corona effect-mafia ಬಡ್ಡಿ ಮಾಫಿಯಾಕ್ಕೆ ರಾಜಕೀಯ ಶ್ರೀರಕ್ಷೆ? ಜನಸಾಮಾನ್ಯರಿಗೆ ಚಿತ್ರಹಿಂಸೆ!

ಸಿದ್ಧಾಪುರ ತಾಲೂಕು ಸೇರಿದಂತೆ ಉತ್ತರಕನ್ನಡ ಜಿಲ್ಲೆಯಲ್ಲಿ ಬಡ್ಡಿ ಮಾಫಿಯಾ
ತಾಂಡವಾಡುತಿದ್ದು ಕರೋನಾ ಹಿನ್ನೆಲೆಯಲ್ಲಿ ಬಹುಹಿಂದೇ ಬಡ್ಡಿಗೆ ಸಾಲಕೊಟ್ಟ ಬಡ್ಡಿ ವಸೂಲಿದಾರರು ಜನಸಾಮಾನ್ಯರ ತಲೆಮೇಲೆ ಕುಳಿತು ಚಿತ್ರಹಿಂಸೆ ಕೊಡುತ್ತಿರುವ ವಿದ್ಯಮಾನ ಬಹಿರಂಗವಾಗಿದೆ.

ರಾಜ್ಯದಾದ್ಯಂತ ಮೀಟರ್ ಬಡ್ಡಿ, ದಿನದ ಬಡ್ಡಿ ಲೆಕ್ಕದಲ್ಲಿ ನಡೆಯುತ್ತಿರುವ ಬಡ್ಡಿಮಾಫಿಯಾ ಕೆಲವೆಡೆ ರಾಜಕೀಯ ಬೆಂಬಲದಿಂದ ಜನಸಾಮಾನ್ಯರಿಗೆ ಕಂಟಕವಾಗಿ ಕಾಡುತ್ತಿದೆ. ಈ ಬಡ್ಡಿವ್ಯವಹಾರ ಕರೋನಾ, ಲಾಕ್ ಡೌನ್ ಹಿನ್ನೆಲೆಯಲ್ಲಿ ಮತ್ತೆ ಚಿಗುರಿದೆ. ಇಂಥ ಬಡ್ಡಿವ್ಯಹಾರ ಮಾಡಿ ಜನಸಾಮಾನ್ಯರನ್ನು ಹಿಂಡುವ ಬಡ್ಡಿವ್ಯವಹಾರಸ್ಥರಲ್ಲಿ ಅನೇಕರು ಸ್ವಯಂ ರಾಜಕಾರಣಿಗಳು, ರಾಜಕೀಯ ವ್ಯಕ್ತಿಗಳ ಸ್ನೇಹ-ಸಂಬಂಧ ಹೊಂದಿರುವವರು ಆಗಿರುವುದರಿಂದ ಅವರನ್ನು ನಿಯಂತ್ರಿಸುವುದು ಕಷ್ಟಸಾಧ್ಯವಾಗುತ್ತಿದೆ ಎನ್ನಲಾಗುತ್ತಿದೆ.

ಸಿದ್ಧಾಪುರದ ನಗರ, ಗ್ರಾಮೀಣ ಭಾಗಗಳಲ್ಲಿ ಕೂಡಾ ಈ ಬಡ್ಡಿಮಾಫಿಯಾ ನಿರಂತರ ಕೆಲಸಮಾಡುತಿದ್ದು ಇಂಥವರನ್ನು ನಿಯಂತ್ರಿಸದ ವ್ಯವಸ್ಥೆಯಿಂದಾಗಿ ಬಡವರು ಬವಣೆ ಪಡುವಂತಾಗಿದೆ. ಶಿರಸಿ-ಸಿದ್ಧಾಪುರ ಸೇರಿದಂತೆ ಉತ್ತರಕನ್ನಡ ಜಿಲ್ಲೆಯಾದ್ಯಂತ ಈ ಬಡ್ಡಿಮಾಫಿಯಾದ ಉಪಟಳ ಮಿತಿಮೀರಿದ್ದು ಆಡಳಿತ ವ್ಯವಸ್ಥೆ ಈ ಬಡ್ಡಿವ್ಯವಹಾರಸ್ಥರ ಕಿರುಕುಳ ತಡೆಯದಿದ್ದರೆ ಇದರಿಂದ ಜೀವಾಪಾಯದಂಥ ಅಪರಾಧಗಳು ನಡೆಯುವ ಸಾಧ್ಯತೆ ಬಗ್ಗೆ ಸಮಾಜಮುಖಿಗೆ ಮಾಹಿತಿ ನೀಡಿರುವ ಕೆಲವರು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠರು ಈ ಬಗ್ಗೆ ಇಂಟಲಿಜೆನ್ಸ್ ಮಾಹಿತಿ ಆಧರಿಸಿ ಶೀಘ್ರ-ಸೂಕ್ತ ಕ್ರಮಕೈಗೊಳ್ಳದಿದ್ದರೆ ಅಪಾಯದ ಸಾಧ್ಯತೆ ಇದ್ದು ಈ ಮಾಫಿಯಾ ವಿರುದ್ಧ ನೊಂದ ಜನರು ಬೀದಿಗಿಳಿಯುವಂತಾದರೆ ಆಗ ಶಾಂತಿ-ಸುವ್ಯವಸ್ಥೆಗೆ ಅಪಾಯ ಎಂದು ಎಚ್ಚರಿಸಿರುವ ಕೆಲವರು ಜಿಲ್ಲೆಯ ಬಡ್ಡಿಮಾಫಿಯಾ ಜಿಲ್ಲೆಯ ಜನರ ಪ್ರಾಣಕ್ಕೆ ಎರವಾಗುವ ಮೊದಲು ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.

ಬೀದಿಬದಿ ವ್ಯಾಪಾರಿಗಳು, ಹಿಂದುಳಿದವರು, ಪರಿಶಿಷ್ಟರು, ಅಲ್ಫಸಂಖ್ಯಾತರ ಅನಿವಾರ್ಯತೆಯ ದುರ್ಲಾಭ ಪಡೆಯುತ್ತಿರುವ ಅನೇಕರು ವರ್ಷಕ್ಕೆ ನೂರಾ ಇಪ್ಪತ್ತು ಪ್ರತಿಶತ, ಕೆಲವೆಡೆ ಅದಕ್ಕಿಂತ ಹೆಚ್ಚು ಬಡ್ಡಿ! ವಸೂಲುಮಾಡಿ ಬಡವರ ಮಾನ-ಪ್ರಾಣಗಳಿಗೆ ಕಂಟಕವಾಗಿರುವ ಈ ಬಡ್ಡಿಮಕ್ಕಳ ನಿಯಂತ್ರಣ ತುರ್ತಾಗಿ ಆಗದಿದ್ದರೆ ಅವರಿಂದ ಸಾಮಾಜಿಕ ವ್ಯವಸ್ಥೆ ಹದಗೆಡುವ ಬಗ್ಗೆ ಕೂಡಾ ಎಚ್ಚರಿಸಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *