ದೇಶವಾಸಿಗಳನ್ನು ಉದ್ದೇಶಿಸಿ ಬಹಿರಂಗ ಪತ್ರ, ಏಕ್ ಭಾರತ್ ಶ್ರೇಷ್ಠ್ ಭಾರತ್ ಎಂದ ಪ್ರಧಾನಿ

ಮೋದಿ 2.0 ಸರ್ಕಾರಕ್ಕೆ 1 ವರ್ಷ:

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದು ಶನಿವಾರಕ್ಕೆ ಒಂದು ವರ್ಷವಾಗಿದೆ. ಕೊರೋನಾ ಬಿಕ್ಕಟ್ಟು ಸಂದರ್ಭದಲ್ಲಿ ದೇಶವಾಸಿಗಳನ್ನು ಉದ್ದೇಶಿಸಿ ಮೋದಿ ಪತ್ರ ಬರೆದಿದ್ದಾರೆ.

PM Narendra Modi

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದು ಶನಿವಾರಕ್ಕೆ ಒಂದು ವರ್ಷವಾಗಿದೆ. ಕೊರೋನಾ ಬಿಕ್ಕಟ್ಟು ಸಂದರ್ಭದಲ್ಲಿ ದೇಶವಾಸಿಗಳನ್ನು ಉದ್ದೇಶಿಸಿ ಮೋದಿ ಪತ್ರ ಬರೆದಿದ್ದಾರೆ.

ಸುದೀರ್ಘವಾಗಿ ಬರೆದ ಪತ್ರದಲ್ಲಿ ಪ್ರಧಾನಿ ಮೋದಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಲಸೆ ಕಾರ್ಮಿಕರು, ದೇಶದ ಜನರ ಆರ್ಥಿಕ ಸ್ಥಿತಿಗತಿ, ಸಣ್ಣ ವ್ಯಾಪಾರಿಗಳು, ಬೀದಿಬದಿ ವ್ಯಾಪಾರಿಗಳಿಗೆ ತೊಂದರೆಯಾಗಿದೆ. ಸರ್ಕಾರ ಈ ಸಂದರ್ಭದಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದಿದ್ದಾರೆ.

ಪತ್ರದಲ್ಲಿ ತಮ್ಮ ಸರ್ಕಾರ ಕೈಗೊಂಡ ಹಲವು ಪ್ರಮುಖ ನಿರ್ಧಾರಗಳು, ಆದೇಶಗಳು, ಸಂಸತ್ತಿನಲ್ಲಿ ಅನುಮೋದನೆಯಾದ ಕಾಯ್ದೆಗಳನ್ನು ಕೂಡ ಪ್ರಸ್ತಾಪಿಸಿದ್ದಾರೆ.

ಪತ್ರದಲ್ಲಿ ಏನಿದೆ: ಕಳೆದ ವರ್ಷ ಈ ದಿನ ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಸುವರ್ಣ ಅಧ್ಯಾಯ ಆರಂಭವಾಯಿತು. ಹಲವು ದಶಕಗಳ ನಂತರ ಭಾರತ ದೇಶದ ಜನರು ಸಂಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತಂದರು.

ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಕಾಪಾಡಲು ಜನರು ನಮಗೆ ಬೆಂಬಲ ನೀಡಿದ್ದಕ್ಕೆ ಈ ಸಂದರ್ಭದಲ್ಲಿ 130 ಕೋಟಿ ಭಾರತೀಯರಿಗೆ ಆಭಾರಿ. ಸಾಮಾನ್ಯ ದಿನಗಳಲ್ಲಾದರೆ ಇಂದು ನಾನು ನಿಮ್ಮ ಮಧ್ಯೆ ಇದ್ದು ಸಂಭ್ರಮಾಚರಣೆ ಮಾಡುತ್ತಿದ್ದೆ. ಆದರೆ ಇಂದು ಕೊರೋನಾದಿಂದಾಗಿ ಪರಿಸ್ಥಿತಿ ವ್ಯತಿರಿಕ್ತವಾಗಿದೆ. ಹೀಗಾಗಿ ನಿಮ್ಮೆಲ್ಲರನ್ನು ಉದ್ದೇಶಿಸಿ ಪತ್ರ ಬರೆಯುತ್ತಿದ್ದೇನೆ. ನಿಮ್ಮ ಪ್ರೀತಿ, ಹಾರೈಕೆ, ಸಹಕಾರ ನಮಗೆ ಹೊಸ ಶಕ್ತಿ, ಉತ್ಸಾಹ ನೀಡುತ್ತದೆ. ಪ್ರಜಾಪ್ರಭುತ್ವದ ಒಟ್ಟು ಶಕ್ತಿಯನ್ನು ನೀವು ತೋರಿಸುತ್ತಿರುವುದು ಇಡೀ ಜಗತ್ತಿಗೆ ಹೊಸ ಬೆಳಕಾಗಿದೆ.

2014ರಲ್ಲಿ ಈ ದೇಶದ ಜನರು ಮಹತ್ವದ ರೂಪಾಂತರಕ್ಕೆ ಬಯಸಿ ನಮಗೆ ಮತ ಹಾಕಿದರು. ಕಳೆದ ಐದು ವರ್ಷಗಳಲ್ಲಿ, ಆಡಳಿತ ಯಂತ್ರವು ಭ್ರಷ್ಟಾಚಾರದ ಜೌಗು ಮತ್ತು ದುರಾಡಳಿತವನ್ನು ಹೇಗೆ ಮುರಿಯಿತು ಎಂಬುದನ್ನು ರಾಷ್ಟ್ರ ನೋಡಿದೆ.ಅಂತ್ಯೋದಯ ಎಂಬ ಸ್ಪೂರ್ತಿಗೆ ಸರಿಯಾಗಿ ಲಕ್ಷಾಂತರ ಮಂದಿಯ ಬದುಕು ರೂಪಾಂತರಗೊಂಡಿದೆ.

2014ರಿಂದ 2019ರವರೆಗೆ ಭಾರತದ ನಿಲುವು ಗಮನಾರ್ಹವಾಗಿ ಏರಿಕೆಯಾಯಿತು. ಬಡವರ ಪರಿಸ್ಥಿತಿ ವಿಸ್ತರಿಸಲ್ಪಟ್ಟಿತು. ಹಣಕಾಸಿನ ಒಳಗೊಳ್ಳುವಿಕೆ, ಉಚಿತ ಅನಿಲ ಮತ್ತು ವಿದ್ಯುತ್ ಸಂಪರ್ಕ, ಸಂಪೂರ್ಣ ಶುಚಿತ್ವ, ಎಲ್ಲರಿಗೂ ಸೂರು ವಿಷಯಗಳಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದೆ.

ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿಯ ಮೂಲಕ ಭಾರತ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿತು.ಅದೇ ಹೊತ್ತಿಗೆ ದಶಕಗಳ ಕಾಲದ ಬೇಡಿಕೆಯಾದ ಒಆರ್ ಒಪಿ, ಒಂದು ರಾಷ್ಟ್ರ ಒಂದು ತೆರಿಗೆ-ಜಿಎಸ್ಟಿ, ರೈತರಿಗೆ ಉತ್ತಮ ಎಂಎಸ್ಪಿಗಳನ್ನು ಈಡೇರಿಸಲಾಗಿದೆ.

ಇದೆಲ್ಲದರ ಫಲ 2019ರಲ್ಲಿ ದೇಶದ ಜನ ಮತ್ತೆ ಎನ್ ಡಿಎ ಮೈತ್ರಿಕೂಟ ಪರ ಮತ ಹಾಕಿದರು. ಅದು ಭಾರತವನ್ನು ಜಾಗತಿಕ ಮಟ್ಟದಲ್ಲಿ ಬಲಶಾಲಿಯನ್ನಾಗಿ ಮಾಡಲು ಜನರು ತೋರಿಸಿದ ಕನಸು. ಇಂದು, 130 ಕೋಟಿ ಜನರು ರಾಷ್ಟ್ರದ ಅಭಿವೃದ್ಧಿ ಪಥದಲ್ಲಿ ಭಾಗಿಯಾಗಿದ್ದಾರೆ ಮತ್ತು ಸಂಯೋಜಿತರಾಗಿದ್ದಾರೆ. ‘ಜನ ಶಕ್ತಿ’ ಮತ್ತು ‘ರಾಷ್ಟ್ರ ಶಕ್ತಿ’ ಬೆಳಕು ಇಡೀ ರಾಷ್ಟ್ರವನ್ನು ಬೆಳಗಿಸಿದೆ. ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್’ ಎಂಬ ಮಂತ್ರದಿಂದ ನಡೆಸಲ್ಪಡುವ ಭಾರತವು ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದೆ ಸಾಗುತ್ತಿದೆ.

ಕಳೆದ ಒಂದು ವರ್ಷದಲ್ಲಿ ಮಾಡಿದ್ದೇನು?: 370 ನೇ ವಿಧಿ ರಾಷ್ಟ್ರೀಯ ಏಕತೆ ಮತ್ತು ಏಕೀಕರಣದ ಮನೋಭಾವವನ್ನು ಹೆಚ್ಚಿಸಿದೆ. ಸುಪ್ರೀಂ ಕೋರ್ಟ್ ಸರ್ವಾನುಮತದಿಂದ ನೀಡಿದ ರಾಮ ಮಂದಿರ ತೀರ್ಪು ಶತಮಾನಗಳಿಂದಲೂ ನಡೆಯುತ್ತಿರುವ ಚರ್ಚೆಗೆ ಸೌಹಾರ್ದಯುತವಾದ ಅಂತ್ಯವನ್ನು ತಂದಿತು. ತ್ರಿವಳಿ ತಲಾಖ್ ಎಂಬ ಶತಮಾನಗಳ ಅನಾಗರಿಕ ಸಂಪ್ರದಾಯ ಇನ್ನು ಇತಿಹಾಸ.

ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡುವುದು ಭಾರತದ ಸಹಾನುಭೂತಿ ಮತ್ತು ಅಂತರ್ಗತ ಮನೋಭಾವದ ಅಭಿವ್ಯಕ್ತಿಯಾಗಿತ್ತು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಹುದ್ದೆಯ ರಚನೆಯು ದೀರ್ಘಕಾಲದಿಂದ ಬಾಕಿ ಉಳಿದಿರುವ ಸುಧಾರಣೆಯಾಗಿದ್ದು ಅದು ಸಶಸ್ತ್ರ ಪಡೆಗಳ ನಡುವೆ ಸಮನ್ವಯವನ್ನು ಸುಧಾರಿಸಿದೆ. ಭಾರತವು ಮಿಷನ್ ಗಗನ ಯಾನಕ್ಕೆ ಸಿದ್ಧತೆ ಮಾಡಿಕೊಂಡಿದೆ.

ಬಡವರು, ರೈತರು, ಮಹಿಳೆಯರು ಮತ್ತು ಯುವಕರನ್ನು ಸಶಕ್ತಗೊಳಿಸುವುದು ನಮ್ಮ ಆದ್ಯತೆಯಾಗಿ ಉಳಿದಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಈಗ ಎಲ್ಲ ರೈತರನ್ನು ಒಳಗೊಂಡಿದೆ. ಕೇವಲ ಒಂದು ವರ್ಷದಲ್ಲಿ 72 ಕೋಟಿ ರೂ.ಗಳಿಗಿಂತ ಹೆಚ್ಚು ಹಣವನ್ನು 9 ಕೋಟಿ 50 ಲಕ್ಷ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ.

ಹೀಗೆ ಹತ್ತು ಹಲವು ವಿಷಯಗಳನ್ನು ಪ್ರಸ್ತಾಪಿಸಿ ಕೊನೆಗೆ 130 ಕೋಟಿ ಭಾರತೀಯರ ವರ್ತಮಾನ ಮತ್ತು ಭವಿಷ್ಯವನ್ನು ನಿರ್ಧರಿಸುವ ಸಮಯವಿದು. ಕೊರೋನಾ ಬಿಕ್ಕಟ್ಟು ಸಮಯದಲ್ಲಿ ಆತಂಕಪಡಬಾರದು. ನಾವು ಪ್ರಗತಿಯ ಹಾದಿಯಲ್ಲಿ ಮುಂದುವರಿಯುತ್ತಿದ್ದು, ಗೆಲುವು ನಮ್ಮದಾಗಲಿದೆ.

ನಮ್ಮ ದೇಶದ ಯಶಸ್ಸಿನ ಪ್ರಾರ್ಥನೆಯೊಂದಿಗೆ, ನಾನು ಮತ್ತೊಮ್ಮೆ ನಿಮಗೆ ನಮಸ್ಕರಿಸುತ್ತೇನೆ. ಆರೋಗ್ಯವಾಗಿರಿ, ಸುರಕ್ಷಿತವಾಗಿರಿ, ನಿಮಗೂ ನಿಮ್ಮ ಕುಟುಂಬಕ್ಕೂ ಮತ್ತೊಮ್ಮೆ ಶುಭಕಾಮನೆಗಳು, ಇಂತಿ ನಿಮ್ಮ ಪ್ರಧಾನ ಸೇವಕ ಎಂದು ಪತ್ರಕ್ಕೆ ಕೊನೆ ಹಾಡಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *