corona today-ಸಿದ್ಧಾಪುರದ ಜನರಲ್ಲಿ ಹೆಚ್ಚಿದ ಸಾಂಕ್ರಾಮಿಕ ರೋಗದ ಭೀತಿ, ಸ್ಫಂದನಕ್ಕಾಗಿ ಸ್ಥಳಿಯರ ಮನವಿ

ರಾಜ್ಯದಲ್ಲೇ ಅತಿ ಹೆಚ್ಚು ಮಂಗನಕಾಯಿಲೆ ಪೀಡಿತ ಜನರನ್ನು ಹೊಂದಿರುವ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಕೆ.ಎಫ್.ಡಿ.,ಡೆಂಗ್ಯೂ ಮತ್ತು ಕರೋನಾದಂಥ ಸಾಂಕ್ರಾಮಿಕ ಕಾಯಿಲೆಗಳ ಭೀತಿ ತಲೆದೋರಿದೆಯಾ ? ಎನ್ನುವ ಅನುಮಾನ ಬರುವಂತೆ ಇಲ್ಲಿಯ ವರ್ತಮಾನವಿದೆ.

ಸಿದ್ಧಾಪುರ ತಾಲೂಕೊಂದರಲ್ಲೇ ಈವರೆಗೆ 50 ಕ್ಕಿಂತ ಹೆಚ್ಚು ಮಂಗನಕಾಯಿಲೆ ಪೀಡಿತ ಜನರಲ್ಲಿ ಈ ವರ್ಷ ಒಂದು ಸಾವಿನ ನಂತರ ಎಚ್ಚೆತ್ತ ಆಡಳಿತಶಾಹಿ ಈ ಕಾಯಿಲೆಯಿಂದ ಆಗಬಹುದಾದ ಸಾವುಗಳನ್ನು ತಪ್ಪಿಸಿದೆ. ಈ ವರೆಗೆ ಕರೋನಾ ಮುಕ್ತವಾಗಿದ್ದ ತಾಲೂಕು ಇಂದು ಒಂದು ಪ್ರಕರಣದಿಂದ ಕರೋನಾ ಪೀಡಿತರ ಸಂಖ್ಯೆಯನ್ನು ದಾಖಲಿಸಿದೆ.
ಈ ಮಂಗನಕಾಯಿಲೆ ಮತ್ತು ಕರೋನಾ ಗಳ ನಡುವೆ ತಾಲೂಕಿನ ಒಬ್ಬರಲ್ಲಿ ಡೆಂಗ್ಯೂ ಕಂಡುಬಂದ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ವಿದ್ಯಮಾನಗಳ ಹಿನ್ನೆಲೆಯಲ್ಲಿ ಇಂದು ತಾಲೂಕಿಗೆ ಭೇಟಿ ನೀಡಿದ್ದ ಶಿರಸಿ ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ ತಾಲೂಕಿನಲ್ಲಿ ಒಬ್ಬ ವ್ಯಕ್ತಿಯಲ್ಲಿ ಕರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾಲೂಕಾ ಆಡಳಿತವನ್ನು ಎಚ್ಚರಿಸಿದರು.
ಕರೋನಾ ಮುನ್ನೆಚ್ಚರಿಕೆ, ಆಡಳಿತಾತ್ಮಕ ಕ್ರಮಗಳ ನಡುವೆ ಕೋವಿಡ್ ಪ್ರಸರಣವನ್ನು ನಿರ್ಲಕ್ಷಿಸುವಂತಿಲ್ಲ ಗ್ರಾಮೀಣ ಭಾಗದಲ್ಲಿ ಗ್ರಾಮೀಣಾಭಿವೃದ್ಧಿ ಅಧಿಕಾರಿಗಳು, ಗ್ರಾಮಲೆಕ್ಕಿಗರು ಕರೋನಾ ದೊಂದಿಗೆ ಇತರ ಸಾಂಕ್ರಾಮಿಕ ರೋಗಗಳು, ವಾಸ್ತವ ಸ್ಥಿತಿಗಳ ಬಗ್ಗೆ ಕರಾರುವಕ್ಕು ಮಾಹಿತಿ ನೀಡಬೇಕು ಎಂದು ಆದೇಶಿಸಿದರು.

ಇಂದು ಕೋವಿಡ್ ದೃಢಪಟ್ಟ ಸಿದ್ದಾಪುರದ ಮೊದಲ ಪ್ರಕರಣದ ವ್ಯಕ್ತಿ ತನ್ನ ಕುಟುಂಬದೊಂದಿಗೇ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯ ಕಾರಂಟೈನ್ ಕೇಂದ್ರದಲ್ಲಿ ಕಾರಂಟೈನ್ ಆಗಿದ್ದ ಕಾರಣ ಇತರರಿಗೂ ಕರೋನಾ ಪ್ರಸರಿಸಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಇಂಥ ಅಪಾಯದ ಸ್ಥಿತಿಯಲ್ಲಿ ತಾಲೂಕಾ ಅಡಳಿತದೊಂದಿಗೆ ನಿರ್ವಹಣೆಯ ಬಗ್ಗೆ ಚರ್ಚಿಸಿದ ಸಹಾಯಕ ಆಯುಕ್ತರು ಸಿದ್ಧಾಪುರದಲ್ಲಿ ವೈಯಕ್ತಿಕ ಅಂತರ ಪಾಲಿಸದ ಸಾರ್ವಜನಿಕರ ಮೇಲೆ ಕ್ರಮ ಜರುಗಿಸುವಂತೆ ತಾಕೀತು ಮಾಡಿದರು. ಬ್ಯಾಂಕ್,ಸಹಕಾರಿ ಸಂಘಗಳು ಸೇರಿದ ಹಣಕಾಸು ವ್ಯವಹಾರ, ವ್ಯಾಪಾರ ಕೇಂದ್ರಗಳಲ್ಲಿ ವೈಯಕ್ತಿಕ ಻ಂತರ ಕಾಪಾಡುವಂತೆ ಸಲಹೆ ನೀಡಿದರು.

ಜಿಲ್ಲಾಡಳಿತದ ನಿ ರ್ದೇಶ ನದ ಮೇರೆಗೆ ಸಮರೋಪಾದಿಯಲ್ಲಿ ಕೆಲಸ ಮಾಡುವ ತಾಲೂಕಾ ಆಡಳಿತಕ್ಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಾಂಸ್ಥಿಕ ಕಾರಂಟೈನ್ ಮತ್ತು ಹೋಮ್ ಕಾರಂಟೈನ್ ಪ್ರಕರಣಗಳನ್ನು ನಿಭಾಯಿಸುವುದು ಸವಾಲಾಗಿದೆ.

ಅನಿವಾರ್ಯ ಕಾರಣಗಳಿಂದ ಹೋಮ್ ಕಾರಂಟೈನ್ ಆಗಿರುವ ಸಾವಿರಾರು ಜನರು ತಮಗೆ ಆಹಾರ, ಇನ್ನಿತರ ಅನುಕೂಲ ಒದಗಿ ಸಬೇಕೆಂದು ತಾಲೂಕಾ ಆಡಳಿತವನ್ನು ವಿನಂತಿಸಿದ್ದಾರೆ, ಇಂಥ ಸಮಯದಲ್ಲಿ ಜನರೊಂದಿಗಿರಬೇಕಾದ ಜನಪ್ರತಿನಿಧಿಗಳಲ್ಲಿ ಕೆಲವರು ನಾಪತ್ತೆಯಾದರೆ ಕೆಲವರು ತಾವು ಆಯ್ಕೆ ಮಾಡಿದ ಜನರಿಗೆ ಕಿಟ್ ನೀಡಿ ಪ್ರಚಾರ ಪಡೆಯುತಿದ್ದಾರೆ.

ಸಾಂಸ್ಥಿಕ ಕಾರಂಟೈನ್ ಕೇಂದ್ರಗಳಲ್ಲಿ ಸರ್ಕಾರ ಅಗತ್ಯ ಅನುಕೂಲಗಳನ್ನು ಒದಗಿಸುತ್ತಿದೆ. ಆದರೆ ಅವಶ್ಯಕತೆಯಿದ್ದರೆ ಹೋಮ್ ಕಾರಂಟೈನ್ ಆದ ಜನರಿಗೂ ಆಹಾರ-ಧಾನ್ಯಗಳ ವ್ಯವಸ್ಥೆ ಮಾಡುವುದಾಗಿ ಸಹಾಯಕ ಆಯುಕ್ತರು ಭರವಸೆ ನೀಡಿದ್ದಾರೆ. . ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ, ಸುಕ್ಷಿತರ ತಾಲೂಕೆಂಬ ಹೆಗ್ಗಳಿಕೆಯ ತಾಲೂಕಿನಲ್ಲಿ ಬಹುಸಂಖ್ಯಾತರಾದ ಬಡವರು ಈಗ ರೋಗಗಳ ಭೀತಿಗೆ ಒಳಗಾಗಿದ್ದು ಅವರ ಬೆಳೆಸಾಲ, ವೈಯಕ್ತಿಕ ಸಾಲಗಳಿಗೆ ಸಮಯಾವಕಾಶ ನೀಡಿ ರಿಯಾಯತಿ, ಮನ್ನಾಗಳನ್ನು ಪ್ರಕಟಿಸಬೇಕೆಂಬ ಬೇ ಡಿಕೆ ವ್ಯಕ್ತವಾಗಿದೆ. ಬ್ಯಾಂಕುಗಳ ಅಸಹಕಾರ, ಅವ್ಯವಸ್ಥೆ,ಜನವಿರೋಧಿ ನೀತಿಗಳಿಂದ ರೈತರು, ಜನಸಾಮಾನ್ಯರಿಗೆ ತೊಂದರೆಯಾಗುತಿದ್ದು ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಜಿಲ್ಲಾಡಳಿತಕ್ಕೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಸರ್ಕಾರದ ನೀತಿ- ನಿಯಂತ್ರಣ, ಕಟ್ಟುಪಾಡುಗಳ ನಡುವೆ ಅನಾನುಕೂಲತೆ, ಅನಿವಾರ್ಯತೆಗಳಿಂದಾಗಿ ಜನರ ಓಡಾಟ,ವ್ಯವಹಾರ ಚಲನ-ವಲನ ಹೆಚ್ಚಿದೆ ಈ ಬಗ್ಗೆ ಅಧಿಕಾರಶಾಹಿಯಂತೆ ಜನಪ್ರತಿನಿಧಿಗಳ ಸ್ಫಂದನ ದೊರೆಯದಿರುವುದು ಸಾರ್ವಜನಿಕರ ಅಸಮಾಧನಕ್ಕೆ ಕಾರಣವಾಗಿದೆ.

ಈ ಎಲ್ಲಾ ಸಮಸ್ಯೆಗಳ ನಡುವೆ ಮಳೆಗಾಲ ಕಾಲಿಡುವ ಲಕ್ಷಣಗಳಿರುವುದರಿಂದ ಸಿದ್ಧಾಪುರ ಉತ್ತರಕನ್ನಡ ಜಿಲ್ಲೆಯ ಜೊತೆಗೆ ರಾಜ್ಯದಾದ್ಯಂತ ಸರ್ಕಾರ ಚುರುಕಿನಿಂದ ಜನರಿಗೆ ಸ್ಫಂದಿಸುವ ಅಗತ್ಯ ಹೆಚ್ಚಿದೆ. ಈ ಹಿನ್ನೆಲೆಗಳಲ್ಲಿ ಜನಸಾಮಾನ್ಯರಿಗಾಗುವ ತೊಂದರೆಗಳನ್ನು ಪರಿಹರಿಸುವ ದಿಸೆಯಲ್ಲಿ ಸರ್ಕಾರಿ ಯಂತ್ರದ ಸ್ಫಂದನೆ ಹೆಚ್ಚಬೇಕಿದೆ. ಈ ಬಗ್ಗೆ ಶೀಘ್ರ-ಸೂಕ್ತ ಕ್ರಮಗಳಿಗಾಗಿ ಪ್ರಯತ್ನಿಸುವ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ.

ಸಿದ್ಧಾಪುರದ ಮೊದಲ ಕರೋನಾ ಪ್ರಕರಣದ ಪ್ರವಾಸಕತೆ
ಇಂದು ಮತ್ತೆ ನಾಲ್ಕು ಹೊಸ ಕರೋನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಉತ್ತರಕನ್ನಡ ಜಿಲ್ಲೆಯ ಕೋವಿಡ್ ಸಂಖ್ಯೆ ಏರಿದೆ. ಜಿಲ್ಲೆಯ ಸಿದ್ಧಾಪುರ ಮತ್ತು ಅಂಕೋಲಾಗಳಲ್ಲಿ ಪತ್ತೆಯಾಗದ ಕರೋನಾ ಪ್ರಕರಣಗಳ ಮಧ್ಯೆ ಇಂದು ಸಿದ್ಧಾಪುರದ ಒಬ್ಬ ವ್ಯಕ್ತಿಯಲ್ಲಿ ಕರೋನಾ ದೃಢ ಪಡುವ ಮೂಲಕ ಸಿದ್ಧಾಪುರ ಕರೋನಾ ಮುಕ್ತ ತಾಲೂಕೆಂಬ ಹೆಗ್ಗಳಿಕೆಯಿಂದ ದೂರಾದಂತಾಗಿದೆ.

ಸಿದ್ಧಾಪುರ ಮೂಲದ ಮಹಾರಾಷ್ಟ್ರ ಠಾಣಾದಲ್ಲಿರುತ್ತಿದ್ದ ಕುಟುಂಬವೊಂದು ಮೇ 17 ರಂದು ಠಾಣಾದಿಂದ ಹೊರಟು 18 ರಂದು ಶಿರಸಿಯ ನೀಲೇಕಣಿ ತಪಾಸಣಾ ಗೇಟ್ ಬಳಿ ಜಿಲ್ಲಾಡಳಿತದ ವಶಕ್ಕೆ ಸಿಕ್ಕಿದ್ದರು. ಈ ಕುಟುಂಬ ಮೇ 19 ರಂದು ಕಾವಂಚೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಾರಂಟೈನ್ ಆಗಿತ್ತು. ಮೂರು ಮಕ್ಕಳ ಜೊತೆಗಿನ ಈ ಕುಟುಂಬ ಕಿ.ರಾ.ಚೆ. ವಸತಿ ಶಾಲೆಯ ಒಂದೇ ಕೋಣೆಯಲ್ಲಿ ಕಾರಂಟೈನ್ ಆಗಿತ್ತು. ಇವರ ಗಂಟಲು ದೃವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಕೋವಿಡ್ ಸೋಂಕು ದೃಢವಾದ ಈ ವ್ಯಕ್ತಿ ತನ್ನ ಕುಟುಂಬದೊಂದಿಗೆ ಮಹಾರಾಷ್ಟ್ರದಿಂದ ಬಾಡಿಗೆ ಕಾರಿನಲ್ಲಿ ಹುಟ್ಟೂರು ಪ್ರವೇಶಿಸಿತ್ತು. ಇವರನ್ನು ಸಿದ್ಧಾಪುರಕ್ಕೆ ತಲುಪಿಸಿದ ಕಾರಿನ ಚಾಲಕ ಮರಳಿ ಠಾಣಾ ತಲುಪಿದ್ದಾನೆ. ಈ ಕುಟುಂಬದ 5 ಜನರ ಗಂಟಲುದೃವದ ಮಾದರಿಗಳಲ್ಲಿ ಕುಟುಂಬದ ಮುಖ್ಯಸ್ಥರ ಮಾದರಿಯಲ್ಲಿ ಕರೋನಾ ಸೋಕು ದೃಢಪಟ್ಟಿದ್ದು ಉಳಿದ ನಾಲ್ವರ ವರದಿಗೆ ಕಾಯಲಾಗುತ್ತಿದೆ. ಸಿದ್ಧಾಪುರದ ಗ್ರಾಮೀಣ ಪ್ರದೇಶದ ಈ ಕುಟುಂಬ ಮಹಾರಾಷ್ಟ್ರದಿಂದ ಮರಳಿ ಮನೆ ತಲುಪುವ ಮಾರ್ಗ ಮಧ್ಯದಲ್ಲಿ ಜಿಲ್ಲಾಡಳಿತದ ಕೈ ಗೆ ಸಿಕ್ಕು ಸಂಭಾವ್ಯ ಅಪಾಯವನ್ನು ತಪ್ಪಿಸಿದಂತಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *