ಸರ್ವರಿಗೂ ದಿವ್ಯೌಷಧ ನಾರಾಯಣ ಗುರು ಸಿದ್ಧಾಂತ -by-lohit naik

ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು,’ ವೆಂಬ, ಒಬ್ಬ ಸಾಮಾಜಿಕ ಸುಧಾರಕ ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀ ಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, ” ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು,” ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು. ಅವರು ಬೋಧಿಸಿದ್ದು, ದೇಶಸೇವೆಯೇ ಈಶ ಸೇವೆಯೆಂದು.

೧೨ನೆ ಶತಮಾನದ ಬಸವಣ್ಣನ ಕಾಲದ ಕ್ರೌರ್ಯಕ್ಕಿಂತ ಇಮ್ಮಡಿ, ಮುಮ್ಮಡಿಯಾದ ಕ್ರೌರ್ಯ, ದೌರ್ಜನ್ಯ, ಹಿಂಸೆ, ಬುದ್ಧಿ ಜೀವಿಗಳ ನಾಡಾದ ಕೇರಳದಲ್ಲಿ ೧೯ನೆ ಶತಮಾನದ ಅಂತ್ಯ ಮತ್ತು ೨೦ನೆ ಶತಮಾನದ ಆರಂಭದಲ್ಲಿ ನಡೆದಿತ್ತು.
ಅಂತಹ ಜಾತೀಯತೆ, ಅಸ್ಪ್ರಶ್ಯತೆ ಎಂಬ ವಿಷ ವೃಕ್ಷವು ಇಡೀ ಶೂದ್ರ ಜನಸಮೂಹವನ್ನು ಉಸಿರುಗಟ್ಟಿ ಸಾಯಿಸು ತ್ತಿರುವ ಘೋರ ಕ್ರೌರ್ಯದ ತುರಿಯಾವಸ್ಥೆಯಲ್ಲಿ `ಈಳವ’ ಎಂಬ ಅಸ್ಪ್ರಶ್ಯ ಜಾತಿಯಲ್ಲಿ ನಾರಾಯಣ ಗುರು ಎಂಬ ಪವಿತ್ರಾತ್ಮನ ಜನ್ಮವಾಯಿತು.
ಇಂತಹ ಜಾತೀಯತೆ, ಅಸ್ಪ್ರಶ್ಯತೆ ಎಂಬ ಕೊಳಕಿನಿಂದ ಸಮಾಜ ಕೊಳೆಯುತ್ತಿರುವಾಗ ನಾರಾಯಣ ಗುರುಗಳು ಅವತಾರ ಪುರುಷರಂತೆ, ಪ್ರವಾದಿಯಂತೆ ಜನ್ಮ ತಾಳುತ್ತಾರೆ. ಅನ್ಯ ಧರ್ಮಗಳನ್ನು ಖಂಡಿಸಿ ಅದ್ವೈತ ಮತ ಸ್ಥಾಪನಾಚಾರ್ಯರೆಂದು ಪ್ರಸಿದ್ಧಿ ಪಡೆದ ಶ್ರೀ ಶಂಕರಾಚಾರಾಚಾರ್ಯರು ತಮ್ಮ ಅದ್ವೈತ ಸಿದ್ಧಾಂತಕ್ಕೆ ಓರ್ವ ಹರಿಜನ ಗುರು ಎಂದು ಸ್ವೀಕರಿಸಿಕೊಂಡರೆ, ಕಾಲಕ್ರಮದಲ್ಲಿ ಅವರ ಹುಟ್ಟು ನಾಡಾದ ಕೇರಳವು ಜಾತಿಭೇದ ಮತ್ತು ಅಸ್ಪ್ರಶ್ಯತೆಯ ಹುಚ್ಚರ ಸಂತೆಯಾಯಿತು.

ಈಗಲೂ ಅಷ್ಪೃಶ್ಯತೆ ಅನ್ನೋದು ಕಡಿಮೆ ಆಗಿಲ್ಲ. ಅಷ್ಪೃಶ್ಯತೆ ಜೊತೆಗೆ ಕೋಮುವಾದವು ಹೆಚ್ಚಾಗಿದೆ. ಆದರೆ ಈ ಕೋಮುವಾದವನ್ನು ತಳಸಮುದಾಯದವರಾದ ನಮ್ಮ ಈಡಿಗ ಸಮಾಜದ ಯುವಕರ ತಲೆಗೂ ತುಂಬಲಾಗುತ್ತಿದೆ ಹಾಗೂ ವ್ಯವಸ್ಥಿತವಾಗಿ ಅವರ ಕೋಮುವಾದಕ್ಕೆ ನಮ್ಮ ಯುವಕರೇ ಆಹಾರವಾಗುತ್ತಿರುವುದು ದುಃಖದ ವಿಷಯ.
ನಾರಾಯಣಗುರು ಪಾಲಿಸಿದ ತತ್ವದ ವಿರುದ್ಧ ದಿಕ್ಕಿನಲ್ಲಿ ನಮ್ಮ ಯುವಕರು ಸಾಗುತ್ತಿರುವುದು ಸಮಾಜಕ್ಕೆ ಮತ್ತು ನಮ್ಮ ಸಮಾಜದ ದೈವೀ ಸ್ವರೂಪಿಯಾದ ನಾರಾಯಣಗುರುಗಳಿಗೆ ನಾವು ಎಸಗುತ್ತಿರುವ ದ್ರೋಹ ಎಂದು ಹೇಳಬಹುದು..
ಈ ವೈದಿಕ ಮನಸ್ಥಿತಿಯವರು ನಮ್ಮನ್ನು ಶತಮಾನಗಳಿಂದ ಶೋಷಣೆ ಮಾಡುತ್ತ, ಪ್ರಾಣಿಗಳಿಗಿಂತ ಕೀಳಾಗಿ ನಡೆಸಿಕೊಂಡಿರುತ್ತಾರೆ. ಅಂಥಹ ವೈದಿಕರ ವಿರುದ್ಧ ಸೆಟೆದು ನಿಂತು ಸಮಾಜದ ಅಭ್ಯುದಯಕ್ಕಾಗಿ ಹೋರಾಟ ಮಾಡಿದ ಗುರುಗಳ ತತ್ವಾದರ್ಶಗಳನ್ನ ನಾವು ಪಾಲಿಸಬೇಕೆ ಹೊರತು ವೈದಿಕರ ಪಿತೂರಿಗೆ ನಾವು ಬಲಿಯಾಗಿ ನಮ್ಮದಲ್ಲದ ಸಿದ್ದಾಂತವನ್ನು ಮೈಗೂಡಿಸಿಕೊಳ್ಳಬಾರದು.

ರಾಷ್ಟ್ರೀಯತೆ ಮತ್ತು ಹಿಂದುತ್ವ ಎನ್ನುವ ಹೆಸರಿನಲ್ಲಿ ನಮ್ಮನ್ನು ಈ ವೈದಿಕರು ಬಳಸಿಕೊಳ್ಳುತ್ತಿದ್ದಾರೆ. ಅವರ ಕುತಂತ್ರಕ್ಕೆ ನಾವು ಬಲಿಯಾಗುತ್ತಿದ್ದೇವೆ, ಅವರಿಗೆ ನಾವೇ ದೊಡ್ಡ ಅಸ್ತ್ರವಾಗಿದ್ದೇವೆ. ನಮ್ಮನ್ನು ಬಳಸಿಕೊಂಡು ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಈ ರೀತಿಯ ಕುತಂತ್ರಗಳಿಗೆ ನಾವು ಬಲಿಯಾಗದೆ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಗಳನ್ನು ಮೈಗೂಡಿಸಿಕೊಂಡು ಮುನ್ನಡೆದಾಗ ಮಾತ್ರ ಸುಸ್ಥಿರ ಸಮಾಜ ನಿರ್ಮಾಣವಾಗುತ್ತದೆ..

– ಲೋಹಿತ್ ನಾಯ್ಕ ಈರಗೊಪ್ಪ (ಬೆಂಗಳೂರು)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *