ಜ್ಯೂನ್ 18ಕ್ಕೆ ಪಿಯುಸಿ, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ: ಸಚಿವ ಸುರೇಶ್ ಕುಮಾರ್

ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದ್ದು, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಅವರು ಹೇಳಿದ್ದಾರೆ.

Education minister S Suresh Kumar

ಬೆಂಗಳೂರು: ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದ್ದು, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಜೂನ್ 25ರಿಂದ ಜುಲೈ 4ರವರೆಗೆ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿವೆ. ಹಾಗೇ, ಜೂನ್ 18ಕ್ಕೆ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ ಎಂದರು.

ಪರೀಕ್ಷೆಗೆ ಬದಲಾದ ಪರಿಸ್ಥಿತಿಯಲ್ಲಿ ಹೆಚ್ಚುವರಿ ಕೊಠಡಿ ಬಳಸುತ್ತೇವೆ. 2879 ಪರೀಕ್ಷಾ ಕೇಂದ್ರಗಳಲ್ಲಿ 43720 ಕೊಠಡಿ ಬಳಸುತ್ತಿದ್ದೇವೆ.  ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ. ಪರೀಕ್ಷೆ ನಡೆಯುವ ಶಾಲೆಗಳ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಮತ್ತು ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಂಬೆಸಿ ಗ್ರೂಪ್ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಒದಗಿಸಲಿದೆ. ಥರ್ಮಲ್ ಸ್ಕಾನರ್ ಮೂಲಕ ವಿದ್ಯಾರ್ಥಿಗಳ ತಪಾಸಣೆ ಮಾಡಲಾಗುತ್ತದೆ. ಜ್ವರದ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಬಹುತೇಕ ಜಿಲ್ಲೆಗಳಲ್ಲಿ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‍ಗಳು, ವಸತಿ ಶಾಲೆಗಳು ಹಾಗೂ ಕೆಲವೊಂದು ಜಿಲ್ಲೆಗಳಲ್ಲಿ ಖಾಸಗಿ ಸಂಸ್ಥೆಗಳ ಹಾಸ್ಟೆಲ್‍ಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಉಪಯೋಗಿಸಿಕೊಳ್ಳುತ್ತಿರುವುದರಿಂದ ಈ ಹಾಸ್ಟೆಲ್ ವಾಸಿಗಳಾಗಿದ್ದ ಮಕ್ಕಳು ತಂತಮ್ಮ ಗ್ರಾಮಗಳಿಗೆ ಹೋಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಆವರು ನೊಂದಾಯಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಾಧ್ಯವಿಲ್ಲವಾದ್ದರಿಂದ ಅಂತಹ ವಿದ್ಯಾರ್ಥಿಗಳು ಹಾಗೂ ಪೋಷಕರು ತಾವು ಪ್ರಸ್ತುತ ತಂಗಿರುವ ಸ್ಥಳಕ್ಕೆ ಹತ್ತಿರವಿರುವ ಪರೀಕ್ಷಾ ಕೇಂದ್ರದ ಮೂಲಕ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಈ ಕುರಿತಂತೆ ಬೇರೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿಚ್ಛಿಸುವ ಅಂತಹ ವಿದ್ಯಾರ್ಥಿಗಳು ತಮ್ಮ ಶಾಲೆಯ ಮುಖ್ಯ ಶಿಕ್ಷಕರನ್ನು ಈ ತಿಂಗಳ 25 ರೊಳಗೆ ಸಂಪರ್ಕಿಸಿ ವಿವರಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ.

ಇದೇ ರೀತಿ ಯಾವುದಾದರೂ ವಲಸೆ ಕಾರ್ಮಿಕರ ಕುಟುಂಬಗಳ ಮಕ್ಕಳು ತಮ್ಮ ಸ್ವಂತ ಊರುಗಳಿಗೆ ತೆರಳಿದ್ದಲ್ಲಿ ಅಂತಹ ಮಕ್ಕಳಿಗೂ ಸಹ ಪರೀಕ್ಷಾ ಕೇಂದ್ರದ ಬದಲಾವಣೆಗೆ ಅವಕಾಶ ನೀಡಲಾಗಿದೆ ಎಂದು ಸುರೇಶ್ ಕುಮಾರ್ ವಿವರಿಸಿದರು. 

ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬೇರೆ ರಾಜ್ಯಗಳಿಂದ ಬಂದು ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಚಂದನ ದೂರದರ್ಶನ ವಾಹಿನಿಯಲ್ಲಿ ಈಗಾಗಲೇ ಪ್ರಸಾರವಾಗುತ್ತಿರುವ ಪುನರ್‌ ಮನನ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈ ಕಾರ್ಯಕ್ರಮದ ಅಂತ್ಯದಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳ ಬಗ್ಗೆ ವಿಶೇಷ ತರಗತಿಗಳನ್ನು 3 ದಿನದ ಅವಧಿಗೆ ರೂಪಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯುವ ಮನಸ್ಥಿತಿಗೆ ಸಜ್ಜುಗೊಳಿಸಲಾಗುವುದು ಎಂದೂ ಸಚಿವರು ತಿಳಿಸಿದರು. ಕಾರ್ಯಕ್ರಮ ಈ ತಿಂಗಳ ಅಂತ್ಯದವರೆಗೆ ಮುಂದುವರೆಯಲಿದೆ ಎಂದು ಅವರು ಹೇಳಿದರು.

ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಗಳನ್ನು ಯಾವಾಗ ಆರಂಭ ಮಾಡಬೇಕು ಎಂಬ ಚರ್ಚೆಯೂ ನಡೆಯುತ್ತಿದೆ. ಈ ವರ್ಷ ಯಾವುದೇ ಶಾಲೆಗಳು ಶುಲ್ಕದಲ್ಲಿ ಹೆಚ್ಚಳ ಮಾಡದಂತೆ ಸೂಚಿಸಿದ್ದೇವೆ. ಸಾಧ್ಯವಾದರೆ ಕಡಿಮೆ ಮಾಡಿ ಎಂದು ಸರ್ಕಾರ ಸೂಚಿಸಿದೆ. ಈಗಾಗಲೇ ಕಾಲೇಜು ವಿದ್ಯಾರ್ಥಿಗಳಿಗೆ ಆನ್​ಲೈನ್​ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.

ಕೇಂದ್ರ ಸರ್ಕಾರ ನಿನ್ನೆಯಷ್ಟೇ ದೇಶಾದ್ಯಂತ ಮೇ 31ರವರೆಗೆ ಲಾಕ್​ಡೌನ್​ ವಿಸ್ತರಿಸಿದ್ದು, ಯಾವುದೇ ಶಾಲಾ, ಕಾಲೇಜುಗಳನ್ನು ತೆರೆಯದಂತೆ ಆದೇಶ ಹೊರಡಿಸಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *