corona-bangalore to-sagar-via-kumta- ಬೆಂಗಳೂರಿನ ಪ್ರಕರಣದಿಂದ ಕಂಟೇನ್‍ಮೆಂಟ್ ಆದ ಜೋಗ ಬಳಿಯ ಕುಗ್ರಾಮ ಜಿಡ್ಡಿ -ಇಂತಿದೆ ಇಂದಿನ ಸಿದ್ಧಾಪುರದ ಪ್ರಕರಣಗಳ ಪ್ರವಾಸ ಚರಿತ್ರೆ

ಕಳೆದ ವಾರ ಸಿದ್ಧಾಪುರದ ಮೊದಲಪ್ರಕರಣವಾಗಿ ಉತ್ತರಕನ್ನಡ ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿಸಿದ ಪ್ರಕರಣದ ನಂತರ ಇಂದು ಒಂದೇ ದಿವಸ ಸಿದ್ಧಾಪುರದಲ್ಲಿ ಎರಡು ಜನರಲ್ಲಿ ಕರೋನಾಸೋಂಕು ದೃಢಪಟ್ಟಿವೆ.
ಸಿದ್ಧಾಪುರದ ಜಿಡ್ಡಿ ಗ್ರಾಮದ 5 ಮನೆಗಳ ಪ್ರದೇಶವನ್ನು ಕಂಟೇನ್ಮೆಂಟ್ ಮಾಡಿದ ಕರೋನಾ ಸೋಂಕಿತ 12 ದಿವಸಗಳ ಹಿಂದೆ ಮಸ್ಕತ್ ನಿಂದ ಬೆಂಗಳೂರಿಗೆ ಬಂದಿಳಿದ ವ್ಯಕ್ತಿ,

ಬೆಂಗಳೂರಿನಲ್ಲಿ10 ದಿವಸ ಕಾರಂಟೈನ್ ಆಗಿದ್ದ ವ್ಯಕ್ತಿ ಮೇ 29 ರಂದು ಬೆಂಗಳೂರಿನಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು-ಸಾಗರ ಬಸ್ ನಲ್ಲಿ ಸಾಗರಕ್ಕೆ ಬಂದು ಲಗೇಜ್ ರಿಕ್ಷಾದಲ್ಲಿ ಹುಟ್ಟೂರು ಜೋಗದ ಬಳಿಯ ಜಿಡ್ಡಿ ಸೇರಿಕೊಂಡಿದ್ದರು.

ಜಿಡ್ಡಿಯಲ್ಲಿ ಪ್ರತ್ಯೇಕವಾಗಿದ್ದ ಅವರ ಮನೆಯ ಪ್ರತ್ಯೇಕ ಕೋಣೆ, ಶೌಚ, ಸ್ನಾನಗೃಹಗಳನ್ನು ಬಳಸಿದ್ದರು. ಈ ಕೋವಿಡ್ ಸೋಕಿತನ ಸ್ವ್ಯಾಬ್ ಮಾದರಿಯನ್ನು ಬೆಂಗಳೂರಿನಲ್ಲಿ ಸಂಗ್ರಹಿಸಿದ್ದರಿಂದ ಈ ಪ್ರಕರಣ ಉತ್ತರಕನ್ನಡ ಜಿಲ್ಲೆಯ ಕೊರೋನಾ ಸೋಕಿತರ ಪಟ್ಟಿಯಲ್ಲಿಲ್ಲ. ಈ ಸೋಂಕಿತ ಬೆಂಗಳೂರು,ಅಲ್ಲಿಂದ ಸಾಗರ, ಸಾಗರದಿಂದ ಜಿಡ್ಡಿ ಇಲ್ಲೆಲ್ಲೂ ಇತರರ ನೇರ ಸಂಪರ್ಕಕ್ಕೇ ಬಂದಿರಲಿಲ್ಲ ಎನ್ನುವುದು ವಿಶೇಶ.

ಸಿದ್ಧಾಪುರದ ಕಾವಂಚೂರು ಕಾರಂಟೈನ್ ಕೇಂದ್ರದಲ್ಲಿ ಕಾರಂಟೈನ್ ಆಗಿದ್ದ 20 ವರ್ಷದ ಯುವಕನಲ್ಲಿ ಕೋವಿಡ್ ದೃಢಪಟ್ಟಿದ್ದು ಇವರು ರಾಜ್ಯದ 3210 ನೇ ಕರೋನಾ ಸೋಕಿತರಾಗಿದ್ದಾರೆ. ಇವರು ಇವರ ಅಕ್ಕ, ತಂದೆ ಹಾಗೂ ಪಕ್ಕದಮನೆಯ ವ್ಯಕ್ತಿಯೊಬ್ಬರೊಂದಿಗೆ ಮಹಾರಾಷ್ಟ್ರದ ಠಾ ಣಾದಿಂದ ಖಾಸಗಿವಾಹನದಲ್ಲಿ ಬಂದಿದ್ದರು.

24 ರಂದು ಠಾಣಾದಿಂದ ಹೊರಟಿದ್ದ ಈ ತಂಡ25 ಕ್ಕೆ ಸಿದ್ಧಾಪುರ ತಲುಪಿ ಕಾವಂಚೂರ್ ನಲ್ಲಿ ಕಾರಂಟೈನ್ ಆಗಿದ್ದರು. ಇದೇ ಕಾವಂಚೂರು ಕಾರಂಟೈನ್ ಕೇಂದ್ರಕ್ಕೆ ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿಗಳಲ್ಲಿ ಒಬ್ಬರಲ್ಲಿ ಹಿಂದಿನ ವಾರ ಕರೋನಾ ಸೋಂಕು ದೃಢಪಟ್ಟಿತ್ತು. ಹೀಗೆ ಸಿದ್ಧಾಪುರದಲ್ಲಿ ಮೂರು ಕಡೆ ಕಾರಂಟೈನ್ ಆಗಿರುವ ನೂರಾರು ಜನರಲ್ಲಿ ಅನೇಕರ ಸ್ವ್ಯಾಬ್ ಮಾದರಿಯ ವರದಿ ಬರಬೇಕಿದೆ.

ಇಂದು ಉತ್ತರಕನ್ನಡ ಜಿಲ್ಲೆಯಲ್ಲಿ ಸಿದ್ಧಾಪುರದ ಒಂದು ಪ್ರಕರಣ, ಕುಮಟಾದ ನಾಲ್ಕು ಪ್ರಕರಣಗಳು ಸೇರಿ ಒಟ್ಟೂ 5 ವ್ಯಕ್ತಿಗಳಲ್ಲಿ ಹಾಗೂ ಉತ್ತರಕನ್ನಡ ಪಟ್ಟಿಗೆ ಸೇರದ ಸಿದ್ಧಾಪುರ ಜಿಡ್ಡಿಯ ಪ್ರಕರಣ ಸೇರಿ ಒಟ್ಟೂ ಆರು ಜನರಲ್ಲಿ ಕೋವಿಡ್ 19 ದೃಢ ಪಟ್ಟಂತಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *