರ ಹಿತ ನಿರ್ಲಕ್ಷಿಸಿ, ಖಾಸಗಿ ಕಂಪನಿಗಳಿಗೆ ಅನುಕೂಲ ಮಾಡುವ ಈ ತಿದ್ದುಪಡಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದು ಈ ಇದ್ದುಪಡಿ ಅಧಿನಿಯಮದ ಸುಗ್ರಿವಾಜ್ಞೆ
ಜಾರಿಯಾದರೆ ರಾಜ್ಯದಾದ್ಯಂತ ಪ್ರತಿಭಟನೆ ಮಾಡುವದಾಗಿ ಎಚ್ಚರಿಸಿದ್ದಾರೆ.
ಈ ಬಗ್ಗೆ ಎ.ಪಿ.ಎಂ.ಸಿ. ಅಧಿನಿಯಮ 1966 ಕಲಂ ಎಂಟು ಹಾಗೂ ಇತರ ವಿಧಿಗಳ ತಿದ್ದುಪಡಿ ಸುಗ್ರಿವಾಜ್ಞೆ ವಿರೋಧಿಸಿ ಇಂದು ಸಿದ್ಧಾಪುರದಲ್ಲಿ ತಹಸಿಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು. ಕಾರ್ಪೋರೇಟ್ ಕಂಪನಿಗಳಿಗೆ ಪೂರಕ ಮತ್ತು ರೈತರಿಗೆ ಮಾರಕವಾಗುವ ಈ ಸುಗ್ರಿವಾಜ್ಞೆ ಜಾರಿ ಮಾಡಿ ರೈತರಿಗೆ ಅನ್ಯಾಯ ಮಾಡದಂತೆ ಮುಖ್ಯಮಂತ್ರಿಗಳು ಮತ್ತು ಸರ್ಕಾರಕ್ಕೆ ಒತ್ತಾಯ ಮಾಡಲಾಯಿತು. ಈ ಮನವಿ ಅರ್ಪಣೆ ವೇಳೆ ಎ.ಪಿ.ಎಂ.ಸಿ.ಅಧ್ಯಕ್ಷ ಕೇ.ಜಿ.ನಾಗರಾಜ್, ಸದಸ್ಯ ವಾಸುದೇವ ನಾಯ್ಕ, ವಕೀಲ ಆರ್.ಎಂ. ಹೆಗಡೆ, ಅಣ್ಣಪ್ಪ ನಾಯ್ಕ, ಕೆ.ಆರ್. ವಿನಾಯಕ, ಕೆ.ಟಿ. ಹೊನ್ನೆಗುಂಡಿ,ಲೋಕೇಶ್ ನಾಯ್ಕ ಉಪಸ್ಥಿತರಿದ್ದರು.

ಸಿದ್ದಾಪುರ; ದೇಶಾದ್ಯಂತಕೊರೋನಾತನ್ನ ಭೀಕರತೆಯನ್ನು ಸೃಷ್ಟಿಸಿದ್ದು, ದೇಶದ ಲಾಕ್‍ಡೌನ್ ಪ್ರಯುಕ್ತ ಸ್ವಯಂಉದ್ಯೋಗ ನಡೆಸುವವರ ಸ್ಥಿತಿ ಚಿಂತಾಜನಕವಾಗಿದೆ.ಅದರಂತೆತಾಲೂಕಿನಲ್ಲಿ ಹೊಲಿಗೆ ವೃತ್ತಿಯನ್ನು ನಂಬಿರುವ ಟೈಲರಗಳು ಲಾಕ್‍ಡೌನ್ ನಿಂದಾಗಿಜೀವನ ನಡೆಸಲಾಗದಚಿಂತಾಜನಕ ಸ್ಥಿತಿಗೊಳಗಾಗಿದ್ದಾರೆ. ಪಟ್ಟಣದಲ್ಲಿ ಅಂಗಡಿಗಳನ್ನು ಹೊಂದಿರುವ 150ಕ್ಕೂ ಅಧಿಕ ಕುಟುಂಬಗಳುಹೊಲಿಗೆ ವೃತ್ತಿಯನ್ನೇ ನಂಬಿಕೊಂಡಿದ್ದಾರೆ.ತಾಲೂಕಿನಗ್ರಾಮೀಣ ಭಾಗದಲ್ಲಿಯೂ ಸಹ ಅನೇಕ ಕುಟುಂಬಗಳು ಹೊಲಿಗೆ ವೃತ್ತಿಯನ್ನು ಅವಲಂಬಿಸಿವೆ.ಲಾಕ್‍ಡೌನ್ ನಿಂದಉದ್ಯೊಗವಿಲ್ಲದೆಈ ಎಲ್ಲಾ ಕುಟುಂಬಗಳಜೀವನ ನಿರ್ವಹಣೆಕಷ್ಟವಾಗಿದೆ. ಹೀಗಾದರೆ ಹೊಲಿಗೆ ವೃತ್ತಿಯನ್ನು ಅವಲಂಬಿಸಿರುವ ನಾವುಗಳು ಎಲ್ಲಿ ಹೊಗಬೇಕು.ಸರಕಾರ ವಿವಿಧ ವೃತ್ತಿ ನಡೆಸುವವರಿಗೆ ಸಹಾಯಧನ ನೀಡಿದಂತೆ ನಮ್ಮ ವೃತ್ತಿ ಬಾಂಧವರಿಗೂ ಸಹಾಯ ಹಸ್ತ ನೀಡಬೇಕು. ಎನ್ನುವ ಆಗ್ರಹ ಮಾಡಲಾಗಿದೆ. ಬಿಪಿಎಲ್‍ಕಾರ್ಡುಹೊಂದಿದವರಿಗಾದರೂ ಸರ್ಕಾರ ಸಹಾಯ ಹಸ್ತ ನೀಡಬೇಕೆಂದು ಸಿದ್ದಾಪುರ ತಾಲೂಕಾಟೈಲರ್ ಅಸೋಶಿಯನ್‍ಅಧ್ಯಕ್ಷ ಹಾಗೂ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಕ್ಕೆ ಹಾಗೂಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದಾರೆ.

ಇದು ಕಡೇ ಎಚ್ಚರಿಕೆ ಇಲ್ಲವಾದರೆ ಕಠಿಣ ಹೋರಾಟ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *