ಅವರು ನಾಗರಿಕ ಟೆರರಿಸ್ಟ್‌ಗಳು, ಅವರನ್ನು ಬಂಧಿಸಿ: ಸೊಗಡು ಶಿವಣ್ಣ ವಿವಾದ

ಕಾಂಗ್ರೆಸ್ ನಾಯಕರಾದ ಜಮೀರ್, ಇಬ್ರಾಹಿಂ ಮತ್ತು ಹ್ಯಾರೀಸ್ ಅಂಥವರು ದೇಶ ವಿಭಜನೆಗೆ ಮುಂದಾಗಿದ್ದಾರೆ, ಇವರು ನಾಗರೀಕ ಟೆರರಿಸ್ಟುಗಳು, ಅವರನ್ನು ಬಂಧಿಸಿ.

ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕೆಂದು ಪತ್ರ ಬರೆದಿರುವ ಕಾಂಗ್ರೆಸ್ ಮುಖಂಡರಾದ ಸಿ.ಎಂ.ಇಬ್ರಾಹಿಂ, ಜಮೀರ್ ಅಹಮದ್ ಮತ್ತು ಹ್ಯಾರೀಸ್ ಅವರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಬಂಧಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸೊಗಡು ಶಿವಣ್ಣ, “ಜಮೀರ್, ಇಬ್ರಾಹಿಂ ಮತ್ತು ಹ್ಯಾರೀಸ್ ಅಂಥವರು ದೇಶ ವಿಭಜನೆಗೆ ಮುಂದಾಗಿದ್ದಾರೆ. ಇಂಥವರು ದೇಶಕ್ಕೆ ಅಪಾಯ ತಂದೊಡ್ಡುತ್ತಿದ್ದಾರೆ. ಇವರು ನಾಗರಿಕ ಟೆರರಿಸ್ಟ್‌ಗಳು, ದೇಶದ್ರೋಹಿಗಳು. 70 ವರ್ಷಗಳಿಂದ ನಮ್ಮ ಸರ್ಕಾರಗಳು ನೀಡಿದ ಸವಲತ್ತುಗಳನ್ನು ದುರ್ಬಳಕೆ ಮಾಡಿಕೊಂಡು ದೇಶಕ್ಕೆ ಕಂಟಕವಾಗಿದ್ದಾರೆ” ಎಂದು ನಾಲಗೆ ಹರಿಯಬಿಟ್ಟಿದ್ದಾರೆ.

ಈ ತಬ್ಲಿಘಿಗಳು ಕೆಟ್ಟ ಸಂತಾನ. ಇವರನ್ನು ದೇಶದಿಂದ ಹೊರಹಾಕಬೇಕು. ಕೊರೊನ ಸಂದರ್ಭದಲ್ಲಿ ದೇವರ ಪ್ರಾರ್ಥನೆ ಸಲ್ಲಿಸುವುದಕ್ಕಲ್ಲ. ರೋಗ ಹರಡುವುದಕ್ಕೂ ಇವರು ಯೋಜಿಸಿದ್ದಾರೆ ಎಂದು ಶಿವಣ್ಣ ವಾಗ್ದಾಳಿ ನಡೆಸಿದರು.

ದೇಶ ವಿಭಜನೆಯ ಸಂದರ್ಭದಲ್ಲಿ ಕೇವಲ 3 ಕೋಟಿ ಮುಸ್ಲೀಮರು ಇದ್ದರು. ಇಷ್ಟು ವರ್ಷಗಳಿಂದ ಅವರನ್ನು ಸೌಹಾರ್ದಯುತವಾಗಿ ನಡೆಸಿಕೊಂಡು ಬಂದಿದ್ದೇವೆ. ಆದರೆ ದೇಶ ವಿಭಜನೆಯ ಸಂದರ್ಭದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ತೆರಳಿದ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಅವರನ್ನು ಮತಾಂತರ ಮಾಡಲಾಗುತ್ತಿದೆ. ಹಿಂಸೆ ನೀಡಲಾಗುತ್ತಿದೆ. ಹಿಂದೂಗಳೇ ಇಲ್ಲದಂತೆ ಮಾಡಲಾಗುತ್ತಿದೆ ಎಂದು ದೂರಿದರು.

ರಂಜಾನ್ ಹಬ್ಬ ಆಚರಣೆಯ ಹೆಸರಿನಲ್ಲಿ ಕೊರೊನ ಹರಡುವ ಹುನ್ನಾರ ನಡೆಯುತ್ತಿದೆ. ಈ ಮೂವರು ಮುಖಂಡರು ತಬ್ಲಿಘಿಗಳು. ಕೇಂದ್ರವಾಗಲಿ, ರಾಜ್ಯ ಸರ್ಕಾರವಾಗಲೀ ಇವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಮಾಧ್ಯಮಗೋಷ್ಠಿಯ ನಡುವೆ ಅವಾಚ್ಯ ಶಬ್ದಗಳು ಶಿವಣ್ಣ ಅವರಿಂದ ಹೊರಬಂದವು. ನನಗೆ ಇಷ್ಟು ವಯಸ್ಸಾಗಿದೆ ನನ್ನ ಮೈ ಉರಿಯುತ್ತಿದೆ. ದೇಶ ರಕ್ಷಣೆ ನಮ್ಮ ಜವಾಬ್ದಾರಿ. ಹಾಗಾಗಿ ಕೆಟ್ಟಭಾಷೆಯಲ್ಲಿ ಮಾತನಾಡಿದ್ದೇನೆ. ಅವುಗಳನ್ನು ಹೊಡೆದು ಹಾಕಿ. ಬದಲಿಗೆ ಕೆಟ್ಟ ಸಂತಾನ ಎಂತ ಬೇಕಾದರೆ ಬರೆಯಿರಿ ಎಂದು ಉಚಿತ ಸಲಹೆಯನ್ನು ನೀಡಿದರು.

ನಾಲ್ಕು ಬಾರಿ ಶಾಸಕರಾಗಿರುವ ಮತ್ತು ಎರಡು ಬಾರಿ ಸಚಿವರಾಗಿ ಕೆಲಸ ಮಾಡಿರುವ ಸೊಗಡು ಶಿವಣ್ಣ ಮಾಗಿಲ್ಲ ಎಂಬುದು ಅವರು ನಡೆಸುವ ಪ್ರತಿಯೊಂದು ಪತ್ರಿಕಾಗೋಷ್ಠಿಗಳಿಂದ ತಿಳಿದುಬರುತ್ತದೆ. ಕೊರೊನ ನಿಯಂತ್ರಣಕ್ಕೆ ಬೇಕಾದ ಸಲಹೆ ಕೊಡುವುದು ಬಿಟ್ಟು ಒಂದು ಸಮುದಾಯವನ್ನು ದೂರುವುದು ಸರಿಯಲ್ಲ ಎಂಬುದು ಅವರಿಗೆ ಹೊಳೆಯಲಿಲ್ಲವೇ ಎಂಬ ಮಾತುಗಳು ಪತ್ರಕರ್ತರ ನಡುವೆ ಕೇಳಿ ಬಂದಿವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *