ಅಕ್ರಮ ಗಣಿಗಾರಿಕೆ; ಅಸಹಾಯಕರಾದರೆ ಅಧಿಕಾರಿಗಳು?

ಉತ್ತರಕನ್ನಡ ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ನಿಷೇಧಿಸಲಾಗಿದೆ.

ಶಿರಸಿ-ಸಿದ್ಧಾಪುರಗಳಲ್ಲಂತೂ ಗಣಿಗಾರಿಕೆಗೆ ಸಂಪೂರ್ಣ ನಿಷೇಧವಿದೆ. ಆದರೆ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರು ಸಿದ್ಧಾಪುರ ಮಂಡ್ಲಿಕೊಪ್ಪ, ಚೌಡಿ ಆಣೆ ಬಳಿ ಅಕ್ರಮ ಗಣಿಗಾರಿಕೆ ನಡೆಸುತಿದ್ದು ಅಧಿಕಾರಿಗಳು ಈ ಅಕ್ರಮ ಗಣಿಗಾರಿಕೆಯನ್ನು ಕಂಡೂ ಕಾಣದಂತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.


ಹಿಂದಿನ ತಿಂಗಳು ಕಠಿಣ ಲಾಕ್ಡೌನ್ ವೇಳೆ ಈ ಪ್ರದೇಶದಲ್ಲಿ ಅವ್ಯಾಹತವಾಗಿ ಗಣಿಗಾರಿಕೆ ನಡೆದಿದೆ. ನಂತರ ಸ್ಥಳಿಯ ಚೌಡಿ ಆಣೆಯ ಜನರು ಸ್ಥಳಿಯ ಆಡಳಿತಕ್ಕೆ ದೂರು ನೀಡಿ ರಸ್ತೆ ಬಂದ್ ಮಾಡಿ ಕೆಲವು ದಿವಸ ಈ ಗಣಿಗಾರಿಕೆ ನಿಲ್ಲಿಸಿದ್ದರು. ಇಂದಿನಿಂದ ಮತ್ತೆ ಪ್ರಾರಂಭವಾಗಿರುವ ಇಲ್ಲಿಯ ಗಣಿಗಾರಿಕೆ ಸ್ಥಗಿತಗೊಳಿಸಲು ಸಿದ್ಧಾಪುರ ತಹಸಿಲ್ದಾರರು ಕ್ರಶರ್ ಮಾಲಿಕರಿಗೆ ನೋಟೀಸ್ ನೀಡಿದ್ದಾರೆ. ತಾಲೂಕಾ ಆಡಳಿತ, ಜಿಲ್ಲಾಡಳಿತಗಳ ನೋಟೀಸ್,ಎಚ್ಚರಿಕೆಗಳಿಗೂ ಕ್ಯಾರೆ ಎನ್ನದ ಈ ವ್ಯವಹಾರಗಳ ಪ್ರಮುಖ ವ್ಯಕ್ತಿ ಮುಖ್ಯಮಂತ್ರಿ, ಗ್ರಾಮೀಣಾಭಿವೃದ್ಧಿ ಸಚಿವರು, ಉತ್ತರಕನ್ನಡದ ಸಂಸದ, ಶಾಸಕರ ಅನುಮತಿ, ಪರವಾನಗಿಯೊಂದಿಗೇ ಇಲ್ಲಿ ಗಣಿಗಾರಿಕೆ ಮಾಡುತ್ತೇನೆ ಎಂದು ಉತ್ತರಿಸುತಿದ್ದಾರೆ.

ಕಾನಗೋಡು ಗ್ರಾಮ ಪಂಚಾಯತ್ ನ ಗಡಿಯಲ್ಲಿರುವ ಈ 6 ಗುಂಟೆ ಮಾಲಕಿ ಜಮೀನಿನ ಜೊತೆ ಎಕರೆಗಟ್ಟಲೆ ಅರಣ್ಯ ಭೂಮಿ ಬಳಸುತ್ತಿರುವ ಈ ಪ್ರಭಾವಿ ವ್ಯಕ್ತಿ ಐಗೋಡು, ಚೌಡಿಅಣೆ, ಹಂಚಿನಚಪ್ರ ಸೇರಿದ ಕೆಲವು ಗ್ರಾಮಗಳ ಸಂಪರ್ಕ ರಸ್ತೆಯನ್ನೇ ಹಾಳು ಮಾಡಿದ್ದಾನೆ. ಈ ಬಗ್ಗೆ ವಿರೋಧ, ಪ್ರತಿಭಟನೆ ವ್ಯಕ್ತಪಡಿಸಿರುವ ಸ್ಥಳಿಯರು ಈ ಬಗ್ಗೆ ರಾಜ್ಯಪಾಲರಿಗೂ ಮನವಿ ನೀಡಿದ್ದಾರೆ. ಆದರೆ ರಾಜಕೀಯ, ರಾಜಕೀಯ ವ್ಯಕ್ತಿಗಳ ರಕ್ಷಣೆ ಪಡೆದಿರುವ ಈ ಅಕ್ರಮ ಗಣಿಗಾರಿಕೆಯ ಕುಳಗಳು ಸರ್ಕಾರಕ ಕಾನೂನು, ನಿಯಮ ಷರತ್ತುಗಳನ್ನು ಉಲ್ಲಂಘಿಸಿದರೂ ಯಾರೂ ಹೇಳುವವರು, ಕೇಳುವವರು ಇಲ್ಲ ಎನ್ನುವಂತಾಗಿದೆ.


ಸ್ಥಳಿಯ ಜನಜೀವನ, ಪರಿಸರಕ್ಕೆ ಮಾರಕವಾಗಿರುವ ಇಲ್ಲಿಯ ಅಕ್ರಮ ಗಣಿಗಾರಿಕೆ, ದಟ್ಟಡವಿಯ ನಡುವಿನ ಯಾಂತ್ರಿಕ ಚಟುವಟಿಕೆಗಳ ಬಗ್ಗೆ ಪರಿಸರ ವಾದಿಗಳೂ ಕೂಡಾ ಜಾಣ ಕುರುಡು ಪ್ರದರ್ಶಿಸುವುದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.

ಲಾಕ್‍ಡೌನ್, ನಿಷೇಧಾಜ್ಞೆ ನಡುವೆ ಪರಿಸರ ಲೂಟಿ
ಉಳ್ಳವರು,ಪ್ರತಿಷ್ಠಿತರಿಗೊಂದು ನ್ಯಾಯ? ಬಡಭಾರತೀಯನಿಗೊಂದು ನ್ಯಾಯ!


ಕರೋನಾ ಭಯ, ಮುನ್ನೆಚ್ಚರಿಕೆಯ ನಿಷೇಧಾಜ್ಞೆ, ಲಾಕ್ ಔಟ್ ಗಳ ನಡುವೆ ಸರ್ಕಾರಿ, ಕಾಮಗಾರಿಗಳು, ಮಳೆಗಾಲದ ನೆಪ ಒಡ್ಡಿ ರಾಜಕೀಯ ಶಿಫಾರಸ್ಸಿನನ್ವಯ
ಪರಿಸರ ವಿರೋಧಿ ಕೆಲಸಮಾಡುತ್ತಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ಈ ಬಗ್ಗೆ ದೂರಿರುವ ಕೆಲವು ಸಮಾಜಸೇವಕರು ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಅಕ್ರಮ ಗಣಿಗಾರಿಕೆ, ಕಲ್ಲು-ಮರಳು ಸಾಗಾಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಅಕ್ರಮ ವ್ಯವಹಾರಗಳಿಗೆ ರಾಜಕಾರಣಿಗಳು ಮತ್ತು ಅರಣ್ಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಜಾಣ ಮೌನದ ಸಹಕಾರವೂ ಕಾರಣ ಎನ್ನಲಾಗುತ್ತಿದೆ.


ಸಿದ್ಧಾಪುರದ ಭಾನ್ಕುಳಿಯಲ್ಲಿ ಕಳೆದ ವಾರ ಬಡ ರೈತನ ಮನೆ ಕಿತ್ತೆಸೆದ ಶಿರಸಿ-ಸಿದ್ದಾಪುರದ ಅರಣ್ಯ ಇಲಾಖೆ ಅಧಿಕಾರಿಗಳು ಪಕ್ಕದ ಭಾನ್ಕುಳಿ ಮಠದ ರಸ್ತೆಗಾಗಿ ಮರಗಳನ್ನು ಕಡಿದು ಅರಣ್ಯ ಇಲಾಖೆಯ ಕಣ್ಗಾವಲ್ಲೇ ಯಂತ್ರಗಳ ಮೂಲಕ ಮಣ್ಣು- ಮರಗಳನ್ನು ಕಿತ್ತು ಅರಣ್ಯ ಪರಿಸರ ಹಾಳುಮಾಡಿದ್ದರೂ ಅದರ ಬಗ್ಗೆ ತಲೆಕೆಸಿಕೊಳ್ಳದ ಅರಣ್ಯ ಇಲಾಖೆಯ ಪಕ್ಷಪಾತ ಏನನ್ನು ಸೂಚಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

ಮಡ್ಲಿಕೊಪ್ಪದಲ್ಲಿ ನಿರಂತರ ಗಣಿಗಾರಿಕೆ- ಸಿದ್ಧಾಪುರ ತಾಲೂಕಿನ ನಿಡಗೋಡು ಭಾಗದ ಮಂಡ್ಲಿಕೊಪ್ಪ ಚೌವಡಿ ಆಣೆಯ ಬಳಿ ಲಾಕ್ ಔಟ್ ಸಮಯದಲ್ಲಿ ಕೂಡಾ ಗಣಿಗಾರಿಕೆ ನಡೆಯುತಿದ್ದು ಈ ಕಲ್ಲು-ಮಣ್ಣು-ಜಲ್ಲಿ ಸಾಗಾಟದಿಂದ ಸ್ಥಳಿಯರಿಗೆ ತೊಂದರೆ ಆಗುತ್ತಿರುವ ಬಗ್ಗೆ ಸ್ಥಳಿಯರು ತಹಸಿಲ್ದಾರರಿಗೆ ದೂರಿದ್ದಾರೆ.

ಜಿಲ್ಲೆಯಲ್ಲಿ ಲಾಕ್ ಔಟ್ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಕಠಿಣ ನಿಯಮಗಳನ್ನು ವಿಧಿಸಲಾಗುತ್ತಿದೆ ಆದರೆ ಮಡ್ಲಿಕೊಪ್ಪ, ಭಾನ್ಕುಳಿಭಾಗದಲ್ಲಿ ಹಾಡು ಹಗಲೇ ಗಣಿಗಾರಿಕೆ ಅರಣ್ಯ ನಾಶ, ಪರಿಸರ ನಾಶ ಆಗುತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ- ಕೈ ಕಟ್ಟಿ ಕುಳಿತುಕೊಂಡಿರುವ ಕೆಲವು ಅಧಿಕಾರಿಗಳು,ಇಲಾಖೆಗಳ ಜಾಣಮೌನ,ಮೌನ ಸಹಕಾರದ ಹಿಂದೆ ದೇಶಪ್ರೇಮ, ಹಿಂದುತ್ವದ ಸೋಗಿನ ಕಪಟ ರಾಜಕಾಣಿಗಳ ಪಾತ್ರದ ಬಗ್ಗೆ ದೂರಿರುವ ಕೆಲವರು ಉತ್ತರಕನ್ನಡ ಜಿಲ್ಲೆಯಲ್ಲಿ ಬಡವರು-ಜನಸಾಮಾನ್ಯರಿಗೊಂದು ನ್ಯಾಯ ಪ್ರಭಾವಿಗಳು, ಮಠ-ಮಂದಿರಗಳಿಗೊಂದು ನ್ಯಾಯ ಮಾಡುತ್ತಿರುವ ಜನಪ್ರತಿನಿಧಿಗಳ ಪಕ್ಷಪಾತಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಕೃಷಿ ಉತ್ಫನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮ ತಿದ್ದುಪಡಿ ಸುಗ್ರಿವಾಜ್ಞೆಗೆ ವಿರೋಧ ಮನವಿ ಅರ್ಪಣೆ
ರಾಜ್ಯದ 1966 ರ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮದ ಕಲಂ 8 ಹಾಗೂ ಇತರ ವಿಧಿಗಳ ತಿದ್ದುಪಡಿಯ ವಿಧೇಯಕವನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ತಿದ್ದುಪಡಿಗೆ ರಾಜ್ಯಮಟ್ಟದಿಂದ ತಾಲೂಕಾ ಮಟ್ಟದ ವರೆಗೆ ವಿರೋಧಗಳು ಪ್ರಾರಂಭವಾಗಿವೆ. ರೈತರ ಹಿತ ನಿರ್ಲಕ್ಷಿಸಿ, ಖಾಸಗಿ ಕಂಪನಿಗಳಿಗೆ ಅನುಕೂಲ ಮಾಡುವ ಈ ತಿದ್ದುಪಡಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದು ಈ ಇದ್ದುಪಡಿ ಅಧಿನಿಯಮದ ಸುಗ್ರಿವಾಜ್ಞೆ
ಜಾರಿಯಾದರೆ ರಾಜ್ಯದಾದ್ಯಂತ ಪ್ರತಿಭಟನೆ ಮಾಡುವದಾಗಿ ಎಚ್ಚರಿಸಿದ್ದಾರೆ.
ಈ ಬಗ್ಗೆ ಎ.ಪಿ.ಎಂ.ಸಿ. ಅಧಿನಿಯಮ 1966 ಕಲಂ ಎಂಟು ಹಾಗೂ ಇತರ ವಿಧಿಗಳ ತಿದ್ದುಪಡಿ ಸುಗ್ರಿವಾಜ್ಞೆ ವಿರೋಧಿಸಿ ಇಂದು ಸಿದ್ಧಾಪುರದಲ್ಲಿ ತಹಸಿಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು. ಕಾರ್ಪೋರೇಟ್ ಕಂಪನಿಗಳಿಗೆ ಪೂರಕ ಮತ್ತು ರೈತರಿಗೆ ಮಾರಕವಾಗುವ ಈ ಸುಗ್ರಿವಾಜ್ಞೆ ಜಾರಿ ಮಾಡಿ ರೈತರಿಗೆ ಅನ್ಯಾಯ ಮಾಡದಂತೆ ಮುಖ್ಯಮಂತ್ರಿಗಳು ಮತ್ತು ಸರ್ಕಾರಕ್ಕೆ ಒತ್ತಾಯ ಮಾಡಲಾಯಿತು. ಈ ಮನವಿ ಅರ್ಪಣೆ ವೇಳೆ ಎ.ಪಿ.ಎಂ.ಸಿ.ಅಧ್ಯಕ್ಷ ಕೇ.ಜಿ.ನಾಗರಾಜ್, ಸದಸ್ಯ ವಾಸುದೇವ ನಾಯ್ಕ, ಅಣ್ಣಪ್ಪ ನಾಯ್ಕ, ಕೆ.ಆರ್. ವಿನಾಯಕ, ಕೆ.ಟಿ. ಹೊನ್ನೆಗುಂಡಿ,ಲೋಕೇಶ್ ನಾಯ್ಕ ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *