mundgekere & 4 places will be heritage centers-ಶಿರಸಿ ಮುಂಡಗೆಕೆರೆ ಸೇರಿ ಪಾರಂಪರಿಕ ತಾಣಗಳಿಗೆ 5 ಸ್ಥಳಗಳ ಸೇರ್ಪಡೆಗೆ ಸಿದ್ಧತೆ

ಉತ್ತರ ಕನ್ನಡ ಜಿಲ್ಲೆಯ ಮುಂಡಿಗೆಕೆರೆ, ಕೊಪ್ಪಳದ ಜೂರಿಬೆಟ್ಟ, ತುಮಕೂರಿನ ಸಿದ್ಧರಬೆಟ್ಟ ಸೇರಿದಂತೆ ಒಟ್ಟು 5 ಪ್ರದೇಶಗಳನ್ನು ಪಾರಂಪರಿಕ ತಾಣಗಳಿಗೆ ಸೇರ್ಪಡೆಗೊಳಿಸಲು ವಿಶ್ವ ಪರಿಸರ ದಿನಾಚರಣೆಯ ವೇಳೆ ಅರಣ್ಯ ಇಲಾಖೆ ಹಾಗೂ ಜೀವವೈವಿಧ್ಯ ಮಂಡಳಿ ನಿರ್ಧರಿಸಿದೆ. 

One of the hillocks of Ramanagara

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಮುಂಡಿಗೆಕೆರೆ, ಕೊಪ್ಪಳದ ಜೂರಿಬೆಟ್ಟ, ತುಮಕೂರಿನ ಸಿದ್ಧರಬೆಟ್ಟ ಸೇರಿದಂತೆ ಒಟ್ಟು 5 ಪ್ರದೇಶಗಳನ್ನು ಪಾರಂಪರಿಕ ತಾಣಗಳಿಗೆ ಸೇರ್ಪಡೆಗೊಳಿಸಲು ವಿಶ್ವ ಪರಿಸರ ದಿನಾಚರಣೆಯ ವೇಳೆ ಅರಣ್ಯ ಇಲಾಖೆ ಹಾಗೂ ಜೀವವೈವಿಧ್ಯ ಮಂಡಳಿ ನಿರ್ಧರಿಸಿದೆ. 

ಉತ್ತರ ಕನ್ನಡದ ಶಿರಸಿಯ ಸೋಂದಾ ಬಳಿ ಇರುವ ಮುಂಡಿಗೆಕೆರೆ ಸಣ್ಣ ಸರೋವರವಾಗಿದ್ದು, ಈ ಪ್ರದೇಶವನ್ನು ಪಾರಂಪರಿಕ ತಾಣ ಎಂದು ಗುರುತಿಸಲು ಸ್ಥಳೀಯ ಪಂಚಾಯತ್ ನಲ್ಲಿ 3 ತಿಂಗಳ ಹಿಂದೆ ನಿರ್ಣಯ ಕೈಗೊಳ್ಳಲಾಗಿತ್ತು. ಈಗಾಗಲೇ ಈ ಪ್ರದೇಶವನ್ನು ಪಕ್ಷಿಧಾಮ ಎಂದು ಗುರುತಿಸಲಾಗಿದ್ದು, ಇದೇ ಸರಣಿಯಲ್ಲಿ ಇನ್ನೂ 10 ಸರೋವರಗಳನ್ನು ರಕ್ಷಿಸಲು ಮಂಡಳಿ ನಿರ್ಧರಿಸಿದೆ.  

ಜೀವವೈವಿಧ್ಯ ಮಂಡಳಿಯ ಸದಸ್ಯರು ಕೊಪ್ಪಳದ ಜೂರಿಬೆಟ್ಟ, ತುಮಕೂರಿನ ಸಿದ್ಧರಬೆಟ್ಟ, ರಾಮನಗರ, ಚಿಕ್ಕಮಗಳೂರಿನ ಗುಡ್ಡಗಳನ್ನು ಪಾರಂಪರಿಕ ತಾಣಗಳಿಗೆ ಸೇರಿಸಲು ಕ್ರಮ ಕೈಗೊಂಡಿದ್ದಾರೆ. 

ಬೋರ್ಡ್ ನ ಅಧ್ಯಕ್ಷ ಅನಂತ್ ಹೆಗ್ಡೆ ಈ ಬಗ್ಗೆ ಮಾತನಾಡಿದ್ದು, ಈ ಎಲ್ಲಾ ಪ್ರದೇಶಗಳನ್ನು ಪಾರಂಪರಿಕ ಸ್ಥಳಗಳನ್ನಾಗಿ ಘೋಷಿಸುವವರೆಗೂ ಸ್ಥಳೀಯ ಆಡಳಿತಕ್ಕೆ ಇವುಗಳ ರಕ್ಷಣೆಯ ಜವಾಬ್ದಾರಿಯನ್ನು ಹೊರಿಸಲಾಗಿದೆ ಎಂದು ತಿಳಿಸಿದ್ದಾರೆ. 

ಶಿವಮೊಗ್ಗದ ಅಂಬರಗುಡ್ಡ, ಬೆಂಗಳೂರಿನ ಗಾಂಧಿ ಜಿಕೆವಿಕೆ, ದೇವನಹಳ್ಳಿಯ ನಲ್ಲೂರು ಹುಣಸೆ ತೋಪು, ಚಿಕ್ಕಮಗಳೂರಿನ ಹೊಗ್ರೆಕನ್ ಗಳನ್ನು ಈಗಾಗಲೇ ಪಾರಂಪರಿಕ ತಾಣಗಳನ್ನಾಗಿ ಘೋಷಣೆ ಮಾಡಲಾಗಿದೆ. 

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

mirjan port- ಹಳೆ ವೈಭವ ಸಾರುವ ಹೊಸ ಪ್ರವಾಸಿ ತಾಣ ಕುಮಟಾದ ಮಿರ್ಜಾನ ಕೋಟೆ

ಒಂದು ದೇಶದ ವೈಭವವನ್ನು ಆದೇಶದ ಇತಿಹಾಸ ಚರಿತ್ರೆಗಳ ಮೂಲಕ ಅಳೆಯಲಾಗುತ್ತದೆ. ಅವಿಭಜಿತ ಭಾರತ ಬಹುವಿಶಾಲ ರಾಷ್ಟ್ರವಾಗಿತ್ತು. ಇಮ್ಮಡಿ ಪುಲಕೇಶಿಯ ಕಾಲದಲ್ಲಿ ಕೇರಳದಿಂದ ಗೋದಾವರಿ ನದಿ...

ನ್ಯೂಸ್‌ ರೌಂಡ್… ಶಿಕ್ಷಣ ಇಲಾಖೆಗೆ ಶ್ಲಾಘನೆ, ಲೋಕೋಪಯೋಗಿ ಇಲಾಖೆಗೆ ಎಚ್ಚರಿಕೆ!

ಎತ್ತಿನ ಗಾಡಿ ಏರಿದ ಶಾಸಕ- ರೈತ, ಶಾಸಕ ಭೀಮಣ್ಣ ನಾಯ್ಕ ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜ್‌ ಜಾನಪದ ಉತ್ಸವಕ್ಕೆ ಎತ್ತಿನ ಗಾಡಿ ಮೂಲಕ ಬಂದು...

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

Latest Posts

mirjan port- ಹಳೆ ವೈಭವ ಸಾರುವ ಹೊಸ ಪ್ರವಾಸಿ ತಾಣ ಕುಮಟಾದ ಮಿರ್ಜಾನ ಕೋಟೆ

ಒಂದು ದೇಶದ ವೈಭವವನ್ನು ಆದೇಶದ ಇತಿಹಾಸ ಚರಿತ್ರೆಗಳ ಮೂಲಕ ಅಳೆಯಲಾಗುತ್ತದೆ. ಅವಿಭಜಿತ ಭಾರತ ಬಹುವಿಶಾಲ ರಾಷ್ಟ್ರವಾಗಿತ್ತು. ಇಮ್ಮಡಿ ಪುಲಕೇಶಿಯ ಕಾಲದಲ್ಲಿ ಕೇರಳದಿಂದ ಗೋದಾವರಿ ನದಿ ತೀರದ ವರೆಗೆ ಕನ್ನಡ ನಾಡೇ ಪಸರಿಸಿತ್ತು ಎಂದು ಹೇಳಲಾಗುತ್ತದೆ. ಆಯಾ ಕಾಲದ ಅರಸರು ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸುತ್ತಾ ನೆರೆ ಹೊರೆಯವರನ್ನು ಮತ್ತಷ್ಟು ಸರಿಸುತ್ತಾ ತಮ್ಮ ವ್ಯಾ ಪ್ತಿಯನ್ನು ವಿಸ್ತರಿಸುತಿದ್ದರು....

Recommended For You

About the Author: Kanneshwar Naik

Leave a Reply

Your email address will not be published. Required fields are marked *