ದೇಶವಾಸಿಗಳನ್ನು ಉದ್ದೇಶಿಸಿ ಬಹಿರಂಗ ಪತ್ರ, ಏಕ್ ಭಾರತ್ ಶ್ರೇಷ್ಠ್ ಭಾರತ್ ಎಂದ ಪ್ರಧಾನಿ

ಮೋದಿ 2.0 ಸರ್ಕಾರಕ್ಕೆ 1 ವರ್ಷ:

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದು ಶನಿವಾರಕ್ಕೆ ಒಂದು ವರ್ಷವಾಗಿದೆ. ಕೊರೋನಾ ಬಿಕ್ಕಟ್ಟು ಸಂದರ್ಭದಲ್ಲಿ ದೇಶವಾಸಿಗಳನ್ನು ಉದ್ದೇಶಿಸಿ ಮೋದಿ ಪತ್ರ ಬರೆದಿದ್ದಾರೆ.

PM Narendra Modi

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದು ಶನಿವಾರಕ್ಕೆ ಒಂದು ವರ್ಷವಾಗಿದೆ. ಕೊರೋನಾ ಬಿಕ್ಕಟ್ಟು ಸಂದರ್ಭದಲ್ಲಿ ದೇಶವಾಸಿಗಳನ್ನು ಉದ್ದೇಶಿಸಿ ಮೋದಿ ಪತ್ರ ಬರೆದಿದ್ದಾರೆ.

ಸುದೀರ್ಘವಾಗಿ ಬರೆದ ಪತ್ರದಲ್ಲಿ ಪ್ರಧಾನಿ ಮೋದಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಲಸೆ ಕಾರ್ಮಿಕರು, ದೇಶದ ಜನರ ಆರ್ಥಿಕ ಸ್ಥಿತಿಗತಿ, ಸಣ್ಣ ವ್ಯಾಪಾರಿಗಳು, ಬೀದಿಬದಿ ವ್ಯಾಪಾರಿಗಳಿಗೆ ತೊಂದರೆಯಾಗಿದೆ. ಸರ್ಕಾರ ಈ ಸಂದರ್ಭದಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದಿದ್ದಾರೆ.

ಪತ್ರದಲ್ಲಿ ತಮ್ಮ ಸರ್ಕಾರ ಕೈಗೊಂಡ ಹಲವು ಪ್ರಮುಖ ನಿರ್ಧಾರಗಳು, ಆದೇಶಗಳು, ಸಂಸತ್ತಿನಲ್ಲಿ ಅನುಮೋದನೆಯಾದ ಕಾಯ್ದೆಗಳನ್ನು ಕೂಡ ಪ್ರಸ್ತಾಪಿಸಿದ್ದಾರೆ.

ಪತ್ರದಲ್ಲಿ ಏನಿದೆ: ಕಳೆದ ವರ್ಷ ಈ ದಿನ ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಸುವರ್ಣ ಅಧ್ಯಾಯ ಆರಂಭವಾಯಿತು. ಹಲವು ದಶಕಗಳ ನಂತರ ಭಾರತ ದೇಶದ ಜನರು ಸಂಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತಂದರು.

ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಕಾಪಾಡಲು ಜನರು ನಮಗೆ ಬೆಂಬಲ ನೀಡಿದ್ದಕ್ಕೆ ಈ ಸಂದರ್ಭದಲ್ಲಿ 130 ಕೋಟಿ ಭಾರತೀಯರಿಗೆ ಆಭಾರಿ. ಸಾಮಾನ್ಯ ದಿನಗಳಲ್ಲಾದರೆ ಇಂದು ನಾನು ನಿಮ್ಮ ಮಧ್ಯೆ ಇದ್ದು ಸಂಭ್ರಮಾಚರಣೆ ಮಾಡುತ್ತಿದ್ದೆ. ಆದರೆ ಇಂದು ಕೊರೋನಾದಿಂದಾಗಿ ಪರಿಸ್ಥಿತಿ ವ್ಯತಿರಿಕ್ತವಾಗಿದೆ. ಹೀಗಾಗಿ ನಿಮ್ಮೆಲ್ಲರನ್ನು ಉದ್ದೇಶಿಸಿ ಪತ್ರ ಬರೆಯುತ್ತಿದ್ದೇನೆ. ನಿಮ್ಮ ಪ್ರೀತಿ, ಹಾರೈಕೆ, ಸಹಕಾರ ನಮಗೆ ಹೊಸ ಶಕ್ತಿ, ಉತ್ಸಾಹ ನೀಡುತ್ತದೆ. ಪ್ರಜಾಪ್ರಭುತ್ವದ ಒಟ್ಟು ಶಕ್ತಿಯನ್ನು ನೀವು ತೋರಿಸುತ್ತಿರುವುದು ಇಡೀ ಜಗತ್ತಿಗೆ ಹೊಸ ಬೆಳಕಾಗಿದೆ.

2014ರಲ್ಲಿ ಈ ದೇಶದ ಜನರು ಮಹತ್ವದ ರೂಪಾಂತರಕ್ಕೆ ಬಯಸಿ ನಮಗೆ ಮತ ಹಾಕಿದರು. ಕಳೆದ ಐದು ವರ್ಷಗಳಲ್ಲಿ, ಆಡಳಿತ ಯಂತ್ರವು ಭ್ರಷ್ಟಾಚಾರದ ಜೌಗು ಮತ್ತು ದುರಾಡಳಿತವನ್ನು ಹೇಗೆ ಮುರಿಯಿತು ಎಂಬುದನ್ನು ರಾಷ್ಟ್ರ ನೋಡಿದೆ.ಅಂತ್ಯೋದಯ ಎಂಬ ಸ್ಪೂರ್ತಿಗೆ ಸರಿಯಾಗಿ ಲಕ್ಷಾಂತರ ಮಂದಿಯ ಬದುಕು ರೂಪಾಂತರಗೊಂಡಿದೆ.

2014ರಿಂದ 2019ರವರೆಗೆ ಭಾರತದ ನಿಲುವು ಗಮನಾರ್ಹವಾಗಿ ಏರಿಕೆಯಾಯಿತು. ಬಡವರ ಪರಿಸ್ಥಿತಿ ವಿಸ್ತರಿಸಲ್ಪಟ್ಟಿತು. ಹಣಕಾಸಿನ ಒಳಗೊಳ್ಳುವಿಕೆ, ಉಚಿತ ಅನಿಲ ಮತ್ತು ವಿದ್ಯುತ್ ಸಂಪರ್ಕ, ಸಂಪೂರ್ಣ ಶುಚಿತ್ವ, ಎಲ್ಲರಿಗೂ ಸೂರು ವಿಷಯಗಳಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದೆ.

ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿಯ ಮೂಲಕ ಭಾರತ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿತು.ಅದೇ ಹೊತ್ತಿಗೆ ದಶಕಗಳ ಕಾಲದ ಬೇಡಿಕೆಯಾದ ಒಆರ್ ಒಪಿ, ಒಂದು ರಾಷ್ಟ್ರ ಒಂದು ತೆರಿಗೆ-ಜಿಎಸ್ಟಿ, ರೈತರಿಗೆ ಉತ್ತಮ ಎಂಎಸ್ಪಿಗಳನ್ನು ಈಡೇರಿಸಲಾಗಿದೆ.

ಇದೆಲ್ಲದರ ಫಲ 2019ರಲ್ಲಿ ದೇಶದ ಜನ ಮತ್ತೆ ಎನ್ ಡಿಎ ಮೈತ್ರಿಕೂಟ ಪರ ಮತ ಹಾಕಿದರು. ಅದು ಭಾರತವನ್ನು ಜಾಗತಿಕ ಮಟ್ಟದಲ್ಲಿ ಬಲಶಾಲಿಯನ್ನಾಗಿ ಮಾಡಲು ಜನರು ತೋರಿಸಿದ ಕನಸು. ಇಂದು, 130 ಕೋಟಿ ಜನರು ರಾಷ್ಟ್ರದ ಅಭಿವೃದ್ಧಿ ಪಥದಲ್ಲಿ ಭಾಗಿಯಾಗಿದ್ದಾರೆ ಮತ್ತು ಸಂಯೋಜಿತರಾಗಿದ್ದಾರೆ. ‘ಜನ ಶಕ್ತಿ’ ಮತ್ತು ‘ರಾಷ್ಟ್ರ ಶಕ್ತಿ’ ಬೆಳಕು ಇಡೀ ರಾಷ್ಟ್ರವನ್ನು ಬೆಳಗಿಸಿದೆ. ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್’ ಎಂಬ ಮಂತ್ರದಿಂದ ನಡೆಸಲ್ಪಡುವ ಭಾರತವು ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದೆ ಸಾಗುತ್ತಿದೆ.

ಕಳೆದ ಒಂದು ವರ್ಷದಲ್ಲಿ ಮಾಡಿದ್ದೇನು?: 370 ನೇ ವಿಧಿ ರಾಷ್ಟ್ರೀಯ ಏಕತೆ ಮತ್ತು ಏಕೀಕರಣದ ಮನೋಭಾವವನ್ನು ಹೆಚ್ಚಿಸಿದೆ. ಸುಪ್ರೀಂ ಕೋರ್ಟ್ ಸರ್ವಾನುಮತದಿಂದ ನೀಡಿದ ರಾಮ ಮಂದಿರ ತೀರ್ಪು ಶತಮಾನಗಳಿಂದಲೂ ನಡೆಯುತ್ತಿರುವ ಚರ್ಚೆಗೆ ಸೌಹಾರ್ದಯುತವಾದ ಅಂತ್ಯವನ್ನು ತಂದಿತು. ತ್ರಿವಳಿ ತಲಾಖ್ ಎಂಬ ಶತಮಾನಗಳ ಅನಾಗರಿಕ ಸಂಪ್ರದಾಯ ಇನ್ನು ಇತಿಹಾಸ.

ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡುವುದು ಭಾರತದ ಸಹಾನುಭೂತಿ ಮತ್ತು ಅಂತರ್ಗತ ಮನೋಭಾವದ ಅಭಿವ್ಯಕ್ತಿಯಾಗಿತ್ತು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಹುದ್ದೆಯ ರಚನೆಯು ದೀರ್ಘಕಾಲದಿಂದ ಬಾಕಿ ಉಳಿದಿರುವ ಸುಧಾರಣೆಯಾಗಿದ್ದು ಅದು ಸಶಸ್ತ್ರ ಪಡೆಗಳ ನಡುವೆ ಸಮನ್ವಯವನ್ನು ಸುಧಾರಿಸಿದೆ. ಭಾರತವು ಮಿಷನ್ ಗಗನ ಯಾನಕ್ಕೆ ಸಿದ್ಧತೆ ಮಾಡಿಕೊಂಡಿದೆ.

ಬಡವರು, ರೈತರು, ಮಹಿಳೆಯರು ಮತ್ತು ಯುವಕರನ್ನು ಸಶಕ್ತಗೊಳಿಸುವುದು ನಮ್ಮ ಆದ್ಯತೆಯಾಗಿ ಉಳಿದಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಈಗ ಎಲ್ಲ ರೈತರನ್ನು ಒಳಗೊಂಡಿದೆ. ಕೇವಲ ಒಂದು ವರ್ಷದಲ್ಲಿ 72 ಕೋಟಿ ರೂ.ಗಳಿಗಿಂತ ಹೆಚ್ಚು ಹಣವನ್ನು 9 ಕೋಟಿ 50 ಲಕ್ಷ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ.

ಹೀಗೆ ಹತ್ತು ಹಲವು ವಿಷಯಗಳನ್ನು ಪ್ರಸ್ತಾಪಿಸಿ ಕೊನೆಗೆ 130 ಕೋಟಿ ಭಾರತೀಯರ ವರ್ತಮಾನ ಮತ್ತು ಭವಿಷ್ಯವನ್ನು ನಿರ್ಧರಿಸುವ ಸಮಯವಿದು. ಕೊರೋನಾ ಬಿಕ್ಕಟ್ಟು ಸಮಯದಲ್ಲಿ ಆತಂಕಪಡಬಾರದು. ನಾವು ಪ್ರಗತಿಯ ಹಾದಿಯಲ್ಲಿ ಮುಂದುವರಿಯುತ್ತಿದ್ದು, ಗೆಲುವು ನಮ್ಮದಾಗಲಿದೆ.

ನಮ್ಮ ದೇಶದ ಯಶಸ್ಸಿನ ಪ್ರಾರ್ಥನೆಯೊಂದಿಗೆ, ನಾನು ಮತ್ತೊಮ್ಮೆ ನಿಮಗೆ ನಮಸ್ಕರಿಸುತ್ತೇನೆ. ಆರೋಗ್ಯವಾಗಿರಿ, ಸುರಕ್ಷಿತವಾಗಿರಿ, ನಿಮಗೂ ನಿಮ್ಮ ಕುಟುಂಬಕ್ಕೂ ಮತ್ತೊಮ್ಮೆ ಶುಭಕಾಮನೆಗಳು, ಇಂತಿ ನಿಮ್ಮ ಪ್ರಧಾನ ಸೇವಕ ಎಂದು ಪತ್ರಕ್ಕೆ ಕೊನೆ ಹಾಡಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಂದರ್ಭಿಕ ಚಿತ್ರ‌ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ೨೪ ಗಂಟೆಗಳಲ್ಲಿ ನಿರಂತರ ಮಳೆಯಾಗಿದೆ. ಇದರ ಪರಿಣಾಮ ಶಿರಸಿ-ಅಂಕೋಲಾ ಮಾರ್ಗದ ಮಧ್ಯೆ ಗುಡ್ಡ...

Recommended For You

About the Author: Kanneshwar Naik

Leave a Reply

Your email address will not be published. Required fields are marked *