karnataka government announancement-ಗ್ರಾಮ ಪಂಚಾಯಿತಿ ಚುನಾವಣೆವರೆಗೂ ಆಡಳಿತಾಧಿಕಾರಿ ನೇಮಕ

ಸಚಿವ ಮಾಧುಸ್ವಾಮಿ ಮಾಹಿತಿ-

ಗ್ರಾಮ ಪಂಚಾಯತ್ ಗಳಿಗೆ ಶೀಘ್ರ ಚುನಾವಣೆ ನಡೆಸಲು ಉದ್ದೇಶಿಸಿದ್ದು, ಅಲ್ಲಿಯವರೆಗೆ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಗುರುವಾರ ಹೇಳಿದ್ದಾರೆ.

JC Madhuswamy

ಬೆಂಗಳೂರು: ಗ್ರಾಮ ಪಂಚಾಯತ್ ಗಳಿಗೆ ಶೀಘ್ರ ಚುನಾವಣೆ ನಡೆಸಲು ಉದ್ದೇಶಿಸಿದ್ದು, ಅಲ್ಲಿಯವರೆಗೆ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಗುರುವಾರ ಹೇಳಿದ್ದಾರೆ.

ಇಂದು ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆ.ಸಿ. ಮಾಧುಸ್ವಾಮಿ, ಜಿಲ್ಲಾಧಿಕಾರಿ ಹಂತದಲ್ಲಿ ಆಡಳಿತಾಧಿಕಾರಿಗಳನ್ನು ನೇಮಿಸಲಾಗುವುದು. ತಕ್ಷಣದಿಂದ ಜಾರಿಗೆ ಬರುವಂತೆ ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಉಪ ಖನಿಜ ನಿಯಮಾವಳಿ ಬದಲಿಸಲಾಗಿದೆ. ಇದರಿಂದ ತೂಕದ ಮೇಲೆ ರಿಯಾಯಿತಿ, ಬಿಲ್ ಕಟಾವಿನಲ್ಲಿ ರಾಜಧನ ಕಡಿಮೆ ಮಾಡುವ, ಸಣ್ಣ ಪ್ರಮಾಣದ ತೆರಿಗೆ, ಗ್ರಾನೈಟ್ ಉದ್ಯಮದಲ್ಲಿ ಕಡಿಮೆ ರಾಜಧನ ವಸೂಲಿ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಇಂದಿರಾ ಕ್ಯಾಂಟೀನ್ ನಲ್ಲಿ ದರ ಹೆಚ್ಚಿಸಬೇಕು ಎಂಬ ವಿಚಾರ ಚರ್ಚೆಗೆ ಬಂದಿತ್ತು. ಬೆಲೆ ಹೆಚ್ಚಳ ಅನಿವಾರ್ಯ ಎಂಬ ಪ್ರಸ್ತಾಪವಾಯಿತಾದರೂ ಅಂತಿಮ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ಈ ಪ್ರಸ್ತಾವದ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಮಹಾರಾಣಿ, ಮಂಡ್ಯ ಕ್ಲಸ್ಟರ್ ವಿವಿಗೆ ಅಧಿಕಾರಿಗಳ ನೇಮಕ. ಬೆಂಗಳೂರು ಕೇಂದ್ರ ವಿವಿಯ ಹೆಸರು ಬದಲಿಸಿ ಬೆಂಗಳೂರು ಸಿಟಿ ವಿವಿ ಎಂದು ಮರು ನಾಮಕರಣ ಮಾಡುವ, ಸರ್ಕಾರಿ ವಿಜ್ಞಾನ ಕಾಲೇಜಿಗೆ ವಿವಿ ಸ್ವರೂಪ ನೀಡಿ ನೃಪತುಂಗ ವಿವಿ ಎಂದು ಹೆಸರು ಬದಲಿಸುವ ಪ್ರಸ್ತಾವಗಳಿಗೂ ಅನುಮೋದನೆ ದೊರೆತಿದೆ ಎಂದರು.

ರಾಜ್ಯದ 1694 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 1307 ಆರೋಗ್ಯ ಉಪಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಇವುಗಳನ್ನು ಕ್ಷೇಮ ಕೇಂದ್ರಗಳನ್ನಾಗಿ ಉನ್ನತೀಕರಿಸಲು ಸಂಪುಟ ಒಪ್ಪಿಗೆ ನೀಡಿದೆ. 

ರಾಜ್ಯದ ವಿವಿಧೆಡೆ ದಾಖಲಾದ 53 ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ. ಗಣೇಶ ವಿಸರ್ಜನೆ, ರೈತ ಹೋರಾಟ, ಇತರೆ ಹೋರಾಟಗಳಲ್ಲಿ ಭಾಗವಹಿಸಿದ್ದ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು. ಇವು ವೈಯಕ್ತಿಕ ಅಲ್ಲ, ಗುಂಪು ಪ್ರಕರಣಗಳು ಎಂದು ಸ್ಪಷ್ಟಪಡಿಸಿದರು.

ಈಗ ತೋಟಗಾರಿಕೆ ಕಾಲೇಜುಗಳು ಸಾಕಷ್ಟಿದ್ದು, ಹಾಸನ ಹಾಗೂ ಸಿಂಧಗಿಯಲ್ಲಿ ಹೊಸ ಕಾಲೇಜು ತೆರೆಯುವ ತೀರ್ಮಾನ ಕೈಬಿಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ವಿಜ್ಞಾನ ಗ್ಯಾಲರಿ ನಿರ್ಮಿಸಲು 2013-14 ರಲ್ಲಿ ಅನುಮೋದನೆಯಾಗಿದ್ದು, ಇದಕ್ಕೆ 80 ಕೋಟಿ ರೂ ನೆರವು ನೀಡಲು ನಿರ್ಧರಿಸಲಾಗಿದೆ.

ಲೋಕಶಿಕ್ಷಣ ಟ್ರಸ್ಟ್ ಗೆ ಕೆಂಗೇರಿ ಬಳಿ ನೀಡಿದ್ದ ಭೂಮಿಯನ್ನು ಸಂಸ್ಥೆ ಹೆಸರಿಗೆ ನೋಂದಣಿ ಮಾಡಿಕೊಡುವ, ಹುಳಿಮಾವು ಹಾಗೂ ಇತರೆ ಘಟಕದಿಂದ ಕೊಲಾರಕ್ಕೆ ಕೆ.ಸಿ.ವ್ಯಾಲಿ ಹೆಚ್ಚುವರಿ ನೀರು ಹರಿಸಲು ತೀರ್ಮಾನಿಸಲಾಗಿದೆ. 

ಉಡುಪಿಯ ಬೈಂದೂರಿಗೆ ಸುತ್ತಮುತ್ತಲ ಕೆಲ ಗ್ರಾಮ ಪಂಚಾಯತ್ ಗಳನ್ನು ಸೇರಿಸಿ ಬೈಂದೂರ್ ಅನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಗಿದೆ, ನಗರ ಗ್ರಾಮಾಂತರ ಯೋಜನಾ ಕಾಯ್ದೆಗೆ ತಿದ್ದುಪಡಿ ಆಗಿದ್ದು, ಇದರಿಂದ ಸ್ಥಳೀಯವಾಗಿ ಯೋಜನೆಗಳನ್ನು ರೂಪಿಸಹುಬಹುದಾಗಿದೆ ಎಂದು ಜೆ.ಸಿ. ಮಾಧುಸ್ವಾಮಿ ತಿಳಿಸಿದರು. 

ಕೊವಿಡ್-19 ನಿಂದಾಗಿ ಬಾಕಿ ಇರುವ ಸಹಕಾರ ಸಂಸ್ಥೆಗಳಿಗೆ ನೇಮಕ, ಸಕ್ಕರೆ ಕಾರ್ಖಾನೆ ಹೊರತುಪಡಿಸಿ ಉಳಿದ ಸಹಕಾರ ಸಂಘಗಳ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ. 1998 ಬ್ಯಾಚ್ ಪ್ರೊಬೇಷನರ್ಸ್ ಪಟ್ಟಿಯಲ್ಲಿ ಉಂಟಾಗಿದ್ದ ಗೊಂದಲ ಬಗೆಹರಿಸಿ ಆಗ ನೇಮಕಗೊಂಡವರಿಗೆ ಕೋರ್ಟ್ ಆದೇಶದಂತೆ ಸಂಬಳ ಹೆಚ್ಚಿಸುವ, ರಿಯಲ್ ಎಸ್ಟೇಟ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಇದರಿಂದಾಗಿ ಮಾರಾಟ ಒಪ್ಪಂದ ಮಾಡಿಕೊಳ್ಳಲು ಅವಕಾಶ ದೊರೆಯಲಿದೆ. ಜತೆಗೆ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ಸಚಿವ ಜೆ.ಸಿ. ಮಾಧು ಸ್ವಾಮಿ ಹೇಳಿದರು.

ನಗರಾಭಿವೃದ್ಧಿ ಇಲಾಖೆ ಅಡಿ ನೀರು ಸರಬರಾಜು ಮಂಡಳಿಗೆ 100 ಕೋಟಿ ಸಾಲ ನೀಡುವ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಅಡಿ ವೈದ್ಯರ ನೇಮಕ ಸಂದರ್ಭದಲ್ಲಿ ಹಾಲಿ ಗುತ್ತಿಗೆಯಡಿ ಸೇವೆ ಸಲ್ಲಿಸುತ್ತಿರುವವರಿಗೆ ಶೇ.2 ರಷ್ಟು ಕೃಪಾಂಕ ನೀಡುವ, ಸಿಎಆರ್, ಡಿಎಆರ್, ಕೆಎಸ್ಆರ್.ಪಿಯ ವಿವಿಧ ಪೊಲೀಸ್ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್ಸ್ ಟೆಬಲ್ ಗಳು ಉನ್ನತ ಹುದ್ದೆಯ ಪರೀಕ್ಷೆ ಬರೆಯಲು ಮುಂದಾದರೆ 10 ಅಂಕವನ್ನು ಗ್ರೇಸ್ ಮಾರ್ಕ್ಸ್ ರೂಪದಲ್ಲಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *