crime update of sirsi-ಶಿರಸಿ ಅಪರಾಧ ಸುದ್ದಿ- ಕಾಮದಾಟದಿಂದ ಕಾಂಗ್ರೆಸ್ ಗೆ ತಲೆನೋವಾದ ಅತ್ಯಾಚಾರಿ, ಕರೋನಾ: ಮಾಹಿತಿ ಮುಚ್ಚಿಟ್ಟಿದ್ದಕ್ಕೆ ಪ್ರಕರಣ

ಕಾರವಾರದ ಕರೋನಾ ಸೋಂಕಿತೆಯನ್ನು
ಶಿರಸಿಯಿಂದ ಕಾರವಾರಕ್ಕೆ ಕರೆದೊಯ್ದು ತಲುಪಿಸಿದ ಮುಜಾಮಿಲ್ ನಜೀರ್ ಶೇಖ್ ಎನ್ನುವವರ ಮೇಲೆ ಪೊಲೀಸ್ ದೂರು ದಾಖಲಾಗಿದೆ. ಈ ಶೇಖ್ ಕತಾರ್ ದೇಶದಿಂದ ಹುಬ್ಬಳ್ಳಿಗೆ ಬಂದು ಅಲ್ಲಿಂದ ಶಿರಸಿಯಲ್ಲಿಓಡಾಡಿ, ನಂತರ ಕಾರವಾರಕ್ಕೆ ತೆರಳಿದ್ದರು. ಈ ಮಹಿಳೆ ಶಿರಸಿಯಲ್ಲಿ ಸುತ್ತಾಡಲು ಹಾಗೂ ಕಾರವಾರಕ್ಕೆ ತೆರಳಲು ನೆರವಾಗಿ ಈ ಮಾಹಿತಿಯನ್ನು ಸ್ಥಳೀಯ ಆಡಳಿತಕ್ಕೆ ತಿಳಿಸದ ಹಿನ್ನೆಲೆಯಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಅತ್ಯಾಚಾರಿ ನಗರಸಭೆ ಸದಸ್ಯನ ಕಾಮಪ್ರಕರಣ-
ಶಿರಸಿಯ ನಗರಸಭೆ ಸದಸ್ಯ ಯಶವಂತ್ ಮರಾಠೆ ಅತ್ಯಾಚಾರದ ಆರೋಪದ ಮೇಲೆ ಕಳೆದ ವಾರ ಶಿರಸಿಯಲ್ಲಿ ಬಂಧನಕ್ಕೊಳಗಾಗಿದ್ದಾನೆ. ಇದೇ ವ್ಯಕ್ತಿ ಅಪ್ರಾಪ್ತ ಬಾಲಕಿಯರನ್ನು ಬಳಸಿಕೊಂಡು ಅವರ ಛಾಯಾ ಚಿತ್ರಗಳನ್ನು ಬಳಸಿ ಲಾಭಮಾಡಿಕೊಳ್ಳುತಿದ್ದ ಎನ್ನುವ ಆರೋಪ ಸಾಬೀತು ಮಾಡಲು ಈ ಮರಾಠೆಯ ಘನಂಧಾರಿ ಕೆಲಸದ ಫೋಟೋ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಯಶವಂತ್ ಮರಾಠೆಯ ಕಾಮದಾಟಕ್ಕೆ ಸಾಕ್ಷಿ ಒದಿಸಲಾಗಿದೆ.

ವಿಪರ್ಯಾಸವೆಂದರೆ…. ಯಶವಂತ್ ಮರಾಠೆ ತನ್ನ ತಪ್ಪಿಗಾಗಿ ಕೋರ್ಟ್‍ನಿಂದ ಶಿಕ್ಷೆ ಪಡೆಯುತ್ತಾನೆ. ಆದರೆ ಈ ವ್ಯಕ್ತಿಯ ಅಪರಾಧ ಸಾಬೀತಿ ಮಾಡಲು ಹೋಗಿ ಇವನ ಪೋಟೋದೊಂದಿಗೆ ಅಪ್ರಾಪ್ತಬಾಲಕಿಯ ಫೋಟೋ ಪ್ರದರ್ಶಿಸಿದ ಆರೋಪದಡಿ ಫೋಟೋ ಅಪ್ಲೋಡ್ ಮಾಡಿದವನೂ ಶಿಕ್ಷೆಗೊಳಗಾಗುತ್ತಾನೆ. ಈ ಯಶವಂತ್ ಮರಾಠೆಯ ಬಾರಾ ಬಾನಗಡಿ ಅಮಾಯಕರಿಗೆ, ಕಾಂಗ್ರೆಸ್ ಪಕ್ಷಕ್ಕೂ ಈಗ ತಲೆನೋವಾಗಿ ಪರಿಣಮಿಸಿದೆ.

(related ) ಕಾರವಾರದ ಕೋವಿಡ್ ಸೋಕಿತೆ ಶಿರಸಿಗೂ ಬಂದಿದ್ದರು!
ಇಂದು ಉತ್ತರಕನ್ನಡ ಜಿಲ್ಲೆಯ ಕರೋನಾ ಸೋಂಕಿತರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದ ಕಾರವಾರದ ಕೋವಿಡ್ -19
ಸೋಕಿತ ಇಬ್ಬರಲ್ಲಿ ಒಬ್ಬರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ ಇನ್ನೊಬ್ಬರು ಕತಾರ್ ದೇಶದಿಂದ ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ಕಾರವಾರಕ್ಕೆ ಬಂದವರು. ಮಹಾರಾಷ್ಟ್ರದಿಂದ ಬಂದ ಮಹಿಳೆ ರೈಲುಪ್ರಯಾಣದಿಂದ ಕಾರವಾರಕ್ಕೆ ಬಂದವರು. ಇನ್ನೊಬ್ಬರು ಕತಾರ್ ನಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಖಾಸಗಿ ಬಸ್ ನಲ್ಲಿ ಹುಬ್ಬಳ್ಳಿ ಅಲ್ಲಿಂದ ಶಿರಸಿ ಮಾರ್ಗವಾಗಿ ಕಾರವಾರಕ್ಕೆ ತೆರಳಿದ್ದವರು. ಈ ಇಬ್ಬರ ಗಂಟಲುದ್ರವ ಪರೀಕ್ಷೆಯ ವರದಿ ಇಂದು ಬಂದಿದ್ದು ಈ ಇಬ್ಬರಲ್ಲೂ ಕರೋನಾ ದೃಢಪಟ್ಟಿದೆ. ವಿದೇಶದಿಂದ ಬಂದ ಮಹಿಳೆ ಹುಬ್ಬಳ್ಳಿ-ಶಿರಸಿಗಳಲ್ಲೆಲ್ಲಾ ಸುತ್ತಾಡಿ ಕಾರವಾರ ಸೇರಿದ್ದು ಫಜೀತಿಗೆ ಕಾರಣವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *