ಸರ್ವರಿಗೂ ದಿವ್ಯೌಷಧ ನಾರಾಯಣ ಗುರು ಸಿದ್ಧಾಂತ -by-lohit naik

ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು,’ ವೆಂಬ, ಒಬ್ಬ ಸಾಮಾಜಿಕ ಸುಧಾರಕ ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀ ಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, ” ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು,” ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು. ಅವರು ಬೋಧಿಸಿದ್ದು, ದೇಶಸೇವೆಯೇ ಈಶ ಸೇವೆಯೆಂದು.

೧೨ನೆ ಶತಮಾನದ ಬಸವಣ್ಣನ ಕಾಲದ ಕ್ರೌರ್ಯಕ್ಕಿಂತ ಇಮ್ಮಡಿ, ಮುಮ್ಮಡಿಯಾದ ಕ್ರೌರ್ಯ, ದೌರ್ಜನ್ಯ, ಹಿಂಸೆ, ಬುದ್ಧಿ ಜೀವಿಗಳ ನಾಡಾದ ಕೇರಳದಲ್ಲಿ ೧೯ನೆ ಶತಮಾನದ ಅಂತ್ಯ ಮತ್ತು ೨೦ನೆ ಶತಮಾನದ ಆರಂಭದಲ್ಲಿ ನಡೆದಿತ್ತು.
ಅಂತಹ ಜಾತೀಯತೆ, ಅಸ್ಪ್ರಶ್ಯತೆ ಎಂಬ ವಿಷ ವೃಕ್ಷವು ಇಡೀ ಶೂದ್ರ ಜನಸಮೂಹವನ್ನು ಉಸಿರುಗಟ್ಟಿ ಸಾಯಿಸು ತ್ತಿರುವ ಘೋರ ಕ್ರೌರ್ಯದ ತುರಿಯಾವಸ್ಥೆಯಲ್ಲಿ `ಈಳವ’ ಎಂಬ ಅಸ್ಪ್ರಶ್ಯ ಜಾತಿಯಲ್ಲಿ ನಾರಾಯಣ ಗುರು ಎಂಬ ಪವಿತ್ರಾತ್ಮನ ಜನ್ಮವಾಯಿತು.
ಇಂತಹ ಜಾತೀಯತೆ, ಅಸ್ಪ್ರಶ್ಯತೆ ಎಂಬ ಕೊಳಕಿನಿಂದ ಸಮಾಜ ಕೊಳೆಯುತ್ತಿರುವಾಗ ನಾರಾಯಣ ಗುರುಗಳು ಅವತಾರ ಪುರುಷರಂತೆ, ಪ್ರವಾದಿಯಂತೆ ಜನ್ಮ ತಾಳುತ್ತಾರೆ. ಅನ್ಯ ಧರ್ಮಗಳನ್ನು ಖಂಡಿಸಿ ಅದ್ವೈತ ಮತ ಸ್ಥಾಪನಾಚಾರ್ಯರೆಂದು ಪ್ರಸಿದ್ಧಿ ಪಡೆದ ಶ್ರೀ ಶಂಕರಾಚಾರಾಚಾರ್ಯರು ತಮ್ಮ ಅದ್ವೈತ ಸಿದ್ಧಾಂತಕ್ಕೆ ಓರ್ವ ಹರಿಜನ ಗುರು ಎಂದು ಸ್ವೀಕರಿಸಿಕೊಂಡರೆ, ಕಾಲಕ್ರಮದಲ್ಲಿ ಅವರ ಹುಟ್ಟು ನಾಡಾದ ಕೇರಳವು ಜಾತಿಭೇದ ಮತ್ತು ಅಸ್ಪ್ರಶ್ಯತೆಯ ಹುಚ್ಚರ ಸಂತೆಯಾಯಿತು.

ಈಗಲೂ ಅಷ್ಪೃಶ್ಯತೆ ಅನ್ನೋದು ಕಡಿಮೆ ಆಗಿಲ್ಲ. ಅಷ್ಪೃಶ್ಯತೆ ಜೊತೆಗೆ ಕೋಮುವಾದವು ಹೆಚ್ಚಾಗಿದೆ. ಆದರೆ ಈ ಕೋಮುವಾದವನ್ನು ತಳಸಮುದಾಯದವರಾದ ನಮ್ಮ ಈಡಿಗ ಸಮಾಜದ ಯುವಕರ ತಲೆಗೂ ತುಂಬಲಾಗುತ್ತಿದೆ ಹಾಗೂ ವ್ಯವಸ್ಥಿತವಾಗಿ ಅವರ ಕೋಮುವಾದಕ್ಕೆ ನಮ್ಮ ಯುವಕರೇ ಆಹಾರವಾಗುತ್ತಿರುವುದು ದುಃಖದ ವಿಷಯ.
ನಾರಾಯಣಗುರು ಪಾಲಿಸಿದ ತತ್ವದ ವಿರುದ್ಧ ದಿಕ್ಕಿನಲ್ಲಿ ನಮ್ಮ ಯುವಕರು ಸಾಗುತ್ತಿರುವುದು ಸಮಾಜಕ್ಕೆ ಮತ್ತು ನಮ್ಮ ಸಮಾಜದ ದೈವೀ ಸ್ವರೂಪಿಯಾದ ನಾರಾಯಣಗುರುಗಳಿಗೆ ನಾವು ಎಸಗುತ್ತಿರುವ ದ್ರೋಹ ಎಂದು ಹೇಳಬಹುದು..
ಈ ವೈದಿಕ ಮನಸ್ಥಿತಿಯವರು ನಮ್ಮನ್ನು ಶತಮಾನಗಳಿಂದ ಶೋಷಣೆ ಮಾಡುತ್ತ, ಪ್ರಾಣಿಗಳಿಗಿಂತ ಕೀಳಾಗಿ ನಡೆಸಿಕೊಂಡಿರುತ್ತಾರೆ. ಅಂಥಹ ವೈದಿಕರ ವಿರುದ್ಧ ಸೆಟೆದು ನಿಂತು ಸಮಾಜದ ಅಭ್ಯುದಯಕ್ಕಾಗಿ ಹೋರಾಟ ಮಾಡಿದ ಗುರುಗಳ ತತ್ವಾದರ್ಶಗಳನ್ನ ನಾವು ಪಾಲಿಸಬೇಕೆ ಹೊರತು ವೈದಿಕರ ಪಿತೂರಿಗೆ ನಾವು ಬಲಿಯಾಗಿ ನಮ್ಮದಲ್ಲದ ಸಿದ್ದಾಂತವನ್ನು ಮೈಗೂಡಿಸಿಕೊಳ್ಳಬಾರದು.

ರಾಷ್ಟ್ರೀಯತೆ ಮತ್ತು ಹಿಂದುತ್ವ ಎನ್ನುವ ಹೆಸರಿನಲ್ಲಿ ನಮ್ಮನ್ನು ಈ ವೈದಿಕರು ಬಳಸಿಕೊಳ್ಳುತ್ತಿದ್ದಾರೆ. ಅವರ ಕುತಂತ್ರಕ್ಕೆ ನಾವು ಬಲಿಯಾಗುತ್ತಿದ್ದೇವೆ, ಅವರಿಗೆ ನಾವೇ ದೊಡ್ಡ ಅಸ್ತ್ರವಾಗಿದ್ದೇವೆ. ನಮ್ಮನ್ನು ಬಳಸಿಕೊಂಡು ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಈ ರೀತಿಯ ಕುತಂತ್ರಗಳಿಗೆ ನಾವು ಬಲಿಯಾಗದೆ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಗಳನ್ನು ಮೈಗೂಡಿಸಿಕೊಂಡು ಮುನ್ನಡೆದಾಗ ಮಾತ್ರ ಸುಸ್ಥಿರ ಸಮಾಜ ನಿರ್ಮಾಣವಾಗುತ್ತದೆ..

– ಲೋಹಿತ್ ನಾಯ್ಕ ಈರಗೊಪ್ಪ (ಬೆಂಗಳೂರು)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *