

ಈ ಸೋಕಿತರಲ್ಲಿ ಒಬ್ಬರು ಕಾರವಾರ ಮೂಲದ ದುಬೈ ನಿವಾಸಿ, ಇವರ ಪತ್ನಿ ಮತ್ತು ಮಗು ಕೂಡಾ ಕಾರಂಟೈನ್ ಆಗಿದ್ದಾರೆ ಎನ್ನಲಾಗುತ್ತಿದೆ.

ಮಂಗಳೂರು: ಎರಡು ದಿನಗಳ ಹಿಂದೆ ಮಂಗಳೂರಿಗೆ ದುಬೈಯಿಂದ ಬಂದಿಳಿದ 20 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇನ್ನೂ 9 ಮಂದಿಯ ಶಂಕೆಯಿದ್ದು ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ಆರೋಗ್ಯ ಇಲಾಖೆಯ ನಂಬಲರ್ಹ ಮೂಲಗಳ ಪ್ರಕಾರ, ನಿನ್ನೆ ದುಬೈಯಿಂದ ಬಂದವರ ಗಂಟಲು ದ್ರವ ಪರೀಕ್ಷೆ ವರದಿ ಸಿಕ್ಕಿದ್ದು ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ರಾಮಚಂದ್ರ ಬಾಯಾರಿ ಅವರನ್ನು ಸಂಪರ್ಕಿಸಿ ಕೇಳಿದಾಗ ಅವರು ಈ ವಿಷಯವನ್ನು ನಿರಾಕರಿಸಲೂ ಇಲ್ಲ, ದೃಢಪಡಿಸಲೂ ಇಲ್ಲ.
ಕೊರೋನಾ ಸೋಂಕು ಕಾಣಿಸಿಕೊಂಡಿರುವವರಲ್ಲಿ ಬಹುತೇಕರು ಒಂದೇ ಕುಟುಂಬದ ಸದಸ್ಯರಾಗಿದ್ದು, ಬಹುತೇಕರು ಉಡುಪಿ ಮತ್ತು ದಕ್ಷಿಣ ಕನ್ನಡ ಮೂಲದವರು. ಕಳೆದ ಬುಧವಾರ ದುಬೈಯಲ್ಲಿ ವಿಮಾನ ಹತ್ತುವ ಮೊದಲು 168 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿತ್ತು. ಆಗ ಎಲ್ಲರದ್ದೂ ನೆಗೆಟಿವ್ ಬಂದಿತ್ತು. ಇದು ಕ್ಷಿಪ್ರವಾಗಿ ನಡೆಸುವ ಪರೀಕ್ಷೆಯಾಗಿದ್ದು ನಿಖರವಾಗಿ ಫಲಿತಾಂಶ ಸಿಗಲು ಸಾಧ್ಯವಿಲ್ಲ. ಮಂಗಳೂರಿಗೆ ಬಂದಿಳಿದ ನಂತರ ಇವರ ಮೇಲೆ ಮಾಡಿದ ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿ 20 ಮಂದಿಯಲ್ಲಿ ಪಾಸಿಟಿವ್ ಬಂದಿದೆ ಎಂದು ಹೇಳಲಾಗುತ್ತಿದೆ.
ನಗರದ ವಿವಿಧ ಹೊಟೇಲ್ ಗಳಲ್ಲಿ ಕ್ವಾರಂಟೈನ್ ನಲ್ಲಿದ್ದ ಈ 20 ಮಂದಿಯನ್ನು ಇದೀಗ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ವರ್ಗಾಯಿಸಲಾಗಿದೆ. 168 ಪ್ರಯಾಣಿಕರಲ್ಲಿ 38 ಮಂದಿ ಗರ್ಭಿಣಿಯರು. ಉಳಿದವರಲ್ಲಿ ಕೆಲವರು ಹಿರಿಯ ನಾಗರಿಕರು ಮತ್ತು ಅನಾರೋಗ್ಯಪೀಡಿತರು ಕೂಡ ಸೇರಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
