ಸೋನಿಯಾ ಗಾಂಧಿ ವಿರುದ್ಧ ಎಫ್.ಐ.ಆರ್.: ಸಾಗರದಲ್ಲಿ ಪ್ರತಿಭಟನೆ,cpi ಮಹಾಬಲೇಶ್ವರ ನಾಯ್ಕ ಮೇಲೆ ಕ್ರಮಕ್ಕೆ ಆಗ್ರಹ

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ವಕೀಲರೊಬ್ಬರ ಚಿತಾವಣೆಯಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್.ಆಯ್. ಆರ್. ದಾಖಲಿಸಿರುವ ಸಾಗರ ಸಿ.ಪಿ.ಐ. ಮಹಾಬಲೇಶ್ವರ ನಾಯ್ಕ ಮೇಲೆ ಶೀಘ್ರ ಕ್ರಮಕ್ಕೆ ಕಾಂಗ್ರೆಸ್ ಆಗ್ರಹಿಸಿದೆ.

ಇಂದು ಬೆಳಿಗ್ಗೆ ಸಾಗರ ಠಾಣೆಯಲ್ಲಿ ಪ್ರವೀಣ ಎನ್ನುವ ವಕೀಲರೊಬ್ಬರು ಸೋನಿಯಾ ಗಾಂಧಿ ಪಿ.ಎಂ.ಕೇರ್ಸ್ ಖಾತೆ ಮತ್ತು ಮೋದಿ ಬಗ್ಗೆ ಅವಹೇಳನಕಾರಿ ಟೀಕೆ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಈ ದೂರಿನ ಅನ್ವಯ ಸಾಗರ ಸಿ.ಪಿ.ಐ. ಮಹಾಬಲೇಶ್ವರ ನಾಯ್ಕ ಪ್ರಥಮ ಮಾಹಿತಿ ವರದಿ ದಾಖಲಿಸಿದ್ದರು. ಈ ವಿಚಾರ ವಿವಾದವಾಗಿ ಸಾಗರದಲ್ಲಿ ಈ ಘಟನೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಈ ಬಗ್ಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರಗೆ ಮನವಿ ಮಾಡಿರುವ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಧಾನಿ ಮತ್ತು ಪಿ.ಎಂ. ಕೇರ್ಸ್ ಬಗ್ಗೆ ಸೋನಿಯಾ ಮಾಡಿರುವ ಟೀಕೆ ರಾಜಕೀಯದ ಭಾಗವಾದರೂ ಅದು ಪ್ರಜಾಪ್ರಭುತ್ವದಲ್ಲಿ ಹಕ್ಕು ಆದರೆ ಅಧಿಕಾರಿಗಳು ಕೆಲವು ಬೇಡದ ಹಿತಾಸಕ್ತಿಗಳ ಉತ್ತೇಜನ, ಪ್ರೇರಣೆಯ ಆಧಾರದ ವ್ಯಕ್ತಿಗಳ ದೂರು ಆಧರಿಸಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆಯ ಮೇಲೆ ದೂರು ದಾಖಲಿಸುವುದು ತಪ್ಪು ಇಂಥ ಪ್ರಮಾದಕ್ಕೆ ಅವಕಾಶ ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧ ಶೀಘ್ರ ಕ್ರಮ ಜರುಗಿಸದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ಸರ್ಕಾರಿ ಸೇವೆಯಲ್ಲಿರುವ ಮಹಾಬಲೇಶ್ವರ ನಾಯ್ಕ ಬಿ.ಜೆ.ಪಿ.ಯ ಮತಾಂಧ ಮನೋಧರ್ಮದವರಾಗಿದ್ದು ಅವರ ರಾಜಕೀಯ ಹಿತಾಸಕ್ತಿಯಿಂದ ಸಾಗರದ ಜನರಿಗೆ ತೊಂದರೆಯಾಗುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಮೂಲಗಳು ದೂರಿವೆ.

ಮಾಜಿ ಸೈನಿಕರಾಗಿರುವ ಮಹಾಬಲೇಶ್ವರ ನಾಯ್ಕ ಶಿರಸಿ ಸೇರಿದಂತೆ ಕೆಲವೆಡೆ ಹಿಂದೆ ಸೇವೆ ಸಲ್ಲಿಸಿದ್ದರು. ಸಿದ್ದಾಪುರ ತಾಲೂಕಿನ ನರಮುಂಡಿಗೆಯ ಕೃಷಿ ಕುಟುಂಬದ ಮಹಾಬಲೇಶ್ವರ ನಾಯ್ಕ ಬಡತನದಿಂದ ಮೇಲೆ ಬಂದು ಅಧಿಕಾರಿಯಾಗಿದ್ದರೂ ಅವರ ಕೋಮುವಾದಿ ಮತಾಂಧತೆಯ ಮನೋಧರ್ಮದ ಕಾರಣಕ್ಕೆ ಈ ಘಟನೆ ನಡೆದಿರುವುದು ಬಿಟ್ಟರೆ ಇದರಲ್ಲಿ ಸ್ಥಳಿಯ ರಾಜಕೀಯ ಹಿತಾಸಕ್ತಿಯ ಪಾತ್ರವಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.


ಶಿರಸಿಯಲ್ಲಿ ಕಾರಂಟೈನ್ ಆಗಿದ್ದ 9 ಜನರಲ್ಲಿ ಕೋವಿಡ್ ದೃಢ
ಮಹಾರಾಷ್ಟ್ರದಿಂದ ಬಂದು ಶಿರಸಿಯ ಕಲ್ಲಿಯಲ್ಲಿ ಕಾರಂಟೈನ್ ಆಗಿದ್ದ 9 ಜನರಲ್ಲಿ ಕರೋನಾ ಸೋಂಕು ದೃಢ ಪಟ್ಟಿದೆ.
ಶಿರಸಿಯ ಈ 9 ಹೊಸ ಪ್ರಕರಣಗಳಿಂದ ಉತ್ತರಕನ್ನಡದಲ್ಲಿ ಸೋಕಿತರ ಸಂಖ್ಯೆ 56 ಕ್ಕೇರಿದೆ. ಯಲ್ಲಾಪುರ, ಶಿರಸಿಗಳಲ್ಲಿ ಕಾರಂಟೈನ್ ಆಗಿ ಕೋವಿಡ್ ದೃಢಪಟ್ಟವರು ಬಹುತೇಕ ಹೊರಗಿನವರು ಮತ್ತು ಮಹಾರಾಷ್ಟ್ರದಿಂದ ಬಂದವರು. ಉತ್ತರಕನ್ನಡ ಜಿಲ್ಲೆಯಲ್ಲಿ ದೃಢಪಟ್ಟ ಕರೋನಾ ಪ್ರಕರಣಗಳಲ್ಲಿ ಮೊದಮೊದಲಿನ ಭಟ್ಕಳದ ಪ್ರಕರಣಗಳು ವಿದೇಶದಿಂದ ಆಮದಾದ ಕರೋನಾ ರೋಗಿಗಳು, ಈಗ ಪತ್ತೆಯಾಗುತ್ತಿರುವ ಕರೋನಾ ಹೊಸ ಪ್ರಕರಣಗಳು ಮಹಾರಾಷ್ಟ್ರ, ಗುಜರಾತ್, ಚಿನ್ನೈಗಳಿಂದ ಬಂದವರು ಹಾಗಾಗಿ ಉತ್ತರಕನ್ನಡದಲ್ಲಿ ಅರ್ಧಶತಕ ದಾಟಿರುವ ಕರೋನಾ ಪ್ರಕರಣಗಳಿಂದ ಸ್ಥಳಿಯರಿಗೆ ಅಪಾಯ ಕಡಮೆ ಎನ್ನಲಾಗುತ್ತಿದೆ. ಆದರೆ 6 ಸಾವಿರಕ್ಕಿಂತ ಹೆಚ್ಚಿರುವ ಕಾರಂಟೈನ್ ಆದ ಜನರಲ್ಲಿ ಕರೋನಾ ಪತ್ತೆಯಾಗುತ್ತಾ ಸಾಗಿದರೆ ಜಿಲ್ಲೆಯ ಸ್ಥಿತಿ ಚಿಂತಾಜನಕವಾಗುವ ಸಾಧ್ಯತೆ ಇದೆ.

ಕರೋನಾ ಜನಾಭಿಪ್ರಾಯ ಭಾಗ-02-
20 ಲಕ್ಷ ಕೋಟಿ ಪ್ಯಾಕೇಜ್

ಏನಂತಾರೆ ಜನ-
ಇಲ್ಲಿವೆ ಜನರ ಅಭಿಪ್ರಾಯ

ಕರೋನಾ ದಿಂದ ಜರ್ಜರಿತವಾಗಿರುವ ದೇಶ ಮತ್ತು ದೇಶದ ಆರ್ಥಿಕತೆ ಉತ್ತೇಜಿಸಲು 20 ಲಕ್ಷ ಕೋಟಿ ಪ್ಯಾಕೇಜ್ ನೀಡಿರುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸಿದೆ. ಈ ಬಗ್ಗೆ ನಾಲ್ಕು ಹಂತಗಳಲ್ಲಿ ಹಣಕಾಸು ಸಚಿವರು ವಿಭಾಗ ಮಾಡಿದ ಪ್ಯಾಕೇಜ್ ವಿವರಗಳನ್ನು ನೀಡಿದ್ದಾರೆ. ಮಾಧ್ಯಮಗಳ ಪ್ರಚಾರ, ಸಚಿವರು, ಶಾಸಕರ ವಿವರಣೆಗಳ ಮಧ್ಯೆ ಕೂಡಾ ಬಹುತೇಕ ಜನಸಾಮಾನ್ಯರಿಗೆ ಈ ಪ್ಯಾಕೇಜ್ ಸರಿಯಾಗಿ ಅರ್ಥವಾಗಿಲ್ಲ ಎನ್ನುವ ವಾಸ್ತವ ಅಭಿಪ್ರಾಯ ಸಂಗ್ರಹದ ಸಮಯದಲ್ಲಿ ನಮ್ಮ ಗಮನಕ್ಕೂ ಬಂತು. ಹೆಚ್ಚಿನವರು ಈ ಪ್ಯಾಕೇಜ್ ಗುಟ್ಟುಗಳ ಬಂಡಲ್ ಎಂದು ಲೇವಡಿಮಾಡಿದರೆ ಕೆಲವರು ಇದು ಸ್ಫಷ್ಟತೆ-ಪಾರದರ್ಶಕತೆ ಇಲ್ಲದ ಮೋದಿಯವರ ಸುಳ್ಳಿನ ಮುಂದುವರಿದ ಕಂತೆ ಎಂದರು.

ಕೆಲವರು ಪಕ್ಷದ ಕಾರಣಕ್ಕೆ ನಾವು ಈ ಪ್ಯಾಕೇಜ್ ಸಮರ್ಥಿಸಿಕೊಳ್ಳಬೇಕು ಬಿಟ್ಟರೆ ಈ ಕ್ಷಣದಲ್ಲಿ ಅನುಕೂಲ, ಲಾಭ ಹಾಗಿರಲಿ ನಮಗೂ ಅರ್ಥಮಾಡಿಕೊಳ್ಳದ ಒಗಟು ಈ ಪ್ಯಾಕೇಜ್ ಎಂದು ತಮ್ಮ ಅಸಮಾಧಾನ ಹೇಳಿಕೊಂಡರು. ಕೆಲವರು ಮಾತ್ರ ಇದು ದೀರ್ಘಕಾಲಿಕ ಲಾಭದ ದೂರದ ಆಲೋಚನೆಯ ಬೃಹತ್ ಪ್ಯಾಕೇಜ್ ಎಂದು ಸಮರ್ಥಿಸಿದರು. ಈ ಪ್ಯಾಕೇಜ್, ಕೇಂದ್ರಸರ್ಕಾರದ ಕೋವಿಡ್ ನಿರ್ವಹಣಾ ವಿಧಾನ ಎಲ್ಲವೂ ಟೀಕೆಗೆ ಒಳಗಾಗಿರುವ ಈ ಸಂದರ್ಭದಲ್ಲಿ ನಮಗೆ ಸಿಕ್ಕ ಪ್ರತಿಕ್ರೀಯೆಗಳಲ್ಲಿ ಕೆಲವನ್ನು ಸಂಕ್ಷಿಪ್ತವಾಗಿ ಇಲ್ಲಿ ಪ್ರಕಟಿಸಲಾಗಿದೆ.

20 ಲಕ್ಷ ಕೋಟಿ ಜನಸಾಮಾನ್ಯ ಊಹಿಸಲಾಗದ ಬೃಹತ್ ಪ್ಯಾಕೇಜ್ ಇದು, ಇದರಲ್ಲಿ 136 ಕೋಟಿ ಭಾರತದ ಜನಸಂಖ್ಯೆಗೆ ತಲಾ 1 ಕೋಟಿ ಕೊಟ್ಟದ್ದರೆ ಜನಸಾಮಾನ್ಯ ಕೂಡಾ ಕುಬೇರನಾಗುತಿದ್ದ.- ವೀರಭದ್ರಗೌಡ ವಡಗೇರಿ

ಉಜ್ವಲ ಯೋಜನೆಯ ಗ್ಯಾಸ್ ಫಲಾನುಭವಿಗಳಿಗೆ ಮಾತ್ರ ಉಚಿತ ಅನಿಲ ಸೌಲಭ್ಯ, ಜನ್ ಧನ್ ಖಾತೆಗೆ ಮಾತ್ರ ಹಣ ಇವೆಲ್ಲಾ ಅಸಮರ್ಪಕ ಉಜ್ವಲ ಗ್ಯಾಸ್ ಫಲಾನುಭವಿಗಳು, ಜನಧನ್ ಖಾತೆದಾರರು ಮಾತ್ರ ಬಡವರೆ. ಜಾಬ್ ಕಾರ್ಡ್‍ಗಾಗಿ ಜನಧನ್ ಗಿಂತ ಮೊದಲು ಬ್ಯಾಂಕ್ ಪಾಸ್ ಬುಕ್, ಖಾತೆ ಹೊಂದಿದವರಿಗೆ ಹಣ ನೀಡದಿದ್ದರೆ ಕೇಂದ್ರದ ಯೋಜನೆಗಳು ಸರ್ಕಾರದ ಯೋಜನೆಗಳಲ್ಲ, ಪಕ್ಷದ ಜೋಜನೆಗಳು ಎಂದಾಗುತ್ತವೆ. ಕರೋನಾ ಸಂಕಷ್ಟದ ಸಮಯದಲ್ಲಿ ಕೇಂದ್ರದ ಫಲಾನುಭವಿಗಳಿಗೊಂದು, ರಾಜ್ಯದ ಯೋಜನೆಗಳ ಫಲಾನುಭವಿ ಬಡವರಿಗೊಂದು ತಾರತಮ್ಯ ಮಾಡುವ ಸರ್ಕಾರದ ನೀತಿ ಬಡವರ ವಿರೋಧಿ ಧೋರಣೆ ಎನಿಸಿಕೊಳ್ಳುತ್ತದೆ. -ವೀರಭದ್ರ ನಾಯ್ಕ ಮಳಲವಳ್ಳಿ, ರಾಜ್ಯ ರೈತ ಸಂಘದ ತಾಲೂಕಾಧ್ಯಕ್ಷ.

20 ಲಕ್ಷ ಕೋ ಟಿ ಕಣ್ಣೊರೆಸುವ ತಂತ್ರ ಕೇಂದ್ರ ಸರ್ಕಾರ ಘೋಷಣೆಯ ಸರ್ಕಾರವಾಗಿದೆಯೇ ಹೊರತು, ಅನುಷ್ಠಾನದ ಸರ್ಕಾರವಾಗಿಲ್ಲ ಬಡ ಚಾಲಕರು, ಸಣ್ಣ-ಪುಟ್ಟ ವೃತ್ತಿ ನಿರತರಿಗೆ ಅಧೀಕೃತ ಸರ್ಕಾರಿ ನೋಂದಣಿಯಿಲ್ಲದಿದ್ದರೂ ಮಾಸಿಕ ಪರಿಹಾರ ನೀಡಬೇಕು. 20 ಕೋಟಿ ಪ್ಯಾಕೇಜ್ ಕರೋನಾ ಕಾಲದ ಸುಳ್ಳು. ಈ ಪ್ಯಾಕೇಜ್ ಗಿಂತ ಹಿಂದಿನ ಘೋಷಣೆಗಳ ಅನುಷ್ಠಾನ, ಸಾಲ ಮನ್ನಾದಂಥ ವಿದಾಯಕ ಯೋಜನೆಗಳನ್ನು ಕೊಡಬೇಕಿತ್ತು. – ಭೀಮಣ್ಣ ನಾಯ್ಕ, ಡಿ.ಸಿ.ಸಿ. ಅಧ್ಯಕ್ಷ

ಇದು ದೀರ್ಘ ಕಾಲಿಕ ಪರಿಣಾಮದ ಪ್ಯಾಕೇಜ್, ಇಂಥ ಬೃಹತ್ ಪ್ಯಾಕೇಜ್ ನಿಂದ ಈ ಕ್ಷಣದ ಲಾಭ ನಿರೀಕ್ಷಿಸಬಾರದು. -ನಾಗರಾಜ್ ನಾಯ್ಕ, ಜಿ.ಪಂ. ಸದಸ್ಯ.

20 ಲಕ್ ಕೋಟಿ ಪ್ಯಾಕೇಜ್ ನಿಂದ ಧೀರ್ಘ ಕಾಲಿಕ ಲಾಭ ಆಗಬಹುದು, ದಾಖಲೆ, ಗ್ಯಾರಂಟಿ ಇಲ್ಲದೆ ಹೆಚ್ಚುವರಿ ಕಡಿಮೆ ಬಡ್ಡಿದರದ ಸಾಲ, ತೆರಿಗೆ ವಿನಾಯಿತಿ, ಜಿ.ಎಸ್.ಟಿ., ತೆರಿಗೆ ಭರಣಕ್ಕೆ ಸಮಯಾವಕಾಶ ಇವುಗಳಿಂದ ಚಿಕ್ಕ ಉದ್ದಿಮೆಗಳಿಗೆ ಅನುಕೂಲವಾಗಿದೆ. -ವಿಜಯ ಪ್ರಭು, ಉದ್ಯಮಿ

20 ಲಕ್ಷ ಕೋಟಿ ಪ್ಯಾಕೇಜ್ ಸರ್ಕಾರದ ವ್ಯವಹಾರ ಚತುರತೆಗೆ ಸಾಕ್ಷಿ. ಇದು ಅಂಕಿ-ಅಂಶಗಳ ಮ್ಯಾಜಿಕ್ ಕಣ್ಣೊರೆಸುವ ತಂತ್ರ. ಇದರಿಂದ ಲಾಭ ಆಗುವ ನಿರೀಕ್ಷೆ ಇಲ್ಲ. ಜನರ ಅನಿವಾರ್ಯತೆಯ ಸಮಯದಲ್ಲಿ ಸಾಲ ಕೊಡುವ ಸ್ಕೀಮ್ ಮಾದರಿಯ ಪ್ಯಾಕೇಜ್ ನಿಂದ ಜನರು ಬಡತನ ರೇಖೆ ದಾಟಿ ಶ್ರೀಮಂತರಾಗುವ ಕೇಂದ್ರದ ಘೋಷಣೆ ಯಶಸ್ವಿಯಾದರೆ ಜನತೆ ಮೋದಿಯವರನ್ನು ದೇವರಂತೆ ಕಾಣುತ್ತಾರೆ. ಸ್ಫಷ್ಟತೆ ಇಲ್ಲದ, ಪಾರದರ್ಶಕವಲ್ಲದ ಈ ಪ್ಯಾಕೇಜ್ ಶ್ರೀಮಂತರನ್ನು ಮತ್ತಷ್ಟು ಶ್ರೀಮಂತರನ್ನಾಗಿಸುವ ಬಿ.ಜೆ.ಪಿ. ಯೋಜನೆ. -ಕೆ.ಜಿ. ನಾಗರಾಜ್, ಅಧ್ಯಕ್ಷರು ಎ.ಪಿ.ಎಂ.ಸಿ.

20 ಲಕ್ಷ ಕೋಟಿ ಪ್ಯಾಕೇಜ್ ಎನ್ನುವುದು ಬರೀ ಘೋಷಣೆಗೆ ಸೀಮಿತ, ರೈತರಿಗೆ, ಬಡವರಿಗೆ ಜನಸಾಮಾನ್ಯರಿಗೆ ಯಾವ ದೃಷ್ಟಿಯಿಂದಲೂ ಉಪಯೋಗವಿಲ್ಲದ ಈ ಪ್ಯಾಕೇಜ್ ಕನ್ನಡಯೊಳಗಿನ ಗಂಟು. ಜನಸಾಮಾನ್ಯರು ಇಂಥ ಪುಕ್ಕಟ್ಟೆ ಪ್ರಚಾರವನ್ನು ನಂಬುವುದೂ ಇಲ್ಲ. -ಈಶ್ವರ ನಾಯ್ಕ, ಮನ್ಮನೆ, (ಜಿ.ಪಂ. ಮಾಜಿ ಸದಸ್ಯ)

ಜನಸಾಮಾನ್ಯರ ಬಳಕೆಯ ಅಡುಗೆ ಅನಿಲ, ಪೆಟ್ರೋಲ್, ಡಿಸೆಲ್ ಗಳ ದರ ಏರಿಕೆಯಾಗಿದೆ.ಕರೋನಾ ಪೂರ್ವ, ಕರೋನಾ ಸಂಕಷ್ಟದ ಸಮಯದಲ್ಲಿ ಜನಸಾಮಾನ್ಯರಿಗೆ ನೆರವಾಗುವುದನ್ನು ಬಿಟ್ಟು ಕನ್ನಡಿಯಲ್ಲಿ ಹಣ್ಣು-ವಸ್ತು ಇಟ್ಟು ತಿನ್ನಿ ಎನ್ನುವಂಥ ಸುಳ್ಳಿನ ಪ್ಯಾಕೇಜ್ ಇದು. 136 ಕೋಟಿ ಜನರಿಗೆ 20ಲಕ್ಷ ಕೋಟಿ ಪ್ಯಾಕೇಜ್ ಎನ್ನುವ ಸುಳ್ಳನ್ನು ನಂಬುವ ವಿರೋಧ ಪಕ್ಷಗಳು,ಈ ಸುಳ್ಳನ್ನು ಪ್ರಚಾರ ಮಾಡುವ ಮಾಧ್ಯಮಗಳು ಜನವಿರೋಧಿಗಳು 20 ಲಕ್ಷ ಕೋಟಿ ಪ್ಯಾಕೇಜ್ ಆಡಳಿತ ಪಕ್ಷದ ಮುಖಂಡರು, ಜನಪ್ರತಿನಿಧಿಗಳು,ಅವರ ಆಪ್ತ ಉದ್ಯಮಿಗಳ ರಕ್ಷಣೆಗೆ ಮಾಡಿರುವ ಪರ್ಯಾಯ ಬಜೆಟ್ ಎನಿಸುತ್ತಿದೆ. – ವಸಂತ ನಾಯ್ಕ, (ತಾ.ಪಂ. ಮಾಜಿ ಸದಸ್ಯ)

ಕಾರಂಟೈನ್ ನಲ್ಲಿರುವ ಅನೇಕರಲ್ಲಿ ಕೋವಿಡ್ ಶಂಕೆ, ಉತ್ತರಕನ್ನಡ-ಶಿವಮೊಗ್ಗ ಗಳಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳು
ಉತ್ತರಕನ್ನಡ ಜಿಲ್ಲೆಯ 6 ಸಾವಿರ ಜನರು ಸೇರಿ ಕರ್ನಾಟಕದೆಲ್ಲೆಡೆ ಕಾರಂಟೈನ್ ಆಗಿರುವ ಲಕ್ಷಾಂತರ ಜನರಲ್ಲಿ ಸಾವಿರಾರು ಜನರು ಕರೋನಾ ಕ್ಕೆ ತುತ್ತಾಗಿರುವ ಬಗ್ಗೆ ಈಗ ಶಂಕೆ ವ್ಯಕ್ತವಾಗಿದೆ.
ಮೊದಮೊದಲು ಉತ್ತರ ಕನ್ನಡ ಜಿಲ್ಲೆಗೆ ಬಂದ ಹೊರದೇಶಗಳ ಉದ್ಯೋಗಿಗಳು ಕೋವಿಡ್ ಪ್ರಾರಂಭಕ್ಕೆ ಕಾರಣವಾದರು. ನಂತರ ತಬ್ಲಿಘಿಗಳ ಓಡಾಟ,ಒಡನಾಟದಿಂದ ಕರೋನಾ ದೇಶ ಸುತ್ತತೊಡಗಿತ್ತು.
ಈಗ ಮಹಾರಾಷ್ಟ್ರ,ಗುಜರಾತ್, ಚಿನ್ನೈಗಳಿಂದ ಬಂದ ಜನರು ಉತ್ತರಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕರೋನಾ ಹಬ್ಬಿಸುತಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ದೃಢಪಟ್ಟ ಎರಡು ಕರೋನಾ ಪಾಸಿಟಿವ್ ಪ್ರಕರಣಗಳು ಮಹಾರಾಷ್ಟ್ರದಿಂದ ಬಂದ ವ್ಯಕ್ತಿಗಳ ಪ್ರಕರಣಗಳು. ಮಹಾರಾಷ್ಟ್ರದಿಂದ
ಶಿವಮೊಗ್ಗ ಜಿಲ್ಲೆ ಸೊರಬಾ ಕ್ಕೆ ಹೊರಟಿದ್ದ ಈ ಕುಟುಂಬವನ್ನು ಪೊಲೀಸರು ಯಲ್ಲಾಪುರದಲ್ಲಿ ತಡೆದು ಕಾರಂಟೈನ್ ಮಾಡಿದ್ದರು. ಈ ಎರಡೂ ಪ್ರಕರಣಗಳಂತೆ ಉತ್ತರಕನ್ನಡದ 6 ಸಾವಿರ ಕಾರಂಟೈನ್ ಆದ ಜನರು ಹಾಗೂ ರಾಜ್ಯದ ಲಕ್ಷಾಂತರ ಜನರಲ್ಲಿ ಕರೋನಾ ಕಾಣಿಸಿಕೊಳ್ಳುವ ಅಪಾಯದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ.
ಬಸ್ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುವುದು, ಹೊರ ರಾಜ್ಯಗಳಿಂದ ಬಂದ ಜನರ ತಪಾಸಣೆ, ಕಾರಂಟೈನ್ ಕ್ರಮಗಳ ನಡುವೆ ನುಸುಳುಕೋರರು ಸುದ್ದಿಮಾಡದೆ ಗ್ರಾಮ, ನಗರ ಸೇರಿಕೊಂಡಿರುವ ಅನೇಕ ಉದಾಹರಣೆಗಳೂ ಇವೆ.
ಈ ವಿಶೇಶ ಪ್ರಕರಣಗಳ ಹಿನ್ನೆಲೆಯಲ್ಲಿ ಒಬ್ಬೊಬ್ಬ ವ್ಯಕ್ತಿ ನೂರಾರು ಜನರಿಗೆ ಕರೋನಾ ವಿಸ್ತರಿಸುವ ಅಪಾಯವಿರುವುದರಿಂದ ಸಾರ್ವಜನಿಕರು ಓಡಾಟ, ವಹಿವಾಟು ನಿಲ್ಲಿಸಿ ಮನೆಯಲ್ಲೇ ಉಳಿಯುವುದು ಮತ್ತು ಕರೋನಾ ನಿರ್ಬಂಧದ ಉಪಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸಂಕಷ್ಟದಿಂದ ಪಾರಾಗಬೇಕಿದೆ.

ಶಿವಮೊಗ್ಗ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಕಾರಂಟೈನ್ ಶಿಕ್ಷೆ!
ಗ್ರೀನ್ ಜೋನ್ ಆಗಿದ್ದ ಶಿವಮೊಗ್ಗ ಜಿಲ್ಲೆ ಕರೋನಾ ಕಿತ್ತಳೆ ವಲಯವಾಗಿರುವುದು ಹಳೆಯ ಸುದ್ದಿ ಈಗಿನ ಹೊಸ ವರ್ತಮಾನವೆಂದರೆ…
ಶಿವಮೊಗ್ಗದ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳು ಕಾರಂಟೈನ್ ಆಗುವ ಅಪಾಯಕ್ಕೆ ಸಿಕ್ಕಿಕೊಂಡಿದ್ದಾರೆ.
ಎರಡು ದಿವಸಗಳ ಹಿಂದೆ ಕೋವಿಡ್ ದೃಢಪಟ್ಟ 15 ವರ್ಷದ ಬಾಲಕಿ ಪೋಸ್ಕೋ ಪ್ರಕರಣವೊಂದರ ಸಂತೃಸ್ತೆಯಾಗಿದ್ದಾರೆ. ಈ ಬಾಲಕಿಯನ್ನು ತನಿಖೆ ಕಾರಣಕ್ಕೆ ವಿಚಾರಣೆ ನಡೆಸಿದ ಶಿಕಾರಿಪುರದ ಇನ್ಪೆಕ್ಟರ್,ಶಿವಮೊಗ್ಗ ಎ.ಎಸ್.ಪಿ. ಹಾಗೂ ಎಸ್.ಪಿ. ಸೇರಿ ಮೂವರು ಅಧಿಕಾರಿಗಳು ಈ ಸಂತೃಸ್ತೆಯ ಸಂಪರ್ಕಕ್ಕೆ ಒಳಪಟ್ಟಿದ್ದರು. ಈ ಸಂತೃಸ್ತೆಗೆ ಅವಳ ಹಿಂದಿನ ಟ್ರಾವೆಲ್ ಹಿಸ್ಟರಿ ಸಂಗ್ರಹಿಸಿದ್ದಾಗ ಶಿಕಾರಿಪುರದಿಂದ ಶಿವಮೊಗ್ಗ ವರೆಗೆ ಮೂವರು ಅಧಿಕಾರಿಗಳು ಈ ಸಂತೃಸ್ತೆಯ ಸಂಪರ್ಕಕ್ಕೆ ಬಂದಿದ್ದು ಇವರೆಲ್ಲರೂ ಈಗ ಕಾರಂಟೈನ್ ಆಗುವ ಶಿಕ್ಷೆಗೆ ಗುರಿಯಾದಂತಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *