ತಂಡಾಗುಂಡಿ ಗಂಡಾಗುಂಡಿ ಸ್ಟೋರಿ- ಭಾಗ-01 ಅಧಿಕಾರಿಗಳು,ಜನಪ್ರತಿನಿಧಿಗಳು,ಗುತ್ತಿಗೆದಾರರ ಹೊಂದಾಣಿಕೆಯಿಂದ ಅವ್ಯವಹಾರ ತನಿಖೆಗೆ ಸ್ಥಳಿಯರ ಆಗ್ರಹ


ಸಿದ್ಧಾಪುರ ತಾಲೂಕಿನ ತಂಡಾಗುಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಸರ್ಕಾರಿ ಅನುದಾನದ ಕಾಮಗಾರಿಗಳನ್ನು ನಿರ್ವಹಿಸದೆ ಜನಪ್ರತಿನಿಧಿಗಳು, ಗುತ್ತಿಗೆದಾರರು, ಅಧಿಕಾರಿಗಳು ಸೇರಿ ಅನುದಾನ ದುರ್ಬಳಿಕೆ ಮಾಡಿದ ಪ್ರಕರಣ ಬೆಳಕಿಗೆ ಬಂದಿ
ತಂಡಾಗುಂಡಿ ಪಂಚಾಯತ್ ವ್ಯಾಪ್ತಿಯ ಸ್ಥಳಿಯರ ಕೋರಿಕೆ ಮೇರೆಗೆ ತೆರಳಿದ ಮಾಧ್ಯಮ ಪ್ರತಿನಿಧಿಗಳಿಗೆ ಈ ಅವ್ಯವಹಾರದ ವಿಷಯತಿಳಿಸಿ,ಮಾಹಿತಿಯ ದಾಖಲೆ ಪ್ರದರ್ಶಿಸಿದ ಸ್ಥಳಿಯರು 2019ರಮಾರ್ಚ್,ಏಫ್ರಿಲ್,ಮೇ ಜೂನ್, ಜುಲೈವರೆಗೆ ಕೆಲವು ಗುತ್ತಿಗೆದಾರರಿಗೆ ಪಾವತಿಸಿದ ಕಾಮಗಾರಿ ನಿರ್ವಹಣೆಯ ಅನುದಾನದ ಮೊತ್ತಕ್ಕೆ ಸರಿಯಾಗಿ ಕಾಮಗಾರಿಗಳು ನಡೆದಿಲ್ಲ. ಈ ಬಗ್ಗೆ ಮಾಹಿತಿ ಹಕ್ಕು ಅಧಿನಿಯಮದ ಅನುಕೂಲದಿಂದ ಮಾಹಿತಿ ಪಡೆದ ಸ್ಥಳಿಯರಿಗೆ ಮಾಹಿತಿ ನೀಡಿದ ಮೇಲೆ ತರಾತುರಿಯಲ್ಲಿ ಈ ಹಣ ಪಾವತಿಸಿದ ಕಾಮಗಾರಿಗಳನ್ನು ನಿರ್ವಹಿಸಿರುವುದು ಬೆಳಕಿಗೆ ಬಂದಿದೆ ಎನ್ನುವ ಆರೋಪ ಸತ್ಯವಾಗುವಂತೆ ವಾಸ್ತವ ಅಲ್ಲಿತ್ತು.
ಹುಲಿಗುಂಡಿ ಬಳಿ ಇದೇವಾರದ ಮೊದಲು ನಿರ್ಮಿಸಿದ 50 ಸಾವಿರ ರೂಪಾಯಿ ವೆಚ್ಚದ ಕಾಲುಸಂಕದ ಕಾಮಗಾರಿಗೆ ಏಫ್ರಿಲ್12,2019 ರಂದೇ ಬಿಲ್ ಪಾವತಿಸಲಾಗಿದೆ. ಅದೇ ಮಾರ್ಗದಲ್ಲಿ ಮುಂದುವರಿದು ಕುಳ್ಳೆ ಕಿ.ಪ್ರಾ.ಶಾಲೆಗೆ ಈ ತಿಂಗಳು ನಿರ್ಮಿಸಿದ ಆಟದ ಮೈದಾನ ಮತ್ತು ಪೈಪ್ ಅಳವಡಿಕೆ ಕಾಮಗಾರಿಯ48450ರೂಪಾಯಿಗಳನ್ನು2019ಮಾರ್ಚ್6 ರಂದೇ ಬಿಲ್ ಮಾಡಲಾಗಿದೆ.
ಅತ್ಯಧಿಕ ಮಳೆ ಬಿದ್ದ 2019 ರ ಆಗಸ್ಟ್26,2019 ರಂದು ಕಂಚಿಮಡಿಕೆ ಕುಡಿಯುವ ನೀರಿನ ಬಾವಿಮತ್ತು ನೀರು ಸಂಗ್ರಹಾರಕ್ಕೆ 2 ಬಿಲ್ ಗಳಲ್ಲಿ ಪ್ರತ್ಯೇಕ ತಲಾ ಲಕ್ಷಕ್ಕೂ ಅಧಿಕ ಬಿಲ್ ಪಾವತಿಸಲಾಗಿದೆ.
ಹೀಗೆ ಕಾಮಗಾರಿ ನಿರ್ವಹಣೆ ಮಾಡುವ ಮೊದಲೇ ಬಿಲ್ ಪಾವತಿಸಲಾದ ಅನೇಕ ಕಾಮಗಾರಿಗಳ ಕೆಲಸಗಳನ್ನು ಸಾರ್ವಜನಿಕರು ಮಾಹಿತಿ ಕೇಳಿದ ಮೇಲೆ ತೇಪೆ ಹಚ್ಚಿ ಕಳಪೆ ಮಾಡಲಾಗಿದೆ ಎಂದು ಆರೋಪಿಸಿರುವ ಸ್ಥಳಿಯರು ಈ ಬಗ್ಗೆ ಕೂಲಂಕುಶ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು. ಈ ಕಾಮಗಾರಿಗಳನ್ನು ನಿರ್ವಹಿಸಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಮತ್ತು ಈ ಅವ್ಯವಹಾರಕ್ಕೆ ಸಹಕರಿಸಿದ ಜನಪ್ರತಿನಿಧಿಗಳ ಸದಸ್ಯತ್ವವನ್ನು ರದ್ದು ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿನಡೆದ ಸ್ಥಳ ಪರಿಶೀಲನೆ ಮತ್ತು ಮಾಧ್ಯಮಗೋಷ್ಠಿಯಲ್ಲಿ ಶಶಾಂಕಮಡಿವಾಳ,ಅಣ್ಣಪ್ಪ ಗೌಡ ತಂಡಾಗುಂಡಿ, ಗಣಪತಿ ನಾ.ಹೆಗಡೆ, ಎನ್.ಕೆ.ಭಟ್ ಹಂದ್ಯಾನೆ, ಮಹಾಬಲೇಶ್ವರ ಮಾ ಗೌಡ, ಸೀತಾರಾಮ ಹು.ಗೌಡ, ನಾಗಪತಿ ಬಿ.ಗೌಡ ಹುತ್ಗಾರ, ಈಶ್ವರ ಮಾಳು ಗೌಡ,ಈಶ್ವರ ರಾಮುಗೌಡ, ಸೋಮಶೇಖರ್ ನಾಯ್ಕ ಜೋಗನಮನೆ, ಎ.ಪಿ.ಎಂ.ಸಿ.ಸದಸ್ಯ ಸೀತಾರಾಮ ಗೌಡ ಉಪಸ್ಥಿತರಿದ್ದರು.
ಧರಣಿ ಸತ್ಯಾಗ್ರಹ-
ಈಗ ಲಭ್ಯವಿರುವ ಮಾಹಿತಿ,ದಾಖಲೆಗಳ ಆಧಾರದಲ್ಲಿ ಸಂಬಂಧಿಸಿದವರಿಗೆ ತನಿಖೆಗೆ ಕೋರಿದ್ದೇವೆ.ಈ ತಿಂಗಳ ಕೊನೆ ಒಳಗೆ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸದಿದ್ದರೆ ಜನೇವರಿ 1 ರಿಂದ ಗ್ರಾ.ಪಂ. ಮತ್ತು ತಾ.ಪಂ. ಆವಾರಗಳಲ್ಲಿ ಧರಣಿ ನಡೆಸಿ ಪ್ರತಿಭಟಿಸುವುದಾಗಿ ಎಚ್ಚರಿಸಿರುವ ಸ್ಥಳಿಯರು ಈ ಬಗ್ಗೆ ತಾ.ಪಂ. ಮು.ಕಾ.ನಿ.ಅ. ಜಿಲ್ಲಾ ಪಂಚಾಯತ್ ಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *