crime & corona news of uttarkannada- ಶಿರಸಿಯಲ್ಲಿ ಸ್ತ್ರೀ ಪೀಡಕನ ಬಂಧನ,ಅತ್ಯಾಚಾರಿ ಪರಾರಿ

ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬಳ್ಳಾರಿ ಮೂಲದ ಸ್ತ್ರೀ ಪೀಡಕನೊಬ್ಬನನ್ನು ಬಂಧಿಸಿ,ನ್ಯಾಯಾಂಗದ ವಶಕ್ಕೆ ನೀಡಲಾಗಿದೆ.ಈತ ತನ್ನ ಪರಿಚಯದ ಶಿಕ್ಷಕಿಯೊಬ್ಬರಿಗೆ ಹಣಕ್ಕಾಗಿ ಪೀಡಿಸುತಿದ್ದ ಎಂದು ಆರೋಪಿಸಲಾಗಿದೆ. ಬಳ್ಳಾರಿ ಬಳಿ ಶಾಲಾ ಶಿಕ್ಷಕಿಯಾಗಿದ್ದ ಮಹಿಳೆಯೊಬ್ಬರ ಜೊತೆಗೆ ಸಲುಗೆಯಂದಿದ್ದುನಂತರ ತನ್ನ ಬಳಿ ಇದ್ದ ಚಿತ್ರಗಳನ್ನು ಬಳಸಿಕೊಂಡು ಹಣಕ್ಕಾಗಿ ಪೀಡಿಸುತಿದ್ದ ಎನ್ನಲಾಗಿದೆ. ಈತ ಶಿವಕುಮಾರ ಮುಳಸಾವಳಗಿ ಎನ್ನುವ ವ್ಯಕ್ತಿಯಾಗಿದ್ದು ಶಿರಸಿಗ್ರಾಮೀಣಭಾಗ ಬನವಾಸಿಹೋಬಳಿಯ ಶಿಕ್ಷಕಿಗೆ ಪೀಡಿಸುತಿದ್ದ ಎಂದು ಆರೋಪಿಸಲಾಗಿದೆ.

ಅತ್ಯಾಚಾರಿ ಪರಾರಿ-
ಶಿರಸಿ ನಗರಸಭೆಯ ಸದಸ್ಯ ಯಶವಂತ್ ಮರಾಠೆ ಮೇಲೆ ಅಪ್ರಾಪ್ತಬಾಲಕಿಯ ಅತ್ಯಾಚಾರದ ಆರೋಪ ಕೇಳಿಬಂದಿದ್ದು ಶಿರಸಿ ಗ್ರಾಮೀಣಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಸಿ ಗ್ರಾಮೀಣ ಭಾಗದ 16 ವರ್ಷದ ಬಾಲಕಿಗೆ ಅತ್ಯಾಚಾರವೆಸಗುವ ಉದ್ದೇಶದಿಂದ ನಂಬಿಸಿ,ಅಧಿಕಾರ ಬಳಸಿ ಬಚಾವಾಗಲು ಪ್ರಯತ್ನಿಸಿ ನಂತರ ನಾಪತ್ತೆಯಾಗಿದ್ದಾನೆ.
ಅಪ್ರಾಪ್ತಬಾಲಕಿಯನ್ನು ನಂಬಿಸಿ ನಿರಂತರ ಅತ್ಯಾಚಾರ ಎಸಗಿದ ಆರೋಪಕ್ಕೆ ಯಶವಂತ್ ಮರಾಠೆ ಮೇಲೆ ಪೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಉ.ಕ. ಜೂನ್ 30 ರ ವರೆಗೆ ಲಾಕ್ ಡೌನ್ ಮುಂದುವರಿಕೆ ಜಿಲ್ಲಾಧಿಕಾರಿ ಆದೇಶ
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಜೂನ್ 30 ರ ವರೆಗೆ ಲಾಕ್ಡೌನ್ ಮುಂದುವರಿದಿದ್ದು ರಾತ್ರಿ 9 ರಿಂದ ಬೆಳಿಗ್ಗೆ 5 ರ ವರೆಗೆ ಜಿಲ್ಲೆಯಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕಂಟೇನ್ ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಈ ನಿಯಮ ಅನ್ವಯವಾಗಿತಿದ್ದು ಎಳೆಯರು ಮತ್ತು ವೃದ್ಧರ ಓಡಾಟವನ್ನೂ ನಿಷೇಧಿಸಲಾಗಿದೆ, ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸ್ಪಸ್ಟಪಡಿಸಿರುವ ಜಿಲ್ಲಾಧಿಕಾರಿ ಹರೀಶ್ ಕುಮಾರ ಕೆ. ಇಂದಿನಿಂದ ಜೂನ್ 30 ರ ವೆರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದಿದ್ದಾರೆ.

ಬೆಂಗಳೂರಿನ ಪ್ರಕರಣದಿಂದ ಕಂಟೇನ್‍ಮೆಂಟ್ ಆದ ಜೋಗ ಬಳಿಯ ಕುಗ್ರಾಮ ಜಿಡ್ಡಿ
ಇಂತಿದೆ ಇಂದಿನ ಸಿದ್ಧಾಪುರದ ಪ್ರಕರಣಗಳ ಪ್ರವಾಸ ಚರಿತ್ರೆ
ಕಳೆದ ವಾರ ಸಿದ್ಧಾಪುರದ ಮೊದಲಪ್ರಕರಣವಾಗಿ ಉತ್ತರಕನ್ನಡ ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿಸಿದ ಪ್ರಕರಣದ ನಂತರ ಇಂದು ಒಂದೇ ದಿವಸ ಸಿದ್ಧಾಪುರದಲ್ಲಿ (ಮೇ31) ಎರಡು ಜನರಲ್ಲಿ ಕರೋನಾಸೋಂಕು ದೃಢಪಟ್ಟಿವೆ.
ಸಿದ್ಧಾಪುರದ ಜಿಡ್ಡಿ ಗ್ರಾಮದ 5 ಮನೆಗಳ ಪ್ರದೇಶವನ್ನು ಕಂಟೇ ನ್ಮೆಂಟ್ ಮಾಡಿದ ಕರೋನಾ ಸೋಂಕಿತ 12 ದಿವಸಗಳ ಹಿಂದೆ ಮಸ್ಕತ್ ನಿಂದ ಬೆಂಗಳೂರಿಗೆ ಬಂದಿಳಿದ ವ್ಯಕ್ತಿ, ಬೆಂಗಳೂರಿನಲ್ಲಿ10 ದಿವಸ ಕಾರಂಟೈನ್ ಆಗಿದ್ದ ವ್ಯಕ್ತಿ ಮೇ 29 ರಂದು ಬೆಂಗಳೂರಿನಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು-ಸಾಗರ ಬಸ್ ನಲ್ಲಿ ಸಾಗರಕ್ಕೆ ಬಂದು ಲಗೇಜ್ ರಿಕ್ಷಾದಲ್ಲಿ ಹುಟ್ಟೂರು ಜೋಗದ ಬಳಿಯ ಜಿಡ್ಡಿ ಸೇರಿಕೊಂಡಿದ್ದರು. …….

ಇಲಿಯಾಸ್ ಶೇಖ್ ರಿಂದ ಕಿಟ್ ವಿತರಣೆ-
ಕರೋನಾ ತೊಂದರೆ, ಲಾಕ್ ಔಟ್ ರಗಳೆಗಳ ಹಿನ್ನೆಲೆಯಲ್ಲಿ ತೊಂದರೆಗೆ ಒಳಗಾದ ತಾಲೂಕಿನ ಬಡವರಿಗೆ ಜೆ.ಡಿ.ಎಸ್. ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಲಿಯಾಸ್ ಶೇಖ್ ರಾಘವೇಂದ್ರ ಮಠದ ಬಳಿ ಎರಡನೇ ಬಾರಿ ಜೀವನಾವಶ್ಯಕ ವಸ್ತುಗಳ ಕಿಟ್ ವಿತರಿಸಿದರು.

ಯಲ್ಲಾಪುರದ 5 ಜನರಿಗೆ ಕರೋನಾ-
ಹೊರ ರಾಜ್ಯದಿಂದ ಬಂದು ಕಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಯಲ್ಲಾಪುರ ಕಿರವತ್ತಿಯ ಒಂದೇ ಕುಟುಂಬದ 5 ಜನರಲ್ಲಿ ಕರೋನಾ ದೃಢ ಪಟ್ಟಿದೆ. ಇದೇ ತಾಲೂಕಿನ ಗ್ರಾಮೀಣ ಪ್ರದೇಶ ಮಾನಿಮೋಲೆ ಗ್ರಾಮದ ವೃದ್ಧರೊಬ್ಬರು ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *