ದುಬೈಯಿಂದ ಮಂಗಳೂರಿಗೆ ವಿಮಾನದಲ್ಲಿ ಬಂದಿಳಿದವರಲ್ಲಿ 20 ಮಂದಿಗೆ ಕೊರೋನಾ ಸೋಂಕು!

ಈ ಸೋಕಿತರಲ್ಲಿ ಒಬ್ಬರು ಕಾರವಾರ ಮೂಲದ ದುಬೈ ನಿವಾಸಿ, ಇವರ ಪತ್ನಿ ಮತ್ತು ಮಗು ಕೂಡಾ ಕಾರಂಟೈನ್ ಆಗಿದ್ದಾರೆ ಎನ್ನಲಾಗುತ್ತಿದೆ.

ಮಂಗಳೂರು: ಎರಡು ದಿನಗಳ ಹಿಂದೆ ಮಂಗಳೂರಿಗೆ ದುಬೈಯಿಂದ ಬಂದಿಳಿದ 20 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇನ್ನೂ 9 ಮಂದಿಯ ಶಂಕೆಯಿದ್ದು ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ಆರೋಗ್ಯ ಇಲಾಖೆಯ ನಂಬಲರ್ಹ ಮೂಲಗಳ ಪ್ರಕಾರ, ನಿನ್ನೆ ದುಬೈಯಿಂದ ಬಂದವರ ಗಂಟಲು ದ್ರವ ಪರೀಕ್ಷೆ ವರದಿ ಸಿಕ್ಕಿದ್ದು ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ರಾಮಚಂದ್ರ ಬಾಯಾರಿ ಅವರನ್ನು ಸಂಪರ್ಕಿಸಿ ಕೇಳಿದಾಗ ಅವರು ಈ ವಿಷಯವನ್ನು ನಿರಾಕರಿಸಲೂ ಇಲ್ಲ, ದೃಢಪಡಿಸಲೂ ಇಲ್ಲ.

ಕೊರೋನಾ ಸೋಂಕು ಕಾಣಿಸಿಕೊಂಡಿರುವವರಲ್ಲಿ ಬಹುತೇಕರು ಒಂದೇ ಕುಟುಂಬದ ಸದಸ್ಯರಾಗಿದ್ದು, ಬಹುತೇಕರು ಉಡುಪಿ ಮತ್ತು ದಕ್ಷಿಣ ಕನ್ನಡ ಮೂಲದವರು. ಕಳೆದ ಬುಧವಾರ ದುಬೈಯಲ್ಲಿ ವಿಮಾನ ಹತ್ತುವ ಮೊದಲು 168 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿತ್ತು. ಆಗ ಎಲ್ಲರದ್ದೂ ನೆಗೆಟಿವ್ ಬಂದಿತ್ತು. ಇದು ಕ್ಷಿಪ್ರವಾಗಿ ನಡೆಸುವ ಪರೀಕ್ಷೆಯಾಗಿದ್ದು ನಿಖರವಾಗಿ ಫಲಿತಾಂಶ ಸಿಗಲು ಸಾಧ್ಯವಿಲ್ಲ. ಮಂಗಳೂರಿಗೆ ಬಂದಿಳಿದ ನಂತರ ಇವರ ಮೇಲೆ ಮಾಡಿದ ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿ 20 ಮಂದಿಯಲ್ಲಿ ಪಾಸಿಟಿವ್ ಬಂದಿದೆ ಎಂದು ಹೇಳಲಾಗುತ್ತಿದೆ.

ನಗರದ ವಿವಿಧ ಹೊಟೇಲ್ ಗಳಲ್ಲಿ ಕ್ವಾರಂಟೈನ್ ನಲ್ಲಿದ್ದ ಈ 20 ಮಂದಿಯನ್ನು ಇದೀಗ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ವರ್ಗಾಯಿಸಲಾಗಿದೆ. 168 ಪ್ರಯಾಣಿಕರಲ್ಲಿ 38 ಮಂದಿ ಗರ್ಭಿಣಿಯರು. ಉಳಿದವರಲ್ಲಿ ಕೆಲವರು ಹಿರಿಯ ನಾಗರಿಕರು ಮತ್ತು ಅನಾರೋಗ್ಯಪೀಡಿತರು ಕೂಡ ಸೇರಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *