ಸರ್ಕಾರದ ಕ್ರಮಕ್ಕೆ ವಿರೋಧ- ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕಡಿತ ಸಲ್ಲದು

(ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕಡಿತ ಸಲ್ಲದು-
ಚಿಂತನ ಉತ್ತರ ಕನ್ನಡ, ಸಹಯಾನ)

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಪ್ರತಿವರ್ಷ ಹೊರನಾಡಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ, ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಗಳಿಸಿದ ರಾಜ್ಯದ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಧನ ಸಹಾಯ ಮಾಡುವ ಕನ್ನಡದಲ್ಲಿ ತೀರ್ಪು ನೀಡಿದ ನ್ಯಾಯಾಧೀಶರಿಗೆ ಗೌರವ ನೀಡುವ … ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿತ್ತು. ಆದರೆ ಪ್ರಾಧಿಕಾರವು ಅನುದಾನದ ಕೊರತೆಯಿಂದ ಇಂತಹ ಎಲ್ಲಾ ಪ್ರೋತ್ಸಾಹಕ ಕಾರ್ಯಕ್ರಮಗಳನ್ನೂ ಕೈಬಿಡುವ ತೀರ್ಮಾನ ತೆಗೆದುಕೊಂಡಿರುವುದು ದುರಾದೃಷ್ಟಕರ.
ಅದರಲ್ಲೂ ಕನ್ನಡ ಸಾಹಿತ್ಯ- ಸಂಸ್ಕೃತಿ- ಭಾಷೆಯ ಅಭಿವೃದ್ಧಿಗೆ ಅಗತ್ಯವಿರುವ ಧನ ಸಹಾಯವನ್ನು ಸರ್ಕಾರ ಕಡಿತ ಮಾಡಿದ್ದನ್ನೂ ಕೂಡ ಮರುಪರಿಶೀಲಿಸುವಂತೆ ಚಿಂತನ ಉತ್ತರ ಕನ್ನಡ ಮತ್ತು ಸಹಯಾನ, ಕೆರೆಕೋಣ ಒತ್ತಾಯಿಸುತ್ತವೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದೇ ಕನ್ನಡ ಭಾಷೆ ಸಾಹಿತ್ಯ ಕಲೆ ಸಂಸ್ಕೃತಿಯನ್ನೂ ಒಳಗೊಂಡಂತೆ ನಾಡು ನುಡಿಯ ಹಿತಾಸಕ್ತಿಯ ರಕ್ಷಣೆಗಾಗಿ. ಹಾಗೆಯೇ ಅಧಿಕಾರಕ್ಕೆ ಬರುವ ಎಲ್ಲಾ ಸರ್ಕಾರಗಳೂ ಕನ್ನಡ ಅಭಿವೃದ್ಧಿಯ ಕೆಲಸಕ್ಕೆ ಬದ್ಧವಾಗಿರುವುದಾಗಿಯೂ, ಕನ್ನಡದ ಕೆಲಸಕ್ಕೆ ಹಣಕಾಸಿನ ಕೊರತೆ ಎಂದೂ ಆಗದೆಂದು ಭರವಸೆ ನೀಡಿದ್ದನ್ನು ಮರೆತಿರುವುದು ಖಂಡನಾರ್ಹ.
ಈಗಾಗಲೇ ದೇಶದ ಹಲವು ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಪೀಠಗಳಿವೆ, ಅಧ್ಯಯನ ಕೇಂದ್ರಗಳಿವೆ, ಅಲ್ಲಿ ಕನ್ನಡ ಕಲಿಕೆ ಮತ್ತು ಸಂಶೋಧನೆಯ ಕೆಲಸ ನಡೆಯುತ್ತಿದೆ. ಇದು ಕನ್ನಡ ನುಡಿಯ ವಿಸ್ತರಣೆಯ ದೃಷ್ಟಿಯಿಂದ ತೀರಾ ಮಹತ್ವದ ಕೆಲಸ. ಹೊರ ರಾಜ್ಯದಲ್ಲಿ ಓದುವ ವಿದ್ಯಾರ್ಥಿಗಳಿಗೆ ಧನಸಹಾಯವಾಗಿ ವಿದ್ಯಾರ್ಥಿವೇತನ ನೀಡುವುದು ಕೂಡ ಕನ್ನಡದ ಅಭಿವೃದ್ಧಿಯ ಒಂದು ಭಾಗವೇ ಆಗಿದೆ. ಹೀಗೆ ಅಲ್ಪ ಮೊತ್ತದ ವಿದ್ಯಾರ್ಥಿವೇತನವನ್ನು ನಿಲ್ಲಿಸಿರುವುದರಿಂದ ಅವರ ಕಲಿಕೆ ಮೊಟಕಾಗುತ್ತದೆ. ಅಲ್ಲಿಯ ಕನ್ನಡ ವಿಭಾಗಗಳೇ ಮುಚ್ಚಿ ಹೋಗುವ ಅಪಾಯ ಎದುರಾಗುತ್ತದೆ. ಇದರ ಬದಲು ವಿದ್ಯಾರ್ಥಿ ವೇತನದ ಮೊತ್ತವನ್ನೂ ಈಗಿರುವ ಪ್ರಮಾಣಕ್ಕಿಂತ ಹೆಚ್ಚಿಸಲು ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಲು ಒತ್ತಾಯಿಸುತ್ತೇವೆ.
ಹಾಗೆಯೇ ರಾಜ್ಯದಲ್ಲಿ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತಾಲೂಕಾವಾರು ನೀಡುತ್ತಿರುವ ಪ್ರೋತ್ಸಾಹ ಮತ್ತು ಧನ ಸಹಾಯವೂ ಕೂಡ ಹಲವು ಬಡ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗಿದೆ. ಕನ್ನಡ ಕಲಿಕೆಯ ಕುರಿತು ಅವರಲ್ಲಿ ಆಸಕ್ತಿ ಬೆಳೆಸಿದೆ. ಈ ಪ್ರೋತ್ಸಾಹ ಧನವನ್ನು ಇನ್ನಷ್ಟು ವಿಸ್ತರಿಸಬೇಕಾದ ಅಗತ್ಯವಿರುವ ಸಂದರ್ಭದಲ್ಲಿ ಕನ್ನಡ ಅಭಿವದ್ಧಿ ಪ್ರಾಧಿಕಾರವು ಹಣಕಾಸಿನ ಕೊರತೆಯ ನೆಪವೊಡ್ಡಿ ಈ ಕೆಲಸವನ್ನೇ ನಿಲ್ಲಿಸುತ್ತಿರುವುದು ಸರಿಯಾದ ಕ್ರಮವಲ್ಲ. ಪ್ರಾಧಿಕಾರವು ಕನ್ನಡದ ಮನಸ್ಸುಗಳನ್ನು ಒಟ್ಟು ಸೇರಿಸಿ ಸಮಾಲೋಚಿಸಿ ಸರ್ಕಾರಕ್ಕೆ ಮನವರಿಕೆ ಮಾಡಿ, ಒತ್ತಡ ತಂದು ಹಣ ಬಿಡುಗಡೆಯ ಕೆಲಸ ಮಾಡಿಸಬೇಕೇ ಹೊರತೂ ಹಣ ನೀಡಿಲ್ಲವೆಂದು ಕಾರ್ಯಕ್ರಮಗಳನ್ನೇ ಕೈಬಿಡುವುದಲ್ಲ. ಮತ್ತು ಪ್ರಾಧಿಕಾರಕ್ಕೆ ಈಗಿರುವ ಎರಡು ಕೋಟಿಯಿಂದ ಕನಿಷ್ಟ ಹತ್ತು ಕೋಟಿ ರೂಪಾಯಿ ಅನುದಾನವನ್ನು ಹೆಚ್ಚಿಸುವುದು ಸರ್ಕಾರಕ್ಕೆ ದೊಡ್ಡ ಹೊರೆಯೇನೂ ಆಗದು. ಈ ಹಣದಲ್ಲಿ ಪ್ರಾಧಿಕಾರವು ಕನ್ನಡದ ಚಿಂತಕರು ಸಂಘಟಕರು ಮತ್ತು ಕಲಾವಿದರೊಂದಿಗೆ ಸಮಾಲೋಚಿಸಿ ಕನ್ನಡ ಕಟ್ಟುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಮುಂದಾಗಬೇಕೆಂದು ಒತ್ತಾಯಿಸುತ್ತೇವೆ.
ವಿಠ್ಠಲ ಭಂಡಾರಿ
ಜಿಲ್ಲಾ ಸಂಚಾಲಕ, ಚಿಂತನ ಉತ್ತರ ಕನ್ನಡ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *